AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಗುಡ್ ನ್ಯೂಸ್: ಇಬ್ಬರು ಆಟಗಾರರು ಫುಲ್​ ಫಿಟ್

Champions Trophy 2025: ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್​ ಪಂದ್ಯವು ಭಾನುವಾರ ನಡೆಯಲಿದೆ. ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ.

ಝಾಹಿರ್ ಯೂಸುಫ್
|

Updated on: Mar 01, 2025 | 11:31 AM

Share
ಚಾಂಪಿಯನ್ಸ್ ಟ್ರೋಫಿಯ 12ನೇ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಅದು ಸಹ ಇಬ್ಬರು ಪ್ರಮುಖ ಆಟಗಾರರು ಮುಂದಿನ ಪಂದ್ಯಕ್ಕಾಗಿ ಸಂಪೂರ್ಣ ಫಿಟ್​ ಆಗುವುದರೊಂದಿಗೆ. ಈ ಸಿಹಿ ಸುದ್ದಿಯೊಂದಿಗೆ ಭಾರತ ತಂಡ ಆತಂಕ ಕೂಡ ದೂರವಾಗಿದೆ.

ಚಾಂಪಿಯನ್ಸ್ ಟ್ರೋಫಿಯ 12ನೇ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಅದು ಸಹ ಇಬ್ಬರು ಪ್ರಮುಖ ಆಟಗಾರರು ಮುಂದಿನ ಪಂದ್ಯಕ್ಕಾಗಿ ಸಂಪೂರ್ಣ ಫಿಟ್​ ಆಗುವುದರೊಂದಿಗೆ. ಈ ಸಿಹಿ ಸುದ್ದಿಯೊಂದಿಗೆ ಭಾರತ ತಂಡ ಆತಂಕ ಕೂಡ ದೂರವಾಗಿದೆ.

1 / 5
ಇದಕ್ಕೂ ಮುನ್ನ ನ್ಯೂಝಿಲೆಂಡ್ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು. ಇದಕ್ಕೆ ಮುಖ್ಯ ಕಾರಣ ಗುರುವಾರ ನಡೆದ ಅಭ್ಯಾಸದ ವೇಳೆ ಈ ಇಬ್ಬರು ಕಾಣಿಸಿಕೊಳ್ಳದೇ ಇರುವುದು.

ಇದಕ್ಕೂ ಮುನ್ನ ನ್ಯೂಝಿಲೆಂಡ್ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು. ಇದಕ್ಕೆ ಮುಖ್ಯ ಕಾರಣ ಗುರುವಾರ ನಡೆದ ಅಭ್ಯಾಸದ ವೇಳೆ ಈ ಇಬ್ಬರು ಕಾಣಿಸಿಕೊಳ್ಳದೇ ಇರುವುದು.

2 / 5
ಮಂಡಿರಜ್ಜು ಗಾಯದ ಸಮಸ್ಯೆಯ ಕಾರಣ ರೋಹಿತ್ ಶರ್ಮಾ ಗುರುವಾರ ನಡೆದ ಅಭ್ಯಾಸದ ವೇಳೆ ವೇಳೆ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅವರು ನ್ಯೂಝಿಲೆಂಡ್ ವಿರುದ್ಧದ ಕೊನೆಯ ಲೀಗ್​ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿತ್ತು. ಆದರೆ ಶುಕ್ರವಾರ ನೆಟ್ಸ್​ನಲ್ಲಿ ಅಭ್ಯಾಸ ನಡೆಸಿದ್ದಾರೆ. ಇದರೊಂದಿಗೆ ರೋಹಿತ್ ಶರ್ಮಾ ಫಿಟ್​ ಆಗಿರುವುದು ಖಚಿತವಾಗಿದೆ.

ಮಂಡಿರಜ್ಜು ಗಾಯದ ಸಮಸ್ಯೆಯ ಕಾರಣ ರೋಹಿತ್ ಶರ್ಮಾ ಗುರುವಾರ ನಡೆದ ಅಭ್ಯಾಸದ ವೇಳೆ ವೇಳೆ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅವರು ನ್ಯೂಝಿಲೆಂಡ್ ವಿರುದ್ಧದ ಕೊನೆಯ ಲೀಗ್​ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿತ್ತು. ಆದರೆ ಶುಕ್ರವಾರ ನೆಟ್ಸ್​ನಲ್ಲಿ ಅಭ್ಯಾಸ ನಡೆಸಿದ್ದಾರೆ. ಇದರೊಂದಿಗೆ ರೋಹಿತ್ ಶರ್ಮಾ ಫಿಟ್​ ಆಗಿರುವುದು ಖಚಿತವಾಗಿದೆ.

3 / 5
ಹಾಗೆಯೇ ಅನಾರೋಗ್ಯದಿಂದ ಬಳಲುತ್ತಿದ್ದ ಶುಭ್​ಮನ್ ಗಿಲ್ ಕೂಡ ಸಂಪೂರ್ಣ ಗುಣಮುಖರಾಗಿದ್ದು, ಶುಕ್ರವಾರ ನಡೆದ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಜತೆ ಕಾಣಿಸಿಕೊಂಡಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್​​ಮನ್ ಗಿಲ್ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

ಹಾಗೆಯೇ ಅನಾರೋಗ್ಯದಿಂದ ಬಳಲುತ್ತಿದ್ದ ಶುಭ್​ಮನ್ ಗಿಲ್ ಕೂಡ ಸಂಪೂರ್ಣ ಗುಣಮುಖರಾಗಿದ್ದು, ಶುಕ್ರವಾರ ನಡೆದ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಜತೆ ಕಾಣಿಸಿಕೊಂಡಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್​​ಮನ್ ಗಿಲ್ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

4 / 5
ಇನ್ನು ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಪಂದ್ಯವು ಮಾರ್ಚ್ 2 ರಂದು ನಡೆಯಲಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಗ್ರೂಪ್-A ಅಂಕ ಪಟ್ಟಿಯಲ್ಲಿ ಭಾರತ ತಂಡ ಅಗ್ರಸ್ಥಾನ ಅಲಂಕರಿಸಲಿದೆ. ಅಲ್ಲದೆ ಸೆಮಿಫೈನಲ್​ನಲ್ಲಿ ಗ್ರೂಪ್-ಬಿ ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸುವ ತಂಡವನ್ನು ಎದುರಿಸಲಿದೆ.

ಇನ್ನು ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಪಂದ್ಯವು ಮಾರ್ಚ್ 2 ರಂದು ನಡೆಯಲಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಗ್ರೂಪ್-A ಅಂಕ ಪಟ್ಟಿಯಲ್ಲಿ ಭಾರತ ತಂಡ ಅಗ್ರಸ್ಥಾನ ಅಲಂಕರಿಸಲಿದೆ. ಅಲ್ಲದೆ ಸೆಮಿಫೈನಲ್​ನಲ್ಲಿ ಗ್ರೂಪ್-ಬಿ ನಲ್ಲಿ ದ್ವಿತೀಯ ಸ್ಥಾನ ಅಲಂಕರಿಸುವ ತಂಡವನ್ನು ಎದುರಿಸಲಿದೆ.

5 / 5
Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ