AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Riyan Parag: 12 ಸಿಕ್ಸ್, 12 ಫೋರ್: ರಿಯಾನ್ ಪರಾಗ್ ಸಿಡಿಲಬ್ಬರದ ಶತಕ..!

Riyan Parag: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ ರಿಯಾನ್ ಪರಾಗ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

TV9 Web
| Edited By: |

Updated on: Nov 28, 2022 | 10:54 PM

Share
ವಿಜಯ್ ಹಜಾರೆ ಟೂರ್ನಿಯ ಮೂರನೇ ಕ್ವಾರ್ಟರ್​ ಫೈನಲ್​ನಲ್ಲಿ ಜಮ್ಮು ಕಾಶ್ಮೀರ ವಿರುದ್ಧ ಅಸ್ಸಾಂ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ರುವಾರಿ ರಿಯಾನ್ ಪರಾಗ್.

ವಿಜಯ್ ಹಜಾರೆ ಟೂರ್ನಿಯ ಮೂರನೇ ಕ್ವಾರ್ಟರ್​ ಫೈನಲ್​ನಲ್ಲಿ ಜಮ್ಮು ಕಾಶ್ಮೀರ ವಿರುದ್ಧ ಅಸ್ಸಾಂ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ರುವಾರಿ ರಿಯಾನ್ ಪರಾಗ್.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಅಸ್ಸಾಂ ತಂಡದ ನಾಯಕ ಕುನಾಲ್ ಸೈಕಿಯಾ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಜಮ್ಮು-ಕಾಶ್ಮೀರದ ಶುಭಂ ಖುಜುರಿಯಾ (120) ಹಾಗೂ ಹೆನಾನ್ ನಜೀರ್ (124) ಭರ್ಜರಿ ಶತಕಗಳನ್ನು ಸಿಡಿಸಿದರು. ಅಲ್ಲದೆ 50 ಓವರ್​ಗಳಲ್ಲಿ ಜಮ್ಮು-ಕಾಶ್ಮೀರ ತಂಡವು 7 ವಿಕೆಟ್​ ನಷ್ಟಕ್ಕೆ 350 ರನ್​ ಕಲೆಹಾಕಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಅಸ್ಸಾಂ ತಂಡದ ನಾಯಕ ಕುನಾಲ್ ಸೈಕಿಯಾ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಜಮ್ಮು-ಕಾಶ್ಮೀರದ ಶುಭಂ ಖುಜುರಿಯಾ (120) ಹಾಗೂ ಹೆನಾನ್ ನಜೀರ್ (124) ಭರ್ಜರಿ ಶತಕಗಳನ್ನು ಸಿಡಿಸಿದರು. ಅಲ್ಲದೆ 50 ಓವರ್​ಗಳಲ್ಲಿ ಜಮ್ಮು-ಕಾಶ್ಮೀರ ತಂಡವು 7 ವಿಕೆಟ್​ ನಷ್ಟಕ್ಕೆ 350 ರನ್​ ಕಲೆಹಾಕಿತು.

2 / 6
ಈ ಬೃಹತ್ ಗುರಿ ಬೆನ್ನತ್ತಿದ ಅಸ್ಸಾಂ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಶವ್ ದಾಸ್ (114) ಶತಕ ಬಾರಿಸುವ ಮೂಲಕ ಆಸರೆಯಾದರು. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ರಿಯಾನ್ ಪರಾಗ್ ಅಕ್ಷರಶಃ ಅಬ್ಬರಿಸಿದರು.

ಈ ಬೃಹತ್ ಗುರಿ ಬೆನ್ನತ್ತಿದ ಅಸ್ಸಾಂ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಶವ್ ದಾಸ್ (114) ಶತಕ ಬಾರಿಸುವ ಮೂಲಕ ಆಸರೆಯಾದರು. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ರಿಯಾನ್ ಪರಾಗ್ ಅಕ್ಷರಶಃ ಅಬ್ಬರಿಸಿದರು.

3 / 6
ಮೂರನೇ ವಿಕೆಟ್‌ಗೆ ರಿಶವ್ ಅವರೊಂದಿಗೆ 217 ಎಸೆತಗಳಲ್ಲಿ 277 ರನ್ ಜೊತೆಯಾಟವಾಡಿ ತಂಡಕ್ಕೆ ಗೆಲುವು ತಂದುಕೊಡುವ ಭರವಸೆ ಮೂಡಿಸಿದರು. ಅಷ್ಟೇ ಅಲ್ಲದೆ ಕೇವಲ 116 ಎಸೆತಗಳಲ್ಲಿ 12 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳನ್ನು ಸಿಡಿಸುವ ಮೂಲಕ ರಿಯಾನ್ ಪರಾಗ್ 174 ರನ್​ ಚಚ್ಚಿದರು.

ಮೂರನೇ ವಿಕೆಟ್‌ಗೆ ರಿಶವ್ ಅವರೊಂದಿಗೆ 217 ಎಸೆತಗಳಲ್ಲಿ 277 ರನ್ ಜೊತೆಯಾಟವಾಡಿ ತಂಡಕ್ಕೆ ಗೆಲುವು ತಂದುಕೊಡುವ ಭರವಸೆ ಮೂಡಿಸಿದರು. ಅಷ್ಟೇ ಅಲ್ಲದೆ ಕೇವಲ 116 ಎಸೆತಗಳಲ್ಲಿ 12 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳನ್ನು ಸಿಡಿಸುವ ಮೂಲಕ ರಿಯಾನ್ ಪರಾಗ್ 174 ರನ್​ ಚಚ್ಚಿದರು.

4 / 6
ಈ ಹಂತದಲ್ಲಿ ಬಿರುಸಿನ ಹೊಡೆತಕ್ಕೆ ಮುಂದಾಗಿ ರಿಯಾನ್ ಪರಾಗ್ (174) ವಿಕೆಟ್ ಒಪ್ಪಿಸಿದರು. ಆದರೆ ಅಷ್ಟರಲ್ಲಾಗಲೇ 42.2 ಓವರ್​ಗಳಲ್ಲಿ ತಂಡದ ಮೊತ್ತವನ್ನು 322 ಕ್ಕೆ ತಂದು ನಿಲ್ಲಿಸಿದ್ದರು. ಅಂತಿಮ 8 ಓವರ್​ಗಳಲ್ಲಿ ಸುಲಭ ಗುರಿ ಪಡೆದ ಅಸ್ಸಾಂ ತಂಡವು 46.1 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ 354 ರನ್​ ಕಲೆಹಾಕಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಈ ಹಂತದಲ್ಲಿ ಬಿರುಸಿನ ಹೊಡೆತಕ್ಕೆ ಮುಂದಾಗಿ ರಿಯಾನ್ ಪರಾಗ್ (174) ವಿಕೆಟ್ ಒಪ್ಪಿಸಿದರು. ಆದರೆ ಅಷ್ಟರಲ್ಲಾಗಲೇ 42.2 ಓವರ್​ಗಳಲ್ಲಿ ತಂಡದ ಮೊತ್ತವನ್ನು 322 ಕ್ಕೆ ತಂದು ನಿಲ್ಲಿಸಿದ್ದರು. ಅಂತಿಮ 8 ಓವರ್​ಗಳಲ್ಲಿ ಸುಲಭ ಗುರಿ ಪಡೆದ ಅಸ್ಸಾಂ ತಂಡವು 46.1 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ 354 ರನ್​ ಕಲೆಹಾಕಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

5 / 6
ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ ರಿಯಾನ್ ಪರಾಗ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಸದ್ಯ ಭರ್ಜರಿ ಗೆಲುವಿನೊಂದಿಗೆ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿರುವ ಅಸ್ಸಾಂ ತಂಡವು ನಿರ್ಣಾಯಕ ಪಂದ್ಯದಲ್ಲಿ ಮಹಾರಾಷ್ಟ್ರ ತಂಡವನ್ನು ಎದುರಿಸಲಿದೆ.

ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ ರಿಯಾನ್ ಪರಾಗ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಸದ್ಯ ಭರ್ಜರಿ ಗೆಲುವಿನೊಂದಿಗೆ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿರುವ ಅಸ್ಸಾಂ ತಂಡವು ನಿರ್ಣಾಯಕ ಪಂದ್ಯದಲ್ಲಿ ಮಹಾರಾಷ್ಟ್ರ ತಂಡವನ್ನು ಎದುರಿಸಲಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ