AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ 30 ರಂದು ಇತಿಹಾಸ ಸೃಷ್ಟಿಸಲಿದ್ದಾರೆ ರೋಹಿತ್ ಶರ್ಮಾ – ವಿರಾಟ್ ಕೊಹ್ಲಿ

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ. ಮೊದಲ ಮ್ಯಾಚ್ ರಾಂಚಿಯಲ್ಲಿ ನಡೆದರೆ, ದ್ಬಿತೀಯ ಪಂದ್ಯವು ಡಿಸೆಂಬರ್ 3 ರಂದು ರಾಯ್​ಪುರದಲ್ಲಿ ನಡೆಯಲಿದೆ. ಇನ್ನು ಮೂರನೇ ಮ್ಯಾಚ್ ಡಿಸೆಂಬರ್ 6 ರಂದು ವಿಶಾಖಪಟ್ಟಣದಲ್ಲಿ ಜರುಗಲಿದೆ.

ಝಾಹಿರ್ ಯೂಸುಫ್
|

Updated on: Nov 25, 2025 | 12:00 PM

Share
ಭಾರತ-ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿ ಶುರುವಾಗಿದೆ. ರಾಂಚಿಯ ಜೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಭಾರತ-ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿ ಶುರುವಾಗಿದೆ. ರಾಂಚಿಯ ಜೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

1 / 5
ಹೌದು, ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ಜೋಡಿ ಎಂಬ ವಿಶ್ವ ದಾಖಲೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯ ಹೆಸರಿಗೆ ಸೇರ್ಪಡೆಯಾಗಿದೆ.

ಹೌದು, ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವುದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ಜೋಡಿ ಎಂಬ ವಿಶ್ವ ದಾಖಲೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯ ಹೆಸರಿಗೆ ಸೇರ್ಪಡೆಯಾಗಿದೆ.

2 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ  ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಹೆಸರಿನಲ್ಲಿತ್ತು. ಸಚಿನ್-ರಾಹುಲ್ ಜೋಡಿಯು ಜೊತೆಯಾಗಿ 391 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಇಂಟರ್​ನ್ಯಾಷನಲ್​ ಕ್ರಿಕೆಟ್​ನಲ್ಲಿ ಜೊತೆಯಾಗಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ವಿಶ್ವ ದಾಖಲೆ ನಿರ್ಮಿಸಿದ್ದರು.

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ  ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಹೆಸರಿನಲ್ಲಿತ್ತು. ಸಚಿನ್-ರಾಹುಲ್ ಜೋಡಿಯು ಜೊತೆಯಾಗಿ 391 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಇಂಟರ್​ನ್ಯಾಷನಲ್​ ಕ್ರಿಕೆಟ್​ನಲ್ಲಿ ಜೊತೆಯಾಗಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 5
ಇದೀಗ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಜೊತೆಯಾಗಿ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ (392), ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ (391) ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇದೀಗ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಜೊತೆಯಾಗಿ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ (392), ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ (391) ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 5
ಇದೀಗ 392 ಪಂದ್ಯಗಳೊಂದಿಗೆ ಅಗ್ರಸ್ಥಾನಕ್ಕೇರಿರುವ ರೋಹಿತ್-ಕೊಹ್ಲಿ ಜೋಡಿಯು ಮುಂಬರುವ ಸರಣಿಗಳ ಮೂಲಕ ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ ಜೊತೆಯಾಗಿ 400 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆಯುವ ಅವಕಾಶ ಹೊಂದಿದ್ದಾರೆ. ಹೀಗಾಗಿ ಶೀಘ್ರದಲ್ಲೇ ರೋ-ಕೊ ಜೋಡಿಯಿಂದ ಮತ್ತೊಂದು ಭರ್ಜರಿ ವಿಶ್ವ ದಾಖಲೆಯನ್ನು ನಿರೀಕ್ಷಿಸಬಹುದು.

ಇದೀಗ 392 ಪಂದ್ಯಗಳೊಂದಿಗೆ ಅಗ್ರಸ್ಥಾನಕ್ಕೇರಿರುವ ರೋಹಿತ್-ಕೊಹ್ಲಿ ಜೋಡಿಯು ಮುಂಬರುವ ಸರಣಿಗಳ ಮೂಲಕ ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ ಜೊತೆಯಾಗಿ 400 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆಯುವ ಅವಕಾಶ ಹೊಂದಿದ್ದಾರೆ. ಹೀಗಾಗಿ ಶೀಘ್ರದಲ್ಲೇ ರೋ-ಕೊ ಜೋಡಿಯಿಂದ ಮತ್ತೊಂದು ಭರ್ಜರಿ ವಿಶ್ವ ದಾಖಲೆಯನ್ನು ನಿರೀಕ್ಷಿಸಬಹುದು.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ