AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ದಿನಗಳಲ್ಲಿ ರೋಹಿತ್ ಶರ್ಮಾ ಭವಿಷ್ಯ ನಿರ್ಧಾರ

Rohit Sharma: ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ ಈ ವರ್ಷ ಆಡಲಿರುವುದು ಕೇವಲ 6 ಏಕದಿನ ಪಂದ್ಯಗಳನ್ನು ಮಾತ್ರ. ಅಂದರೆ ಅಭಿಮಾನಿಗಳ ಮುಂದೆ ಹಿಟ್​ಮ್ಯಾನ್ ಕೇವಲ 6 ದಿನಗಳು ಮಾತ್ರ ಬ್ಯಾಟ್ ಬೀಸಲಿದ್ದಾರೆ. ಈ ಆರು ಪಂದ್ಯಗಳು ರೋಹಿತ್ ಶರ್ಮಾ ಪಾಲಿಗೆ ನಿರ್ಣಾಯಕ.

ಝಾಹಿರ್ ಯೂಸುಫ್
|

Updated on: Oct 06, 2025 | 9:54 AM

Share
ಭಾರತ ಏಕದಿನ ತಂಡದ ನಾಯಕ ಬದಲಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮುನ್ನ ರೋಹಿತ್ ಶರ್ಮಾ (Rohit Sharma) ಸ್ಥಾನಕ್ಕೆ ಶುಭ್​ಮನ್ ಗಿಲ್ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಭಾರತೀಯ ಕ್ರಿಕೆಟ್​ನಲ್ಲಿ ಹಿಟ್​ಮ್ಯಾನ್ ಯುಗಾಂತ್ಯದ ಮುನ್ಸೂಚನೆ ಸಿಕ್ಕಿದೆ.

ಭಾರತ ಏಕದಿನ ತಂಡದ ನಾಯಕ ಬದಲಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮುನ್ನ ರೋಹಿತ್ ಶರ್ಮಾ (Rohit Sharma) ಸ್ಥಾನಕ್ಕೆ ಶುಭ್​ಮನ್ ಗಿಲ್ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಭಾರತೀಯ ಕ್ರಿಕೆಟ್​ನಲ್ಲಿ ಹಿಟ್​ಮ್ಯಾನ್ ಯುಗಾಂತ್ಯದ ಮುನ್ಸೂಚನೆ ಸಿಕ್ಕಿದೆ.

1 / 6
ಇದಾಗ್ಯೂ ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡುವ ಇರಾದೆಯಲ್ಲಿದ್ದಾರೆ. ಈ ವಿಶ್ವಕಪ್​​ಗೂ ಮುನ್ನ ಹಿಟ್​ಮ್ಯಾನ್ ಭರ್ಜರಿ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳು ರೋಹಿತ್ ಶರ್ಮಾ ಪಾಲಿಗೆ ನಿರ್ಣಾಯಕ.

ಇದಾಗ್ಯೂ ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡುವ ಇರಾದೆಯಲ್ಲಿದ್ದಾರೆ. ಈ ವಿಶ್ವಕಪ್​​ಗೂ ಮುನ್ನ ಹಿಟ್​ಮ್ಯಾನ್ ಭರ್ಜರಿ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳು ರೋಹಿತ್ ಶರ್ಮಾ ಪಾಲಿಗೆ ನಿರ್ಣಾಯಕ.

2 / 6
ಅಕ್ಟೋಬರ್ 19 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಭಾರತ ತಂಡವು ಸೌತ್ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. 

ಅಕ್ಟೋಬರ್ 19 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಭಾರತ ತಂಡವು ಸೌತ್ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. 

3 / 6
ಈ ಆರು ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡಿದರೆ ಮಾತ್ರ ರೋಹಿತ್ ಶರ್ಮಾ ಅವರನ್ನು ಏಕದಿನ ತಂಡದಲ್ಲಿ ಉಳಿಸಲಾಗುತ್ತದೆ. ಒಂದು ವೇಳೆ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳಲ್ಲಿ ಹಿಟ್​ಮ್ಯಾನ್ ವಿಫಲರಾದರೆ ಟೀಮ್ ಇಂಡಿಯಾದಿಂದ ಗೇಟ್ ಪಾಸ್ ಖಚಿತ.

ಈ ಆರು ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡಿದರೆ ಮಾತ್ರ ರೋಹಿತ್ ಶರ್ಮಾ ಅವರನ್ನು ಏಕದಿನ ತಂಡದಲ್ಲಿ ಉಳಿಸಲಾಗುತ್ತದೆ. ಒಂದು ವೇಳೆ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳಲ್ಲಿ ಹಿಟ್​ಮ್ಯಾನ್ ವಿಫಲರಾದರೆ ಟೀಮ್ ಇಂಡಿಯಾದಿಂದ ಗೇಟ್ ಪಾಸ್ ಖಚಿತ.

4 / 6
ಏಕೆಂದರೆ 2027ರ ಏಕದಿನ ವಿಶ್ವಕಪ್​ ಅನ್ನು ಮುಂದಿಟ್ಟುಕೊಂಡು ಭಾರತ ತಂಡವನ್ನು ರೂಪಿಸಬೇಕಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಪಷ್ಟಪಡಿಸಿದ್ದಾರೆ. ಇದೇ ಕಾರಣದಿಂದಾಗಿ ಏಕದಿನ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಲಾಗಿದೆ.

ಏಕೆಂದರೆ 2027ರ ಏಕದಿನ ವಿಶ್ವಕಪ್​ ಅನ್ನು ಮುಂದಿಟ್ಟುಕೊಂಡು ಭಾರತ ತಂಡವನ್ನು ರೂಪಿಸಬೇಕಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಪಷ್ಟಪಡಿಸಿದ್ದಾರೆ. ಇದೇ ಕಾರಣದಿಂದಾಗಿ ಏಕದಿನ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಲಾಗಿದೆ.

5 / 6
ಒಂದು ವೇಳೆ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ವಿಫಲರಾದರೆ, ನವೆಂಬರ್-ಡಿಸೆಂಬರ್​ನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಮತ್ತೊಂದು ಚಾನ್ಸ್ ನೀಡಲಾಗುತ್ತದೆ. ಈ ಸರಣಿಯಲ್ಲೂ ನಿರೀಕ್ಷಿತ ಪ್ರದರ್ಶನ ನೀಡದಿದ್ದರೆ 2026ರ ಸರಣಿಗಳಿಗೆ ಅವರನ್ನು ಆಯ್ಕೆ ಮಾಡುವುದು ಡೌಟ್. ಹೀಗಾಗಿಯೇ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳು ರೋಹಿತ್ ಶರ್ಮಾ ಅವರ​  ಭವಿಷ್ಯ ನಿರ್ಧರಿಸಲಿದೆ ಎನ್ನಬಹುದು.

ಒಂದು ವೇಳೆ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ವಿಫಲರಾದರೆ, ನವೆಂಬರ್-ಡಿಸೆಂಬರ್​ನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಮತ್ತೊಂದು ಚಾನ್ಸ್ ನೀಡಲಾಗುತ್ತದೆ. ಈ ಸರಣಿಯಲ್ಲೂ ನಿರೀಕ್ಷಿತ ಪ್ರದರ್ಶನ ನೀಡದಿದ್ದರೆ 2026ರ ಸರಣಿಗಳಿಗೆ ಅವರನ್ನು ಆಯ್ಕೆ ಮಾಡುವುದು ಡೌಟ್. ಹೀಗಾಗಿಯೇ ಈ ವರ್ಷ ನಡೆಯಲಿರುವ 6 ಏಕದಿನ ಪಂದ್ಯಗಳು ರೋಹಿತ್ ಶರ್ಮಾ ಅವರ​  ಭವಿಷ್ಯ ನಿರ್ಧರಿಸಲಿದೆ ಎನ್ನಬಹುದು.

6 / 6
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್
‘ಧುರಂಧರ್​ಗಿಂತ ಸೀಕ್ವೆಲ್ ಇನ್ನೂ ಪವರ್​​ಫುಲ್; ಯಾಮಿ ಗೌತಮ್
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್