AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಸೋಲಿನ ಸರದಾರನ ಹೆಸರಿಗೆ ಕೆಟ್ಟ ದಾಖಲೆ

Team India: ಭಾರತ ತಂಡ ಈ ವರ್ಷ 15 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ 14 ಮ್ಯಾಚ್​​ಗಳಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಿದ್ದಾರೆ. ಇನ್ನು ಒಂದು ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ನಾಯಕರಾಗಿ ಕಾಣಿಸಿಕೊಂಡಿದ್ದರು. ರೋಹಿತ್ ಶರ್ಮಾ ನಾಯಕತ್ವದಲ್ಲಿ 14 ಪಂದ್ಯಗಳನ್ನಾಡಿರುವ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 7 ಮ್ಯಾಚ್​​ಗಳಲ್ಲಿ ಮಾತ್ರ.

ಝಾಹಿರ್ ಯೂಸುಫ್
|

Updated on: Dec 31, 2024 | 7:56 AM

Share
ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಹ್ಯಾಟ್ರಿಕ್ ಸೋಲು... ಇದಾದ ಬಳಿಕ ಪರ್ತ್​ ಟೆಸ್ಟ್​ನಲ್ಲಿ ಟೀಮ್ ಇಂಡಿಯಾಗೆ ಗೆಲುವು. ಮತ್ತೆ ಬಂದ ನಾಯಕ ರೋಹಿತ್ ಶರ್ಮಾಗೆ ಅಡಿಲೇಡ್​ನಲ್ಲಿ ಮತ್ತು ಮೆಲ್ಬೋರ್ನ್​ನಲ್ಲಿ ಸೋಲುಗಳ ಸರಮಾಲೆ. ಹೀಗೆ ಕಳೆದ 7 ಪಂದ್ಯಗಳಲ್ಲಿ ಟೀಮ್ ಇಂಡಿಯಾ 5 ರಲ್ಲಿ ಸೋಲನುಭವಿಸಿದೆ.

ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಹ್ಯಾಟ್ರಿಕ್ ಸೋಲು... ಇದಾದ ಬಳಿಕ ಪರ್ತ್​ ಟೆಸ್ಟ್​ನಲ್ಲಿ ಟೀಮ್ ಇಂಡಿಯಾಗೆ ಗೆಲುವು. ಮತ್ತೆ ಬಂದ ನಾಯಕ ರೋಹಿತ್ ಶರ್ಮಾಗೆ ಅಡಿಲೇಡ್​ನಲ್ಲಿ ಮತ್ತು ಮೆಲ್ಬೋರ್ನ್​ನಲ್ಲಿ ಸೋಲುಗಳ ಸರಮಾಲೆ. ಹೀಗೆ ಕಳೆದ 7 ಪಂದ್ಯಗಳಲ್ಲಿ ಟೀಮ್ ಇಂಡಿಯಾ 5 ರಲ್ಲಿ ಸೋಲನುಭವಿಸಿದೆ.

1 / 6
ಇಲ್ಲಿ ಏಳು ಪಂದ್ಯಗಳಲ್ಲಿ ಭಾರತ ತಂಡವು ಒಂದು ಜಯ ಸಾಧಿಸಿದ್ದು ಜಸ್​ಪ್ರೀತ್ ಬುಮ್ರಾ ಅವರ ನಾಯಕತ್ವದಲ್ಲಿ. ಇನ್ನು ಬ್ರಿಸ್ಬೇನ್​ ಟೆಸ್ಟ್ ಪಂದ್ಯವು ಮಳೆಯಿಂದಾಗಿ ಡ್ರಾನಲ್ಲಿ ಅಂತ್ಯಗೊಂಡ ಕಾರಣ ಟೀಮ್ ಇಂಡಿಯಾ ಸೋಲು ತಪ್ಪಿಸಿಕೊಂಡಿತು. ಅಂದರೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ 14 ಪಂದ್ಯಗಳಲ್ಲಿ 6 ರಲ್ಲಿ ಸೋಲನುಭವಿಸಿದೆ.

ಇಲ್ಲಿ ಏಳು ಪಂದ್ಯಗಳಲ್ಲಿ ಭಾರತ ತಂಡವು ಒಂದು ಜಯ ಸಾಧಿಸಿದ್ದು ಜಸ್​ಪ್ರೀತ್ ಬುಮ್ರಾ ಅವರ ನಾಯಕತ್ವದಲ್ಲಿ. ಇನ್ನು ಬ್ರಿಸ್ಬೇನ್​ ಟೆಸ್ಟ್ ಪಂದ್ಯವು ಮಳೆಯಿಂದಾಗಿ ಡ್ರಾನಲ್ಲಿ ಅಂತ್ಯಗೊಂಡ ಕಾರಣ ಟೀಮ್ ಇಂಡಿಯಾ ಸೋಲು ತಪ್ಪಿಸಿಕೊಂಡಿತು. ಅಂದರೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ 14 ಪಂದ್ಯಗಳಲ್ಲಿ 6 ರಲ್ಲಿ ಸೋಲನುಭವಿಸಿದೆ.

2 / 6
ಈ ಸೋಲಿನೊಂದಿಗೆ ಭಾರತದ ಟೆಸ್ಟ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ದಾಖಲೆಯೊಂದನ್ನು ಕ್ಯಾಪ್ಟನ್ ರೋಹಿತ್ ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ರೋಹಿತ್ ಶರ್ಮಾ ಟೀಮ್ ಇಂಡಿಯಾಗೆ ಒಂದೇ ವರ್ಷದೊಳಗೆ ಅತೀ ಹೆಚ್ಚು ಟೆಸ್ಟ್ ಸೋಲು ತಂದುಕೊಟ್ಟ ನಾಯಕನೆಂಬ ಅಪಕೀರ್ತಿಗೆ ಒಳಗಾಗಿದ್ದಾರೆ.

ಈ ಸೋಲಿನೊಂದಿಗೆ ಭಾರತದ ಟೆಸ್ಟ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ದಾಖಲೆಯೊಂದನ್ನು ಕ್ಯಾಪ್ಟನ್ ರೋಹಿತ್ ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ರೋಹಿತ್ ಶರ್ಮಾ ಟೀಮ್ ಇಂಡಿಯಾಗೆ ಒಂದೇ ವರ್ಷದೊಳಗೆ ಅತೀ ಹೆಚ್ಚು ಟೆಸ್ಟ್ ಸೋಲು ತಂದುಕೊಟ್ಟ ನಾಯಕನೆಂಬ ಅಪಕೀರ್ತಿಗೆ ಒಳಗಾಗಿದ್ದಾರೆ.

3 / 6
ಇದಕ್ಕೂ ಮುನ್ನ ಇಂತಹದೊಂದು ಹೀನಾಯ ದಾಖಲೆ ಬರೆದಿದ್ದು ಸಚಿನ್ ತೆಂಡೂಲ್ಕರ್. 1999 ರಲ್ಲಿ ಸಚಿನ್ ತೆಂಡೂಲ್ಕರ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ 5 ಟೆಸ್ಟ್ ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಇದರೊಂದಿಗೆ ಒಂದೇ ವರ್ಷದೊಳಗೆ ಅತೀ ಹೆಚ್ಚು ಸೋಲು ಕಂಡ ಟೀಮ್ ಇಂಡಿಯಾ ನಾಯಕನೆಂಬ ಅಪಕೀರ್ತಿ ಸಚಿನ್ ಪಾಲಾಗಿತ್ತು.

ಇದಕ್ಕೂ ಮುನ್ನ ಇಂತಹದೊಂದು ಹೀನಾಯ ದಾಖಲೆ ಬರೆದಿದ್ದು ಸಚಿನ್ ತೆಂಡೂಲ್ಕರ್. 1999 ರಲ್ಲಿ ಸಚಿನ್ ತೆಂಡೂಲ್ಕರ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ 5 ಟೆಸ್ಟ್ ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಇದರೊಂದಿಗೆ ಒಂದೇ ವರ್ಷದೊಳಗೆ ಅತೀ ಹೆಚ್ಚು ಸೋಲು ಕಂಡ ಟೀಮ್ ಇಂಡಿಯಾ ನಾಯಕನೆಂಬ ಅಪಕೀರ್ತಿ ಸಚಿನ್ ಪಾಲಾಗಿತ್ತು.

4 / 6
ಇದೀಗ ಕಳಪೆ ನಾಯಕತ್ವದೊಂದಿಗೆ ಬರೋಬ್ಬರಿ 25 ವರ್ಷಗಳ ಬಳಿಕ ಸಚಿನ್ ತೆಂಡೂಲ್ಕರ್ ಅವರ ಅತ್ಯಂತ ಕೆಟ್ಟ ದಾಖಲೆಯನ್ನು ರೋಹಿತ್ ಶರ್ಮಾ ಮುರಿದಿದ್ದಾರೆ. ಈ ವರ್ಷ ಟೀಮ್ ಇಂಡಿಯಾ 15 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 14 ಮ್ಯಾಚ್​​ಗಳಲ್ಲಿ ರೋಹಿತ್ ಶರ್ಮಾ ನಾಯಕರಾಗಿ ಕಾಣಿಸಿಕೊಂಡಿದ್ದರು.

ಇದೀಗ ಕಳಪೆ ನಾಯಕತ್ವದೊಂದಿಗೆ ಬರೋಬ್ಬರಿ 25 ವರ್ಷಗಳ ಬಳಿಕ ಸಚಿನ್ ತೆಂಡೂಲ್ಕರ್ ಅವರ ಅತ್ಯಂತ ಕೆಟ್ಟ ದಾಖಲೆಯನ್ನು ರೋಹಿತ್ ಶರ್ಮಾ ಮುರಿದಿದ್ದಾರೆ. ಈ ವರ್ಷ ಟೀಮ್ ಇಂಡಿಯಾ 15 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 14 ಮ್ಯಾಚ್​​ಗಳಲ್ಲಿ ರೋಹಿತ್ ಶರ್ಮಾ ನಾಯಕರಾಗಿ ಕಾಣಿಸಿಕೊಂಡಿದ್ದರು.

5 / 6
ಈ 14 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದಿರುವುದು 7 ಮ್ಯಾಚ್​​ಗಳಲ್ಲಿ ಮಾತ್ರ. ಇನ್ನುಳಿದ 6 ಪಂದ್ಯಗಳಲ್ಲಿ ಸೋತರೆ, ಒಂದು ಮ್ಯಾಚ್​ ಡ್ರಾನಲ್ಲಿ ಅಂತ್ಯಗೊಂಡಿದೆ. ಹೀಗಾಗಿಯೇ ಇದೀಗ ರೋಹಿತ್ ಶರ್ಮಾ ಅವರ ನಾಯಕತ್ವದ ಬಗ್ಗೆ ಅಪಸ್ವರಗಳು ಕೇಳಿ ಬರಲಾರಂಭಿಸಿದೆ. ಹಾಗಾಗಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ಟೀಮ್ ಇಂಢಿಯಾ ನಾಯಕತ್ವದಲ್ಲಿ ಬದಲಾವಣೆ ಕಂಡು ಬಂದರೂ ಅಚ್ಚರಿಪಡಬೇಕಿಲ್ಲ.

ಈ 14 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದಿರುವುದು 7 ಮ್ಯಾಚ್​​ಗಳಲ್ಲಿ ಮಾತ್ರ. ಇನ್ನುಳಿದ 6 ಪಂದ್ಯಗಳಲ್ಲಿ ಸೋತರೆ, ಒಂದು ಮ್ಯಾಚ್​ ಡ್ರಾನಲ್ಲಿ ಅಂತ್ಯಗೊಂಡಿದೆ. ಹೀಗಾಗಿಯೇ ಇದೀಗ ರೋಹಿತ್ ಶರ್ಮಾ ಅವರ ನಾಯಕತ್ವದ ಬಗ್ಗೆ ಅಪಸ್ವರಗಳು ಕೇಳಿ ಬರಲಾರಂಭಿಸಿದೆ. ಹಾಗಾಗಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ಟೀಮ್ ಇಂಢಿಯಾ ನಾಯಕತ್ವದಲ್ಲಿ ಬದಲಾವಣೆ ಕಂಡು ಬಂದರೂ ಅಚ್ಚರಿಪಡಬೇಕಿಲ್ಲ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ