AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: 3ನೇ ದಿನದಾಟದಲ್ಲಿ ಮೈದಾನಕ್ಕಿಳಿಯದ ರೋಹಿತ್ ಶರ್ಮಾ

Rohit Sharma: ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಹಿಟ್​ಮ್ಯಾನ್ ಶತಕ ಸಿಡಿಸಿ ಮಿಂಚಿದ್ದರು. ಆದರೆ ಮೂರನೇ ದಿನದಾಟದ ಫೀಲ್ಡಿಂಗ್ ವೇಳೆ ರೋಹಿತ್ ಶರ್ಮಾ ಕಾಣಿಸಿಕೊಂಡಿಲ್ಲ.

TV9 Web
| Edited By: |

Updated on:Mar 09, 2024 | 12:49 PM

Share
ಧರ್ಮಶಾಲಾದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ 3ನೇ ದಿನದಾಟದಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹೊರಗುಳಿದಿದ್ದಾರೆ. 2ನೇ ದಿನದಾಟದಲ್ಲಿ ಶತಕ ಸಿಡಿಸಿ ಮಿಂಚಿದ್ದ ಹಿಟ್​ಮ್ಯಾನ್ ಬೆನ್ನು ನೋವಿನ ಕಾರಣ ಶನಿವಾರ ಮೈದಾನಕ್ಕಿಳಿದಿಲ್ಲ.

ಧರ್ಮಶಾಲಾದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ 3ನೇ ದಿನದಾಟದಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹೊರಗುಳಿದಿದ್ದಾರೆ. 2ನೇ ದಿನದಾಟದಲ್ಲಿ ಶತಕ ಸಿಡಿಸಿ ಮಿಂಚಿದ್ದ ಹಿಟ್​ಮ್ಯಾನ್ ಬೆನ್ನು ನೋವಿನ ಕಾರಣ ಶನಿವಾರ ಮೈದಾನಕ್ಕಿಳಿದಿಲ್ಲ.

1 / 5
ಟೀಮ್ ಇಂಡಿಯಾದ ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ರೋಹಿತ್ ಶರ್ಮಾ 162 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 103 ರನ್ ಬಾರಿಸಿದ್ದರು. ಈ ವೇಳೆ ಬೆನ್ನು ನೋವಿನ ಸಮಸ್ಯೆಗೆ ತುತ್ತಾಗಿದ್ದರು. ಇದೇ ಕಾರಣದಿಂದಾಗಿ ಮೂರನೇ ದಿನದಾಟದಲ್ಲಿ ಟೀಮ್ ಇಂಡಿಯಾ ಫೀಲ್ಡಿಂಗ್​ ವೇಳೆ ರೋಹಿತ್ ಶರ್ಮಾ ಕಾಣಿಸಿಕೊಂಡಿಲ್ಲ.

ಟೀಮ್ ಇಂಡಿಯಾದ ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ರೋಹಿತ್ ಶರ್ಮಾ 162 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 103 ರನ್ ಬಾರಿಸಿದ್ದರು. ಈ ವೇಳೆ ಬೆನ್ನು ನೋವಿನ ಸಮಸ್ಯೆಗೆ ತುತ್ತಾಗಿದ್ದರು. ಇದೇ ಕಾರಣದಿಂದಾಗಿ ಮೂರನೇ ದಿನದಾಟದಲ್ಲಿ ಟೀಮ್ ಇಂಡಿಯಾ ಫೀಲ್ಡಿಂಗ್​ ವೇಳೆ ರೋಹಿತ್ ಶರ್ಮಾ ಕಾಣಿಸಿಕೊಂಡಿಲ್ಲ.

2 / 5
ಇನ್ನು ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಉಪನಾಯಕ ಜಸ್​ಪ್ರೀತ್ ಬುಮ್ರಾ ಮುನ್ನಡೆಸುತ್ತಿದ್ದಾರೆ. ಅದರಂತೆ ಬುಮ್ರಾ ನಾಯಕತ್ವದಲ್ಲಿ ಭಾರತ ತಂಡ ಕಣಕ್ಕಿಳಿದಿದೆ. ಅಲ್ಲದೆ ಇಂಗ್ಲೆಂಡ್ ತಂಡದ ದ್ವಿತೀಯ ಇನಿಂಗ್ಸ್​ನಲ್ಲಿ ಭಾರತೀಯ ಬೌಲರ್​ಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ.

ಇನ್ನು ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಉಪನಾಯಕ ಜಸ್​ಪ್ರೀತ್ ಬುಮ್ರಾ ಮುನ್ನಡೆಸುತ್ತಿದ್ದಾರೆ. ಅದರಂತೆ ಬುಮ್ರಾ ನಾಯಕತ್ವದಲ್ಲಿ ಭಾರತ ತಂಡ ಕಣಕ್ಕಿಳಿದಿದೆ. ಅಲ್ಲದೆ ಇಂಗ್ಲೆಂಡ್ ತಂಡದ ದ್ವಿತೀಯ ಇನಿಂಗ್ಸ್​ನಲ್ಲಿ ಭಾರತೀಯ ಬೌಲರ್​ಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ.

3 / 5
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್  ಝಾಕ್ ಕ್ರಾಲಿ (79) ಅವರ ಅರ್ಧಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 218 ರನ್​ ಕಲೆಹಾಕಿತ್ತು. ಇದಾದ ಬಳಿಕ ಮೊದಲ ಇನಿಂಗ್ಸ್​ ಆರಂಭಿಸಿದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ (103) ಹಾಗೂ ಶುಭ್​ಮನ್ ಗಿಲ್ (110) ಶತಕ ಸಿಡಿಸಿದ್ದರು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಝಾಕ್ ಕ್ರಾಲಿ (79) ಅವರ ಅರ್ಧಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 218 ರನ್​ ಕಲೆಹಾಕಿತ್ತು. ಇದಾದ ಬಳಿಕ ಮೊದಲ ಇನಿಂಗ್ಸ್​ ಆರಂಭಿಸಿದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ (103) ಹಾಗೂ ಶುಭ್​ಮನ್ ಗಿಲ್ (110) ಶತಕ ಸಿಡಿಸಿದ್ದರು.

4 / 5
ಈ ಶತಕಗಳ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 477 ರನ್​ ಕಲೆಹಾಕಿದೆ. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 259 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಇದೀಗ ಇಂಗ್ಲೆಂಡ್ ದ್ವಿತೀಯ ಇನಿಂಗ್ಸ್​ ಬ್ಯಾಟಿಂಗ್ ಮಾಡುತ್ತಿದೆ. ಅಲ್ಲದೆ ಭೋಜನಾ ವಿರಾಮದ ಮುಕ್ತಾಯದ ವೇಳೆಗೆ ಇಂಗ್ಲೆಂಡ್ ತಂಡ 5 ವಿಕೆಟ್ ಕಳೆದುಕೊಂಡು 103 ರನ್ ಕಲೆಹಾಕಿದೆ.

ಈ ಶತಕಗಳ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 477 ರನ್​ ಕಲೆಹಾಕಿದೆ. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 259 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಇದೀಗ ಇಂಗ್ಲೆಂಡ್ ದ್ವಿತೀಯ ಇನಿಂಗ್ಸ್​ ಬ್ಯಾಟಿಂಗ್ ಮಾಡುತ್ತಿದೆ. ಅಲ್ಲದೆ ಭೋಜನಾ ವಿರಾಮದ ಮುಕ್ತಾಯದ ವೇಳೆಗೆ ಇಂಗ್ಲೆಂಡ್ ತಂಡ 5 ವಿಕೆಟ್ ಕಳೆದುಕೊಂಡು 103 ರನ್ ಕಲೆಹಾಕಿದೆ.

5 / 5

Published On - 12:26 pm, Sat, 9 March 24

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್