AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಚಿರಋಣಿ… ಕೆನ್ಸಿಂಗ್ಟನ್ ಓವಲ್​ ಪಿಚ್​ನ ಹುಲ್ಲು ತಿಂದ ರೋಹಿತ್ ಶರ್ಮಾ

T20 World Cup 2024: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 176 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 169 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಸ್ಮರಣೀಯ ಗೆಲುವು ನೀಡಿದ ಕೆನ್ಸಿಂಗ್ಟನ್ ಓವಲ್ ಮೈದಾನದ ಪಿಚ್​ನ ಹುಲ್ಲು ತಿನ್ನುವ ಮೂಲಕ ರೋಹಿತ್ ಶರ್ಮಾ ಎಲ್ಲರ ಗಮನ ಸೆಳೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 30, 2024 | 10:52 AM

Share
T20 World Cup 2024: ಭಾರತ ತಂಡದ ಬಹುದೊಡ್ಡ ಕನಸು ಈಡೇರಿದೆ. 2013 ರಿಂದ ಟೀಮ್ ಇಂಡಿಯಾ (Team India) ಪಾಲಿಗೆ ಮರೀಚಿಕೆಯಾಗಿದ್ದ ಐಸಿಸಿ ಟ್ರೋಫಿ ಇದೀಗ ಟಿ20 ವಿಶ್ವಕಪ್​ ರೂಪದಲ್ಲಿ ಮರಳಿ ಸಿಕ್ಕಿದೆ. ಅದರಲ್ಲೂ ನಾಯಕನಾಗಿ ಒಂದೇ ಒಂದು ಟ್ರೋಫಿ ಗೆಲ್ಲಬೇಕೆಂಬ ಕನಸು ಹೊತ್ತಿದ್ದ ರೋಹಿತ್ ಶರ್ಮಾ (Rohit Sharma) ಕೊನೆಗೂ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

T20 World Cup 2024: ಭಾರತ ತಂಡದ ಬಹುದೊಡ್ಡ ಕನಸು ಈಡೇರಿದೆ. 2013 ರಿಂದ ಟೀಮ್ ಇಂಡಿಯಾ (Team India) ಪಾಲಿಗೆ ಮರೀಚಿಕೆಯಾಗಿದ್ದ ಐಸಿಸಿ ಟ್ರೋಫಿ ಇದೀಗ ಟಿ20 ವಿಶ್ವಕಪ್​ ರೂಪದಲ್ಲಿ ಮರಳಿ ಸಿಕ್ಕಿದೆ. ಅದರಲ್ಲೂ ನಾಯಕನಾಗಿ ಒಂದೇ ಒಂದು ಟ್ರೋಫಿ ಗೆಲ್ಲಬೇಕೆಂಬ ಕನಸು ಹೊತ್ತಿದ್ದ ರೋಹಿತ್ ಶರ್ಮಾ (Rohit Sharma) ಕೊನೆಗೂ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

1 / 5
ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸಿತು. ಈ ರೋಚಕ ಗೆಲುವಿನ ಬೆನ್ನಲ್ಲೇ ಭಾವುಕರಾದ ರೋಹಿತ್ ಶರ್ಮಾ ಬಿಕ್ಕಿಳಿಸುತ್ತಾ ಕಣ್ಣೀರು ಹಾಕಿದರು.

ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸಿತು. ಈ ರೋಚಕ ಗೆಲುವಿನ ಬೆನ್ನಲ್ಲೇ ಭಾವುಕರಾದ ರೋಹಿತ್ ಶರ್ಮಾ ಬಿಕ್ಕಿಳಿಸುತ್ತಾ ಕಣ್ಣೀರು ಹಾಕಿದರು.

2 / 5
ಈ ಕಣ್ಣೀರಿನೊಂದಿಗೆ ತನ್ನ ಬಹುಕಾಲದ ಕನಸು ಈಡೇರಿಸಿದ ಕೆನ್ಸಿಂಗ್ಟನ್ ಓವಲ್ ಮೈದಾನದ ಪಿಚ್​ಗೆ ನಮಿಸಿದರು. ಅಷ್ಟೇ ಅಲ್ಲದೆ ಪಿಚ್​ನಲ್ಲಿನ ಹುಲ್ಲನ್ನು ಕಿತ್ತು ತಿನ್ನುವ ಮೂಲಕ ಸ್ಮರಣೀಯ ಗೆಲುವನ್ನು ನೀಡಿದ ಕೆನ್ಸಿಂಗ್ಟನ್ ಮೈದಾನದ ಋಣವನ್ನು ದೇಹಕ್ಕೆ ಸೇರಿಸಿಕೊಂಡರು. ಇದೀಗ ರೋಹಿತ್ ಶರ್ಮಾ ಅವರ ಈ ಭಾವುಕ ಕ್ಷಣಗಳ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಕಣ್ಣೀರಿನೊಂದಿಗೆ ತನ್ನ ಬಹುಕಾಲದ ಕನಸು ಈಡೇರಿಸಿದ ಕೆನ್ಸಿಂಗ್ಟನ್ ಓವಲ್ ಮೈದಾನದ ಪಿಚ್​ಗೆ ನಮಿಸಿದರು. ಅಷ್ಟೇ ಅಲ್ಲದೆ ಪಿಚ್​ನಲ್ಲಿನ ಹುಲ್ಲನ್ನು ಕಿತ್ತು ತಿನ್ನುವ ಮೂಲಕ ಸ್ಮರಣೀಯ ಗೆಲುವನ್ನು ನೀಡಿದ ಕೆನ್ಸಿಂಗ್ಟನ್ ಮೈದಾನದ ಋಣವನ್ನು ದೇಹಕ್ಕೆ ಸೇರಿಸಿಕೊಂಡರು. ಇದೀಗ ರೋಹಿತ್ ಶರ್ಮಾ ಅವರ ಈ ಭಾವುಕ ಕ್ಷಣಗಳ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 5
ಇನ್ನು ಈ ಗೆಲುವಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ನಾನು ಟಿ20 ಸ್ವರೂಪದೊಂದಿಗೆ ವೃತ್ತಿಜೀವನ ಆರಂಭಿಸಿದ್ದೆ. ಇದೀಗ ಈ ಸ್ವರೂಪಕ್ಕೆ ವಿದಾಯ ಹೇಳಲು ಸಕಾಲ. ಹೀಗಾಗಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದುತ್ತಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಇನ್ನು ಈ ಗೆಲುವಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ನಾನು ಟಿ20 ಸ್ವರೂಪದೊಂದಿಗೆ ವೃತ್ತಿಜೀವನ ಆರಂಭಿಸಿದ್ದೆ. ಇದೀಗ ಈ ಸ್ವರೂಪಕ್ಕೆ ವಿದಾಯ ಹೇಳಲು ಸಕಾಲ. ಹೀಗಾಗಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದುತ್ತಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ.

4 / 5
ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಪರ ವಿಶ್ವಕಪ್ ಗೆದ್ದ ಮೂರನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. 1983 ರಲ್ಲಿ ಕಪಿಲ್ ದೇವ್ ಮೊದಲ ಬಾರಿಗೆ ಈ ಸಾಧನೆ ಮಾಡಿದರೆ, 2007 ಮತ್ತು 2011 ರಲ್ಲಿ ಭಾರತ ತಂಡ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ವಿಶ್ವಕಪ್ ಗೆದ್ದಿತ್ತು. ಇದೀಗ 2024 ರಲ್ಲಿ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ರೋಹಿತ್ ಶರ್ಮಾ ಈ ಸಾಧನೆ ಮಾಡಿದ ಮೂರನೇ ನಾಯಕ ಎನಿಸಿಕೊಂಡಿದ್ದಾರೆ.

ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಪರ ವಿಶ್ವಕಪ್ ಗೆದ್ದ ಮೂರನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. 1983 ರಲ್ಲಿ ಕಪಿಲ್ ದೇವ್ ಮೊದಲ ಬಾರಿಗೆ ಈ ಸಾಧನೆ ಮಾಡಿದರೆ, 2007 ಮತ್ತು 2011 ರಲ್ಲಿ ಭಾರತ ತಂಡ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ವಿಶ್ವಕಪ್ ಗೆದ್ದಿತ್ತು. ಇದೀಗ 2024 ರಲ್ಲಿ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ರೋಹಿತ್ ಶರ್ಮಾ ಈ ಸಾಧನೆ ಮಾಡಿದ ಮೂರನೇ ನಾಯಕ ಎನಿಸಿಕೊಂಡಿದ್ದಾರೆ.

5 / 5
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್