AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BGT ಆರಂಭಿಕ ಪಂದ್ಯಕ್ಕೆ ರೋಹಿತ್ ಶರ್ಮಾ ಅಲಭ್ಯ

Border-Gavaskar Trophy: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳು ನಡೆಯಲಿದೆ. ವಿಶೇಷ ಎಂದರೆ ಈ ಸರಣಿಯಲ್ಲಿ 4-0 ಅಂತರದಿಂದ ಗೆದ್ದರೆ ಮಾತ್ರ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬಹುದು.

ಝಾಹಿರ್ ಯೂಸುಫ್
|

Updated on:Nov 04, 2024 | 7:24 AM

Share
ಭಾರತ‌ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ - ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಲಿದ್ದಾರೆ. ನವೆಂಬರ್ 22 ರಿಂದ ಆರಂಭವಾಗಲಿರುವ ಈ ಪಂದ್ಯದಲ್ಲಿ ಪಾಲ್ಗೊಳ್ಳಲಾಗುವುದಿಲ್ಲ ಎಂದು ರೋಹಿತ್ ಶರ್ಮಾ ಬಿಸಿಸಿಐಗೆ ತಿಳಿಸಿದ್ದಾರೆ. ಹೀಗಾಗಿ ಪರ್ತ್​ ಟೆಸ್ಟ್​ನಲ್ಲಿ ಹಿಟ್​ಮ್ಯಾನ್ ಕಾಣಿಸಿಕೊಳ್ಳುವುದಿಲ್ಲ.

ಭಾರತ‌ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ - ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಲಿದ್ದಾರೆ. ನವೆಂಬರ್ 22 ರಿಂದ ಆರಂಭವಾಗಲಿರುವ ಈ ಪಂದ್ಯದಲ್ಲಿ ಪಾಲ್ಗೊಳ್ಳಲಾಗುವುದಿಲ್ಲ ಎಂದು ರೋಹಿತ್ ಶರ್ಮಾ ಬಿಸಿಸಿಐಗೆ ತಿಳಿಸಿದ್ದಾರೆ. ಹೀಗಾಗಿ ಪರ್ತ್​ ಟೆಸ್ಟ್​ನಲ್ಲಿ ಹಿಟ್​ಮ್ಯಾನ್ ಕಾಣಿಸಿಕೊಳ್ಳುವುದಿಲ್ಲ.

1 / 5
ರೋಹಿತ್ ಶರ್ಮಾ ದಂಪತಿಗೆ ಎರಡನೇ ಮಗು ಜನಿಸಿದ್ದು, ಇದೇ ಕಾರಣದಿಂದಾಗಿ ಟೀಮ್ ಇಂಡಿಯಾ ನಾಯಕ ನವೆಂಬರ್‌ 22 ರಿಂದ ಆರಂಭವಾಗುವ ಮೊದಲ ಪಂದ್ಯದಿಂದ ಹೊರಗುಳಿಯುತ್ತಿದ್ದಾರೆ. ಇನ್ನು ಎಲ್ಲವೂ ಅಂದುಕೊಂಡಂತೆ ನಡೆದರೆ ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯದ ವೇಳೆ ಅವರು ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.

ರೋಹಿತ್ ಶರ್ಮಾ ದಂಪತಿಗೆ ಎರಡನೇ ಮಗು ಜನಿಸಿದ್ದು, ಇದೇ ಕಾರಣದಿಂದಾಗಿ ಟೀಮ್ ಇಂಡಿಯಾ ನಾಯಕ ನವೆಂಬರ್‌ 22 ರಿಂದ ಆರಂಭವಾಗುವ ಮೊದಲ ಪಂದ್ಯದಿಂದ ಹೊರಗುಳಿಯುತ್ತಿದ್ದಾರೆ. ಇನ್ನು ಎಲ್ಲವೂ ಅಂದುಕೊಂಡಂತೆ ನಡೆದರೆ ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯದ ವೇಳೆ ಅವರು ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.

2 / 5
ಇನ್ನು ರೋಹಿತ್ ಶರ್ಮಾ ಅವರು ಅಲಭ್ಯರಾದರೆ ಟೀಮ್ ಇಂಡಿಯಾವನ್ನು ಜಸ್​ಪ್ರೀತ್ ಬುಮ್ರಾ ಮುನ್ನಡೆಸಲಿದ್ದಾರೆ. ಹಾಗೆಯೇ ಹಿಟ್ ಮ್ಯಾನ್ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಅಥವಾ ಅಭಿಮನ್ಯು ಈಶ್ವರನ್ ಭಾರತದ ಪರ ಇನಿಂಗ್ಸ್ ಆರಂಭಿಸಬಹುದು.

ಇನ್ನು ರೋಹಿತ್ ಶರ್ಮಾ ಅವರು ಅಲಭ್ಯರಾದರೆ ಟೀಮ್ ಇಂಡಿಯಾವನ್ನು ಜಸ್​ಪ್ರೀತ್ ಬುಮ್ರಾ ಮುನ್ನಡೆಸಲಿದ್ದಾರೆ. ಹಾಗೆಯೇ ಹಿಟ್ ಮ್ಯಾನ್ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಅಥವಾ ಅಭಿಮನ್ಯು ಈಶ್ವರನ್ ಭಾರತದ ಪರ ಇನಿಂಗ್ಸ್ ಆರಂಭಿಸಬಹುದು.

3 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್‌ 22 ರಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯ ಪರ್ತ್​ನಲ್ಲಿ ನಡೆದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್​ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್‌ 22 ರಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯ ಪರ್ತ್​ನಲ್ಲಿ ನಡೆದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್​ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

4 / 5
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

5 / 5

Published On - 7:23 am, Mon, 4 November 24

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ