AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ರೋಹಿತ್ ಶರ್ಮಾಗೆ ಇದುವೇ ಕೊನೆಯ ಚಾನ್ಸ್​..!

Team India: ಏಷ್ಯಾಕಪ್, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಹಾಗೂ ಏಕದಿನ ವಿಶ್ವಕಪ್​ ಅನ್ನು ಮುಂಗಂಡು ಮಾಡಲಾಗಿದ್ದ ಈ ಬದಲಾವಣೆ ಇದುವರೆಗೆ ಫಲ ಕೊಟ್ಟಿಲ್ಲ.

TV9 Web
| Updated By: ಝಾಹಿರ್ ಯೂಸುಫ್|

Updated on: Jun 12, 2023 | 10:08 PM

Share
ಹೊಸ ನಾಯಕ...ಹೊಸ ಕೋಚ್...ಹೊಸ ತಂಡವನ್ನು ಕಣಕ್ಕಿಳಿಸಿದರೂ ಟೀಮ್ ಇಂಡಿಯಾದ ಐಸಿಸಿ ಟ್ರೋಫಿ ಗೆಲ್ಲುವ ಕನಸು ಮಾತ್ರ ಈಡೇರಿಲ್ಲ. 2021ರ ಟಿ20 ವಿಶ್ವಕಪ್ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ಮೇಜರ್ ಸರ್ಜರಿ ಮಾಡಲಾಗಿತ್ತು.

ಹೊಸ ನಾಯಕ...ಹೊಸ ಕೋಚ್...ಹೊಸ ತಂಡವನ್ನು ಕಣಕ್ಕಿಳಿಸಿದರೂ ಟೀಮ್ ಇಂಡಿಯಾದ ಐಸಿಸಿ ಟ್ರೋಫಿ ಗೆಲ್ಲುವ ಕನಸು ಮಾತ್ರ ಈಡೇರಿಲ್ಲ. 2021ರ ಟಿ20 ವಿಶ್ವಕಪ್ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ಮೇಜರ್ ಸರ್ಜರಿ ಮಾಡಲಾಗಿತ್ತು.

1 / 8
ಈ ಮಹತ್ವದ ಬದಲಾವಣೆಯಲ್ಲಿ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿ ರೋಹಿತ್ ಶರ್ಮಾಗೆ ಪಟ್ಟ ಕಟ್ಟಲಾಗಿತ್ತು. ಅತ್ತ ರವಿಶಾಸ್ತ್ರಿ ಬದಲಿಗೆ ಹೊಸ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ನೇಮಿಸಲಾಗಿತ್ತು.

ಈ ಮಹತ್ವದ ಬದಲಾವಣೆಯಲ್ಲಿ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿ ರೋಹಿತ್ ಶರ್ಮಾಗೆ ಪಟ್ಟ ಕಟ್ಟಲಾಗಿತ್ತು. ಅತ್ತ ರವಿಶಾಸ್ತ್ರಿ ಬದಲಿಗೆ ಹೊಸ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ನೇಮಿಸಲಾಗಿತ್ತು.

2 / 8
ಏಷ್ಯಾಕಪ್, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಹಾಗೂ ಏಕದಿನ ವಿಶ್ವಕಪ್​ ಅನ್ನು ಮುಂಗಂಡು ಮಾಡಲಾಗಿದ್ದ ಈ ಬದಲಾವಣೆ ಇದುವರೆಗೆ ಫಲ ಕೊಟ್ಟಿಲ್ಲ. ಏಕೆಂದರೆ ಆಡಿರುವ ಎರಡು ಪ್ರಮುಖ ಟೂರ್ನಿಗಳ ಫಲಿತಾಂಶಗಳು ಹೊರಬಿದ್ದಿದೆ.

ಏಷ್ಯಾಕಪ್, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಹಾಗೂ ಏಕದಿನ ವಿಶ್ವಕಪ್​ ಅನ್ನು ಮುಂಗಂಡು ಮಾಡಲಾಗಿದ್ದ ಈ ಬದಲಾವಣೆ ಇದುವರೆಗೆ ಫಲ ಕೊಟ್ಟಿಲ್ಲ. ಏಕೆಂದರೆ ಆಡಿರುವ ಎರಡು ಪ್ರಮುಖ ಟೂರ್ನಿಗಳ ಫಲಿತಾಂಶಗಳು ಹೊರಬಿದ್ದಿದೆ.

3 / 8
ಏಷ್ಯಾಕಪ್​ನಲ್ಲಿ ಸೂಪರ್-4 ಹಂತದಿಂದ ಹೊರಬಿದ್ದಿದ್ದ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದಲ್ಲಿ ಮುಗ್ಗರಿಸಿದೆ. ಇದರೊಂದಿಗೆ 2013 ರ ಬಳಿಕ ಐಸಿಸಿ ಟ್ರೋಫಿ ಗೆಲ್ಲುವ ಟೀಮ್ ಇಂಡಿಯಾ ಕನಸು ಕೂಡ ಕಮರಿದೆ.

ಏಷ್ಯಾಕಪ್​ನಲ್ಲಿ ಸೂಪರ್-4 ಹಂತದಿಂದ ಹೊರಬಿದ್ದಿದ್ದ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದಲ್ಲಿ ಮುಗ್ಗರಿಸಿದೆ. ಇದರೊಂದಿಗೆ 2013 ರ ಬಳಿಕ ಐಸಿಸಿ ಟ್ರೋಫಿ ಗೆಲ್ಲುವ ಟೀಮ್ ಇಂಡಿಯಾ ಕನಸು ಕೂಡ ಕಮರಿದೆ.

4 / 8
ಇದಾಗ್ಯೂ ಇನ್ನೊಂದು ದೊಡ್ಡ ಕನಸು ಟೀಮ್ ಇಂಡಿಯಾ ಮುಂದಿದೆ. ಅದುವೇ ಏಕದಿನ ವಿಶ್ವಕಪ್. ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮುವುದು ಟೀಮ್ ಇಂಡಿಯಾ ಮುಂದಿರುವ ಅತೀ ದೊಡ್ಡ ಸವಾಲು.

ಇದಾಗ್ಯೂ ಇನ್ನೊಂದು ದೊಡ್ಡ ಕನಸು ಟೀಮ್ ಇಂಡಿಯಾ ಮುಂದಿದೆ. ಅದುವೇ ಏಕದಿನ ವಿಶ್ವಕಪ್. ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮುವುದು ಟೀಮ್ ಇಂಡಿಯಾ ಮುಂದಿರುವ ಅತೀ ದೊಡ್ಡ ಸವಾಲು.

5 / 8
ಆದರೆ ಕೇವಲ 4 ತಿಂಗಳುಗಳಲ್ಲಿ ಈ ದೊಡ್ಡ ಸವಾಲಿಗೆ ಸಜ್ಜಾಗುವುದೇ ಅದಕ್ಕಿಂತ ದೊಡ್ಡ ಸವಾಲು ಎನ್ನಬಹುದು. ಏಕೆಂದರೆ ಮುಂಬರುವ ಸರಣಿಗಳ ಮೂಲಕ ಟೀಮ್ ಇಂಡಿಯಾ ಬಲಿಷ್ಠ ತಂಡ ಕಟ್ಟಬೇಕಿದೆ. ಈ ತಂಡವನ್ನು ಯಶಸ್ವಿಯಾಗಿ ರೋಹಿತ್ ಶರ್ಮಾ ಮುನ್ನಡೆಸಬೇಕಿದೆ.

ಆದರೆ ಕೇವಲ 4 ತಿಂಗಳುಗಳಲ್ಲಿ ಈ ದೊಡ್ಡ ಸವಾಲಿಗೆ ಸಜ್ಜಾಗುವುದೇ ಅದಕ್ಕಿಂತ ದೊಡ್ಡ ಸವಾಲು ಎನ್ನಬಹುದು. ಏಕೆಂದರೆ ಮುಂಬರುವ ಸರಣಿಗಳ ಮೂಲಕ ಟೀಮ್ ಇಂಡಿಯಾ ಬಲಿಷ್ಠ ತಂಡ ಕಟ್ಟಬೇಕಿದೆ. ಈ ತಂಡವನ್ನು ಯಶಸ್ವಿಯಾಗಿ ರೋಹಿತ್ ಶರ್ಮಾ ಮುನ್ನಡೆಸಬೇಕಿದೆ.

6 / 8
ಅಂದರೆ ಏಕದಿನ ವಿಶ್ವಕಪ್​ವರೆಗೂ ರೋಹಿತ್ ಶರ್ಮಾ ನಾಯಕರಾಗಿ ಮುಂದುವರೆಯಲಿದ್ದಾರೆ. ಆದರೆ ಏಕದಿನ ವಿಶ್ವಕಪ್​ನಲ್ಲೂ ಭಾರತ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಲು ವಿಫಲವಾದರೆ ರೋಹಿತ್ ಶರ್ಮಾ ಹಾಗೂ ರಾಹುಲ್ ದ್ರಾವಿಡ್ ಅವರ ತಲೆದಂಡವಾಗುವುದು ಖಚಿತ.

ಅಂದರೆ ಏಕದಿನ ವಿಶ್ವಕಪ್​ವರೆಗೂ ರೋಹಿತ್ ಶರ್ಮಾ ನಾಯಕರಾಗಿ ಮುಂದುವರೆಯಲಿದ್ದಾರೆ. ಆದರೆ ಏಕದಿನ ವಿಶ್ವಕಪ್​ನಲ್ಲೂ ಭಾರತ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಲು ವಿಫಲವಾದರೆ ರೋಹಿತ್ ಶರ್ಮಾ ಹಾಗೂ ರಾಹುಲ್ ದ್ರಾವಿಡ್ ಅವರ ತಲೆದಂಡವಾಗುವುದು ಖಚಿತ.

7 / 8
ಹೀಗಾಗಿ ರೋಹಿತ್ ಶರ್ಮಾ ಹಾಗೂ ರಾಹುಲ್ ದ್ರಾವಿಡ್ ಪಾಲಿಗೆ ಏಕದಿನ ವಿಶ್ವಕಪ್ ಬಹುಮುಖ್ಯ. ಅದರಲ್ಲೂ ನಾಯಕತ್ವದೊಂದಿಗೆ ಇನ್ನೊಂದು ವರ್ಷ ಟೀಮ್ ಇಂಡಿಯಾ ಪರ ಆಡಬೇಕೆಂದರೆ ರೋಹಿತ್ ಶರ್ಮಾ ಏಕದಿನ ವಿಶ್ವಕಪ್ ಗೆಲ್ಲಲೇಬೇಕು. ಹೀಗಾಗಿಯೇ ಮುಂಬರುವ ಏಕದಿನ ವಿಶ್ವಕಪ್ ಹಿಟ್​ಮ್ಯಾನ್ ಪಾಲಿಗೆ ಕೊನೆಯ ಅವಕಾಶ ಎಂದು ವಿಶ್ಲೇಷಿಸಲಾಗುತ್ತಿದೆ.

ಹೀಗಾಗಿ ರೋಹಿತ್ ಶರ್ಮಾ ಹಾಗೂ ರಾಹುಲ್ ದ್ರಾವಿಡ್ ಪಾಲಿಗೆ ಏಕದಿನ ವಿಶ್ವಕಪ್ ಬಹುಮುಖ್ಯ. ಅದರಲ್ಲೂ ನಾಯಕತ್ವದೊಂದಿಗೆ ಇನ್ನೊಂದು ವರ್ಷ ಟೀಮ್ ಇಂಡಿಯಾ ಪರ ಆಡಬೇಕೆಂದರೆ ರೋಹಿತ್ ಶರ್ಮಾ ಏಕದಿನ ವಿಶ್ವಕಪ್ ಗೆಲ್ಲಲೇಬೇಕು. ಹೀಗಾಗಿಯೇ ಮುಂಬರುವ ಏಕದಿನ ವಿಶ್ವಕಪ್ ಹಿಟ್​ಮ್ಯಾನ್ ಪಾಲಿಗೆ ಕೊನೆಯ ಅವಕಾಶ ಎಂದು ವಿಶ್ಲೇಷಿಸಲಾಗುತ್ತಿದೆ.

8 / 8
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ