AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ಕೊಹ್ಲಿ, ರಾಹುಲ್, ಪಂತ್ ಅಲ್ಲ; ಆರ್​ಸಿಬಿಗೆ ಈತನೇ ಸೂಕ್ತ ನಾಯಕ ಎಂದ ರಾಬಿನ್ ಉತ್ತಪ್ಪ

RCB: ಐಪಿಎಲ್ ಮೆಗಾ ಹರಾಜು ಸಮೀಪಿಸುತ್ತಿದ್ದಂತೆ, ಆರ್‌ಸಿಬಿ ತಂಡದ ನಾಯಕತ್ವದ ಬಗ್ಗೆ ಚರ್ಚೆಗಳು ತೀವ್ರಗೊಂಡಿವೆ. ಈ ನಡುವೆ ಟೀಂ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ, ರಜತ್ ಪಾಟೀದಾರ್ ಅವರನ್ನು ಆರ್​ಸಿಬಿ ನಾಯಕನನ್ನಾಗಿ ನೇಮಿಸುವಂತೆ ಸಲಹೆ ನೀಡಿದ್ದಾರೆ.

ಪೃಥ್ವಿಶಂಕರ
|

Updated on:Nov 20, 2024 | 10:39 PM

Share
ಐಪಿಎಲ್ ಮೆಗಾ ಹರಾಜಿಗೆ ಇನ್ನ ಕೇವಲ ಮೂರು ದಿನ ಮಾತ್ರ ಬಾಕಿ ಉಳಿದಿವೆ. ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಆಟಗಾರರ ಹರಾಜು ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ ತಂಡಗಳಿಗಿಂತ ಮಿಗಿಲಾಗಿ ಆರ್​ಸಿಬಿ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿಯ ಹರಾಜಿನಲ್ಲಿ ಸ್ಟಾರ್ ಆಟಗಾರರು ಹಾಗೂ ನಾಯಕರನ್ನು ಹುಡುಕುತ್ತಿದೆ.

ಐಪಿಎಲ್ ಮೆಗಾ ಹರಾಜಿಗೆ ಇನ್ನ ಕೇವಲ ಮೂರು ದಿನ ಮಾತ್ರ ಬಾಕಿ ಉಳಿದಿವೆ. ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಆಟಗಾರರ ಹರಾಜು ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ ತಂಡಗಳಿಗಿಂತ ಮಿಗಿಲಾಗಿ ಆರ್​ಸಿಬಿ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿಯ ಹರಾಜಿನಲ್ಲಿ ಸ್ಟಾರ್ ಆಟಗಾರರು ಹಾಗೂ ನಾಯಕರನ್ನು ಹುಡುಕುತ್ತಿದೆ.

1 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ಕೇವಲ 3 ಆಟಗಾರರನ್ನು ಉಳಿಸಿಕೊಂಡಿದೆ. ಇದರಲ್ಲಿ ಕಳೆದ ಸೀಸನ್​ನವರೆಗೆ ಈ ತಂಡದ ನಾಯಕರಾಗಿದ್ದ ಫಾಫ್ ಡು ಪ್ಲೆಸಿಸ್ ಅವರ ಹೆಸರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಆರ್‌ಸಿಬಿ ತಂಡ ಮುಂದಿನ ಸೀಸನ್‌ನಲ್ಲಿ ಹೊಸ ನಾಯಕನೊಂದಿಗೆ ಆಡುವುದನ್ನು ಕಾಣಬಹುದು. ಇದೆಲ್ಲದರ ನಡುವೆ ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕನ್ನಡಿಗ ರಾಬಿನ್ ಉತ್ತಪ್ಪ, ಆರ್​ಸಿಬಿಯ ನಾಯಕನ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ಕೇವಲ 3 ಆಟಗಾರರನ್ನು ಉಳಿಸಿಕೊಂಡಿದೆ. ಇದರಲ್ಲಿ ಕಳೆದ ಸೀಸನ್​ನವರೆಗೆ ಈ ತಂಡದ ನಾಯಕರಾಗಿದ್ದ ಫಾಫ್ ಡು ಪ್ಲೆಸಿಸ್ ಅವರ ಹೆಸರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಆರ್‌ಸಿಬಿ ತಂಡ ಮುಂದಿನ ಸೀಸನ್‌ನಲ್ಲಿ ಹೊಸ ನಾಯಕನೊಂದಿಗೆ ಆಡುವುದನ್ನು ಕಾಣಬಹುದು. ಇದೆಲ್ಲದರ ನಡುವೆ ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕನ್ನಡಿಗ ರಾಬಿನ್ ಉತ್ತಪ್ಪ, ಆರ್​ಸಿಬಿಯ ನಾಯಕನ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ.

2 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ರಜತ್ ಪಾಟಿದಾರ್ ಅವರನ್ನು ತಂಡದ ನಾಯಕನನ್ನಾಗಿ ಮಾಡಬೇಕು ಎಂದು ರಾಬಿನ್ ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ. ನಾಯಕನ ಪಾತ್ರದಲ್ಲಿ ರಜತ್ ಪಾಟಿದಾರ್ ಅವರನ್ನು ನೋಡಬೇಕೆಂದು ನಾನು ಭಾವಿಸುತ್ತೇನೆ. ಏಕೆಂದರೆ ಎರಡು ವರ್ಷಗಳ ನಂತರ ಆರ್​ಸಿಬಿಗೆ ಹೊಸ ನಾಯಕನ ಅಗತ್ಯ ಎದುರಾಗಿದೆ. ಆದ್ದರಿಂದ, ರಜತ್​ ಪಾಟಿದರ್ ಮೇಲೆ ನಂಬಿಕೆ ಇಡಬಹುದು. ಇದರಿಂದ ಮುಂದಿನ ಮೂರರಿಂದ ಐದು ವರ್ಷಗಳವರೆಗೆ ರಜತ್ ಈ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಬಲ್ಲರು ಎಂದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ರಜತ್ ಪಾಟಿದಾರ್ ಅವರನ್ನು ತಂಡದ ನಾಯಕನನ್ನಾಗಿ ಮಾಡಬೇಕು ಎಂದು ರಾಬಿನ್ ಉತ್ತಪ್ಪ ಅಭಿಪ್ರಾಯಪಟ್ಟಿದ್ದಾರೆ. ನಾಯಕನ ಪಾತ್ರದಲ್ಲಿ ರಜತ್ ಪಾಟಿದಾರ್ ಅವರನ್ನು ನೋಡಬೇಕೆಂದು ನಾನು ಭಾವಿಸುತ್ತೇನೆ. ಏಕೆಂದರೆ ಎರಡು ವರ್ಷಗಳ ನಂತರ ಆರ್​ಸಿಬಿಗೆ ಹೊಸ ನಾಯಕನ ಅಗತ್ಯ ಎದುರಾಗಿದೆ. ಆದ್ದರಿಂದ, ರಜತ್​ ಪಾಟಿದರ್ ಮೇಲೆ ನಂಬಿಕೆ ಇಡಬಹುದು. ಇದರಿಂದ ಮುಂದಿನ ಮೂರರಿಂದ ಐದು ವರ್ಷಗಳವರೆಗೆ ರಜತ್ ಈ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಬಲ್ಲರು ಎಂದಿದ್ದಾರೆ.

3 / 6
ರಜತ್ ಪಾಟಿದಾರ್ ಐಪಿಎಲ್‌ನಲ್ಲಿ ಇದುವರೆಗೆ ಒಟ್ಟು 27 ಪಂದ್ಯಗಳನ್ನು ಆಡಿದ್ದಾರೆ. ಈ ಪಂದ್ಯಗಳಲ್ಲಿ ಅವರು 34.73 ಸರಾಸರಿಯಲ್ಲಿ 799 ರನ್ ಗಳಿಸಿದ್ದಾರೆ. ರಜತ್ ಪಾಟಿದಾರ್ ಐಪಿಎಲ್‌ನಲ್ಲಿ 7 ಅರ್ಧ ಶತಕ ಮತ್ತು 1 ಶತಕವನ್ನು ಸಹ ಸಿಡಿಸಿದ್ದಾರೆ. 2022ರ ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಅವರು ಲಕ್ನೋ ವಿರುದ್ಧ ಈ ಶತಕವನ್ನು ಸಿಡಿಸಿದ್ದರು.

ರಜತ್ ಪಾಟಿದಾರ್ ಐಪಿಎಲ್‌ನಲ್ಲಿ ಇದುವರೆಗೆ ಒಟ್ಟು 27 ಪಂದ್ಯಗಳನ್ನು ಆಡಿದ್ದಾರೆ. ಈ ಪಂದ್ಯಗಳಲ್ಲಿ ಅವರು 34.73 ಸರಾಸರಿಯಲ್ಲಿ 799 ರನ್ ಗಳಿಸಿದ್ದಾರೆ. ರಜತ್ ಪಾಟಿದಾರ್ ಐಪಿಎಲ್‌ನಲ್ಲಿ 7 ಅರ್ಧ ಶತಕ ಮತ್ತು 1 ಶತಕವನ್ನು ಸಹ ಸಿಡಿಸಿದ್ದಾರೆ. 2022ರ ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಅವರು ಲಕ್ನೋ ವಿರುದ್ಧ ಈ ಶತಕವನ್ನು ಸಿಡಿಸಿದ್ದರು.

4 / 6
ಇದಲ್ಲದೇ ರಜತ್ ಪಾಟಿದಾರ್ ಟೀಂ ಇಂಡಿಯಾ ಪರ 3 ಟೆಸ್ಟ್ ಪಂದ್ಯ ಹಾಗೂ 1 ಏಕದಿನ ಪಂದ್ಯವನ್ನೂ ಆಡಿದ್ದಾರೆ. ಟೆಸ್ಟ್‌ನಲ್ಲಿ, ಅವರು 10.50 ಸರಾಸರಿಯಲ್ಲಿ ಕೇವಲ 63 ರನ್‌ ಗಳಿಸಿದರೆ, ಏಕದಿನದಲ್ಲಿ 22 ರನ್‌ಗಳ ಇನ್ನಿಂಗ್ಸ್‌ ಆಡಿದ್ದಾರೆ. ಆದರೂ ಅವರು ಟೀಂ ಇಂಡಿಯಾ ಪರ ಒಂದೇ ಒಂದು ಟಿ20 ಪಂದ್ಯವನ್ನು ಆಡಿಲ್ಲ.

ಇದಲ್ಲದೇ ರಜತ್ ಪಾಟಿದಾರ್ ಟೀಂ ಇಂಡಿಯಾ ಪರ 3 ಟೆಸ್ಟ್ ಪಂದ್ಯ ಹಾಗೂ 1 ಏಕದಿನ ಪಂದ್ಯವನ್ನೂ ಆಡಿದ್ದಾರೆ. ಟೆಸ್ಟ್‌ನಲ್ಲಿ, ಅವರು 10.50 ಸರಾಸರಿಯಲ್ಲಿ ಕೇವಲ 63 ರನ್‌ ಗಳಿಸಿದರೆ, ಏಕದಿನದಲ್ಲಿ 22 ರನ್‌ಗಳ ಇನ್ನಿಂಗ್ಸ್‌ ಆಡಿದ್ದಾರೆ. ಆದರೂ ಅವರು ಟೀಂ ಇಂಡಿಯಾ ಪರ ಒಂದೇ ಒಂದು ಟಿ20 ಪಂದ್ಯವನ್ನು ಆಡಿಲ್ಲ.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ಕೇವಲ 3 ಆಟಗಾರರನ್ನು ಉಳಿಸಿಕೊಂಡು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಆರ್‌ಸಿಬಿ ವಿರಾಟ್ ಕೊಹ್ಲಿಯನ್ನು ಗರಿಷ್ಠ 21 ಕೋಟಿ ರೂ., ರಜತ್ ಪಾಟಿದಾರ್ ಅವರನ್ನು 11 ಕೋಟಿಗೆ ಉಳಿಸಿಕೊಂಡಿದ್ದರೆ, ಯಶ್ ದಯಾಳ್ ಅವರನ್ನು 5 ಕೋಟಿಗೆ ಉಳಿಸಿಕೊಳ್ಳಲಾಗಿದೆ. ಪ್ರಸ್ತುತ ತಂಡದ ಬಳಿ 83 ಕೋಟಿ ರೂ ಹಣವಿದ್ದು, 3 ಮ್ಯಾಚ್ ಕಾರ್ಡ್‌ ಆಯ್ಕೆಯನ್ನು ಹೊಂದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ಕೇವಲ 3 ಆಟಗಾರರನ್ನು ಉಳಿಸಿಕೊಂಡು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಆರ್‌ಸಿಬಿ ವಿರಾಟ್ ಕೊಹ್ಲಿಯನ್ನು ಗರಿಷ್ಠ 21 ಕೋಟಿ ರೂ., ರಜತ್ ಪಾಟಿದಾರ್ ಅವರನ್ನು 11 ಕೋಟಿಗೆ ಉಳಿಸಿಕೊಂಡಿದ್ದರೆ, ಯಶ್ ದಯಾಳ್ ಅವರನ್ನು 5 ಕೋಟಿಗೆ ಉಳಿಸಿಕೊಳ್ಳಲಾಗಿದೆ. ಪ್ರಸ್ತುತ ತಂಡದ ಬಳಿ 83 ಕೋಟಿ ರೂ ಹಣವಿದ್ದು, 3 ಮ್ಯಾಚ್ ಕಾರ್ಡ್‌ ಆಯ್ಕೆಯನ್ನು ಹೊಂದಿದೆ.

6 / 6

Published On - 10:39 pm, Wed, 20 November 24

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ