AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ವಿರುದ್ಧದ ಸೋಲಿನ ಬಳಿಕ ರೋಹಿತ್ ಶರ್ಮಾ ಆಡಿದ ಮಾತುಗಳೇನು ನೋಡಿ

Rohit Sharma Post Match Presentation, IND vs BAN: ಏಷ್ಯಾಕಪ್​ನ ಸೂಪರ್-4 ಹಂತದ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಸೋಲು ಅನುಭವಿಸಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ನಮ್ಮ ಹುಡುಗರಿಗೆ ಆಟದ ಸಮಯವನ್ನು ನೀಡಿದೆವು ಎಂದಿದ್ದಾರೆ.

Vinay Bhat
|

Updated on: Sep 16, 2023 | 7:32 AM

Share
ಏಷ್ಯಾಕಪ್ 2023 ಫೈನಲ್​ಗು ಮುನ್ನ ಸೂಪರ್-4 ಹಂತದ ಕೊನೆಯ ಪಂದ್ಯದಲ್ಲಿ ಕಣಕ್ಕಿಳಿದ ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಸೋಲು ಕಂಡಿತು. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ರೋಚಕ ಪಂದ್ಯದಲ್ಲಿ ರೋಹಿತ್ ಪಡೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು.

ಏಷ್ಯಾಕಪ್ 2023 ಫೈನಲ್​ಗು ಮುನ್ನ ಸೂಪರ್-4 ಹಂತದ ಕೊನೆಯ ಪಂದ್ಯದಲ್ಲಿ ಕಣಕ್ಕಿಳಿದ ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಸೋಲು ಕಂಡಿತು. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ರೋಚಕ ಪಂದ್ಯದಲ್ಲಿ ರೋಹಿತ್ ಪಡೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು.

1 / 7
ತನ್ನ ಬೆಂಚ್ ಸ್ಟ್ರೆಂತ್ ಅನ್ನು ಪರೀಕ್ಷಿಸುವ ನಿಟ್ಟಿನಲ್ಲಿ ವಿರಾಟ್ ಕೊಹ್ಲಿ, ಜಸ್​ಪ್ರಿತ್ ಬುಮ್ರಾ ಸೇರಿದಂತೆ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಕಣಕ್ಕಿಳಿಯಿತು. ಆದರೆ, ನಿರೀಕ್ಷೆಗೆ ತಕ್ಕ ಪ್ರದರ್ಶನ ತೋರಲಿಲ್ಲ. ಪಂದ್ಯ ಮುಗಿದ ಬಳಿಕ ರೋಹಿತ್ ಶರ್ಮಾ ಮಾತನಾಡಿದ್ದು, ಏನು ಹೇಳಿದ್ದಾರೆ ನೋಡಿ.

ತನ್ನ ಬೆಂಚ್ ಸ್ಟ್ರೆಂತ್ ಅನ್ನು ಪರೀಕ್ಷಿಸುವ ನಿಟ್ಟಿನಲ್ಲಿ ವಿರಾಟ್ ಕೊಹ್ಲಿ, ಜಸ್​ಪ್ರಿತ್ ಬುಮ್ರಾ ಸೇರಿದಂತೆ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ ಭಾರತ ತಂಡ ಬಾಂಗ್ಲಾದೇಶ ವಿರುದ್ಧ ಕಣಕ್ಕಿಳಿಯಿತು. ಆದರೆ, ನಿರೀಕ್ಷೆಗೆ ತಕ್ಕ ಪ್ರದರ್ಶನ ತೋರಲಿಲ್ಲ. ಪಂದ್ಯ ಮುಗಿದ ಬಳಿಕ ರೋಹಿತ್ ಶರ್ಮಾ ಮಾತನಾಡಿದ್ದು, ಏನು ಹೇಳಿದ್ದಾರೆ ನೋಡಿ.

2 / 7
ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ನಮ್ಮ ಹುಡುಗರಿಗೆ ಆಟದ ಸಮಯವನ್ನು ನೀಡಿದೆವು. ವಿಶ್ವಕಪ್ ಆಡಲಿರುವ ಕೆಲ ಆಟಗಾರರನ್ನು ಇಂದು ಆಡಿಸಿದ್ದೇವೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ನಮ್ಮ ಹುಡುಗರಿಗೆ ಆಟದ ಸಮಯವನ್ನು ನೀಡಿದೆವು. ವಿಶ್ವಕಪ್ ಆಡಲಿರುವ ಕೆಲ ಆಟಗಾರರನ್ನು ಇಂದು ಆಡಿಸಿದ್ದೇವೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

3 / 7
ಮಾತು ಮುಂದುವರೆಸಿದ ರೋಹಿತ್, ಅಕ್ಷರ್ ಪಟೇಲ್ ಆಟವನ್ನು ಹಾಡಿಹೊಗಳಿದ್ದಾರೆ. ಅಕ್ಷರ್ ಅದ್ಭುತವಾಗಿ ಬ್ಯಾಟ್ ಮಾಡಿದರು. ಆದರೆ, ಅವರಿಗೆ ಪಂದ್ಯವನ್ನು ಮುಗಿಸಲು ಸಾಧ್ಯವಾಗಲಿಲ್ಲ. ಅವರು ಈ ಪಂದ್ಯದಲ್ಲಿ ಪ್ರಮುಖ ಪಾತ್ರ ವಹಿಸಿದರು. ಆದರೆ ಕ್ರೆಡಿಟ್ ಬಾಂಗ್ಲಾದೇಶ ಬೌಲರ್‌ಗಳಿಗೆ ಸಲ್ಲಬೇಕು ಎಂಬುದು ರೋಹಿತ್ ಮಾತು.

ಮಾತು ಮುಂದುವರೆಸಿದ ರೋಹಿತ್, ಅಕ್ಷರ್ ಪಟೇಲ್ ಆಟವನ್ನು ಹಾಡಿಹೊಗಳಿದ್ದಾರೆ. ಅಕ್ಷರ್ ಅದ್ಭುತವಾಗಿ ಬ್ಯಾಟ್ ಮಾಡಿದರು. ಆದರೆ, ಅವರಿಗೆ ಪಂದ್ಯವನ್ನು ಮುಗಿಸಲು ಸಾಧ್ಯವಾಗಲಿಲ್ಲ. ಅವರು ಈ ಪಂದ್ಯದಲ್ಲಿ ಪ್ರಮುಖ ಪಾತ್ರ ವಹಿಸಿದರು. ಆದರೆ ಕ್ರೆಡಿಟ್ ಬಾಂಗ್ಲಾದೇಶ ಬೌಲರ್‌ಗಳಿಗೆ ಸಲ್ಲಬೇಕು ಎಂಬುದು ರೋಹಿತ್ ಮಾತು.

4 / 7
ಶುಭ್​ಮನ್ ಗಿಲ್ ಅವರ ಶತಕ ಅದ್ಭುತವಾಗಿತ್ತು. ಅವರು ಸದಾ ತಮ್ಮ ಆಟವನ್ನು ಬೆಂಬಲಿಸುತ್ತಾರೆ. ತಾನು ಹೇಗೆ ಆಡಬೇಕು ಎಂಬುದು ಆತನಿಗೆ ಚೆನ್ನಾಗಿ ತಿಳಿದಿದೆ. ಅವರು ತಂಡಕ್ಕಾಗಿ ಏನು ಮಾಡಲು ಬಯಸುತ್ತಾರೆ ಎಂಬುದರ ಬಗ್ಗೆ ಸ್ಪಷ್ಟತೆ ಇದೆ. ಕಳೆದ ವರ್ಷ ಅವರ ಫಾರ್ಮ್ ನೋಡಿ. ಹೊಸ ಚೆಂಡಿನಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ್ದಾರೆ. ನಿಜವಾಗಿಯೂ ಅವರು ಕಷ್ಟಪಟ್ಟು ಕೆಲಸ ಮಾಡಿದ್ದಾರೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಶುಭ್​ಮನ್ ಗಿಲ್ ಅವರ ಶತಕ ಅದ್ಭುತವಾಗಿತ್ತು. ಅವರು ಸದಾ ತಮ್ಮ ಆಟವನ್ನು ಬೆಂಬಲಿಸುತ್ತಾರೆ. ತಾನು ಹೇಗೆ ಆಡಬೇಕು ಎಂಬುದು ಆತನಿಗೆ ಚೆನ್ನಾಗಿ ತಿಳಿದಿದೆ. ಅವರು ತಂಡಕ್ಕಾಗಿ ಏನು ಮಾಡಲು ಬಯಸುತ್ತಾರೆ ಎಂಬುದರ ಬಗ್ಗೆ ಸ್ಪಷ್ಟತೆ ಇದೆ. ಕಳೆದ ವರ್ಷ ಅವರ ಫಾರ್ಮ್ ನೋಡಿ. ಹೊಸ ಚೆಂಡಿನಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ್ದಾರೆ. ನಿಜವಾಗಿಯೂ ಅವರು ಕಷ್ಟಪಟ್ಟು ಕೆಲಸ ಮಾಡಿದ್ದಾರೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

5 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 265 ರನ್ ಗಳಿಸಿತು. ನಾಯಕ ಶಕಿಬ್ ಅಲ್ ಹಸನ್ 85 ಎಸೆತಗಳಲ್ಲಿ 80 ರನ್ ಬಾರಿಸಿದರೆ, ತೌಹಿದ್ ಹ್ರಿದೈ 54 ಮತ್ತು ನಸುಮ್ ಅಹ್ಮದ್ 44 ರನ್ ಗಳಿಸಿದರು. ಭಾರತ ಪರ ಶಾರ್ದೂಲ್ ಥಾಕೂರ್ 3, ಮೊಹಮ್ಮದ್ ಶಮಿ 2 ವಿಕೆಟ್ ಪಡೆದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 265 ರನ್ ಗಳಿಸಿತು. ನಾಯಕ ಶಕಿಬ್ ಅಲ್ ಹಸನ್ 85 ಎಸೆತಗಳಲ್ಲಿ 80 ರನ್ ಬಾರಿಸಿದರೆ, ತೌಹಿದ್ ಹ್ರಿದೈ 54 ಮತ್ತು ನಸುಮ್ ಅಹ್ಮದ್ 44 ರನ್ ಗಳಿಸಿದರು. ಭಾರತ ಪರ ಶಾರ್ದೂಲ್ ಥಾಕೂರ್ 3, ಮೊಹಮ್ಮದ್ ಶಮಿ 2 ವಿಕೆಟ್ ಪಡೆದರು.

6 / 7
ಟಾರ್ಗೆಟ್ ಬೆನ್ನಟ್ಟಿದ ಭಾರತ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ಶುಭ್​ಮನ್ 43 ಓವರ್ ವರೆಗೆ ಆಡಿದ್ದು ಬಿಟ್ಟರೆ ಉಳಿದ ಬ್ಯಾಟರ್​ಗಳೆಲ್ಲ ವೈಫಲ್ಯ ಅನುಭವಿಸಿದರು. ಗಿಲ್ 133 ಎಸೆತಗಳಲ್ಲಿ 121 ರನ್ ಸಿಡಿಸಿದರು. ಅಂತಿಮ ಹಂತದಲ್ಲಿ ಅಕ್ಷರ್ ಪಟೇಲ್ 42 ರನ್ ಬಾರಿಸಿದರೂ ಗೆಲುವು ಸಾಧ್ಯವಾಗಲಿಲ್ಲ. ಭಾರತ 49.5 ಓವರ್​ಗಳಲ್ಲಿ 259 ರನ್​ಗೆ ಆಲೌಟ್ ಆಯಿತು. ಬಾಂಗ್ಲಾ ಪರ ಮುಸ್ತಫಿಜುರ್ ರಹ್ಮಾನ್ 3 ವಿಕೆಟ್ ಪಡೆದರು.

ಟಾರ್ಗೆಟ್ ಬೆನ್ನಟ್ಟಿದ ಭಾರತ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ಶುಭ್​ಮನ್ 43 ಓವರ್ ವರೆಗೆ ಆಡಿದ್ದು ಬಿಟ್ಟರೆ ಉಳಿದ ಬ್ಯಾಟರ್​ಗಳೆಲ್ಲ ವೈಫಲ್ಯ ಅನುಭವಿಸಿದರು. ಗಿಲ್ 133 ಎಸೆತಗಳಲ್ಲಿ 121 ರನ್ ಸಿಡಿಸಿದರು. ಅಂತಿಮ ಹಂತದಲ್ಲಿ ಅಕ್ಷರ್ ಪಟೇಲ್ 42 ರನ್ ಬಾರಿಸಿದರೂ ಗೆಲುವು ಸಾಧ್ಯವಾಗಲಿಲ್ಲ. ಭಾರತ 49.5 ಓವರ್​ಗಳಲ್ಲಿ 259 ರನ್​ಗೆ ಆಲೌಟ್ ಆಯಿತು. ಬಾಂಗ್ಲಾ ಪರ ಮುಸ್ತಫಿಜುರ್ ರಹ್ಮಾನ್ 3 ವಿಕೆಟ್ ಪಡೆದರು.

7 / 7
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ