AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಚಿರಋಣಿ… ಕೆನ್ಸಿಂಗ್ಟನ್ ಓವಲ್​ ಪಿಚ್​ನ ಹುಲ್ಲು ತಿಂದ ರೋಹಿತ್ ಶರ್ಮಾ

T20 World Cup 2024: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 176 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 169 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಸ್ಮರಣೀಯ ಗೆಲುವು ನೀಡಿದ ಕೆನ್ಸಿಂಗ್ಟನ್ ಓವಲ್ ಮೈದಾನದ ಪಿಚ್​ನ ಹುಲ್ಲು ತಿನ್ನುವ ಮೂಲಕ ರೋಹಿತ್ ಶರ್ಮಾ ಎಲ್ಲರ ಗಮನ ಸೆಳೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 30, 2024 | 10:52 AM

Share
T20 World Cup 2024: ಭಾರತ ತಂಡದ ಬಹುದೊಡ್ಡ ಕನಸು ಈಡೇರಿದೆ. 2013 ರಿಂದ ಟೀಮ್ ಇಂಡಿಯಾ (Team India) ಪಾಲಿಗೆ ಮರೀಚಿಕೆಯಾಗಿದ್ದ ಐಸಿಸಿ ಟ್ರೋಫಿ ಇದೀಗ ಟಿ20 ವಿಶ್ವಕಪ್​ ರೂಪದಲ್ಲಿ ಮರಳಿ ಸಿಕ್ಕಿದೆ. ಅದರಲ್ಲೂ ನಾಯಕನಾಗಿ ಒಂದೇ ಒಂದು ಟ್ರೋಫಿ ಗೆಲ್ಲಬೇಕೆಂಬ ಕನಸು ಹೊತ್ತಿದ್ದ ರೋಹಿತ್ ಶರ್ಮಾ (Rohit Sharma) ಕೊನೆಗೂ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

T20 World Cup 2024: ಭಾರತ ತಂಡದ ಬಹುದೊಡ್ಡ ಕನಸು ಈಡೇರಿದೆ. 2013 ರಿಂದ ಟೀಮ್ ಇಂಡಿಯಾ (Team India) ಪಾಲಿಗೆ ಮರೀಚಿಕೆಯಾಗಿದ್ದ ಐಸಿಸಿ ಟ್ರೋಫಿ ಇದೀಗ ಟಿ20 ವಿಶ್ವಕಪ್​ ರೂಪದಲ್ಲಿ ಮರಳಿ ಸಿಕ್ಕಿದೆ. ಅದರಲ್ಲೂ ನಾಯಕನಾಗಿ ಒಂದೇ ಒಂದು ಟ್ರೋಫಿ ಗೆಲ್ಲಬೇಕೆಂಬ ಕನಸು ಹೊತ್ತಿದ್ದ ರೋಹಿತ್ ಶರ್ಮಾ (Rohit Sharma) ಕೊನೆಗೂ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

1 / 5
ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸಿತು. ಈ ರೋಚಕ ಗೆಲುವಿನ ಬೆನ್ನಲ್ಲೇ ಭಾವುಕರಾದ ರೋಹಿತ್ ಶರ್ಮಾ ಬಿಕ್ಕಿಳಿಸುತ್ತಾ ಕಣ್ಣೀರು ಹಾಕಿದರು.

ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸಿತು. ಈ ರೋಚಕ ಗೆಲುವಿನ ಬೆನ್ನಲ್ಲೇ ಭಾವುಕರಾದ ರೋಹಿತ್ ಶರ್ಮಾ ಬಿಕ್ಕಿಳಿಸುತ್ತಾ ಕಣ್ಣೀರು ಹಾಕಿದರು.

2 / 5
ಈ ಕಣ್ಣೀರಿನೊಂದಿಗೆ ತನ್ನ ಬಹುಕಾಲದ ಕನಸು ಈಡೇರಿಸಿದ ಕೆನ್ಸಿಂಗ್ಟನ್ ಓವಲ್ ಮೈದಾನದ ಪಿಚ್​ಗೆ ನಮಿಸಿದರು. ಅಷ್ಟೇ ಅಲ್ಲದೆ ಪಿಚ್​ನಲ್ಲಿನ ಹುಲ್ಲನ್ನು ಕಿತ್ತು ತಿನ್ನುವ ಮೂಲಕ ಸ್ಮರಣೀಯ ಗೆಲುವನ್ನು ನೀಡಿದ ಕೆನ್ಸಿಂಗ್ಟನ್ ಮೈದಾನದ ಋಣವನ್ನು ದೇಹಕ್ಕೆ ಸೇರಿಸಿಕೊಂಡರು. ಇದೀಗ ರೋಹಿತ್ ಶರ್ಮಾ ಅವರ ಈ ಭಾವುಕ ಕ್ಷಣಗಳ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಕಣ್ಣೀರಿನೊಂದಿಗೆ ತನ್ನ ಬಹುಕಾಲದ ಕನಸು ಈಡೇರಿಸಿದ ಕೆನ್ಸಿಂಗ್ಟನ್ ಓವಲ್ ಮೈದಾನದ ಪಿಚ್​ಗೆ ನಮಿಸಿದರು. ಅಷ್ಟೇ ಅಲ್ಲದೆ ಪಿಚ್​ನಲ್ಲಿನ ಹುಲ್ಲನ್ನು ಕಿತ್ತು ತಿನ್ನುವ ಮೂಲಕ ಸ್ಮರಣೀಯ ಗೆಲುವನ್ನು ನೀಡಿದ ಕೆನ್ಸಿಂಗ್ಟನ್ ಮೈದಾನದ ಋಣವನ್ನು ದೇಹಕ್ಕೆ ಸೇರಿಸಿಕೊಂಡರು. ಇದೀಗ ರೋಹಿತ್ ಶರ್ಮಾ ಅವರ ಈ ಭಾವುಕ ಕ್ಷಣಗಳ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 5
ಇನ್ನು ಈ ಗೆಲುವಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ನಾನು ಟಿ20 ಸ್ವರೂಪದೊಂದಿಗೆ ವೃತ್ತಿಜೀವನ ಆರಂಭಿಸಿದ್ದೆ. ಇದೀಗ ಈ ಸ್ವರೂಪಕ್ಕೆ ವಿದಾಯ ಹೇಳಲು ಸಕಾಲ. ಹೀಗಾಗಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದುತ್ತಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಇನ್ನು ಈ ಗೆಲುವಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ನಾನು ಟಿ20 ಸ್ವರೂಪದೊಂದಿಗೆ ವೃತ್ತಿಜೀವನ ಆರಂಭಿಸಿದ್ದೆ. ಇದೀಗ ಈ ಸ್ವರೂಪಕ್ಕೆ ವಿದಾಯ ಹೇಳಲು ಸಕಾಲ. ಹೀಗಾಗಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದುತ್ತಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ.

4 / 5
ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಪರ ವಿಶ್ವಕಪ್ ಗೆದ್ದ ಮೂರನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. 1983 ರಲ್ಲಿ ಕಪಿಲ್ ದೇವ್ ಮೊದಲ ಬಾರಿಗೆ ಈ ಸಾಧನೆ ಮಾಡಿದರೆ, 2007 ಮತ್ತು 2011 ರಲ್ಲಿ ಭಾರತ ತಂಡ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ವಿಶ್ವಕಪ್ ಗೆದ್ದಿತ್ತು. ಇದೀಗ 2024 ರಲ್ಲಿ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ರೋಹಿತ್ ಶರ್ಮಾ ಈ ಸಾಧನೆ ಮಾಡಿದ ಮೂರನೇ ನಾಯಕ ಎನಿಸಿಕೊಂಡಿದ್ದಾರೆ.

ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಪರ ವಿಶ್ವಕಪ್ ಗೆದ್ದ ಮೂರನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. 1983 ರಲ್ಲಿ ಕಪಿಲ್ ದೇವ್ ಮೊದಲ ಬಾರಿಗೆ ಈ ಸಾಧನೆ ಮಾಡಿದರೆ, 2007 ಮತ್ತು 2011 ರಲ್ಲಿ ಭಾರತ ತಂಡ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ವಿಶ್ವಕಪ್ ಗೆದ್ದಿತ್ತು. ಇದೀಗ 2024 ರಲ್ಲಿ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ರೋಹಿತ್ ಶರ್ಮಾ ಈ ಸಾಧನೆ ಮಾಡಿದ ಮೂರನೇ ನಾಯಕ ಎನಿಸಿಕೊಂಡಿದ್ದಾರೆ.

5 / 5
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?