AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಪಂದ್ಯ ಮುಗಿದ ಬಳಿಕ ತಂಡದ ಸೋಲಿಗೆ ನಾಯಕ ರೋಹಿತ್ ಶರ್ಮಾ ನೀಡಿದ ಕಾರಣವೇನು ಗೊತ್ತೇ?

India vs Australia 3rd ODI: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ ಸರಣಿ ಕಳೆದುಕೊಂಡಿತು. ಪಂದ್ಯದ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಏನಂದ್ರು ನೋಡಿ.

Vinay Bhat
|

Updated on:Mar 23, 2023 | 8:30 AM

Share
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಕಳೆದುಕೊಳ್ಳುವ ಮೂಲಕ ಭಾರತ ತವರಿನಲ್ಲಿ ಭಾರೀ ಮುಖಭಂಗ ಅನುಭವಿಸಿದೆ. ಬುಧವಾರ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ನಿರ್ಣಾಯಕ ಮೂರನೇ ಏಕದಿನ ಪಂದ್ಯದಲ್ಲಿ ಸಂಪೂರ್ಣ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಟೀಮ್ ಇಂಡಿಯಾ 1-2 ಅಂತರದಿಂದ ಸರಣಿ ಕಳೆದುಕೊಂಡಿದೆ.

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಕಳೆದುಕೊಳ್ಳುವ ಮೂಲಕ ಭಾರತ ತವರಿನಲ್ಲಿ ಭಾರೀ ಮುಖಭಂಗ ಅನುಭವಿಸಿದೆ. ಬುಧವಾರ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ನಿರ್ಣಾಯಕ ಮೂರನೇ ಏಕದಿನ ಪಂದ್ಯದಲ್ಲಿ ಸಂಪೂರ್ಣ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಟೀಮ್ ಇಂಡಿಯಾ 1-2 ಅಂತರದಿಂದ ಸರಣಿ ಕಳೆದುಕೊಂಡಿದೆ.

1 / 8
ಅಂದಹಾಗೆ 2019ರ ಬಳಿಕ ಭಾರತ ತಂಡ ತಾಯ್ನಾಡಿನಲ್ಲಿ ಸೋತ ಮೊದಲ ಒಡಿಐ ಸರಣಿ ಇದಾಗಿದೆ. ಇದರೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಒಡಿಐ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ನಂ.1 ಪಟ್ಟವನ್ನು ಕಳೆದುಕೊಂಡಿದೆ. 21 ರನ್‌ಗಳ ಜಯ ದಾಖಲಿಸಿದ ಆಸ್ಟ್ರೇಲಿಯಾ ತಂಡ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಅಂದಹಾಗೆ 2019ರ ಬಳಿಕ ಭಾರತ ತಂಡ ತಾಯ್ನಾಡಿನಲ್ಲಿ ಸೋತ ಮೊದಲ ಒಡಿಐ ಸರಣಿ ಇದಾಗಿದೆ. ಇದರೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಒಡಿಐ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ನಂ.1 ಪಟ್ಟವನ್ನು ಕಳೆದುಕೊಂಡಿದೆ. 21 ರನ್‌ಗಳ ಜಯ ದಾಖಲಿಸಿದ ಆಸ್ಟ್ರೇಲಿಯಾ ತಂಡ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

2 / 8
ಪಂದ್ಯ ಮುಗಿದ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಇದು ದೊಡ್ಡ ಮೊತ್ತದ ಟಾರ್ಗೆಟ್ ಆಗಿತ್ತು ಎಂದು ನನಗೆ ಅನಿಸುತ್ತಿಲ್ಲ. ನಿಜ ಹೇಳಬೇಕೆಂದರೆ ನಾವು ಬ್ಯಾಟಿಂಗ್​ನಲ್ಲಿ ವೈಫಲ್ಯ ಅನುಭವಿಸಿದೆವು. ಜೊತೆಯಾಟ ಎಂಬುದು ಬಹಳ ಮುಖ್ಯ. ಇಂದಿನ ಪಂದ್ಯದಲ್ಲಿ ನಾವದನ್ನು ಕಲೆಹಾಕಲು ಎಡವಿದೆವು ಎಂದು ಹೇಳಿದ್ದಾರೆ.

ಪಂದ್ಯ ಮುಗಿದ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಇದು ದೊಡ್ಡ ಮೊತ್ತದ ಟಾರ್ಗೆಟ್ ಆಗಿತ್ತು ಎಂದು ನನಗೆ ಅನಿಸುತ್ತಿಲ್ಲ. ನಿಜ ಹೇಳಬೇಕೆಂದರೆ ನಾವು ಬ್ಯಾಟಿಂಗ್​ನಲ್ಲಿ ವೈಫಲ್ಯ ಅನುಭವಿಸಿದೆವು. ಜೊತೆಯಾಟ ಎಂಬುದು ಬಹಳ ಮುಖ್ಯ. ಇಂದಿನ ಪಂದ್ಯದಲ್ಲಿ ನಾವದನ್ನು ಕಲೆಹಾಕಲು ಎಡವಿದೆವು ಎಂದು ಹೇಳಿದ್ದಾರೆ.

3 / 8
ಪಂದ್ಯ ಆರಂಭವಾದ ಬಳಿಕ ಒಬ್ಬ ಬ್ಯಾಟರ್ ಸರಾಗವಾಗಿ ರನ್ ಕಲೆಹಾಕುತ್ತಾ ಅಂತಿಮ ಹಂತದ ವರೆಗೆ ಪಂದ್ಯವನ್ನು ಕೊಂಡೊಯ್ಯಬೇಕು. ಆದರೆ, ನಮ್ಮ ತಂಡದಲ್ಲಿ ಇಂದು ಅದು ಸಾಧ್ಯವಾಗಲಿಲ್ಲ. ಕಳೆದ ಜನವರಿಯಿಂದ ಆಡಿದ ಒಂಬತ್ತು ಏಕದಿನ ಪಂದ್ಯಗಳಲ್ಲಿ ಅನೇಕ ಪಾಸಿಟಿವ್ ವಿಷಯಗಳನ್ನನು ಕಲಿತಿದ್ದೇವೆ - ರೋಹಿತ್ ಶರ್ಮಾ.

ಪಂದ್ಯ ಆರಂಭವಾದ ಬಳಿಕ ಒಬ್ಬ ಬ್ಯಾಟರ್ ಸರಾಗವಾಗಿ ರನ್ ಕಲೆಹಾಕುತ್ತಾ ಅಂತಿಮ ಹಂತದ ವರೆಗೆ ಪಂದ್ಯವನ್ನು ಕೊಂಡೊಯ್ಯಬೇಕು. ಆದರೆ, ನಮ್ಮ ತಂಡದಲ್ಲಿ ಇಂದು ಅದು ಸಾಧ್ಯವಾಗಲಿಲ್ಲ. ಕಳೆದ ಜನವರಿಯಿಂದ ಆಡಿದ ಒಂಬತ್ತು ಏಕದಿನ ಪಂದ್ಯಗಳಲ್ಲಿ ಅನೇಕ ಪಾಸಿಟಿವ್ ವಿಷಯಗಳನ್ನನು ಕಲಿತಿದ್ದೇವೆ - ರೋಹಿತ್ ಶರ್ಮಾ.

4 / 8
ನಾವು ಯಾವ ವಿಭಾಗಗಳಲ್ಲಿ ಇನ್ನಷ್ಟು ಸುಧಾರಿಸಬೇಕು ಎಂಬುದನ್ನು ಅರಿಯಬೇಕಿದೆ. ಈ ಸರಣಿಯಿಂದ ಅನೇಕ ವಿಚಾರಗಳನ್ನು ಕಲಿತಿದ್ದೇವೆ. ಕ್ರೆಡಿಟ್ ಆಸ್ಟ್ರೇಲಿಯಾ ತಂಡಕ್ಕೆ ಸಲ್ಲಬೇಕು. ಇಬ್ಬರೂ ಸ್ಪಿನ್ನರ್​​ಗಳು ಅತ್ಯುತ್ತಮ ಪ್ರದರ್ಶನ ತೋರಿದರು ಎಂದು ರೋಹಿತ್ ಹೇಳಿದ್ದಾರೆ.

ನಾವು ಯಾವ ವಿಭಾಗಗಳಲ್ಲಿ ಇನ್ನಷ್ಟು ಸುಧಾರಿಸಬೇಕು ಎಂಬುದನ್ನು ಅರಿಯಬೇಕಿದೆ. ಈ ಸರಣಿಯಿಂದ ಅನೇಕ ವಿಚಾರಗಳನ್ನು ಕಲಿತಿದ್ದೇವೆ. ಕ್ರೆಡಿಟ್ ಆಸ್ಟ್ರೇಲಿಯಾ ತಂಡಕ್ಕೆ ಸಲ್ಲಬೇಕು. ಇಬ್ಬರೂ ಸ್ಪಿನ್ನರ್​​ಗಳು ಅತ್ಯುತ್ತಮ ಪ್ರದರ್ಶನ ತೋರಿದರು ಎಂದು ರೋಹಿತ್ ಹೇಳಿದ್ದಾರೆ.

5 / 8
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 49 ಓವರ್​ಗಳಲ್ಲಿ 269 ರನ್​ಗೆ ಆಲೌಟ್ ಆಯಿತು. ತಂಡದ ಪರ ಮಿಚೆಲ್ ಮಾರ್ಶ್ 47 ಎಸೆತಗಳಲ್ಲಿ 47 ರನ್ ಗಳಿಸಿದರೆ ಅಲೆಕ್ಸ್ ಕ್ಯಾರಿ 38, ಟ್ರಾವಿಸ್ ಹೆಡ್ 33 ರನ್ ಬಾರಿಸಿದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 49 ಓವರ್​ಗಳಲ್ಲಿ 269 ರನ್​ಗೆ ಆಲೌಟ್ ಆಯಿತು. ತಂಡದ ಪರ ಮಿಚೆಲ್ ಮಾರ್ಶ್ 47 ಎಸೆತಗಳಲ್ಲಿ 47 ರನ್ ಗಳಿಸಿದರೆ ಅಲೆಕ್ಸ್ ಕ್ಯಾರಿ 38, ಟ್ರಾವಿಸ್ ಹೆಡ್ 33 ರನ್ ಬಾರಿಸಿದರು.

6 / 8
ಭಾರತ ಪರ ಕುಲ್ದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ 3 ವಿಕೆಟ್ ಕಿತ್ತರೆ ಮೊಹಮ್ಮದ್ ಸಿರಾಜ್ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದರು.

ಭಾರತ ಪರ ಕುಲ್ದೀಪ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ 3 ವಿಕೆಟ್ ಕಿತ್ತರೆ ಮೊಹಮ್ಮದ್ ಸಿರಾಜ್ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದರು.

7 / 8
ಟಾರ್ಗೆಟ್ ಬೆನ್ನಟ್ಟಿದ ಟೀಮ್ ಇಂಡಿಯಾ 49.1 ಓವರ್​​ಗಳಲ್ಲಿ 248 ರನ್​ಗಳಿಗೆ ಆಲೌಟ್ ಆಗಿ ಸೋಲುಂಡಿತು. ವಿರಾಟ್ ಕೊಹ್ಲಿ 54 ರನ್ ಹಾಗೂ ಹಾರ್ದಿಕ್ ಪಾಂಡ್ಯ ಗಳಿಸಿದ 40 ರನ್ ತಂಡದ ಜಯಕ್ಕೆ ಸಾಲಲಿಲ್ಲ. ಆಸೀಸ್ ಪರ ಆ್ಯಡಂ ಝಂಪಾ 4 ವಿಕೆಟ್ ಪಡೆದರು. 21 ರನ್​ಗಳ ಗೆಲುವಿನೊಂದಿಗೆ ಕಾಂಗರೂ ಪಡೆ ಸರಣಿ ಜಯಿಸಿತು.

ಟಾರ್ಗೆಟ್ ಬೆನ್ನಟ್ಟಿದ ಟೀಮ್ ಇಂಡಿಯಾ 49.1 ಓವರ್​​ಗಳಲ್ಲಿ 248 ರನ್​ಗಳಿಗೆ ಆಲೌಟ್ ಆಗಿ ಸೋಲುಂಡಿತು. ವಿರಾಟ್ ಕೊಹ್ಲಿ 54 ರನ್ ಹಾಗೂ ಹಾರ್ದಿಕ್ ಪಾಂಡ್ಯ ಗಳಿಸಿದ 40 ರನ್ ತಂಡದ ಜಯಕ್ಕೆ ಸಾಲಲಿಲ್ಲ. ಆಸೀಸ್ ಪರ ಆ್ಯಡಂ ಝಂಪಾ 4 ವಿಕೆಟ್ ಪಡೆದರು. 21 ರನ್​ಗಳ ಗೆಲುವಿನೊಂದಿಗೆ ಕಾಂಗರೂ ಪಡೆ ಸರಣಿ ಜಯಿಸಿತು.

8 / 8

Published On - 7:55 am, Thu, 23 March 23

Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ