AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಏಷ್ಯಾಕಪ್ ಶಿಬಿರ ಮುಕ್ತಾಯ: ಇಂದು ಶ್ರೀಲಂಕಾಕ್ಕೆ ಟೀಮ್ ಇಂಡಿಯಾ ಪ್ರಯಾಣ

Team India is set to depart for Sri Lanka: ಏಷ್ಯಾಕಪ್ ಶಿಬಿರದಲ್ಲಿ ಭಾರತೀಯ ಆಟಗಾರರಿ ಭರ್ಜರಿ ಪ್ರ್ಯಾಕ್ಟೀಸ್ ನಡೆಸಿದ್ದಾರೆ. ಇದೀಗ ಶಿಬಿರ ಮುಕ್ತಾಯಗೊಂಡಿದ್ದು, ಇಂದು ಶ್ರೀಲಂಕಾನ್ನರ ನಾಡಿಗೆ ತೆರಳಲಿದ್ದಾರೆ. ಐರ್ಲೆಂಡ್​ನಿಂದ ಬಂದು ಸ್ಯಾಮ್ಸನ್ ಹಾಗೂ ಬುಮ್ರಾ ತಂಡ ಸೇರಿಕೊಂಡಿದ್ದು, ಕೊಲೊಂಬೊಕ್ಕೆ ಪ್ಲೈಟ್​ನಲ್ಲಿ ತೆರಳಲಿದ್ದಾರೆ.

Vinay Bhat
|

Updated on: Aug 29, 2023 | 6:51 AM

Share
ಭಾರತೀಯ ಕ್ರಿಕೆಟ್ ತಂಡವು ಏಷ್ಯಾಕಪ್ 2023 ಕ್ಕಾಗಿ ಬೆಂಗಳೂರಿನ ಆಲೂರಿನಲ್ಲಿ ನಡೆಸುತ್ತಿದ್ದ ಕಠಿಣ ಅಭ್ಯಾಸಕ್ಕೆ ತೆರೆಬಿದ್ದಿದೆ. ಇಂದು ಎಲ್ಲ ಆಟಗಾರರು ಶ್ರೀಲಂಕಾ ಪ್ಲೈಟ್ ಏರಲಿದ್ದಾರೆ. ಕೊಲೊಂಬೊಕ್ಕೆ ತೆರಳಿ ಒಂದು ದಿನದ ವಿಶ್ರಾಂತಿ ಬಳಿಕ ಪುನಃ ಅಲ್ಲಿ ಅಭ್ಯಾಸ ಶುರು ಮಾಡಲಿದ್ದಾರೆ.

ಭಾರತೀಯ ಕ್ರಿಕೆಟ್ ತಂಡವು ಏಷ್ಯಾಕಪ್ 2023 ಕ್ಕಾಗಿ ಬೆಂಗಳೂರಿನ ಆಲೂರಿನಲ್ಲಿ ನಡೆಸುತ್ತಿದ್ದ ಕಠಿಣ ಅಭ್ಯಾಸಕ್ಕೆ ತೆರೆಬಿದ್ದಿದೆ. ಇಂದು ಎಲ್ಲ ಆಟಗಾರರು ಶ್ರೀಲಂಕಾ ಪ್ಲೈಟ್ ಏರಲಿದ್ದಾರೆ. ಕೊಲೊಂಬೊಕ್ಕೆ ತೆರಳಿ ಒಂದು ದಿನದ ವಿಶ್ರಾಂತಿ ಬಳಿಕ ಪುನಃ ಅಲ್ಲಿ ಅಭ್ಯಾಸ ಶುರು ಮಾಡಲಿದ್ದಾರೆ.

1 / 8
ಸಿಂಹಳೀಯರ ನಾಡಿಗೆ ತೆರಳುವ ಮುನ್ನ ಟೀಮ್ ಇಂಡಿಯಾ ಆಟಗಾರರು ವಿಶೇಷವಾದ ಡೆಕ್ಸಾ ಪರೀಕ್ಷೆಗೆ ಒಳಗಾಗಿದ್ದರು. ಆಟಗಾರರು ಇಂಜುರಿಗೆ ತುತ್ತಾಗುವುದನ್ನು ತಪ್ಪಿಸಲು ಬಿಸಿಸಿಐ ಈ ವಿಧಾನವನ್ನು ಜಾರಿಗೆ ತಂದಿದೆ. ಭವಿಷ್ಯದಲ್ಲಿ ಗಾಯಕ್ಕೆ ತುತ್ತಾಗಬಾರದು, ಫಿಟ್ ಆಗಿರಬೇಕು ಎಂಬ ಕಾರಣಕ್ಕೆ ಮುಂಜಾಗ್ರತ ಕ್ರಮವಾಗಿ ಈ ಸ್ಕ್ಯಾನಿಂಗ್ ಮಾಡಲಾಗುತ್ತದೆ.

ಸಿಂಹಳೀಯರ ನಾಡಿಗೆ ತೆರಳುವ ಮುನ್ನ ಟೀಮ್ ಇಂಡಿಯಾ ಆಟಗಾರರು ವಿಶೇಷವಾದ ಡೆಕ್ಸಾ ಪರೀಕ್ಷೆಗೆ ಒಳಗಾಗಿದ್ದರು. ಆಟಗಾರರು ಇಂಜುರಿಗೆ ತುತ್ತಾಗುವುದನ್ನು ತಪ್ಪಿಸಲು ಬಿಸಿಸಿಐ ಈ ವಿಧಾನವನ್ನು ಜಾರಿಗೆ ತಂದಿದೆ. ಭವಿಷ್ಯದಲ್ಲಿ ಗಾಯಕ್ಕೆ ತುತ್ತಾಗಬಾರದು, ಫಿಟ್ ಆಗಿರಬೇಕು ಎಂಬ ಕಾರಣಕ್ಕೆ ಮುಂಜಾಗ್ರತ ಕ್ರಮವಾಗಿ ಈ ಸ್ಕ್ಯಾನಿಂಗ್ ಮಾಡಲಾಗುತ್ತದೆ.

2 / 8
ಇನ್ನು ಮಂಡಿರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೆಎಲ್ ರಾಹುಲ್ ಇನ್ನೂ ಶೇ. 100 ರಷ್ಟು ಚೇತರಿಸಿಕೊಂಡಿಲ್ಲ. ಸಂಪೂರ್ಣವಾಗಿ ಫಿಟ್ನೆಸ್‌ಗೆ ಮರಳಬೇಕಷ್ಟೆ. ಕೀಪಿಂಗ್​ನಲ್ಲಿ ಕಠಿಣ ಅಭ್ಯಾಸ ಮಾಡಿದ ಹೊರತಾಗಿಯೂ, ಫುಲ್ ಫಿಟ್ನೆಸ್ ಪಡೆದುಕೊಂಡಿಲ್ಲ. ಈಗಾಗಲೇ ಭಾರತ ಮತ್ತು ಪಾಕಿಸ್ತಾನದ ನಡುವಣ ಪಂದ್ಯದಿಂದ ಇವರು ಹೊರಗುಳಿದಿದ್ದಾರೆ.

ಇನ್ನು ಮಂಡಿರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕೆಎಲ್ ರಾಹುಲ್ ಇನ್ನೂ ಶೇ. 100 ರಷ್ಟು ಚೇತರಿಸಿಕೊಂಡಿಲ್ಲ. ಸಂಪೂರ್ಣವಾಗಿ ಫಿಟ್ನೆಸ್‌ಗೆ ಮರಳಬೇಕಷ್ಟೆ. ಕೀಪಿಂಗ್​ನಲ್ಲಿ ಕಠಿಣ ಅಭ್ಯಾಸ ಮಾಡಿದ ಹೊರತಾಗಿಯೂ, ಫುಲ್ ಫಿಟ್ನೆಸ್ ಪಡೆದುಕೊಂಡಿಲ್ಲ. ಈಗಾಗಲೇ ಭಾರತ ಮತ್ತು ಪಾಕಿಸ್ತಾನದ ನಡುವಣ ಪಂದ್ಯದಿಂದ ಇವರು ಹೊರಗುಳಿದಿದ್ದಾರೆ.

3 / 8
ಮತ್ತೊಂದೆಡೆ, ಶ್ರೇಯಸ್ ಅಯ್ಯರ್ ತಮ್ಮ ಬೆನ್ನಿನ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಶೇ. 100 ರಷ್ಟು ಫಿಟ್ ಆಗಿದ್ದಾರೆ. ಇವರು ವಿಶ್ವಕಪ್ ದೃಷ್ಟಿಯಿಂದ ಕೂಡ ಏಷ್ಯಾಕಪ್​ನಲ್ಲಿ ಪ್ರಮುಖ ಪಾತ್ರವಹಿಸಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಅಯ್ಯರ್ ಕಣಕ್ಕಿಳಿಯಲಿದ್ದು, ಇವರ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದೆ.

ಮತ್ತೊಂದೆಡೆ, ಶ್ರೇಯಸ್ ಅಯ್ಯರ್ ತಮ್ಮ ಬೆನ್ನಿನ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಶೇ. 100 ರಷ್ಟು ಫಿಟ್ ಆಗಿದ್ದಾರೆ. ಇವರು ವಿಶ್ವಕಪ್ ದೃಷ್ಟಿಯಿಂದ ಕೂಡ ಏಷ್ಯಾಕಪ್​ನಲ್ಲಿ ಪ್ರಮುಖ ಪಾತ್ರವಹಿಸಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಅಯ್ಯರ್ ಕಣಕ್ಕಿಳಿಯಲಿದ್ದು, ಇವರ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದೆ.

4 / 8
ಏಷ್ಯಾಕಪ್ ಶಿಬಿರದಲ್ಲಿ ಭಾರತೀಯ ಆಟಗಾರರಿ ಭರ್ಜರಿ ಪ್ರ್ಯಾಕ್ಟೀಸ್ ನಡೆಸಿದ್ದಾರೆ. ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ ಸೇರಿದಂತೆ ಎಲ್ಲಾ ಆಟಗಾರರು ಕಡ್ಡಾಯವಾಗಿ ಫಿಟ್ನೆಸ್ ಪರೀಕ್ಷೆಗೆ ಒಳಗಾಗಿ ಆಲೂರು ಮೈದಾನದಲ್ಲಿ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಅಭ್ಯಾಸ ಮಾಡಿದ್ದಾರೆ.

ಏಷ್ಯಾಕಪ್ ಶಿಬಿರದಲ್ಲಿ ಭಾರತೀಯ ಆಟಗಾರರಿ ಭರ್ಜರಿ ಪ್ರ್ಯಾಕ್ಟೀಸ್ ನಡೆಸಿದ್ದಾರೆ. ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ ಸೇರಿದಂತೆ ಎಲ್ಲಾ ಆಟಗಾರರು ಕಡ್ಡಾಯವಾಗಿ ಫಿಟ್ನೆಸ್ ಪರೀಕ್ಷೆಗೆ ಒಳಗಾಗಿ ಆಲೂರು ಮೈದಾನದಲ್ಲಿ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಅಭ್ಯಾಸ ಮಾಡಿದ್ದಾರೆ.

5 / 8
ಇನ್ನು ಜಸ್​ಪ್ರಿತ್ ಬುಮ್ರಾ ಮತ್ತು ಸಂಜು ಸ್ಯಾಮ್ಸನ್ ಐರ್ಲೆಂಡ್​ನಿಂದ ಸೋಮವಾರ ತವರಿಗೆ ಮರಳಿದ್ದಾರೆ. ಭಾರತದ ಬೌಲಿಂಗ್ ವಿಭಾಗದಲ್ಲಿ ಬುಮ್ರಾ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆಯಿದ್ದರೆ, ಸ್ಯಾಮ್ಸನ್ ಸ್ಪರ್ಧೆಗೆ ಮೀಸಲು ಆಟಗಾರನಾಗಿ ಪ್ರಯಾಣಿಸುತ್ತಿದ್ದಾರೆ. ಇವರಿಬ್ಬರು ಪ್ಲೈಟ್ ಏರುವ ಮುನ್ನ ಯೋ-ಯೋ ಟೆಸ್ಟ್​ನಲ್ಲಿ ಭಾಗವಹಿಸಲಿದ್ದಾರೆ.

ಇನ್ನು ಜಸ್​ಪ್ರಿತ್ ಬುಮ್ರಾ ಮತ್ತು ಸಂಜು ಸ್ಯಾಮ್ಸನ್ ಐರ್ಲೆಂಡ್​ನಿಂದ ಸೋಮವಾರ ತವರಿಗೆ ಮರಳಿದ್ದಾರೆ. ಭಾರತದ ಬೌಲಿಂಗ್ ವಿಭಾಗದಲ್ಲಿ ಬುಮ್ರಾ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆಯಿದ್ದರೆ, ಸ್ಯಾಮ್ಸನ್ ಸ್ಪರ್ಧೆಗೆ ಮೀಸಲು ಆಟಗಾರನಾಗಿ ಪ್ರಯಾಣಿಸುತ್ತಿದ್ದಾರೆ. ಇವರಿಬ್ಬರು ಪ್ಲೈಟ್ ಏರುವ ಮುನ್ನ ಯೋ-ಯೋ ಟೆಸ್ಟ್​ನಲ್ಲಿ ಭಾಗವಹಿಸಲಿದ್ದಾರೆ.

6 / 8
ಭಾರತ ತಂಡ ಏಷ್ಯಾಕಪ್‌ನ ತಮ್ಮ ಆರಂಭಿಕ ಪಂದ್ಯದಲ್ಲಿ ಸೆಪ್ಟೆಂಬರ್ 2 ರಂದು ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ. ಬಳಿಕ ಸೆಪ್ಟೆಂಬರ್ 4 ರಂದು ಪಲ್ಲೆಕೆಲೆಯಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ರೋಹಿತ್ ಶರ್ಮಾ ತಂಡ ನೇಪಾಳವನ್ನು ಎದುರಿಸಲಿದೆ.

ಭಾರತ ತಂಡ ಏಷ್ಯಾಕಪ್‌ನ ತಮ್ಮ ಆರಂಭಿಕ ಪಂದ್ಯದಲ್ಲಿ ಸೆಪ್ಟೆಂಬರ್ 2 ರಂದು ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ. ಬಳಿಕ ಸೆಪ್ಟೆಂಬರ್ 4 ರಂದು ಪಲ್ಲೆಕೆಲೆಯಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ರೋಹಿತ್ ಶರ್ಮಾ ತಂಡ ನೇಪಾಳವನ್ನು ಎದುರಿಸಲಿದೆ.

7 / 8
ಏಷ್ಯಾ ಕಪ್ 2023ಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಜಸ್​ಪ್ರಿತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ , ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ. ಸ್ಟ್ಯಾಂಡ್-ಬೈ ಆಟಗಾರ: ಸಂಜು ಸ್ಯಾಮ್ಸನ್

ಏಷ್ಯಾ ಕಪ್ 2023ಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಜಸ್​ಪ್ರಿತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ , ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ. ಸ್ಟ್ಯಾಂಡ್-ಬೈ ಆಟಗಾರ: ಸಂಜು ಸ್ಯಾಮ್ಸನ್

8 / 8
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು