AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಮ್ರಾ, ಕೊಹ್ಲಿ ಅಲ್ಲ..; ಟಿ20 ವಿಶ್ವಕಪ್ ಗೆಲುವಿನ ಕ್ರೆಡಿಟ್ ಈ ಮೂವರಿಗೆ ಸಲ್ಲಬೇಕೆಂದ ರೋಹಿತ್ ಶರ್ಮಾ

Rohit Sharma: ಟೀಂ ಇಂಡಿಯಾದ ಮೂರು ಆಧಾರ ಸ್ತಂಭಗಳಾದ ಜಯ್ ಶಾ, ರಾಹುಲ್ ದ್ರಾವಿಡ್ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಈ ಗೆಲುವಿನಲ್ಲಿ ಸಾಕಷ್ಟು ಪ್ರಭಾವ ಬೀರಿದ್ದಾರೆ. ಆಟಗಾರರಿಂದ ಅತ್ಯುತ್ತಮ ಪ್ರದರ್ಶನವನ್ನು ಹೊರತೆಗೆಯಲು ಪ್ರಯತ್ನಿಸುವಲ್ಲಿ ಈ ಮೂವರು ಸಂಪೂರ್ಣ ಬೆಂಬಲವನ್ನು ನೀಡಿದರು. ಇದರಿಂದಾಗಿ ಭಾರತವು ಟಿ20 ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿಯಲು ಸಾಧ್ಯವಾಯಿತು ಎಂದು ರೋಹಿತ್ ಹೇಳಿದ್ದಾರೆ.

ಪೃಥ್ವಿಶಂಕರ
|

Updated on:Aug 22, 2024 | 5:03 PM

Share
ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಕಳೆದ ಜೂನ್‌ನಲ್ಲಿ ಅಮೆರಿಕ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದತ್ತು. 2007 ರಲ್ಲಿ ನಡೆದಿದ್ದ ಚೊಚ್ಚಲ ಆವೃತ್ತಿಯಲ್ಲಿ ಚಾಂಪಿಯನ್ ಆಗಿದ್ದ ಭಾರತಕ್ಕೆ ಆ ಬಳಿಕ ಟಿ20 ವಿಶ್ವಕಪ್ ಗಗನ ಕುಸುಮವಾಗಿತ್ತು.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಕಳೆದ ಜೂನ್‌ನಲ್ಲಿ ಅಮೆರಿಕ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದತ್ತು. 2007 ರಲ್ಲಿ ನಡೆದಿದ್ದ ಚೊಚ್ಚಲ ಆವೃತ್ತಿಯಲ್ಲಿ ಚಾಂಪಿಯನ್ ಆಗಿದ್ದ ಭಾರತಕ್ಕೆ ಆ ಬಳಿಕ ಟಿ20 ವಿಶ್ವಕಪ್ ಗಗನ ಕುಸುಮವಾಗಿತ್ತು.

1 / 7
ಇದರೊಂದಿಗೆ ಭಾರತದ 11 ವರ್ಷಗಳ ಐಸಿಸಿ ಟ್ರೋಫಿ ಬರಕ್ಕೆ ಅಂತ್ಯ ಸಿಕ್ಕಿತ್ತು. ಟೀಂ ಇಂಡಿಯಾದ ಈ ಗೆಲುವಿನಲ್ಲಿ ಟೂರ್ನಿಯೂದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ಹಲವು ಆಟಗಾರರ ಕಾಣಿಕೆ ಪ್ರಮುಖ ಪಾತ್ರವಹಿಸಿತ್ತು. ಇದರಲ್ಲಿ ನಾಯಕ ರೋಹಿತ್ ಶರ್ಮಾ, ವೇಗಿ ಜಸ್ಪ್ರೀತ್ ಬುಮ್ರಾ ಹಾಗೂ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸಿಡಿಸಿದ್ದ ಗೆಲುವಿನ ಅರ್ಧಶತಕದ ಕಾಣಿಕೆಯೂ ಸೇರಿದೆ.

ಇದರೊಂದಿಗೆ ಭಾರತದ 11 ವರ್ಷಗಳ ಐಸಿಸಿ ಟ್ರೋಫಿ ಬರಕ್ಕೆ ಅಂತ್ಯ ಸಿಕ್ಕಿತ್ತು. ಟೀಂ ಇಂಡಿಯಾದ ಈ ಗೆಲುವಿನಲ್ಲಿ ಟೂರ್ನಿಯೂದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ಹಲವು ಆಟಗಾರರ ಕಾಣಿಕೆ ಪ್ರಮುಖ ಪಾತ್ರವಹಿಸಿತ್ತು. ಇದರಲ್ಲಿ ನಾಯಕ ರೋಹಿತ್ ಶರ್ಮಾ, ವೇಗಿ ಜಸ್ಪ್ರೀತ್ ಬುಮ್ರಾ ಹಾಗೂ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸಿಡಿಸಿದ್ದ ಗೆಲುವಿನ ಅರ್ಧಶತಕದ ಕಾಣಿಕೆಯೂ ಸೇರಿದೆ.

2 / 7
ಇಡೀ ತಂಡವಾಗಿ ಸಾಂಘೀಕ ಹೋರಾಟ ನೀಡಿದ್ದ ಟೀಂ ಇಂಡಿಯಾ, ಟಿ20 ವಿಶ್ವಕಪ್ ಟ್ರೋಫಿಯನ್ನು ಮತ್ತೆ ಬಾರತಕ್ಕೆ ತರುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಈ ಟಿ20 ಟ್ರೋಫಿಯ ಗೆಲುವಿನ ಶ್ರೇಯ ಇಡೀ ತಂಡಕ್ಕೆ ಸಲ್ಲಬೇಕು. ಆದರೆ ಇದೀಗ ಮಾತನಾಡಿರುವ ನಾಯಕ ರೋಹಿತ್ ಶರ್ಮಾ, ಟಿ20 ವಿಶ್ವಕಪ್ ಗೆಲುವಿನ ಶ್ರೇಯವನ್ನು ತಂಡದಿಂದ ಹೊರಗಿರುವ ಈ ಮೂವರಿಗೆ ನೀಡಿದ್ದಾರೆ.

ಇಡೀ ತಂಡವಾಗಿ ಸಾಂಘೀಕ ಹೋರಾಟ ನೀಡಿದ್ದ ಟೀಂ ಇಂಡಿಯಾ, ಟಿ20 ವಿಶ್ವಕಪ್ ಟ್ರೋಫಿಯನ್ನು ಮತ್ತೆ ಬಾರತಕ್ಕೆ ತರುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಈ ಟಿ20 ಟ್ರೋಫಿಯ ಗೆಲುವಿನ ಶ್ರೇಯ ಇಡೀ ತಂಡಕ್ಕೆ ಸಲ್ಲಬೇಕು. ಆದರೆ ಇದೀಗ ಮಾತನಾಡಿರುವ ನಾಯಕ ರೋಹಿತ್ ಶರ್ಮಾ, ಟಿ20 ವಿಶ್ವಕಪ್ ಗೆಲುವಿನ ಶ್ರೇಯವನ್ನು ತಂಡದಿಂದ ಹೊರಗಿರುವ ಈ ಮೂವರಿಗೆ ನೀಡಿದ್ದಾರೆ.

3 / 7
ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಆಟಗಾರರು ಉತ್ತಮ ಪ್ರದರ್ಶನ ನೀಡುವ ಪ್ರಯತ್ನದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದರ ಪರಿಣಾಮವಾಗಿ ಭಾರತವು ಟಿ20 ವಿಶ್ವಕಪ್ ಗೆದ್ದಿತು ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಆಟಗಾರರು ಉತ್ತಮ ಪ್ರದರ್ಶನ ನೀಡುವ ಪ್ರಯತ್ನದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದರ ಪರಿಣಾಮವಾಗಿ ಭಾರತವು ಟಿ20 ವಿಶ್ವಕಪ್ ಗೆದ್ದಿತು ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

4 / 7
ಈವೆಂಟ್‌ವೊಂದರಲ್ಲಿ ವರ್ಷದ ಅತ್ಯುತ್ತಮ ಪುರುಷ ಅಂತರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ರೋಹಿತ್, ಈ ತಂಡವನ್ನು ಬದಲಾಯಿಸುವುದು ನನ್ನ ಕನಸಾಗಿತ್ತು. ಹೀಗಾಗಿ ಅಂಕಿಅಂಶಗಳು, ಫಲಿತಾಂಶಗಳ ಬಗ್ಗೆ ಹೆಚ್ಚು ಚಿಂತಿಸಬೇಡಿ ಎಂಬುದನ್ನು ನಾನು ಆಟಗಾರರಿಗೆ ಮನವರಿಕೆ ಮಾಡಿದ್ದೆ. ಆಟಗಾರರು ಹೆಚ್ಚು ಯೋಚಿಸದೆ ಮೈದಾನಕ್ಕೆ ಹೋಗಿ ಮುಕ್ತವಾಗಿ ಆಡುವಂತಹ ವಾತಾವರಣವನ್ನು ನಾವು ನಿರ್ಮಿಸಬೇಕಿತ್ತು. ಈ ಪ್ರಯತ್ನ ಕೊನೆಗೂ ಫಲ ನೀಡಿತು.

ಈವೆಂಟ್‌ವೊಂದರಲ್ಲಿ ವರ್ಷದ ಅತ್ಯುತ್ತಮ ಪುರುಷ ಅಂತರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ರೋಹಿತ್, ಈ ತಂಡವನ್ನು ಬದಲಾಯಿಸುವುದು ನನ್ನ ಕನಸಾಗಿತ್ತು. ಹೀಗಾಗಿ ಅಂಕಿಅಂಶಗಳು, ಫಲಿತಾಂಶಗಳ ಬಗ್ಗೆ ಹೆಚ್ಚು ಚಿಂತಿಸಬೇಡಿ ಎಂಬುದನ್ನು ನಾನು ಆಟಗಾರರಿಗೆ ಮನವರಿಕೆ ಮಾಡಿದ್ದೆ. ಆಟಗಾರರು ಹೆಚ್ಚು ಯೋಚಿಸದೆ ಮೈದಾನಕ್ಕೆ ಹೋಗಿ ಮುಕ್ತವಾಗಿ ಆಡುವಂತಹ ವಾತಾವರಣವನ್ನು ನಾವು ನಿರ್ಮಿಸಬೇಕಿತ್ತು. ಈ ಪ್ರಯತ್ನ ಕೊನೆಗೂ ಫಲ ನೀಡಿತು.

5 / 7
ಟೀಂ ಇಂಡಿಯಾದ ಮೂರು ಆಧಾರ ಸ್ತಂಭಗಳಾದ ಜಯ್ ಶಾ, ರಾಹುಲ್ ದ್ರಾವಿಡ್ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಈ ಗೆಲುವಿನಲ್ಲಿ ಸಾಕಷ್ಟು ಪ್ರಭಾವ ಬೀರಿದ್ದಾರೆ. ಆಟಗಾರರಿಂದ ಅತ್ಯುತ್ತಮ ಪ್ರದರ್ಶನವನ್ನು ಹೊರತೆಗೆಯಲು ಪ್ರಯತ್ನಿಸುವಲ್ಲಿ ಈ ಮೂವರು ಸಂಪೂರ್ಣ ಬೆಂಬಲವನ್ನು ನೀಡಿದರು. ಇದರಿಂದಾಗಿ ಭಾರತವು ಟಿ20 ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿಯಲು ಸಾಧ್ಯವಾಯಿತು ಎಂದು ರೋಹಿತ್ ಹೇಳಿದ್ದಾರೆ.

ಟೀಂ ಇಂಡಿಯಾದ ಮೂರು ಆಧಾರ ಸ್ತಂಭಗಳಾದ ಜಯ್ ಶಾ, ರಾಹುಲ್ ದ್ರಾವಿಡ್ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಈ ಗೆಲುವಿನಲ್ಲಿ ಸಾಕಷ್ಟು ಪ್ರಭಾವ ಬೀರಿದ್ದಾರೆ. ಆಟಗಾರರಿಂದ ಅತ್ಯುತ್ತಮ ಪ್ರದರ್ಶನವನ್ನು ಹೊರತೆಗೆಯಲು ಪ್ರಯತ್ನಿಸುವಲ್ಲಿ ಈ ಮೂವರು ಸಂಪೂರ್ಣ ಬೆಂಬಲವನ್ನು ನೀಡಿದರು. ಇದರಿಂದಾಗಿ ಭಾರತವು ಟಿ20 ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿಯಲು ಸಾಧ್ಯವಾಯಿತು ಎಂದು ರೋಹಿತ್ ಹೇಳಿದ್ದಾರೆ.

6 / 7
ಇನ್ನು ಟಿ20 ವಿಶ್ವಕಪ್ ಗೆದ್ದ ಬಗ್ಗೆ ಮಾತನಾಡಿರುವ ರೋಹಿತ್, ‘ವಿಶ್ವಕಪ್ ಗೆದ್ದಿದ್ದನ್ನು ಎಂದಿಗೂ ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ನಾವು ವಿಶ್ವಕಪ್ ಗೆದ್ದಾಗ, ನಾವೆಲ್ಲರೂ ಆ ಕ್ಷಣವನ್ನು ಆನಂದಿಸುವುದು ಮುಖ್ಯವಾಗಿತ್ತು, ಅದನ್ನು ನಾವು ಚೆನ್ನಾಗಿ ಮಾಡಿದ್ದೇವೆ. ನಾವು ವಿಶ್ವ ಚಾಂಪಿಯನ್ ಆದಾಗ ಇಡೀ ದೇಶವೇ ನಮ್ಮೊಂದಿಗೆ ಸಂಭ್ರಮಿಸಿತು. ವಿಶ್ವಕಪ್ ಗೆಲ್ಲುವುದು ನಮಗೆ ಎಷ್ಟು ಮುಖ್ಯವೋ, ಇಡೀ ದೇಶಕ್ಕೂ ಅಷ್ಟೇ ಮುಖ್ಯವಾಗಿತ್ತು. ಟಿ20 ವಿಶ್ವಕಪ್ ಟ್ರೋಫಿಯನ್ನು ಮರಳಿ ಮನೆಗೆ ತಂದು ಇಲ್ಲಿ ಎಲ್ಲರೊಂದಿಗೆ ಸಂಭ್ರಮಿಸಿದ್ದು ಸಂತಸ ತಂದಿದೆ ಎಂದಿದ್ದಾರೆ.

ಇನ್ನು ಟಿ20 ವಿಶ್ವಕಪ್ ಗೆದ್ದ ಬಗ್ಗೆ ಮಾತನಾಡಿರುವ ರೋಹಿತ್, ‘ವಿಶ್ವಕಪ್ ಗೆದ್ದಿದ್ದನ್ನು ಎಂದಿಗೂ ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ನಾವು ವಿಶ್ವಕಪ್ ಗೆದ್ದಾಗ, ನಾವೆಲ್ಲರೂ ಆ ಕ್ಷಣವನ್ನು ಆನಂದಿಸುವುದು ಮುಖ್ಯವಾಗಿತ್ತು, ಅದನ್ನು ನಾವು ಚೆನ್ನಾಗಿ ಮಾಡಿದ್ದೇವೆ. ನಾವು ವಿಶ್ವ ಚಾಂಪಿಯನ್ ಆದಾಗ ಇಡೀ ದೇಶವೇ ನಮ್ಮೊಂದಿಗೆ ಸಂಭ್ರಮಿಸಿತು. ವಿಶ್ವಕಪ್ ಗೆಲ್ಲುವುದು ನಮಗೆ ಎಷ್ಟು ಮುಖ್ಯವೋ, ಇಡೀ ದೇಶಕ್ಕೂ ಅಷ್ಟೇ ಮುಖ್ಯವಾಗಿತ್ತು. ಟಿ20 ವಿಶ್ವಕಪ್ ಟ್ರೋಫಿಯನ್ನು ಮರಳಿ ಮನೆಗೆ ತಂದು ಇಲ್ಲಿ ಎಲ್ಲರೊಂದಿಗೆ ಸಂಭ್ರಮಿಸಿದ್ದು ಸಂತಸ ತಂದಿದೆ ಎಂದಿದ್ದಾರೆ.

7 / 7

Published On - 4:59 pm, Thu, 22 August 24

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ