ಪಾಕ್ ವಿರುದ್ಧ ಗೆದ್ದ ಬಳಿಕ ಪೋಸ್ಟ್ ಮ್ಯಾಚ್ ಸಂದರ್ಭ ರೋಹಿತ್ ಶರ್ಮಾ ಹೇಳಿದ್ದೇನು ಗೊತ್ತೇ?

Rohit Sharma Post Match Presentation, IND vs PAK: ಏಷ್ಯಾಕಪ್ 2023 ರಲ್ಲಿ ಸೂಪರ್ 4 ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಬ್ಯಾಟಿಂಗ್-ಬೌಲಿಂಗ್​ನಲ್ಲಿ ಅಮೋಘ ಪ್ರದರ್ಶನ ನೀಡಿ 228 ರನ್​ಗಳ ಭರ್ಜರಿ ಗೆಲುವು ಸಾಧಿಸಿದ ಬಳಿಕ ಭಾರತದ ನಾಯಕ ರೋಹಿತ್ ಶರ್ಮಾ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ್ದು ಏನು ಹೇಳಿದ್ದಾರೆ ನೋಡಿ.

|

Updated on: Sep 12, 2023 | 7:42 AM

ಏಷ್ಯಾಕಪ್ 2023 ರಲ್ಲಿ ಸೂಪರ್ 4 ಪಂದ್ಯವನ್ನು ಭಾರತ ಭರ್ಜರಿ ಆಗಿ ಆರಂಭಿಸಿದೆ. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಬರೋಬ್ಬರಿ 228 ರನ್​ಗಳ ಅಮೋಘ ಗೆಲುವು ಕಂಡಿತು. ಪಂದ್ಯ ಮುಗಿದ ಬಳಿಕ ಮಾತನಾಡಿದ ಭಾರತದ ನಾಯಕ ರೋಹಿತ್ ಶರ್ಮಾ ಏನು ಹೇಳಿದ್ದಾರೆ ಕೇಳಿ.

ಏಷ್ಯಾಕಪ್ 2023 ರಲ್ಲಿ ಸೂಪರ್ 4 ಪಂದ್ಯವನ್ನು ಭಾರತ ಭರ್ಜರಿ ಆಗಿ ಆರಂಭಿಸಿದೆ. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಬರೋಬ್ಬರಿ 228 ರನ್​ಗಳ ಅಮೋಘ ಗೆಲುವು ಕಂಡಿತು. ಪಂದ್ಯ ಮುಗಿದ ಬಳಿಕ ಮಾತನಾಡಿದ ಭಾರತದ ನಾಯಕ ರೋಹಿತ್ ಶರ್ಮಾ ಏನು ಹೇಳಿದ್ದಾರೆ ಕೇಳಿ.

1 / 7
ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ರೋಹಿತ್ ಶರ್ಮಾ ಮೊದಲಿಗೆ ಗ್ರೌಂಡ್ಸ್​ಮೆನ್​ಗಳನ್ನು ಹೊಗಳಿದರು. ಈ ಪಂದ್ಯ ನಡೆಯಲು ಗ್ರೌಂಡ್ಸ್​ಮೆನ್​ಗಳ ಪಾತ್ರ ಮಹತ್ವದ್ದಾಗಿತ್ತು. ಇಡೀ ನೆಲದಿಂದ ಕವರ್‌ಗಳನ್ನು ಮುಚ್ಚುವುದು ಮತ್ತು ತೆಗೆದುಹಾಕುವುದು ಎಷ್ಟು ಕಠಿಣ ಎಂದು ನನಗೆ ತಿಳಿದಿದೆ. ಇಡೀ ತಂಡದ ಪರವಾಗಿ ನಾವು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇವೆ ಎಂದು ರೋಹಿತ್ ಹೇಳಿದ್ದಾರೆ.

ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ರೋಹಿತ್ ಶರ್ಮಾ ಮೊದಲಿಗೆ ಗ್ರೌಂಡ್ಸ್​ಮೆನ್​ಗಳನ್ನು ಹೊಗಳಿದರು. ಈ ಪಂದ್ಯ ನಡೆಯಲು ಗ್ರೌಂಡ್ಸ್​ಮೆನ್​ಗಳ ಪಾತ್ರ ಮಹತ್ವದ್ದಾಗಿತ್ತು. ಇಡೀ ನೆಲದಿಂದ ಕವರ್‌ಗಳನ್ನು ಮುಚ್ಚುವುದು ಮತ್ತು ತೆಗೆದುಹಾಕುವುದು ಎಷ್ಟು ಕಠಿಣ ಎಂದು ನನಗೆ ತಿಳಿದಿದೆ. ಇಡೀ ತಂಡದ ಪರವಾಗಿ ನಾವು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇವೆ ಎಂದು ರೋಹಿತ್ ಹೇಳಿದ್ದಾರೆ.

2 / 7
ಬ್ಯಾಟಿಂಗ್‌ನಲ್ಲಿ ಮೊದಲ ದಿನವೇ ನಾವು ಅದ್ಭುತ ಪ್ರದರ್ಶನ ತೋರಿದೆವು. ನಾವು ಬ್ಯಾಟಿಂಗ್ ಮಾಡಲು ಬಂದಾಗ ವಿಕೆಟ್ ಚೆನ್ನಾಗಿದೆ ಎಂದು ತಿಳಿದಿತ್ತು. ಮಳೆಯೊಂದಿಗೆ ಹೊಂದಿಕೊಳ್ಳಬೇಕಾಗಿತ್ತಷ್ಟೆ. ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಸೆಟಲ್ ಆಗಲು ನೋಡುತ್ತಾರೆ, ನಂತರ ಅವರು ಅಬ್ಬರಿಸುತ್ತಾರೆ ಎಂದು ನಮಗೆ ತಿಳಿದಿತ್ತು - ರೋಹಿತ್ ಶರ್ಮಾ.

ಬ್ಯಾಟಿಂಗ್‌ನಲ್ಲಿ ಮೊದಲ ದಿನವೇ ನಾವು ಅದ್ಭುತ ಪ್ರದರ್ಶನ ತೋರಿದೆವು. ನಾವು ಬ್ಯಾಟಿಂಗ್ ಮಾಡಲು ಬಂದಾಗ ವಿಕೆಟ್ ಚೆನ್ನಾಗಿದೆ ಎಂದು ತಿಳಿದಿತ್ತು. ಮಳೆಯೊಂದಿಗೆ ಹೊಂದಿಕೊಳ್ಳಬೇಕಾಗಿತ್ತಷ್ಟೆ. ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಸೆಟಲ್ ಆಗಲು ನೋಡುತ್ತಾರೆ, ನಂತರ ಅವರು ಅಬ್ಬರಿಸುತ್ತಾರೆ ಎಂದು ನಮಗೆ ತಿಳಿದಿತ್ತು - ರೋಹಿತ್ ಶರ್ಮಾ.

3 / 7
ಜಸ್​ಪ್ರಿತ್ ಬುಮ್ರಾ ಬೌಲಿಂಗ್​ನಲ್ಲಿ ಚೆನ್ನಾಗಿ ಕಾಣುತ್ತಿದ್ದರು. ಅವರು ಇನ್ ಸ್ವಿಂಗ್ ಮತ್ತು ಔಟ್ ಸ್ವಿಂಗ್ ಎರಡೂ ರೀತಿಯಲ್ಲಿ ಬೌಲಿಂಗ್ ಮಾಡಿದರು. ಕಳೆದ 8-10 ತಿಂಗಳುಗಳಿಂದ ಬುಮ್ರಾ ನಿಜವಾಗಿಯೂ ಕಷ್ಟಪಟ್ಟಿದ್ದಾರೆ. ಬುಮ್ರಾ ಅವರಿಗೆ ಕೇವಲ 27 ವರ್ಷ, ಅವರು ಈಗ ಪಂದ್ಯವನ್ನು ಆಡದಿರುವುದು ಸೂಕ್ತವಲ್ಲ ಎಂದು ರೋಹಿತ್ ಹೇಳಿದ್ದಾರೆ.

ಜಸ್​ಪ್ರಿತ್ ಬುಮ್ರಾ ಬೌಲಿಂಗ್​ನಲ್ಲಿ ಚೆನ್ನಾಗಿ ಕಾಣುತ್ತಿದ್ದರು. ಅವರು ಇನ್ ಸ್ವಿಂಗ್ ಮತ್ತು ಔಟ್ ಸ್ವಿಂಗ್ ಎರಡೂ ರೀತಿಯಲ್ಲಿ ಬೌಲಿಂಗ್ ಮಾಡಿದರು. ಕಳೆದ 8-10 ತಿಂಗಳುಗಳಿಂದ ಬುಮ್ರಾ ನಿಜವಾಗಿಯೂ ಕಷ್ಟಪಟ್ಟಿದ್ದಾರೆ. ಬುಮ್ರಾ ಅವರಿಗೆ ಕೇವಲ 27 ವರ್ಷ, ಅವರು ಈಗ ಪಂದ್ಯವನ್ನು ಆಡದಿರುವುದು ಸೂಕ್ತವಲ್ಲ ಎಂದು ರೋಹಿತ್ ಹೇಳಿದ್ದಾರೆ.

4 / 7
ನಾವು ಹೇಗೆ ಬ್ಯಾಟಿಂಗ್ ಮಾಡಿದ್ದೇವೆ ಎಂದು ನೋಡಿದಾಗ, ಉತ್ತಮ ಆರಂಭ ಪಡೆದುಕೊಂಡಿದ್ದೆವು. ನಂತರ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅತ್ಯುತ್ತಮ ಬ್ಯಾಟಿಂಗ್ ನಡೆಸಿದರು. ವಿರಾಟ್ ಇನ್ನಿಂಗ್ಸ್ ಅದ್ಭುತವಾಗಿ ಸಾಗಿತ್ತು. ಕೆಎಲ್ ಇಂಜುರಿಯಿಂದ ಕಮ್​ಬ್ಯಾಕ್ ಮಾಡಿ ಈರೀತಿ ಪ್ರದರ್ಶನ ತೋರಿರುವುದು ಒಳ್ಳೆಯ ಸಂಗತಿ ಎಂಬುದು ರೋಹಿತ್ ಶರ್ಮಾ ಮಾತು.

ನಾವು ಹೇಗೆ ಬ್ಯಾಟಿಂಗ್ ಮಾಡಿದ್ದೇವೆ ಎಂದು ನೋಡಿದಾಗ, ಉತ್ತಮ ಆರಂಭ ಪಡೆದುಕೊಂಡಿದ್ದೆವು. ನಂತರ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅತ್ಯುತ್ತಮ ಬ್ಯಾಟಿಂಗ್ ನಡೆಸಿದರು. ವಿರಾಟ್ ಇನ್ನಿಂಗ್ಸ್ ಅದ್ಭುತವಾಗಿ ಸಾಗಿತ್ತು. ಕೆಎಲ್ ಇಂಜುರಿಯಿಂದ ಕಮ್​ಬ್ಯಾಕ್ ಮಾಡಿ ಈರೀತಿ ಪ್ರದರ್ಶನ ತೋರಿರುವುದು ಒಳ್ಳೆಯ ಸಂಗತಿ ಎಂಬುದು ರೋಹಿತ್ ಶರ್ಮಾ ಮಾತು.

5 / 7
ಈ ಪಂದ್ಯದಲ್ಲಿ ರೋಹಿತ್ ಶರ್ಮಾ 49ಎಸೆತಗಳಲ್ಲಿ 56 ರನ್ ಬಾರಿಸಿದರೆ, ಗಿಲ್ 52 ಎಸೆತಗಳಲ್ಲಿ 58 ರನ್​ಗಳಿಸಿದರು. ನಂತರ ಜೊತೆಗೂಡಿದ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಅಕ್ಷರಶಃ ಅಬ್ಬರಿಸಿದರು. ಕೊಹ್ಲಿ 94 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 122 ರನ್​ ಸಿಡಿಸಿದರು. ರಾಹುಲ್ 106 ಎಸೆತಗಳಲ್ಲಿ ಅಜೇಯ 111 ರನ್ ಬಾರಿಸಿದರು. ಭಾರತ 50 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 356 ರನ್ ಗಳಿಸಿತು.

ಈ ಪಂದ್ಯದಲ್ಲಿ ರೋಹಿತ್ ಶರ್ಮಾ 49ಎಸೆತಗಳಲ್ಲಿ 56 ರನ್ ಬಾರಿಸಿದರೆ, ಗಿಲ್ 52 ಎಸೆತಗಳಲ್ಲಿ 58 ರನ್​ಗಳಿಸಿದರು. ನಂತರ ಜೊತೆಗೂಡಿದ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಅಕ್ಷರಶಃ ಅಬ್ಬರಿಸಿದರು. ಕೊಹ್ಲಿ 94 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 122 ರನ್​ ಸಿಡಿಸಿದರು. ರಾಹುಲ್ 106 ಎಸೆತಗಳಲ್ಲಿ ಅಜೇಯ 111 ರನ್ ಬಾರಿಸಿದರು. ಭಾರತ 50 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 356 ರನ್ ಗಳಿಸಿತು.

6 / 7
357 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡದ ಪರ ಫಖರ್ ಝಮಾನ್ 27 ರನ್ ಗಳಿಸಿದ್ದು ಗರಿಷ್ಠ ಸ್ಕೋರ್ ಆಗಿತ್ತು. 128 ರನ್​ಗಳಿಗೆ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಟೀಮ್ ಇಂಡಿಯಾ 228 ರನ್​ಗಳ ಅಮೋಘ ಗೆಲುವು ದಾಖಲಿಸಿತು. ಭಾರತದ ಪರ ಕುಲ್ದೀಪ್ ಯಾದವ್ 8 ಓವರ್​ಗಳಲ್ಲಿ 25 ರನ್ ನೀಡಿ 5 ವಿಕೆಟ್ ಕಬಳಿಸಿದರೆ, ಬುಮ್ರಾ, ಹಾರ್ದಿಕ್ ಹಾಗೂ ಠಾಕೂರ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.

357 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡದ ಪರ ಫಖರ್ ಝಮಾನ್ 27 ರನ್ ಗಳಿಸಿದ್ದು ಗರಿಷ್ಠ ಸ್ಕೋರ್ ಆಗಿತ್ತು. 128 ರನ್​ಗಳಿಗೆ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಟೀಮ್ ಇಂಡಿಯಾ 228 ರನ್​ಗಳ ಅಮೋಘ ಗೆಲುವು ದಾಖಲಿಸಿತು. ಭಾರತದ ಪರ ಕುಲ್ದೀಪ್ ಯಾದವ್ 8 ಓವರ್​ಗಳಲ್ಲಿ 25 ರನ್ ನೀಡಿ 5 ವಿಕೆಟ್ ಕಬಳಿಸಿದರೆ, ಬುಮ್ರಾ, ಹಾರ್ದಿಕ್ ಹಾಗೂ ಠಾಕೂರ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.

7 / 7
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್