Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಟ್​ ಆಗದ ಹಿಟ್​ಮ್ಯಾನ್, ಆದರೂ ರೋಹಿತ್ ಶರ್ಮಾ ಹೆಸರಿಗೆ ವಿಶ್ವ ದಾಖಲೆ

Rohit Sharma Records: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 9ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ತಂಡವು 196 ರನ್ ಕಲೆಹಾಕಿದರೆ, ಮುಂಬೈ ಇಂಡಿಯನ್ಸ್ 160 ರನ್​ಗಳಿಸಲಷ್ಟೇ ಶಕ್ತರಾದರು. ಇನ್ನು ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 30, 2025 | 10:55 AM

ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಹಿಟ್​ಮ್ಯಾನ್ ಕೇವಲ 8 ರನ್​ಗಳಿಸಿ ಔಟಾಗಿದ್ದರು. ಇದಾಗ್ಯೂ ಈ ಪಂದ್ಯದ ಮೂಲಕ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ದಾಖಲೆಯೊಂದಿಗೆ ಈ ಸಾಧನೆ ಮಾಡಿದ ಭಾರತದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಹಿಟ್​ಮ್ಯಾನ್ ಕೇವಲ 8 ರನ್​ಗಳಿಸಿ ಔಟಾಗಿದ್ದರು. ಇದಾಗ್ಯೂ ಈ ಪಂದ್ಯದ ಮೂಲಕ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ದಾಖಲೆಯೊಂದಿಗೆ ಈ ಸಾಧನೆ ಮಾಡಿದ ಭಾರತದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

1 / 6
ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಬರೆದಿರುವ ಈ ದಾಖಲೆಯೊಂದಿಗೆ ಈ ಸಾಧನೆ ಮಾಡಿದ ಭಾರತದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಬರೆದಿರುವ ಈ ದಾಖಲೆಯೊಂದಿಗೆ ಈ ಸಾಧನೆ ಮಾಡಿದ ಭಾರತದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

2 / 6
ಅಹದಾಬಾದ್​ನಲ್ಲಿ ನಡೆದ ಐಪಿಎಲ್​ನ 9ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ 450 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆದಿದ್ದಾರೆ. ಅಲ್ಲದೆ ಈ ವಿಶ್ವ ದಾಖಲೆ ಬರೆದ ಮೊದಲ ಭಾರತೀಯ ಹಾಗೂ ವಿಶ್ವದ 12ನೇ ಆಟಗಾರ ಎನಿಸಿಕೊಂಡಿದ್ದಾರೆ.

ಅಹದಾಬಾದ್​ನಲ್ಲಿ ನಡೆದ ಐಪಿಎಲ್​ನ 9ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ 450 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆದಿದ್ದಾರೆ. ಅಲ್ಲದೆ ಈ ವಿಶ್ವ ದಾಖಲೆ ಬರೆದ ಮೊದಲ ಭಾರತೀಯ ಹಾಗೂ ವಿಶ್ವದ 12ನೇ ಆಟಗಾರ ಎನಿಸಿಕೊಂಡಿದ್ದಾರೆ.

3 / 6
ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ, ಡೆಕ್ಕನ್ ಚಾರ್ಜಸ್ ಹಾಗೂ ಮುಂಬೈ ಇಂಡಿಯನ್ಸ್ ಪರ 450 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ ಈವರೆಗೆ 11838 ರನ್​ ಕಲೆಹಾಕಿದ್ದಾರೆ. ಈ ವೇಳೆ ಹಿಟ್​ಮ್ಯಾನ್ ಬ್ಯಾಟ್​ನಿಂದ 8 ಶತಕ ಮೂಡಿಬಂದಿವೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 450 ಪಂದ್ಯಗಳನ್ನಾಡಿ 11 ಸಾವಿರ ರನ್ ಕಲೆಹಾಕಿದ ಭಾರತದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ, ಡೆಕ್ಕನ್ ಚಾರ್ಜಸ್ ಹಾಗೂ ಮುಂಬೈ ಇಂಡಿಯನ್ಸ್ ಪರ 450 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ ಈವರೆಗೆ 11838 ರನ್​ ಕಲೆಹಾಕಿದ್ದಾರೆ. ಈ ವೇಳೆ ಹಿಟ್​ಮ್ಯಾನ್ ಬ್ಯಾಟ್​ನಿಂದ 8 ಶತಕ ಮೂಡಿಬಂದಿವೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 450 ಪಂದ್ಯಗಳನ್ನಾಡಿ 11 ಸಾವಿರ ರನ್ ಕಲೆಹಾಕಿದ ಭಾರತದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 6
ಇನ್ನು ಈ ಪಟ್ಟಿಯಲ್ಲಿ ದಿನೇಶ್ ಕಾರ್ತಿಕ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾ, ಆರ್​ಸಿಬಿ, ಮುಂಬೈ ಇಂಡಿಯನ್ಸ್, ಕೆಕೆಆರ್ ಸೇರಿದಂತೆ ಹಲವು ತಂಡಗಳ ಪರ ಕಣಕ್ಕಿಳಿದಿರುವ ಡಿಕೆ ಒಟ್ಟು 412 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ದಿನೇಶ್ ಕಾರ್ತಿಕ್ ಒಟ್ಟು 7537 ರನ್​ಗಳನ್ನು ಕಲೆಹಾಕಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ದಿನೇಶ್ ಕಾರ್ತಿಕ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾ, ಆರ್​ಸಿಬಿ, ಮುಂಬೈ ಇಂಡಿಯನ್ಸ್, ಕೆಕೆಆರ್ ಸೇರಿದಂತೆ ಹಲವು ತಂಡಗಳ ಪರ ಕಣಕ್ಕಿಳಿದಿರುವ ಡಿಕೆ ಒಟ್ಟು 412 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ದಿನೇಶ್ ಕಾರ್ತಿಕ್ ಒಟ್ಟು 7537 ರನ್​ಗಳನ್ನು ಕಲೆಹಾಕಿದ್ದಾರೆ.

5 / 6
ಹಾಗೆಯೇ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್ ಹೆಸರಿನಲ್ಲಿದೆ. ವೆಸ್ಟ್ ಇಂಡೀಸ್, ಮುಂಬೈ ಇಂಡಿಯನ್ಸ್, ಟಿಕೆಆರ್ ಸೇರಿದಂತೆ ಹಲವು ತಂಡಗಳ ಪರ ಪೊಲಾರ್ಡ್ ಒಟ್ಟು 695 ಪಂದ್ಯಗಳನ್ನಾಡಿ ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಹಾಗೆಯೇ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್ ಹೆಸರಿನಲ್ಲಿದೆ. ವೆಸ್ಟ್ ಇಂಡೀಸ್, ಮುಂಬೈ ಇಂಡಿಯನ್ಸ್, ಟಿಕೆಆರ್ ಸೇರಿದಂತೆ ಹಲವು ತಂಡಗಳ ಪರ ಪೊಲಾರ್ಡ್ ಒಟ್ಟು 695 ಪಂದ್ಯಗಳನ್ನಾಡಿ ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

6 / 6
Follow us
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ