ಬುಮ್ರಾ, ಕೊಹ್ಲಿ ಅಲ್ಲ..; ಟಿ20 ವಿಶ್ವಕಪ್ ಗೆಲುವಿನ ಕ್ರೆಡಿಟ್ ಈ ಮೂವರಿಗೆ ಸಲ್ಲಬೇಕೆಂದ ರೋಹಿತ್ ಶರ್ಮಾ

Rohit Sharma: ಟೀಂ ಇಂಡಿಯಾದ ಮೂರು ಆಧಾರ ಸ್ತಂಭಗಳಾದ ಜಯ್ ಶಾ, ರಾಹುಲ್ ದ್ರಾವಿಡ್ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಈ ಗೆಲುವಿನಲ್ಲಿ ಸಾಕಷ್ಟು ಪ್ರಭಾವ ಬೀರಿದ್ದಾರೆ. ಆಟಗಾರರಿಂದ ಅತ್ಯುತ್ತಮ ಪ್ರದರ್ಶನವನ್ನು ಹೊರತೆಗೆಯಲು ಪ್ರಯತ್ನಿಸುವಲ್ಲಿ ಈ ಮೂವರು ಸಂಪೂರ್ಣ ಬೆಂಬಲವನ್ನು ನೀಡಿದರು. ಇದರಿಂದಾಗಿ ಭಾರತವು ಟಿ20 ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿಯಲು ಸಾಧ್ಯವಾಯಿತು ಎಂದು ರೋಹಿತ್ ಹೇಳಿದ್ದಾರೆ.

|

Updated on:Aug 22, 2024 | 5:03 PM

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಕಳೆದ ಜೂನ್‌ನಲ್ಲಿ ಅಮೆರಿಕ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದತ್ತು. 2007 ರಲ್ಲಿ ನಡೆದಿದ್ದ ಚೊಚ್ಚಲ ಆವೃತ್ತಿಯಲ್ಲಿ ಚಾಂಪಿಯನ್ ಆಗಿದ್ದ ಭಾರತಕ್ಕೆ ಆ ಬಳಿಕ ಟಿ20 ವಿಶ್ವಕಪ್ ಗಗನ ಕುಸುಮವಾಗಿತ್ತು.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಕಳೆದ ಜೂನ್‌ನಲ್ಲಿ ಅಮೆರಿಕ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದತ್ತು. 2007 ರಲ್ಲಿ ನಡೆದಿದ್ದ ಚೊಚ್ಚಲ ಆವೃತ್ತಿಯಲ್ಲಿ ಚಾಂಪಿಯನ್ ಆಗಿದ್ದ ಭಾರತಕ್ಕೆ ಆ ಬಳಿಕ ಟಿ20 ವಿಶ್ವಕಪ್ ಗಗನ ಕುಸುಮವಾಗಿತ್ತು.

1 / 7
ಇದರೊಂದಿಗೆ ಭಾರತದ 11 ವರ್ಷಗಳ ಐಸಿಸಿ ಟ್ರೋಫಿ ಬರಕ್ಕೆ ಅಂತ್ಯ ಸಿಕ್ಕಿತ್ತು. ಟೀಂ ಇಂಡಿಯಾದ ಈ ಗೆಲುವಿನಲ್ಲಿ ಟೂರ್ನಿಯೂದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ಹಲವು ಆಟಗಾರರ ಕಾಣಿಕೆ ಪ್ರಮುಖ ಪಾತ್ರವಹಿಸಿತ್ತು. ಇದರಲ್ಲಿ ನಾಯಕ ರೋಹಿತ್ ಶರ್ಮಾ, ವೇಗಿ ಜಸ್ಪ್ರೀತ್ ಬುಮ್ರಾ ಹಾಗೂ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸಿಡಿಸಿದ್ದ ಗೆಲುವಿನ ಅರ್ಧಶತಕದ ಕಾಣಿಕೆಯೂ ಸೇರಿದೆ.

ಇದರೊಂದಿಗೆ ಭಾರತದ 11 ವರ್ಷಗಳ ಐಸಿಸಿ ಟ್ರೋಫಿ ಬರಕ್ಕೆ ಅಂತ್ಯ ಸಿಕ್ಕಿತ್ತು. ಟೀಂ ಇಂಡಿಯಾದ ಈ ಗೆಲುವಿನಲ್ಲಿ ಟೂರ್ನಿಯೂದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ಹಲವು ಆಟಗಾರರ ಕಾಣಿಕೆ ಪ್ರಮುಖ ಪಾತ್ರವಹಿಸಿತ್ತು. ಇದರಲ್ಲಿ ನಾಯಕ ರೋಹಿತ್ ಶರ್ಮಾ, ವೇಗಿ ಜಸ್ಪ್ರೀತ್ ಬುಮ್ರಾ ಹಾಗೂ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸಿಡಿಸಿದ್ದ ಗೆಲುವಿನ ಅರ್ಧಶತಕದ ಕಾಣಿಕೆಯೂ ಸೇರಿದೆ.

2 / 7
ಇಡೀ ತಂಡವಾಗಿ ಸಾಂಘೀಕ ಹೋರಾಟ ನೀಡಿದ್ದ ಟೀಂ ಇಂಡಿಯಾ, ಟಿ20 ವಿಶ್ವಕಪ್ ಟ್ರೋಫಿಯನ್ನು ಮತ್ತೆ ಬಾರತಕ್ಕೆ ತರುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಈ ಟಿ20 ಟ್ರೋಫಿಯ ಗೆಲುವಿನ ಶ್ರೇಯ ಇಡೀ ತಂಡಕ್ಕೆ ಸಲ್ಲಬೇಕು. ಆದರೆ ಇದೀಗ ಮಾತನಾಡಿರುವ ನಾಯಕ ರೋಹಿತ್ ಶರ್ಮಾ, ಟಿ20 ವಿಶ್ವಕಪ್ ಗೆಲುವಿನ ಶ್ರೇಯವನ್ನು ತಂಡದಿಂದ ಹೊರಗಿರುವ ಈ ಮೂವರಿಗೆ ನೀಡಿದ್ದಾರೆ.

ಇಡೀ ತಂಡವಾಗಿ ಸಾಂಘೀಕ ಹೋರಾಟ ನೀಡಿದ್ದ ಟೀಂ ಇಂಡಿಯಾ, ಟಿ20 ವಿಶ್ವಕಪ್ ಟ್ರೋಫಿಯನ್ನು ಮತ್ತೆ ಬಾರತಕ್ಕೆ ತರುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಈ ಟಿ20 ಟ್ರೋಫಿಯ ಗೆಲುವಿನ ಶ್ರೇಯ ಇಡೀ ತಂಡಕ್ಕೆ ಸಲ್ಲಬೇಕು. ಆದರೆ ಇದೀಗ ಮಾತನಾಡಿರುವ ನಾಯಕ ರೋಹಿತ್ ಶರ್ಮಾ, ಟಿ20 ವಿಶ್ವಕಪ್ ಗೆಲುವಿನ ಶ್ರೇಯವನ್ನು ತಂಡದಿಂದ ಹೊರಗಿರುವ ಈ ಮೂವರಿಗೆ ನೀಡಿದ್ದಾರೆ.

3 / 7
ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಆಟಗಾರರು ಉತ್ತಮ ಪ್ರದರ್ಶನ ನೀಡುವ ಪ್ರಯತ್ನದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದರ ಪರಿಣಾಮವಾಗಿ ಭಾರತವು ಟಿ20 ವಿಶ್ವಕಪ್ ಗೆದ್ದಿತು ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಆಟಗಾರರು ಉತ್ತಮ ಪ್ರದರ್ಶನ ನೀಡುವ ಪ್ರಯತ್ನದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದರ ಪರಿಣಾಮವಾಗಿ ಭಾರತವು ಟಿ20 ವಿಶ್ವಕಪ್ ಗೆದ್ದಿತು ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

4 / 7
ಈವೆಂಟ್‌ವೊಂದರಲ್ಲಿ ವರ್ಷದ ಅತ್ಯುತ್ತಮ ಪುರುಷ ಅಂತರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ರೋಹಿತ್, ಈ ತಂಡವನ್ನು ಬದಲಾಯಿಸುವುದು ನನ್ನ ಕನಸಾಗಿತ್ತು. ಹೀಗಾಗಿ ಅಂಕಿಅಂಶಗಳು, ಫಲಿತಾಂಶಗಳ ಬಗ್ಗೆ ಹೆಚ್ಚು ಚಿಂತಿಸಬೇಡಿ ಎಂಬುದನ್ನು ನಾನು ಆಟಗಾರರಿಗೆ ಮನವರಿಕೆ ಮಾಡಿದ್ದೆ. ಆಟಗಾರರು ಹೆಚ್ಚು ಯೋಚಿಸದೆ ಮೈದಾನಕ್ಕೆ ಹೋಗಿ ಮುಕ್ತವಾಗಿ ಆಡುವಂತಹ ವಾತಾವರಣವನ್ನು ನಾವು ನಿರ್ಮಿಸಬೇಕಿತ್ತು. ಈ ಪ್ರಯತ್ನ ಕೊನೆಗೂ ಫಲ ನೀಡಿತು.

ಈವೆಂಟ್‌ವೊಂದರಲ್ಲಿ ವರ್ಷದ ಅತ್ಯುತ್ತಮ ಪುರುಷ ಅಂತರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ರೋಹಿತ್, ಈ ತಂಡವನ್ನು ಬದಲಾಯಿಸುವುದು ನನ್ನ ಕನಸಾಗಿತ್ತು. ಹೀಗಾಗಿ ಅಂಕಿಅಂಶಗಳು, ಫಲಿತಾಂಶಗಳ ಬಗ್ಗೆ ಹೆಚ್ಚು ಚಿಂತಿಸಬೇಡಿ ಎಂಬುದನ್ನು ನಾನು ಆಟಗಾರರಿಗೆ ಮನವರಿಕೆ ಮಾಡಿದ್ದೆ. ಆಟಗಾರರು ಹೆಚ್ಚು ಯೋಚಿಸದೆ ಮೈದಾನಕ್ಕೆ ಹೋಗಿ ಮುಕ್ತವಾಗಿ ಆಡುವಂತಹ ವಾತಾವರಣವನ್ನು ನಾವು ನಿರ್ಮಿಸಬೇಕಿತ್ತು. ಈ ಪ್ರಯತ್ನ ಕೊನೆಗೂ ಫಲ ನೀಡಿತು.

5 / 7
ಟೀಂ ಇಂಡಿಯಾದ ಮೂರು ಆಧಾರ ಸ್ತಂಭಗಳಾದ ಜಯ್ ಶಾ, ರಾಹುಲ್ ದ್ರಾವಿಡ್ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಈ ಗೆಲುವಿನಲ್ಲಿ ಸಾಕಷ್ಟು ಪ್ರಭಾವ ಬೀರಿದ್ದಾರೆ. ಆಟಗಾರರಿಂದ ಅತ್ಯುತ್ತಮ ಪ್ರದರ್ಶನವನ್ನು ಹೊರತೆಗೆಯಲು ಪ್ರಯತ್ನಿಸುವಲ್ಲಿ ಈ ಮೂವರು ಸಂಪೂರ್ಣ ಬೆಂಬಲವನ್ನು ನೀಡಿದರು. ಇದರಿಂದಾಗಿ ಭಾರತವು ಟಿ20 ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿಯಲು ಸಾಧ್ಯವಾಯಿತು ಎಂದು ರೋಹಿತ್ ಹೇಳಿದ್ದಾರೆ.

ಟೀಂ ಇಂಡಿಯಾದ ಮೂರು ಆಧಾರ ಸ್ತಂಭಗಳಾದ ಜಯ್ ಶಾ, ರಾಹುಲ್ ದ್ರಾವಿಡ್ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಈ ಗೆಲುವಿನಲ್ಲಿ ಸಾಕಷ್ಟು ಪ್ರಭಾವ ಬೀರಿದ್ದಾರೆ. ಆಟಗಾರರಿಂದ ಅತ್ಯುತ್ತಮ ಪ್ರದರ್ಶನವನ್ನು ಹೊರತೆಗೆಯಲು ಪ್ರಯತ್ನಿಸುವಲ್ಲಿ ಈ ಮೂವರು ಸಂಪೂರ್ಣ ಬೆಂಬಲವನ್ನು ನೀಡಿದರು. ಇದರಿಂದಾಗಿ ಭಾರತವು ಟಿ20 ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿಯಲು ಸಾಧ್ಯವಾಯಿತು ಎಂದು ರೋಹಿತ್ ಹೇಳಿದ್ದಾರೆ.

6 / 7
ಇನ್ನು ಟಿ20 ವಿಶ್ವಕಪ್ ಗೆದ್ದ ಬಗ್ಗೆ ಮಾತನಾಡಿರುವ ರೋಹಿತ್, ‘ವಿಶ್ವಕಪ್ ಗೆದ್ದಿದ್ದನ್ನು ಎಂದಿಗೂ ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ನಾವು ವಿಶ್ವಕಪ್ ಗೆದ್ದಾಗ, ನಾವೆಲ್ಲರೂ ಆ ಕ್ಷಣವನ್ನು ಆನಂದಿಸುವುದು ಮುಖ್ಯವಾಗಿತ್ತು, ಅದನ್ನು ನಾವು ಚೆನ್ನಾಗಿ ಮಾಡಿದ್ದೇವೆ. ನಾವು ವಿಶ್ವ ಚಾಂಪಿಯನ್ ಆದಾಗ ಇಡೀ ದೇಶವೇ ನಮ್ಮೊಂದಿಗೆ ಸಂಭ್ರಮಿಸಿತು. ವಿಶ್ವಕಪ್ ಗೆಲ್ಲುವುದು ನಮಗೆ ಎಷ್ಟು ಮುಖ್ಯವೋ, ಇಡೀ ದೇಶಕ್ಕೂ ಅಷ್ಟೇ ಮುಖ್ಯವಾಗಿತ್ತು. ಟಿ20 ವಿಶ್ವಕಪ್ ಟ್ರೋಫಿಯನ್ನು ಮರಳಿ ಮನೆಗೆ ತಂದು ಇಲ್ಲಿ ಎಲ್ಲರೊಂದಿಗೆ ಸಂಭ್ರಮಿಸಿದ್ದು ಸಂತಸ ತಂದಿದೆ ಎಂದಿದ್ದಾರೆ.

ಇನ್ನು ಟಿ20 ವಿಶ್ವಕಪ್ ಗೆದ್ದ ಬಗ್ಗೆ ಮಾತನಾಡಿರುವ ರೋಹಿತ್, ‘ವಿಶ್ವಕಪ್ ಗೆದ್ದಿದ್ದನ್ನು ಎಂದಿಗೂ ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ನಾವು ವಿಶ್ವಕಪ್ ಗೆದ್ದಾಗ, ನಾವೆಲ್ಲರೂ ಆ ಕ್ಷಣವನ್ನು ಆನಂದಿಸುವುದು ಮುಖ್ಯವಾಗಿತ್ತು, ಅದನ್ನು ನಾವು ಚೆನ್ನಾಗಿ ಮಾಡಿದ್ದೇವೆ. ನಾವು ವಿಶ್ವ ಚಾಂಪಿಯನ್ ಆದಾಗ ಇಡೀ ದೇಶವೇ ನಮ್ಮೊಂದಿಗೆ ಸಂಭ್ರಮಿಸಿತು. ವಿಶ್ವಕಪ್ ಗೆಲ್ಲುವುದು ನಮಗೆ ಎಷ್ಟು ಮುಖ್ಯವೋ, ಇಡೀ ದೇಶಕ್ಕೂ ಅಷ್ಟೇ ಮುಖ್ಯವಾಗಿತ್ತು. ಟಿ20 ವಿಶ್ವಕಪ್ ಟ್ರೋಫಿಯನ್ನು ಮರಳಿ ಮನೆಗೆ ತಂದು ಇಲ್ಲಿ ಎಲ್ಲರೊಂದಿಗೆ ಸಂಭ್ರಮಿಸಿದ್ದು ಸಂತಸ ತಂದಿದೆ ಎಂದಿದ್ದಾರೆ.

7 / 7

Published On - 4:59 pm, Thu, 22 August 24

Follow us
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?