IND vs AUS: ನಾಯಕನಾಗಿ ರೋಹಿತ್ ತೆಗೆದುಕೊಂಡ ತಪ್ಪು ನಿರ್ಧಾರಗಳೇ ಸೋಲಿಗೆ ಕಾರಣ

Updated on: Dec 08, 2024 | 6:37 PM

Rohit Sharma Captaincy: ಅಡಿಲೇಡ್ ಟೆಸ್ಟ್‌ನಲ್ಲಿ ಭಾರತವನ್ನು 10 ವಿಕೆಟ್‌ಗಳಿಂದ ಸೋಲಿಸಿರುವ ಆಸ್ಟ್ರೇಲಿಯ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ. ಈ ಪಂದ್ಯದ ಸೋಲಿಗೆ ನಾಯಕ ರೋಹಿತ್ ಶರ್ಮಾ ತೆಗೆದುಕೊಂಡ ಕೆಲವು ನಿರ್ಧಾರಗಳೇ ಪ್ರಮುಖ ಕಾರಣ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.

1 / 6
5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಪುನರಾಗಮನ ಮಾಡಿದೆ. ಅಡಿಲೇಡ್ ಟೆಸ್ಟ್‌ನಲ್ಲಿ ಭಾರತವನ್ನು 10 ವಿಕೆಟ್‌ಗಳಿಂದ ಸೋಲಿಸಿರುವ ಆಸ್ಟ್ರೇಲಿಯ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ. ಈ ಪಂದ್ಯದ ಸೋಲಿಗೆ ನಾಯಕ ರೋಹಿತ್ ಶರ್ಮಾ ತೆಗೆದುಕೊಂಡ ಕೆಲವು ನಿರ್ಧಾರಗಳೇ ಪ್ರಮುಖ ಕಾರಣ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.

5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಭರ್ಜರಿ ಪುನರಾಗಮನ ಮಾಡಿದೆ. ಅಡಿಲೇಡ್ ಟೆಸ್ಟ್‌ನಲ್ಲಿ ಭಾರತವನ್ನು 10 ವಿಕೆಟ್‌ಗಳಿಂದ ಸೋಲಿಸಿರುವ ಆಸ್ಟ್ರೇಲಿಯ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ. ಈ ಪಂದ್ಯದ ಸೋಲಿಗೆ ನಾಯಕ ರೋಹಿತ್ ಶರ್ಮಾ ತೆಗೆದುಕೊಂಡ ಕೆಲವು ನಿರ್ಧಾರಗಳೇ ಪ್ರಮುಖ ಕಾರಣ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.

2 / 6

ತಂಡದ ಸೋಲಿಗೆ ಮೊದಲ ಕಾರಣವೆಂದರೆ, ಅದು ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ನಾಯಕ ರೋಹಿತ್ ತೆಗೆದುಕೊಂಎಡ ನಿರ್ಧಾರ ಸರಿ ಇರಲಿಲ್ಲ ಎಂಬುದು ಮೊದಲ ಸೆಷನ್​ನಲ್ಲೇ ಬಹಿರಂಗಗೊಂಡಿತ್ತು. ಪಂದ್ಯಕ್ಕೂ ಮುನ್ನ ಮೋಡ ಕವಿದ ವಾತಾವರಣವಿತ್ತು. ಇದರ ಲಾಭ ಪಡೆದ ಸ್ಟಾರ್ಕ್ ಟೀಂ ಇಂಡಿಯಾ ಆಟಗಾರರಿಗೆ ಬಹಿರಂಗವಾಗಿ ಆಡುವ ಅವಕಾಶವನ್ನೇ ನೀಡಲಿಲ್ಲ.

3 / 6

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರುವುದು ತಪ್ಪು ನಿರ್ಧಾರವಾದರೆ ಟೀಂ ಇಂಡಿಯಾ ತಂಡ ಆಯ್ಕೆಯಲ್ಲೂ ತಪ್ಪು ಮಾಡಿದೆ. ಈ ಟೆಸ್ಟ್​ಗೆ ಹರ್ಷಿತ್ ರಾಣಾ ಬದಲಿಗೆ ಆಕಾಶ್ ದೀಪ್ ಅವರನ್ನು ಆಯ್ಕೆ ಮಾಡಬೇಕು ಎಂದು ಈಗಾಗಲೇ ಹೇಳಲಾಗಿತ್ತು. ಇದಕ್ಕೆ ಕಾರಣ ಪರ್ತ್‌ನಲ್ಲಿ ಹರ್ಷಿತ್ ಮಾಡಿದ ತಪ್ಪುಗಳಲ್ಲ, ಆದರೆ ಗುಲಾಬಿ ಚೆಂಡಿಗೆ ಬೇಕಾದ ಕೌಶಲ್ಯ. ಆಕಾಶ್ ದೀಪ್ ಗುಲಾಬಿ ಚೆಂಡಿನಲ್ಲಿ ಹೆಚ್ಚು ಅಪಾಯಕಾರಿಯಾಗುವ ಸಾಧ್ಯತೆಗಳಿತ್ತು.

4 / 6

ಕೆಲವು ಸಮಯದಿಂದ, ತಂಡದ ಹಿರಿಯ ಬ್ಯಾಟ್ಸ್‌ಮನ್‌ಗಳ ವೈಫಲ್ಯವು ದೊಡ್ಡ ಚಿಂತೆಯಾಗಿ ಹೊರಹೊಮ್ಮಿದೆ. ಪರ್ತ್ ಟೆಸ್ಟ್​ನಲ್ಲಿ ಬಲಿಷ್ಠ ಇನ್ನಿಂಗ್ಸ್ ಆಡಿದ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಅಡಿಲೇಡ್‌ನಲ್ಲಿ ದಯನೀಯವಾಗಿ ವಿಫಲರಾದರು. ಇದರ ಜೊತೆಗೆ ಮಧ್ಯಮ ಕ್ರಮಾಂಕದಲ್ಲಿ ಬಂದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಮರೆತವರಂತೆ ವರ್ತಿಸಿದ್ದು ತಂಡದ ಹೀನಾಯ ಸ್ಥಿತಿಗೆ ಪ್ರಮುಖ ಕಾರಣವಾಯಿತು.

5 / 6

ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾದ ಅತ್ಯಂತ ಪರಿಣಾಮಕಾರಿ ಬೌಲರ್‌ ಆಗಿ ಕಾಣಿಸಿಕೊಂಡ ಬುಮ್ರಾ ಪ್ರಮುಖ 4 ವಿಕೆಟ್ ಪಡೆದರು. ಆದರೆ ನಾಯಕ ರೋಹಿತ್ ಶರ್ಮಾ ಅವರನ್ನು ಬಳಸಿಕೊಂಡ ರೀತಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಎರಡನೇ ದಿನದ ಮೊದಲ ಸೆಷನ್‌ನ ಆರಂಭದಲ್ಲಿ ಬುಮ್ರಾ 2 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಆಸ್ಟ್ರೇಲಿಯಕ್ಕೆ ತೊಂದರೆ ನೀಡಿದ್ದರು.

6 / 6

ಆದರೆ ಆ ಸೆಷನ್​ನಲ್ಲಿ ಬುಮ್ರಾ ಕೇವಲ 4 ಓವರ್‌ ಮಾತ್ರ ಬೌಲ್ ಮಾಡಿದರು. ಇನ್ನೊಂದು ಕಡೆಯಿಂದ ಹರ್ಷಿತ್ ರಾಣಾ ಸರಾಗವಾಗಿ ರನ್ ಬಿಟ್ಟುಕೊಡುತ್ತಿದ್ದರೂ, ನಾಯಕ ರೋಹಿತ್, ಬುಮ್ರಾ ಅವರನ್ನು ಬೌಲಿಂಗ್​ಗೆ ಇಳಿಸಲಿಲ್ಲ. ಇತ್ತ ಮೊಹಮ್ಮದ್ ಸಿರಾಜ್ ತುಂಬಾ ತಡವಾಗಿ ತಮ್ಮ ಲಯವನ್ನು ಕಂಡುಕೊಂಡಿದ್ದು ತಂಡಕ್ಕೆ ತುಂಬಾ ದುಬಾರಿಯಾಯಿತು.

Loading...
Unable to load recommendations.
Follow Us