Rohit Sharma: ಚಿರಋಣಿ… ಕೆನ್ಸಿಂಗ್ಟನ್ ಓವಲ್​ ಪಿಚ್​ನ ಹುಲ್ಲು ತಿಂದ ರೋಹಿತ್ ಶರ್ಮಾ

T20 World Cup 2024: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 176 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 169 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸಿದೆ. ಈ ಸ್ಮರಣೀಯ ಗೆಲುವು ನೀಡಿದ ಕೆನ್ಸಿಂಗ್ಟನ್ ಓವಲ್ ಮೈದಾನದ ಪಿಚ್​ನ ಹುಲ್ಲು ತಿನ್ನುವ ಮೂಲಕ ರೋಹಿತ್ ಶರ್ಮಾ ಎಲ್ಲರ ಗಮನ ಸೆಳೆದಿದ್ದಾರೆ.

|

Updated on: Jun 30, 2024 | 10:52 AM

T20 World Cup 2024: ಭಾರತ ತಂಡದ ಬಹುದೊಡ್ಡ ಕನಸು ಈಡೇರಿದೆ. 2013 ರಿಂದ ಟೀಮ್ ಇಂಡಿಯಾ (Team India) ಪಾಲಿಗೆ ಮರೀಚಿಕೆಯಾಗಿದ್ದ ಐಸಿಸಿ ಟ್ರೋಫಿ ಇದೀಗ ಟಿ20 ವಿಶ್ವಕಪ್​ ರೂಪದಲ್ಲಿ ಮರಳಿ ಸಿಕ್ಕಿದೆ. ಅದರಲ್ಲೂ ನಾಯಕನಾಗಿ ಒಂದೇ ಒಂದು ಟ್ರೋಫಿ ಗೆಲ್ಲಬೇಕೆಂಬ ಕನಸು ಹೊತ್ತಿದ್ದ ರೋಹಿತ್ ಶರ್ಮಾ (Rohit Sharma) ಕೊನೆಗೂ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

T20 World Cup 2024: ಭಾರತ ತಂಡದ ಬಹುದೊಡ್ಡ ಕನಸು ಈಡೇರಿದೆ. 2013 ರಿಂದ ಟೀಮ್ ಇಂಡಿಯಾ (Team India) ಪಾಲಿಗೆ ಮರೀಚಿಕೆಯಾಗಿದ್ದ ಐಸಿಸಿ ಟ್ರೋಫಿ ಇದೀಗ ಟಿ20 ವಿಶ್ವಕಪ್​ ರೂಪದಲ್ಲಿ ಮರಳಿ ಸಿಕ್ಕಿದೆ. ಅದರಲ್ಲೂ ನಾಯಕನಾಗಿ ಒಂದೇ ಒಂದು ಟ್ರೋಫಿ ಗೆಲ್ಲಬೇಕೆಂಬ ಕನಸು ಹೊತ್ತಿದ್ದ ರೋಹಿತ್ ಶರ್ಮಾ (Rohit Sharma) ಕೊನೆಗೂ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

1 / 5
ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸಿತು. ಈ ರೋಚಕ ಗೆಲುವಿನ ಬೆನ್ನಲ್ಲೇ ಭಾವುಕರಾದ ರೋಹಿತ್ ಶರ್ಮಾ ಬಿಕ್ಕಿಳಿಸುತ್ತಾ ಕಣ್ಣೀರು ಹಾಕಿದರು.

ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸಿತು. ಈ ರೋಚಕ ಗೆಲುವಿನ ಬೆನ್ನಲ್ಲೇ ಭಾವುಕರಾದ ರೋಹಿತ್ ಶರ್ಮಾ ಬಿಕ್ಕಿಳಿಸುತ್ತಾ ಕಣ್ಣೀರು ಹಾಕಿದರು.

2 / 5
ಈ ಕಣ್ಣೀರಿನೊಂದಿಗೆ ತನ್ನ ಬಹುಕಾಲದ ಕನಸು ಈಡೇರಿಸಿದ ಕೆನ್ಸಿಂಗ್ಟನ್ ಓವಲ್ ಮೈದಾನದ ಪಿಚ್​ಗೆ ನಮಿಸಿದರು. ಅಷ್ಟೇ ಅಲ್ಲದೆ ಪಿಚ್​ನಲ್ಲಿನ ಹುಲ್ಲನ್ನು ಕಿತ್ತು ತಿನ್ನುವ ಮೂಲಕ ಸ್ಮರಣೀಯ ಗೆಲುವನ್ನು ನೀಡಿದ ಕೆನ್ಸಿಂಗ್ಟನ್ ಮೈದಾನದ ಋಣವನ್ನು ದೇಹಕ್ಕೆ ಸೇರಿಸಿಕೊಂಡರು. ಇದೀಗ ರೋಹಿತ್ ಶರ್ಮಾ ಅವರ ಈ ಭಾವುಕ ಕ್ಷಣಗಳ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಕಣ್ಣೀರಿನೊಂದಿಗೆ ತನ್ನ ಬಹುಕಾಲದ ಕನಸು ಈಡೇರಿಸಿದ ಕೆನ್ಸಿಂಗ್ಟನ್ ಓವಲ್ ಮೈದಾನದ ಪಿಚ್​ಗೆ ನಮಿಸಿದರು. ಅಷ್ಟೇ ಅಲ್ಲದೆ ಪಿಚ್​ನಲ್ಲಿನ ಹುಲ್ಲನ್ನು ಕಿತ್ತು ತಿನ್ನುವ ಮೂಲಕ ಸ್ಮರಣೀಯ ಗೆಲುವನ್ನು ನೀಡಿದ ಕೆನ್ಸಿಂಗ್ಟನ್ ಮೈದಾನದ ಋಣವನ್ನು ದೇಹಕ್ಕೆ ಸೇರಿಸಿಕೊಂಡರು. ಇದೀಗ ರೋಹಿತ್ ಶರ್ಮಾ ಅವರ ಈ ಭಾವುಕ ಕ್ಷಣಗಳ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

3 / 5
ಇನ್ನು ಈ ಗೆಲುವಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ನಾನು ಟಿ20 ಸ್ವರೂಪದೊಂದಿಗೆ ವೃತ್ತಿಜೀವನ ಆರಂಭಿಸಿದ್ದೆ. ಇದೀಗ ಈ ಸ್ವರೂಪಕ್ಕೆ ವಿದಾಯ ಹೇಳಲು ಸಕಾಲ. ಹೀಗಾಗಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದುತ್ತಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಇನ್ನು ಈ ಗೆಲುವಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ನಾನು ಟಿ20 ಸ್ವರೂಪದೊಂದಿಗೆ ವೃತ್ತಿಜೀವನ ಆರಂಭಿಸಿದ್ದೆ. ಇದೀಗ ಈ ಸ್ವರೂಪಕ್ಕೆ ವಿದಾಯ ಹೇಳಲು ಸಕಾಲ. ಹೀಗಾಗಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದುತ್ತಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ.

4 / 5
ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಪರ ವಿಶ್ವಕಪ್ ಗೆದ್ದ ಮೂರನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. 1983 ರಲ್ಲಿ ಕಪಿಲ್ ದೇವ್ ಮೊದಲ ಬಾರಿಗೆ ಈ ಸಾಧನೆ ಮಾಡಿದರೆ, 2007 ಮತ್ತು 2011 ರಲ್ಲಿ ಭಾರತ ತಂಡ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ವಿಶ್ವಕಪ್ ಗೆದ್ದಿತ್ತು. ಇದೀಗ 2024 ರಲ್ಲಿ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ರೋಹಿತ್ ಶರ್ಮಾ ಈ ಸಾಧನೆ ಮಾಡಿದ ಮೂರನೇ ನಾಯಕ ಎನಿಸಿಕೊಂಡಿದ್ದಾರೆ.

ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಪರ ವಿಶ್ವಕಪ್ ಗೆದ್ದ ಮೂರನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. 1983 ರಲ್ಲಿ ಕಪಿಲ್ ದೇವ್ ಮೊದಲ ಬಾರಿಗೆ ಈ ಸಾಧನೆ ಮಾಡಿದರೆ, 2007 ಮತ್ತು 2011 ರಲ್ಲಿ ಭಾರತ ತಂಡ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ವಿಶ್ವಕಪ್ ಗೆದ್ದಿತ್ತು. ಇದೀಗ 2024 ರಲ್ಲಿ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ರೋಹಿತ್ ಶರ್ಮಾ ಈ ಸಾಧನೆ ಮಾಡಿದ ಮೂರನೇ ನಾಯಕ ಎನಿಸಿಕೊಂಡಿದ್ದಾರೆ.

5 / 5
Follow us
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!