Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ, ICC World Cup Semi Final: ಸೆಮಿಫೈನಲ್ ಮುಗಿದ ಬಳಿಕ ಪೋಸ್ಟ್ ಮ್ಯಾಚ್​ನಲ್ಲಿ ರೋಹಿತ್ ಶರ್ಮಾ ಏನು ಹೇಳಿದ್ರು ಗೊತ್ತೇ?

Rohit sharma post match presentation: ಐಸಿಸಿ ಏಕದಿನ ವಿಶ್ವಕಪ್ 2023 ಸೆಮಿಫೈನಲ್​ನಲ್ಲಿ ಭಾರತ ತಂಡ ನ್ಯೂಝಿಲೆಂಡ್ ತಂಡವನ್ನು ಸೋಲಿಸಿ ಫೈನಲ್​ಗೆ ಪ್ರವೇಶಿಸಿದೆ. ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೆಲ ವಿಷಯಗಳನ್ನು ಹಂಚಿಕೊಂಡಿದ್ದಾರೆ.

Vinay Bhat
|

Updated on:Nov 16, 2023 | 7:20 AM

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡ ಫೈನಲ್​ಗೆ ಲಗ್ಗೆಯಿಟ್ಟಿದೆ. ಬುಧವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 70 ರನ್​ಗಳ ಜಯ ಸಾಧಿಸಿ ಫೈನಲ್ ಪ್ರವೇಶಿಸಿದೆ.

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡ ಫೈನಲ್​ಗೆ ಲಗ್ಗೆಯಿಟ್ಟಿದೆ. ಬುಧವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 70 ರನ್​ಗಳ ಜಯ ಸಾಧಿಸಿ ಫೈನಲ್ ಪ್ರವೇಶಿಸಿದೆ.

1 / 7
ಮೊದಲು ಬ್ಯಾಟಿಂಗ್ ಮಾಡಿದ ಭಾರತ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಶತಕದ ನೆರವಿನಿಂದ 397 ರನ್ ಕಲೆಹಾಕಿತು. ನ್ಯೂಝಿಲೆಂಡ್ ಕಠಿಣ ಪೈಪೋಟಿ ನೀಡಿದರೂ 327 ರನ್​ಗಳಿಗೆ ಆಲೌಟ್ ಆಯಿತು. ಭಾರತ ಪರ ಮೊಹಮ್ಮದ್ ಶಮಿ 7 ವಿಕೆಟ್ ಕಿತ್ತು ಮಿಂಚಿದರು.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಶತಕದ ನೆರವಿನಿಂದ 397 ರನ್ ಕಲೆಹಾಕಿತು. ನ್ಯೂಝಿಲೆಂಡ್ ಕಠಿಣ ಪೈಪೋಟಿ ನೀಡಿದರೂ 327 ರನ್​ಗಳಿಗೆ ಆಲೌಟ್ ಆಯಿತು. ಭಾರತ ಪರ ಮೊಹಮ್ಮದ್ ಶಮಿ 7 ವಿಕೆಟ್ ಕಿತ್ತು ಮಿಂಚಿದರು.

2 / 7
ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೆಲ ವಿಷಯಗಳನ್ನು ಹಂಚಿಕೊಂಡಿದ್ದಾರೆ. ನಾನು ಈ ಮೈದಾನದಲ್ಲಿ ಸಾಕಷ್ಟು ಕ್ರಿಕೆಟ್ ಆಡಿದ್ದೇನೆ, ಇಲ್ಲಿ ವಿಶ್ರಾಂತಿ ಪಡೆಯಲು ಸಾಧ್ಯವಿಲ್ಲ. ಆದಷ್ಟು ಬೇಗ ಕೆಲಸವನ್ನು ಪೂರ್ಣಗೊಳಿಸಬೇಕು ಎಂಬುದು ಗೊತ್ತಿತ್ತು ಎಂದು ಹೇಳಿದ್ದಾರೆ.

ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೆಲ ವಿಷಯಗಳನ್ನು ಹಂಚಿಕೊಂಡಿದ್ದಾರೆ. ನಾನು ಈ ಮೈದಾನದಲ್ಲಿ ಸಾಕಷ್ಟು ಕ್ರಿಕೆಟ್ ಆಡಿದ್ದೇನೆ, ಇಲ್ಲಿ ವಿಶ್ರಾಂತಿ ಪಡೆಯಲು ಸಾಧ್ಯವಿಲ್ಲ. ಆದಷ್ಟು ಬೇಗ ಕೆಲಸವನ್ನು ಪೂರ್ಣಗೊಳಿಸಬೇಕು ಎಂಬುದು ಗೊತ್ತಿತ್ತು ಎಂದು ಹೇಳಿದ್ದಾರೆ.

3 / 7
ನಮ್ಮ ಮೇಲೆ ಒತ್ತಡವಿದೆ ಎಂದು ನಮಗೆ ತಿಳಿದಿತ್ತು. ನಮ್ಮ ಫೀಲ್ಡಿಂಗ್ ಕೂಡ ಇಂದು ಚೆನ್ನಾಗಿರಲಿಲ್ಲ. ಇಂತಹ ವಿಷಯಗಳು ಸಂಭವಿಸುತ್ತವೆ. ಬೇಕಾಗಿರುವ ರನ್​ರೇಟ್ 9 ಕ್ಕಿಂತ ಹೆಚ್ಚಿರುವಾಗ, ನೀವು ಅವಕಾಶಗಳನ್ನು ತೆಗೆದುಕೊಳ್ಳಬೇಕು. ಎದುರಾಳಿ ನಮಗೆ ಕೆಲ ಅವಕಾಶಗಳನ್ನು ನೀಡಿದರು, ಆದರೆ ನಾವು ಅವುಗಳನ್ನು ತೆಗೆದುಕೊಳ್ಳಲಿಲ್ಲ- ರೋಹಿತ್ ಶರ್ಮಾ.

ನಮ್ಮ ಮೇಲೆ ಒತ್ತಡವಿದೆ ಎಂದು ನಮಗೆ ತಿಳಿದಿತ್ತು. ನಮ್ಮ ಫೀಲ್ಡಿಂಗ್ ಕೂಡ ಇಂದು ಚೆನ್ನಾಗಿರಲಿಲ್ಲ. ಇಂತಹ ವಿಷಯಗಳು ಸಂಭವಿಸುತ್ತವೆ. ಬೇಕಾಗಿರುವ ರನ್​ರೇಟ್ 9 ಕ್ಕಿಂತ ಹೆಚ್ಚಿರುವಾಗ, ನೀವು ಅವಕಾಶಗಳನ್ನು ತೆಗೆದುಕೊಳ್ಳಬೇಕು. ಎದುರಾಳಿ ನಮಗೆ ಕೆಲ ಅವಕಾಶಗಳನ್ನು ನೀಡಿದರು, ಆದರೆ ನಾವು ಅವುಗಳನ್ನು ತೆಗೆದುಕೊಳ್ಳಲಿಲ್ಲ- ರೋಹಿತ್ ಶರ್ಮಾ.

4 / 7
ಮಿಚೆಲ್ ಮತ್ತು ವಿಲಿಯಮ್ಸನ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು. ಆದರೆ, ನಾವು ಒತ್ತಡಕ್ಕೆ ಒಳಗಾಗದೆ ಕಾಮ್ ಆಗಿದ್ದೆವು. ಅದು ಆಟದ ಸ್ವರೂಪ. ನಾವು ಆ ಸಂದರ್ಭ ಎಲ್ಲ ಪ್ರಯತ್ನ ಮಾಡಿದೆವು. ಶಮಿ ಅದ್ಭುತ ಪ್ರದರ್ಶನ ನೀಡಿ ಬ್ರೇಕ್ ತಂದುಕೊಟ್ಟರು. ಈ ಟೂರ್ನಿಯಲ್ಲಿ ಅಯ್ಯರ್‌ ಮಾಡಿರುವ ಸಾಧನೆಗೆ ತುಂಬಾ ಸಂತಸಗೊಂಡಿದ್ದೇನೆ. ಗಿಲ್ ಬ್ಯಾಟಿಂಗ್ ಕೂಡ ಉತ್ತಮವಾಗಿತ್ತು ಎಂದು ರೋಹಿತ್ ಹೇಳಿದ್ದಾರೆ.

ಮಿಚೆಲ್ ಮತ್ತು ವಿಲಿಯಮ್ಸನ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು. ಆದರೆ, ನಾವು ಒತ್ತಡಕ್ಕೆ ಒಳಗಾಗದೆ ಕಾಮ್ ಆಗಿದ್ದೆವು. ಅದು ಆಟದ ಸ್ವರೂಪ. ನಾವು ಆ ಸಂದರ್ಭ ಎಲ್ಲ ಪ್ರಯತ್ನ ಮಾಡಿದೆವು. ಶಮಿ ಅದ್ಭುತ ಪ್ರದರ್ಶನ ನೀಡಿ ಬ್ರೇಕ್ ತಂದುಕೊಟ್ಟರು. ಈ ಟೂರ್ನಿಯಲ್ಲಿ ಅಯ್ಯರ್‌ ಮಾಡಿರುವ ಸಾಧನೆಗೆ ತುಂಬಾ ಸಂತಸಗೊಂಡಿದ್ದೇನೆ. ಗಿಲ್ ಬ್ಯಾಟಿಂಗ್ ಕೂಡ ಉತ್ತಮವಾಗಿತ್ತು ಎಂದು ರೋಹಿತ್ ಹೇಳಿದ್ದಾರೆ.

5 / 7
ವಿರಾಟ್ ಕೊಹ್ಲಿ ಎಂದಿನಂತೆ ಅದ್ಭುತವಾಗಿ, ತಮ್ಮ ಟ್ರೇಡ್‌ಮಾರ್ಕ್ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಒಟ್ಟಿನಲ್ಲಿ ನಮ್ಮ ಬ್ಯಾಟಿಂಗ್ ಅಮೋಘವಾಗಿತ್ತು. ಇಂದು, ನಾವು ಯಾವುದೇ ಒತ್ತಡಲ್ಲಿ ಇರಲಿಲ್ಲ ಎಂದು ನಾನು ಹೇಳುವುದಿಲ್ಲ. ನಮ್ಮ ಹುಡುಗರು ಸಾಕಷ್ಟು ಕೆಲಸ ಮಾಡಿದ್ದಾರೆ. ಮೊದಲ ಒಂಬತ್ತು ಪಂದ್ಯಗಳಲ್ಲಿ ನಾವು ಹೇಗೆ ಆಡಿದ್ದೆವೊ ಅದೇರೀತಿ ಇಂದುಕೂಡ ಆಡುವುದು ನಮ್ಮ ಯೋಜನೆ ಆಗಿತ್ತು ಎಂಬುದು ರೋಹಿತ್ ಶರ್ಮಾ ಮಾತು.

ವಿರಾಟ್ ಕೊಹ್ಲಿ ಎಂದಿನಂತೆ ಅದ್ಭುತವಾಗಿ, ತಮ್ಮ ಟ್ರೇಡ್‌ಮಾರ್ಕ್ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಒಟ್ಟಿನಲ್ಲಿ ನಮ್ಮ ಬ್ಯಾಟಿಂಗ್ ಅಮೋಘವಾಗಿತ್ತು. ಇಂದು, ನಾವು ಯಾವುದೇ ಒತ್ತಡಲ್ಲಿ ಇರಲಿಲ್ಲ ಎಂದು ನಾನು ಹೇಳುವುದಿಲ್ಲ. ನಮ್ಮ ಹುಡುಗರು ಸಾಕಷ್ಟು ಕೆಲಸ ಮಾಡಿದ್ದಾರೆ. ಮೊದಲ ಒಂಬತ್ತು ಪಂದ್ಯಗಳಲ್ಲಿ ನಾವು ಹೇಗೆ ಆಡಿದ್ದೆವೊ ಅದೇರೀತಿ ಇಂದುಕೂಡ ಆಡುವುದು ನಮ್ಮ ಯೋಜನೆ ಆಗಿತ್ತು ಎಂಬುದು ರೋಹಿತ್ ಶರ್ಮಾ ಮಾತು.

6 / 7
ಈ ಗೆಲುವಿನ ಮೂಲಕ ಟೀಮ್ ಇಂಡಿಯಾ 2019ರ ವಿಶ್ವಕಪ್ ಸೆಮಿಫೈನಲ್ ಸೋಲಿಗೆ ತಕ್ಕ ಪ್ರತ್ಯುತ್ತರ ನೀಡಿದೆ. ಇದೀಗ ಫೈನಲ್​ಗೇರಿರುವ ರೋಹಿತ್ ಪಡೆ ನವೆಂಬರ್ 19 ಭಾನುವಾರದಂದು ದಕ್ಷಿಣ ಆಫ್ರಿಕಾ ಅಥವಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಇಂದು ಆಫ್ರಿಕಾ-ಆಸೀಸ್ ನಡುವೆ ದ್ವಿತೀಯ ಸೆಮಿಫೈನಲ್ ನಡೆಯಲಿದೆ.

ಈ ಗೆಲುವಿನ ಮೂಲಕ ಟೀಮ್ ಇಂಡಿಯಾ 2019ರ ವಿಶ್ವಕಪ್ ಸೆಮಿಫೈನಲ್ ಸೋಲಿಗೆ ತಕ್ಕ ಪ್ರತ್ಯುತ್ತರ ನೀಡಿದೆ. ಇದೀಗ ಫೈನಲ್​ಗೇರಿರುವ ರೋಹಿತ್ ಪಡೆ ನವೆಂಬರ್ 19 ಭಾನುವಾರದಂದು ದಕ್ಷಿಣ ಆಫ್ರಿಕಾ ಅಥವಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಇಂದು ಆಫ್ರಿಕಾ-ಆಸೀಸ್ ನಡುವೆ ದ್ವಿತೀಯ ಸೆಮಿಫೈನಲ್ ನಡೆಯಲಿದೆ.

7 / 7

Published On - 7:19 am, Thu, 16 November 23

Follow us
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ