AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ರೋಹಿತ್ ಶರ್ಮಾಗೆ ಇದುವೇ ಕೊನೆಯ ಚಾನ್ಸ್​..!

Team India: ಏಷ್ಯಾಕಪ್, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಹಾಗೂ ಏಕದಿನ ವಿಶ್ವಕಪ್​ ಅನ್ನು ಮುಂಗಂಡು ಮಾಡಲಾಗಿದ್ದ ಈ ಬದಲಾವಣೆ ಇದುವರೆಗೆ ಫಲ ಕೊಟ್ಟಿಲ್ಲ.

TV9 Web
| Edited By: |

Updated on: Jun 12, 2023 | 10:08 PM

Share
ಹೊಸ ನಾಯಕ...ಹೊಸ ಕೋಚ್...ಹೊಸ ತಂಡವನ್ನು ಕಣಕ್ಕಿಳಿಸಿದರೂ ಟೀಮ್ ಇಂಡಿಯಾದ ಐಸಿಸಿ ಟ್ರೋಫಿ ಗೆಲ್ಲುವ ಕನಸು ಮಾತ್ರ ಈಡೇರಿಲ್ಲ. 2021ರ ಟಿ20 ವಿಶ್ವಕಪ್ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ಮೇಜರ್ ಸರ್ಜರಿ ಮಾಡಲಾಗಿತ್ತು.

ಹೊಸ ನಾಯಕ...ಹೊಸ ಕೋಚ್...ಹೊಸ ತಂಡವನ್ನು ಕಣಕ್ಕಿಳಿಸಿದರೂ ಟೀಮ್ ಇಂಡಿಯಾದ ಐಸಿಸಿ ಟ್ರೋಫಿ ಗೆಲ್ಲುವ ಕನಸು ಮಾತ್ರ ಈಡೇರಿಲ್ಲ. 2021ರ ಟಿ20 ವಿಶ್ವಕಪ್ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ಮೇಜರ್ ಸರ್ಜರಿ ಮಾಡಲಾಗಿತ್ತು.

1 / 8
ಈ ಮಹತ್ವದ ಬದಲಾವಣೆಯಲ್ಲಿ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿ ರೋಹಿತ್ ಶರ್ಮಾಗೆ ಪಟ್ಟ ಕಟ್ಟಲಾಗಿತ್ತು. ಅತ್ತ ರವಿಶಾಸ್ತ್ರಿ ಬದಲಿಗೆ ಹೊಸ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ನೇಮಿಸಲಾಗಿತ್ತು.

ಈ ಮಹತ್ವದ ಬದಲಾವಣೆಯಲ್ಲಿ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿ ರೋಹಿತ್ ಶರ್ಮಾಗೆ ಪಟ್ಟ ಕಟ್ಟಲಾಗಿತ್ತು. ಅತ್ತ ರವಿಶಾಸ್ತ್ರಿ ಬದಲಿಗೆ ಹೊಸ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ನೇಮಿಸಲಾಗಿತ್ತು.

2 / 8
ಏಷ್ಯಾಕಪ್, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಹಾಗೂ ಏಕದಿನ ವಿಶ್ವಕಪ್​ ಅನ್ನು ಮುಂಗಂಡು ಮಾಡಲಾಗಿದ್ದ ಈ ಬದಲಾವಣೆ ಇದುವರೆಗೆ ಫಲ ಕೊಟ್ಟಿಲ್ಲ. ಏಕೆಂದರೆ ಆಡಿರುವ ಎರಡು ಪ್ರಮುಖ ಟೂರ್ನಿಗಳ ಫಲಿತಾಂಶಗಳು ಹೊರಬಿದ್ದಿದೆ.

ಏಷ್ಯಾಕಪ್, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಹಾಗೂ ಏಕದಿನ ವಿಶ್ವಕಪ್​ ಅನ್ನು ಮುಂಗಂಡು ಮಾಡಲಾಗಿದ್ದ ಈ ಬದಲಾವಣೆ ಇದುವರೆಗೆ ಫಲ ಕೊಟ್ಟಿಲ್ಲ. ಏಕೆಂದರೆ ಆಡಿರುವ ಎರಡು ಪ್ರಮುಖ ಟೂರ್ನಿಗಳ ಫಲಿತಾಂಶಗಳು ಹೊರಬಿದ್ದಿದೆ.

3 / 8
ಏಷ್ಯಾಕಪ್​ನಲ್ಲಿ ಸೂಪರ್-4 ಹಂತದಿಂದ ಹೊರಬಿದ್ದಿದ್ದ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದಲ್ಲಿ ಮುಗ್ಗರಿಸಿದೆ. ಇದರೊಂದಿಗೆ 2013 ರ ಬಳಿಕ ಐಸಿಸಿ ಟ್ರೋಫಿ ಗೆಲ್ಲುವ ಟೀಮ್ ಇಂಡಿಯಾ ಕನಸು ಕೂಡ ಕಮರಿದೆ.

ಏಷ್ಯಾಕಪ್​ನಲ್ಲಿ ಸೂಪರ್-4 ಹಂತದಿಂದ ಹೊರಬಿದ್ದಿದ್ದ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಪಂದ್ಯದಲ್ಲಿ ಮುಗ್ಗರಿಸಿದೆ. ಇದರೊಂದಿಗೆ 2013 ರ ಬಳಿಕ ಐಸಿಸಿ ಟ್ರೋಫಿ ಗೆಲ್ಲುವ ಟೀಮ್ ಇಂಡಿಯಾ ಕನಸು ಕೂಡ ಕಮರಿದೆ.

4 / 8
ಇದಾಗ್ಯೂ ಇನ್ನೊಂದು ದೊಡ್ಡ ಕನಸು ಟೀಮ್ ಇಂಡಿಯಾ ಮುಂದಿದೆ. ಅದುವೇ ಏಕದಿನ ವಿಶ್ವಕಪ್. ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮುವುದು ಟೀಮ್ ಇಂಡಿಯಾ ಮುಂದಿರುವ ಅತೀ ದೊಡ್ಡ ಸವಾಲು.

ಇದಾಗ್ಯೂ ಇನ್ನೊಂದು ದೊಡ್ಡ ಕನಸು ಟೀಮ್ ಇಂಡಿಯಾ ಮುಂದಿದೆ. ಅದುವೇ ಏಕದಿನ ವಿಶ್ವಕಪ್. ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮುವುದು ಟೀಮ್ ಇಂಡಿಯಾ ಮುಂದಿರುವ ಅತೀ ದೊಡ್ಡ ಸವಾಲು.

5 / 8
ಆದರೆ ಕೇವಲ 4 ತಿಂಗಳುಗಳಲ್ಲಿ ಈ ದೊಡ್ಡ ಸವಾಲಿಗೆ ಸಜ್ಜಾಗುವುದೇ ಅದಕ್ಕಿಂತ ದೊಡ್ಡ ಸವಾಲು ಎನ್ನಬಹುದು. ಏಕೆಂದರೆ ಮುಂಬರುವ ಸರಣಿಗಳ ಮೂಲಕ ಟೀಮ್ ಇಂಡಿಯಾ ಬಲಿಷ್ಠ ತಂಡ ಕಟ್ಟಬೇಕಿದೆ. ಈ ತಂಡವನ್ನು ಯಶಸ್ವಿಯಾಗಿ ರೋಹಿತ್ ಶರ್ಮಾ ಮುನ್ನಡೆಸಬೇಕಿದೆ.

ಆದರೆ ಕೇವಲ 4 ತಿಂಗಳುಗಳಲ್ಲಿ ಈ ದೊಡ್ಡ ಸವಾಲಿಗೆ ಸಜ್ಜಾಗುವುದೇ ಅದಕ್ಕಿಂತ ದೊಡ್ಡ ಸವಾಲು ಎನ್ನಬಹುದು. ಏಕೆಂದರೆ ಮುಂಬರುವ ಸರಣಿಗಳ ಮೂಲಕ ಟೀಮ್ ಇಂಡಿಯಾ ಬಲಿಷ್ಠ ತಂಡ ಕಟ್ಟಬೇಕಿದೆ. ಈ ತಂಡವನ್ನು ಯಶಸ್ವಿಯಾಗಿ ರೋಹಿತ್ ಶರ್ಮಾ ಮುನ್ನಡೆಸಬೇಕಿದೆ.

6 / 8
ಅಂದರೆ ಏಕದಿನ ವಿಶ್ವಕಪ್​ವರೆಗೂ ರೋಹಿತ್ ಶರ್ಮಾ ನಾಯಕರಾಗಿ ಮುಂದುವರೆಯಲಿದ್ದಾರೆ. ಆದರೆ ಏಕದಿನ ವಿಶ್ವಕಪ್​ನಲ್ಲೂ ಭಾರತ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಲು ವಿಫಲವಾದರೆ ರೋಹಿತ್ ಶರ್ಮಾ ಹಾಗೂ ರಾಹುಲ್ ದ್ರಾವಿಡ್ ಅವರ ತಲೆದಂಡವಾಗುವುದು ಖಚಿತ.

ಅಂದರೆ ಏಕದಿನ ವಿಶ್ವಕಪ್​ವರೆಗೂ ರೋಹಿತ್ ಶರ್ಮಾ ನಾಯಕರಾಗಿ ಮುಂದುವರೆಯಲಿದ್ದಾರೆ. ಆದರೆ ಏಕದಿನ ವಿಶ್ವಕಪ್​ನಲ್ಲೂ ಭಾರತ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಲು ವಿಫಲವಾದರೆ ರೋಹಿತ್ ಶರ್ಮಾ ಹಾಗೂ ರಾಹುಲ್ ದ್ರಾವಿಡ್ ಅವರ ತಲೆದಂಡವಾಗುವುದು ಖಚಿತ.

7 / 8
ಹೀಗಾಗಿ ರೋಹಿತ್ ಶರ್ಮಾ ಹಾಗೂ ರಾಹುಲ್ ದ್ರಾವಿಡ್ ಪಾಲಿಗೆ ಏಕದಿನ ವಿಶ್ವಕಪ್ ಬಹುಮುಖ್ಯ. ಅದರಲ್ಲೂ ನಾಯಕತ್ವದೊಂದಿಗೆ ಇನ್ನೊಂದು ವರ್ಷ ಟೀಮ್ ಇಂಡಿಯಾ ಪರ ಆಡಬೇಕೆಂದರೆ ರೋಹಿತ್ ಶರ್ಮಾ ಏಕದಿನ ವಿಶ್ವಕಪ್ ಗೆಲ್ಲಲೇಬೇಕು. ಹೀಗಾಗಿಯೇ ಮುಂಬರುವ ಏಕದಿನ ವಿಶ್ವಕಪ್ ಹಿಟ್​ಮ್ಯಾನ್ ಪಾಲಿಗೆ ಕೊನೆಯ ಅವಕಾಶ ಎಂದು ವಿಶ್ಲೇಷಿಸಲಾಗುತ್ತಿದೆ.

ಹೀಗಾಗಿ ರೋಹಿತ್ ಶರ್ಮಾ ಹಾಗೂ ರಾಹುಲ್ ದ್ರಾವಿಡ್ ಪಾಲಿಗೆ ಏಕದಿನ ವಿಶ್ವಕಪ್ ಬಹುಮುಖ್ಯ. ಅದರಲ್ಲೂ ನಾಯಕತ್ವದೊಂದಿಗೆ ಇನ್ನೊಂದು ವರ್ಷ ಟೀಮ್ ಇಂಡಿಯಾ ಪರ ಆಡಬೇಕೆಂದರೆ ರೋಹಿತ್ ಶರ್ಮಾ ಏಕದಿನ ವಿಶ್ವಕಪ್ ಗೆಲ್ಲಲೇಬೇಕು. ಹೀಗಾಗಿಯೇ ಮುಂಬರುವ ಏಕದಿನ ವಿಶ್ವಕಪ್ ಹಿಟ್​ಮ್ಯಾನ್ ಪಾಲಿಗೆ ಕೊನೆಯ ಅವಕಾಶ ಎಂದು ವಿಶ್ಲೇಷಿಸಲಾಗುತ್ತಿದೆ.

8 / 8
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು