AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಹಳ್ಳಿ ಕಡೆ ಮುಖ ಮಾಡಿದ ರೋಹಿತ್; ಮಡದಿ ಹೆಸರಲ್ಲಿ 9 ಕೋಟಿ ಮೌಲ್ಯದ ಭೂಮಿ ಖರೀದಿಸಿದ ಹಿಟ್​ಮ್ಯಾನ್

Rohit Sharma: ರೋಹಿತ್ ಶರ್ಮಾ ಅಲಿಬಾಗ್‌ನಲ್ಲಿ 9 ಕೋಟಿ ಮೌಲ್ಯದ ಭೂಮಿಯನ್ನು ಖರೀದಿಸಿದ್ದಾರೆ. ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ದೇ ಹೆಸರಿನಲ್ಲಿ 4 ಎಕರೆ ಜಮೀನು ಖರೀದಿಸಿದ್ದಾರೆ.

TV9 Web
| Edited By: |

Updated on: Dec 16, 2021 | 7:05 PM

Share
ತಮ್ಮ ಬ್ಯಾಟ್ ಮೂಲಕ ಇಡೀ ವಿಶ್ವಕ್ಕೆ ತನ್ನನ್ನು ತಾನು ಪರಿಚಯಿಸಿಕೊಂಡಿರುವ ರೋಹಿತ್ ಶರ್ಮಾ ಹೊಸ ಕೆಲಸದಿಂದ ಸುದ್ದಿಯಾಗಿದ್ದಾರೆ. ರೋಹಿತ್ ಅವರನ್ನು ಟೀಂ ಇಂಡಿಯಾದ ಏಕದಿನ ಮತ್ತು ಟಿ20 ನಾಯಕರನ್ನಾಗಿ ಮಾಡಲಾಗಿದೆ. ಗಾಯದ ಸಮಸ್ಯೆಯಿಂದ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರೂ, ರೋಹಿತ್ ಶರ್ಮಾ ಮೈದಾನದ ಹೊರಗೆ ದೊಡ್ಡ ಸಿಕ್ಸರ್ ಬಾರಿಸಿದ್ದಾರೆ.

ತಮ್ಮ ಬ್ಯಾಟ್ ಮೂಲಕ ಇಡೀ ವಿಶ್ವಕ್ಕೆ ತನ್ನನ್ನು ತಾನು ಪರಿಚಯಿಸಿಕೊಂಡಿರುವ ರೋಹಿತ್ ಶರ್ಮಾ ಹೊಸ ಕೆಲಸದಿಂದ ಸುದ್ದಿಯಾಗಿದ್ದಾರೆ. ರೋಹಿತ್ ಅವರನ್ನು ಟೀಂ ಇಂಡಿಯಾದ ಏಕದಿನ ಮತ್ತು ಟಿ20 ನಾಯಕರನ್ನಾಗಿ ಮಾಡಲಾಗಿದೆ. ಗಾಯದ ಸಮಸ್ಯೆಯಿಂದ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರೂ, ರೋಹಿತ್ ಶರ್ಮಾ ಮೈದಾನದ ಹೊರಗೆ ದೊಡ್ಡ ಸಿಕ್ಸರ್ ಬಾರಿಸಿದ್ದಾರೆ.

1 / 5
ಮಾಧ್ಯಮ ವರದಿಗಳ ಪ್ರಕಾರ, ರೋಹಿತ್ ಶರ್ಮಾ ಅಲಿಬಾಗ್‌ನಲ್ಲಿ 9 ಕೋಟಿ ಮೌಲ್ಯದ ಭೂಮಿಯನ್ನು ಖರೀದಿಸಿದ್ದಾರೆ. ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ದೇ ಹೆಸರಿನಲ್ಲಿ 4 ಎಕರೆ ಜಮೀನು ಖರೀದಿಸಿದ್ದಾರೆ. ಡಿಸೆಂಬರ್ 14 ರಂದು ಅಲಿಬಾಗ್ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಎಲ್ಲಾ ದಾಖಲೆಗಳು ಪೂರ್ಣಗೊಂಡಿವೆ ಎಂದು ಹೇಳಲಾಗುತ್ತಿದೆ.

ಮಾಧ್ಯಮ ವರದಿಗಳ ಪ್ರಕಾರ, ರೋಹಿತ್ ಶರ್ಮಾ ಅಲಿಬಾಗ್‌ನಲ್ಲಿ 9 ಕೋಟಿ ಮೌಲ್ಯದ ಭೂಮಿಯನ್ನು ಖರೀದಿಸಿದ್ದಾರೆ. ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ದೇ ಹೆಸರಿನಲ್ಲಿ 4 ಎಕರೆ ಜಮೀನು ಖರೀದಿಸಿದ್ದಾರೆ. ಡಿಸೆಂಬರ್ 14 ರಂದು ಅಲಿಬಾಗ್ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಎಲ್ಲಾ ದಾಖಲೆಗಳು ಪೂರ್ಣಗೊಂಡಿವೆ ಎಂದು ಹೇಳಲಾಗುತ್ತಿದೆ.

2 / 5
ರೋಹಿತ್ ಶರ್ಮಾ ಅವರು ಅಲಿಬಾಗ್ ನಗರದಿಂದ 20 ಕಿಮೀ ದೂರದಲ್ಲಿರುವ ಸರಳ್ ಮಹಾತ್ರೋಲಿ ಗ್ರಾಮದಲ್ಲಿ ಭೂಮಿ ಖರೀದಿಸಿದ್ದಾರೆ. ಗ್ರಾಮದ ಸರಪಂಚ್ ಅಮಿತ್ ನಾಯಕ್ ಮಾತನಾಡಿ, ರೋಹಿತ್ ಗ್ರಾಮದಲ್ಲಿ 9 ಕೋಟಿಗೆ ಜಮೀನು ಖರೀದಿಸಿದ್ದಾರೆ. ರೋಹಿತ್ ಮೊದಲ ಬಾರಿಗೆ ಈ ಗ್ರಾಮಕ್ಕೆ ಬಂದು ಜಾಗ ವಿಕ್ಷೀಸಿದ್ದರು. ನಂತರ ಅವರಿಗೆ ಈ ಜಾಗ ಇಷ್ಟವಾಗಿತ್ತು. ಇದಾದ ಬಳಿಕ ಕಾಗದ ಪತ್ರಗಳನ್ನು ಪೂರ್ಣಗೊಳಿಸಿದ ರೋಹಿತ್ ಶರ್ಮಾ ಗ್ರಾಮದ ಜಮೀನಿನಲ್ಲಿ ಪೂಜೆಯನ್ನು ಸಹ ಮಾಡಿದರು.

ರೋಹಿತ್ ಶರ್ಮಾ ಅವರು ಅಲಿಬಾಗ್ ನಗರದಿಂದ 20 ಕಿಮೀ ದೂರದಲ್ಲಿರುವ ಸರಳ್ ಮಹಾತ್ರೋಲಿ ಗ್ರಾಮದಲ್ಲಿ ಭೂಮಿ ಖರೀದಿಸಿದ್ದಾರೆ. ಗ್ರಾಮದ ಸರಪಂಚ್ ಅಮಿತ್ ನಾಯಕ್ ಮಾತನಾಡಿ, ರೋಹಿತ್ ಗ್ರಾಮದಲ್ಲಿ 9 ಕೋಟಿಗೆ ಜಮೀನು ಖರೀದಿಸಿದ್ದಾರೆ. ರೋಹಿತ್ ಮೊದಲ ಬಾರಿಗೆ ಈ ಗ್ರಾಮಕ್ಕೆ ಬಂದು ಜಾಗ ವಿಕ್ಷೀಸಿದ್ದರು. ನಂತರ ಅವರಿಗೆ ಈ ಜಾಗ ಇಷ್ಟವಾಗಿತ್ತು. ಇದಾದ ಬಳಿಕ ಕಾಗದ ಪತ್ರಗಳನ್ನು ಪೂರ್ಣಗೊಳಿಸಿದ ರೋಹಿತ್ ಶರ್ಮಾ ಗ್ರಾಮದ ಜಮೀನಿನಲ್ಲಿ ಪೂಜೆಯನ್ನು ಸಹ ಮಾಡಿದರು.

3 / 5
ಅಲಿಬಾಗ್‌ನಲ್ಲಿ ಆಸ್ತಿ ಖರೀದಿಸಿದ ಮೊದಲ ಕ್ರಿಕೆಟಿಗ ರೋಹಿತ್ ಶರ್ಮಾ ಅಲ್ಲ. ಅವರಿಗಿಂತ ಮೊದಲು ಸಚಿನ್ ತೆಂಡೂಲ್ಕರ್, ಟೆಸ್ಟ್ ನಾಯಕ ವಿರಾಟ್ ಕೊಹ್ಲಿ, ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಮತ್ತು ಮಾಜಿ ವೇಗದ ಬೌಲರ್ ಅಜಿತ್ ಅಗರ್ಕರ್ ಕೂಡ ಅಲಿಬಾಗ್‌ನಲ್ಲಿ ಆಸ್ತಿ ಹೊಂದಿದ್ದಾರೆ.

ಅಲಿಬಾಗ್‌ನಲ್ಲಿ ಆಸ್ತಿ ಖರೀದಿಸಿದ ಮೊದಲ ಕ್ರಿಕೆಟಿಗ ರೋಹಿತ್ ಶರ್ಮಾ ಅಲ್ಲ. ಅವರಿಗಿಂತ ಮೊದಲು ಸಚಿನ್ ತೆಂಡೂಲ್ಕರ್, ಟೆಸ್ಟ್ ನಾಯಕ ವಿರಾಟ್ ಕೊಹ್ಲಿ, ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಮತ್ತು ಮಾಜಿ ವೇಗದ ಬೌಲರ್ ಅಜಿತ್ ಅಗರ್ಕರ್ ಕೂಡ ಅಲಿಬಾಗ್‌ನಲ್ಲಿ ಆಸ್ತಿ ಹೊಂದಿದ್ದಾರೆ.

4 / 5
ರೋಹಿತ್ ಶರ್ಮಾ ಅವರ ಅಭಿಮಾನಿಗಳು ಅವರು ಫಿಟ್ ಆಗಲು ಕಾಯುತ್ತಿದ್ದಾರೆ. ಟೆಸ್ಟ್ ಸರಣಿಗೆ ತಯಾರಿ ನಡೆಸುತ್ತಿದ್ದ ವೇಳೆ ರೋಹಿತ್ ಶರ್ಮಾ ಗಾಯಗೊಂಡಿದ್ದರು. ರೋಹಿತ್ ಅವರಿಗೆ ಮಂಡಿರಜ್ಜು ಸಮಸ್ಯೆ ಇದೆ. 3 ಪಂದ್ಯಗಳ ಟೆಸ್ಟ್ ಸರಣಿಯ ನಂತರ, ದಕ್ಷಿಣ ಆಫ್ರಿಕಾದಲ್ಲಿ ODI ಸರಣಿಯೂ ಇದೆ, ಇದು ನಾಯಕನಾಗಿ ರೋಹಿತ್ ಶರ್ಮಾ ಅವರ ಮೊದಲ ಸರಣಿಯಾಗಿದೆ. ಆದರೆ, ಅಷ್ಟರೊಳಗೆ ರೋಹಿತ್ ಶರ್ಮಾ ಫಿಟ್ ಆಗುತ್ತಾರಾ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

ರೋಹಿತ್ ಶರ್ಮಾ ಅವರ ಅಭಿಮಾನಿಗಳು ಅವರು ಫಿಟ್ ಆಗಲು ಕಾಯುತ್ತಿದ್ದಾರೆ. ಟೆಸ್ಟ್ ಸರಣಿಗೆ ತಯಾರಿ ನಡೆಸುತ್ತಿದ್ದ ವೇಳೆ ರೋಹಿತ್ ಶರ್ಮಾ ಗಾಯಗೊಂಡಿದ್ದರು. ರೋಹಿತ್ ಅವರಿಗೆ ಮಂಡಿರಜ್ಜು ಸಮಸ್ಯೆ ಇದೆ. 3 ಪಂದ್ಯಗಳ ಟೆಸ್ಟ್ ಸರಣಿಯ ನಂತರ, ದಕ್ಷಿಣ ಆಫ್ರಿಕಾದಲ್ಲಿ ODI ಸರಣಿಯೂ ಇದೆ, ಇದು ನಾಯಕನಾಗಿ ರೋಹಿತ್ ಶರ್ಮಾ ಅವರ ಮೊದಲ ಸರಣಿಯಾಗಿದೆ. ಆದರೆ, ಅಷ್ಟರೊಳಗೆ ರೋಹಿತ್ ಶರ್ಮಾ ಫಿಟ್ ಆಗುತ್ತಾರಾ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

5 / 5
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ