AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿಗೆ ಜಯ್​ ಶಾ; ಬಿಸಿಸಿಐ ಕಾರ್ಯದರ್ಶಿ ಸ್ಥಾನಕ್ಕೆ ಮತ್ತೊಬ್ಬ ರಾಜಕಾರಣಿಯ ಪುತ್ರ ಆಯ್ಕೆ?

BCCI: ಜಯ್ ಶಾ ಐಸಿಸಿ ಅಧ್ಯಕ್ಷರಾದರೆ, ಡಿಡಿಸಿಎ ಅಧ್ಯಕ್ಷ ರೋಹನ್ ಜೇಟ್ಲಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹೊಸ ಕಾರ್ಯದರ್ಶಿಯಾಗಿ ಆಯ್ಕೆಯಾಗಬಹುದು ಎಂಬ ಸುದ್ದಿ ಹರಿದಾಡುತ್ತಿದೆ. ರೋಹನ್ ಜೇಟ್ಲಿ ಕಳೆದ ಹಲವು ವರ್ಷಗಳಿಂದ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪೃಥ್ವಿಶಂಕರ
|

Updated on: Aug 26, 2024 | 6:02 PM

Share
ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಪ್ರಸ್ತುತ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿಯು ನವೆಂಬರ್ 30 ರಂದು ಕೊನೆಗೊಳ್ಳಲಿದೆ. ಹೀಗಾಗಿ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಯಾರು ಆಯ್ಕೆಯಾಗಲಿದ್ದಾರೆ ಎಂಬುದಕ್ಕೆ ಸಂಬಂಧಿಸಿದಂತೆ ಈಗಾಗಲೇ ಊಹಾಪೋಹಗಳು ಹರಿದಾಡುತ್ತಿದ್ದು, ಮುಂದಿನ ಐಸಿಸಿ ಅಧ್ಯಕ್ಷರಾಗಿ ಪ್ರಸ್ತುತ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಆಯ್ಕೆಯಾಗುವುದು ಭಾಗಶಃ ಖಚಿತವಾಗಿದೆ.

ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಪ್ರಸ್ತುತ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿಯು ನವೆಂಬರ್ 30 ರಂದು ಕೊನೆಗೊಳ್ಳಲಿದೆ. ಹೀಗಾಗಿ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಯಾರು ಆಯ್ಕೆಯಾಗಲಿದ್ದಾರೆ ಎಂಬುದಕ್ಕೆ ಸಂಬಂಧಿಸಿದಂತೆ ಈಗಾಗಲೇ ಊಹಾಪೋಹಗಳು ಹರಿದಾಡುತ್ತಿದ್ದು, ಮುಂದಿನ ಐಸಿಸಿ ಅಧ್ಯಕ್ಷರಾಗಿ ಪ್ರಸ್ತುತ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಆಯ್ಕೆಯಾಗುವುದು ಭಾಗಶಃ ಖಚಿತವಾಗಿದೆ.

1 / 7
ಇದೀಗ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಯ್ ಶಾ ಅರ್ಜಿ ಸಲ್ಲಿಸುತ್ತಾರೋ ಅಥವಾ ಇಲ್ಲವೋ ಎಂಬುದು ಆಗಸ್ಟ್ 27 ರೊಳಗೆ ಸ್ಪಷ್ಟವಾಗಲಿದೆ. ಒಂದು ವೇಳೆ ಜಯ್ ಶಾ ಐಸಿಸಿ ಅಧ್ಯಕ್ಷರಾದರೆ ಬಿಸಿಸಿಐ ಕಾರ್ಯದರ್ಶಿ ಯಾರಾಗುತ್ತಾರೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದೆಲ್ಲದರ ನಡುವೆ ಈ ವಿಚಾರಕ್ಕೆ ಸಂಬಂಧಿಸಿದ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ.

ಇದೀಗ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಜಯ್ ಶಾ ಅರ್ಜಿ ಸಲ್ಲಿಸುತ್ತಾರೋ ಅಥವಾ ಇಲ್ಲವೋ ಎಂಬುದು ಆಗಸ್ಟ್ 27 ರೊಳಗೆ ಸ್ಪಷ್ಟವಾಗಲಿದೆ. ಒಂದು ವೇಳೆ ಜಯ್ ಶಾ ಐಸಿಸಿ ಅಧ್ಯಕ್ಷರಾದರೆ ಬಿಸಿಸಿಐ ಕಾರ್ಯದರ್ಶಿ ಯಾರಾಗುತ್ತಾರೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದೆಲ್ಲದರ ನಡುವೆ ಈ ವಿಚಾರಕ್ಕೆ ಸಂಬಂಧಿಸಿದ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ.

2 / 7
ವರದಿಯ ಪ್ರಕಾರ, ಜಯ್ ಶಾ ಐಸಿಸಿ ಅಧ್ಯಕ್ಷರಾದರೆ, ಡಿಡಿಸಿಎ ಅಧ್ಯಕ್ಷ ರೋಹನ್ ಜೇಟ್ಲಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹೊಸ ಕಾರ್ಯದರ್ಶಿಯಾಗಿ ಆಯ್ಕೆಯಾಗಬಹುದು ಎಂಬ ಸುದ್ದಿ ಹರಿದಾಡುತ್ತಿದೆ. ರೋಹನ್ ಜೇಟ್ಲಿ ಕಳೆದ ಹಲವು ವರ್ಷಗಳಿಂದ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ವರದಿಯ ಪ್ರಕಾರ, ಜಯ್ ಶಾ ಐಸಿಸಿ ಅಧ್ಯಕ್ಷರಾದರೆ, ಡಿಡಿಸಿಎ ಅಧ್ಯಕ್ಷ ರೋಹನ್ ಜೇಟ್ಲಿ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹೊಸ ಕಾರ್ಯದರ್ಶಿಯಾಗಿ ಆಯ್ಕೆಯಾಗಬಹುದು ಎಂಬ ಸುದ್ದಿ ಹರಿದಾಡುತ್ತಿದೆ. ರೋಹನ್ ಜೇಟ್ಲಿ ಕಳೆದ ಹಲವು ವರ್ಷಗಳಿಂದ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

3 / 7
ರೋಹನ್ ಜೇಟ್ಲಿ ಅವರು ಮಾಜಿ ಕೇಂದ್ರ ಸಚಿವ ದಿವಂಗತ ಅರುಣ್ ಜೇಟ್ಲಿ ಅವರ ಪುತ್ರ. ವರದಿಯ ಪ್ರಕಾರ ರೋಹನ್ ಬಿಸಿಸಿಐ ಕಾರ್ಯದರ್ಶಿಯಾಗುವ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ರೋಹನ್ ಜೇಟ್ಲಿ ಅನುಭವಿ ಕ್ರೀಡಾ ಆಡಳಿತಗಾರರಲ್ಲಿ ಒಬ್ಬರಾಗಿದ್ದು, ಅವರು ಎರಡು ಬಾರಿ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದರು.

ರೋಹನ್ ಜೇಟ್ಲಿ ಅವರು ಮಾಜಿ ಕೇಂದ್ರ ಸಚಿವ ದಿವಂಗತ ಅರುಣ್ ಜೇಟ್ಲಿ ಅವರ ಪುತ್ರ. ವರದಿಯ ಪ್ರಕಾರ ರೋಹನ್ ಬಿಸಿಸಿಐ ಕಾರ್ಯದರ್ಶಿಯಾಗುವ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ರೋಹನ್ ಜೇಟ್ಲಿ ಅನುಭವಿ ಕ್ರೀಡಾ ಆಡಳಿತಗಾರರಲ್ಲಿ ಒಬ್ಬರಾಗಿದ್ದು, ಅವರು ಎರಡು ಬಾರಿ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದರು.

4 / 7
ಇವರ ಅವಧಿಯಲ್ಲಿ ದೆಹಲಿಯಲ್ಲಿ 5 ವಿಶ್ವಕಪ್ ಪಂದ್ಯಗಳು ನಡೆದಿದ್ದು, ದೆಹಲಿ ಪ್ರೀಮಿಯರ್ ಲೀಗ್ ಕೂಡ ಆರಂಭವಾಗಿದೆ. ಇದರಲ್ಲಿ ಭಾರತೀಯ ಕ್ರಿಕೆಟ್‌ನ ಹಲವು ಸ್ಟಾರ್ ಆಟಗಾರರು ಆಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರೋಹನ್ ಹೆಸರನ್ನು ಬಿಸಿಸಿಐನಲ್ಲಿ ಎಲ್ಲರೂ ಒಪ್ಪುತ್ತಾರೆ ಎಂಬ ವರದಿಗಳಿವೆ. ಅದೇ ಸಮಯದಲ್ಲಿ, ರೋಹನ್ ಜೇಟ್ಲಿ ಬಿಸಿಸಿಐ ಕಾರ್ಯದರ್ಶಿಯಾದರೆ, ಇತರ ಅಧಿಕಾರಿಗಳು ತಮ್ಮ ಹುದ್ದೆಗಳಲ್ಲಿ ಉಳಿಯುತ್ತಾರೆ.

ಇವರ ಅವಧಿಯಲ್ಲಿ ದೆಹಲಿಯಲ್ಲಿ 5 ವಿಶ್ವಕಪ್ ಪಂದ್ಯಗಳು ನಡೆದಿದ್ದು, ದೆಹಲಿ ಪ್ರೀಮಿಯರ್ ಲೀಗ್ ಕೂಡ ಆರಂಭವಾಗಿದೆ. ಇದರಲ್ಲಿ ಭಾರತೀಯ ಕ್ರಿಕೆಟ್‌ನ ಹಲವು ಸ್ಟಾರ್ ಆಟಗಾರರು ಆಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರೋಹನ್ ಹೆಸರನ್ನು ಬಿಸಿಸಿಐನಲ್ಲಿ ಎಲ್ಲರೂ ಒಪ್ಪುತ್ತಾರೆ ಎಂಬ ವರದಿಗಳಿವೆ. ಅದೇ ಸಮಯದಲ್ಲಿ, ರೋಹನ್ ಜೇಟ್ಲಿ ಬಿಸಿಸಿಐ ಕಾರ್ಯದರ್ಶಿಯಾದರೆ, ಇತರ ಅಧಿಕಾರಿಗಳು ತಮ್ಮ ಹುದ್ದೆಗಳಲ್ಲಿ ಉಳಿಯುತ್ತಾರೆ.

5 / 7
ಇನ್ನು ಜಯ್ ಶಾ ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದರೆ, ಈ ಹುದ್ದೆಗೆ ಆಯ್ಕೆಯಾದ ಐದನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ. ಜಯ್​ ಶಾಗೂ ಮೊದಲು ಜಗನ್​ಮೋಹನ್ ದಾಲ್ಮಿಯಾ, ಶರದ್ ಪವಾರ್, ಎನ್ ಶ್ರೀನಿವಾಸನ್ ಮತ್ತು ಶಶಾಂಕ್ ಮನೋಹರ್ ಈ ಹುದ್ದೆಯನ್ನು ಅಲಂಕರಿಸಿದ್ದರು.

ಇನ್ನು ಜಯ್ ಶಾ ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದರೆ, ಈ ಹುದ್ದೆಗೆ ಆಯ್ಕೆಯಾದ ಐದನೇ ಭಾರತೀಯ ಎನಿಸಿಕೊಳ್ಳಲಿದ್ದಾರೆ. ಜಯ್​ ಶಾಗೂ ಮೊದಲು ಜಗನ್​ಮೋಹನ್ ದಾಲ್ಮಿಯಾ, ಶರದ್ ಪವಾರ್, ಎನ್ ಶ್ರೀನಿವಾಸನ್ ಮತ್ತು ಶಶಾಂಕ್ ಮನೋಹರ್ ಈ ಹುದ್ದೆಯನ್ನು ಅಲಂಕರಿಸಿದ್ದರು.

6 / 7
ಐಸಿಸಿ ನಿಯಮಗಳ ಪ್ರಕಾರ, 16 ನಿರ್ದೇಶಕರು ಅಧ್ಯಕ್ಷರ ಚುನಾವಣೆಯಲ್ಲಿ ಮತ ಚಲಾಯಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಸಭಾಪತಿಯಾಗಲು 9 ಮತಗಳನ್ನು ಪಡೆಯುವುದು ಅನಿವಾರ್ಯವಾಗಿದೆ. ವರದಿಗಳ ಪ್ರಕಾರ, ಐಸಿಸಿ ಮಂಡಳಿಯ 16 ಸದಸ್ಯರಲ್ಲಿ 15 ಸದಸ್ಯರ ಬೆಂಬಲವನ್ನು ಜಯ್ ಶಾ ಈಗಾಗಲೇ ಹೊಂದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ 35ನೇ ವಯಸ್ಸಿನಲ್ಲಿ ಐಸಿಸಿ ಇತಿಹಾಸದಲ್ಲೇ ಅತ್ಯಂತ ಕಿರಿಯ ಚೇರ್ಮನ್ ಆಗುವ ಅವಕಾಶವೂ ಜಯ್​ ಶಾ ಅವರಿಗಿದೆ.

ಐಸಿಸಿ ನಿಯಮಗಳ ಪ್ರಕಾರ, 16 ನಿರ್ದೇಶಕರು ಅಧ್ಯಕ್ಷರ ಚುನಾವಣೆಯಲ್ಲಿ ಮತ ಚಲಾಯಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಸಭಾಪತಿಯಾಗಲು 9 ಮತಗಳನ್ನು ಪಡೆಯುವುದು ಅನಿವಾರ್ಯವಾಗಿದೆ. ವರದಿಗಳ ಪ್ರಕಾರ, ಐಸಿಸಿ ಮಂಡಳಿಯ 16 ಸದಸ್ಯರಲ್ಲಿ 15 ಸದಸ್ಯರ ಬೆಂಬಲವನ್ನು ಜಯ್ ಶಾ ಈಗಾಗಲೇ ಹೊಂದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ 35ನೇ ವಯಸ್ಸಿನಲ್ಲಿ ಐಸಿಸಿ ಇತಿಹಾಸದಲ್ಲೇ ಅತ್ಯಂತ ಕಿರಿಯ ಚೇರ್ಮನ್ ಆಗುವ ಅವಕಾಶವೂ ಜಯ್​ ಶಾ ಅವರಿಗಿದೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!