AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 2nd T20: ಬರ್ಸಾಪರಾ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 8 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿರುವ ಭಾರತ (India vs South Africa) ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ.

TV9 Web
| Edited By: |

Updated on:Oct 02, 2022 | 11:07 AM

Share
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 8 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿರುವ ಭಾರತ (India vs South Africa) ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂಡೋ-ಆಫ್ರಿಕಾ ನಡುವೆ ಎರಡನೇ ಚುಟುಕು ಕದನ ಏರ್ಪಡಿಸಲಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 8 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿರುವ ಭಾರತ (India vs South Africa) ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂಡೋ-ಆಫ್ರಿಕಾ ನಡುವೆ ಎರಡನೇ ಚುಟುಕು ಕದನ ಏರ್ಪಡಿಸಲಾಗಿದೆ.

1 / 8
ಟೀಮ್ ಇಂಡಿಯಾ (Team India) ಇಂದಿನ ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಇತ್ತ ಮೊದಲ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದ್ದ ಹರಿಣಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಅಲ್ಲದೆ ಇಂದಿನ ಪಂದ್ಯದ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್ ಆಗಿದ್ದು, ಹೀಗಾಗಿ ಗುವಾಹಟಿಯಲ್ಲಿ (Guwahati) ಹೈವೋಲ್ಟೇಜ್ ಮ್ಯಾಚ್ ಆಗುವುದರಲ್ಲಿ ಅನುಮಾನವಿಲ್ಲ.

ಟೀಮ್ ಇಂಡಿಯಾ (Team India) ಇಂದಿನ ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಇತ್ತ ಮೊದಲ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದ್ದ ಹರಿಣಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಅಲ್ಲದೆ ಇಂದಿನ ಪಂದ್ಯದ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್ ಆಗಿದ್ದು, ಹೀಗಾಗಿ ಗುವಾಹಟಿಯಲ್ಲಿ (Guwahati) ಹೈವೋಲ್ಟೇಜ್ ಮ್ಯಾಚ್ ಆಗುವುದರಲ್ಲಿ ಅನುಮಾನವಿಲ್ಲ.

2 / 8
ನಾಯಕ ರೋಹಿತ್ ಶರ್ಮಾ ಬ್ಯಾಟ್​ನಿಂದ ಇನ್ನಷ್ಟು ಉತ್ತಮ ಇನ್ನಿಂಗ್ಸ್​ ನಿರೀಕ್ಷಿಸಲಾಗಿದೆ. ಉಪ ನಾಯಕ ಕೆಎಲ್ ರಾಹುಲ್ ಕೂಡ ನಿಧಾನಗತಿಯ ಆಟಕ್ಕೆ ಬ್ರೇಕ್ ಹಾಕಿ ವೇಗದ ಆಟದ ಮೊರೆ ಹೋಗಬೇಕಿದೆ.

ನಾಯಕ ರೋಹಿತ್ ಶರ್ಮಾ ಬ್ಯಾಟ್​ನಿಂದ ಇನ್ನಷ್ಟು ಉತ್ತಮ ಇನ್ನಿಂಗ್ಸ್​ ನಿರೀಕ್ಷಿಸಲಾಗಿದೆ. ಉಪ ನಾಯಕ ಕೆಎಲ್ ರಾಹುಲ್ ಕೂಡ ನಿಧಾನಗತಿಯ ಆಟಕ್ಕೆ ಬ್ರೇಕ್ ಹಾಕಿ ವೇಗದ ಆಟದ ಮೊರೆ ಹೋಗಬೇಕಿದೆ.

3 / 8
ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ್​ ಸಿಕ್ಕ ಅವಕಾಶವನ್ನು ಬಳಸಬೇಕಿದೆ.

ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ರಿಷಭ್ ಪಂತ್ ಹಾಗೂ ದಿನೇಶ್ ಕಾರ್ತಿಕ್​ ಸಿಕ್ಕ ಅವಕಾಶವನ್ನು ಬಳಸಬೇಕಿದೆ.

4 / 8
ಭಾರತದ ಬೌಲಿಂಗ್ ಆಫ್ರಿಕಾ ಸರಣಿಯಲ್ಲಿ ಮಾರಕವಾಗಿದೆ. ತಿರುವನಂತಪುರದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಆರ್ಷದೀಪ್ ಸಿಂಗ್ ಒಂದೇ ಓವರ್‌ನಲ್ಲಿ ಮೂರು ವಿಕೆಟ್ ಗಳಿಸಿ ದಕ್ಷಿಣ ಆಫ್ರಿಕಾ ಬಳಗಕ್ಕೆ ಬಲವಾದ ಪೆಟ್ಟುಕೊಟ್ಟಿದ್ದರು.

ಭಾರತದ ಬೌಲಿಂಗ್ ಆಫ್ರಿಕಾ ಸರಣಿಯಲ್ಲಿ ಮಾರಕವಾಗಿದೆ. ತಿರುವನಂತಪುರದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಆರ್ಷದೀಪ್ ಸಿಂಗ್ ಒಂದೇ ಓವರ್‌ನಲ್ಲಿ ಮೂರು ವಿಕೆಟ್ ಗಳಿಸಿ ದಕ್ಷಿಣ ಆಫ್ರಿಕಾ ಬಳಗಕ್ಕೆ ಬಲವಾದ ಪೆಟ್ಟುಕೊಟ್ಟಿದ್ದರು.

5 / 8
ಈ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಕಣಕ್ಕಿಳಿಯುವುದು ಬಹುತೇಕ ಖಚಿತ. ಉಮೇಶ್ ಯಾದವ್ ಅವರಿಗೆ ಅವಕಾಶ ಸಿಗುವುದು ಅನುಮಾನ. ಸಿರಾಜ್ ಉತ್ತಮ ಪ್ರದರ್ಶನ ನೀಡಿದರೆ ಟಿ20 ವಿಶ್ವಕಪ್​ಗೂ ಆಯ್ಕೆ ಆಗಬಹುದು.

ಈ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಕಣಕ್ಕಿಳಿಯುವುದು ಬಹುತೇಕ ಖಚಿತ. ಉಮೇಶ್ ಯಾದವ್ ಅವರಿಗೆ ಅವಕಾಶ ಸಿಗುವುದು ಅನುಮಾನ. ಸಿರಾಜ್ ಉತ್ತಮ ಪ್ರದರ್ಶನ ನೀಡಿದರೆ ಟಿ20 ವಿಶ್ವಕಪ್​ಗೂ ಆಯ್ಕೆ ಆಗಬಹುದು.

6 / 8
ಈ ಮೈದಾನದಲ್ಲಿ ಭಾರತ ಎರಡು ಪಂದ್ಯಗಳಲ್ಲಷ್ಟೆ ಕಣಕ್ಕಿಳಿದಿತ್ತು. ಅವುಗಳಲ್ಲಿ ಒಂದು ಮಳೆಯಿಂದಾಗಿ ರದ್ದಾಗಿದ್ದರೆ, ಇನ್ನೊಂದು ಪಂದ್ಯದಲ್ಲಿ ಆಸ್ಟ್ರೇಲಿಯಾ ಎಂಟು ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿದೆ.

ಈ ಮೈದಾನದಲ್ಲಿ ಭಾರತ ಎರಡು ಪಂದ್ಯಗಳಲ್ಲಷ್ಟೆ ಕಣಕ್ಕಿಳಿದಿತ್ತು. ಅವುಗಳಲ್ಲಿ ಒಂದು ಮಳೆಯಿಂದಾಗಿ ರದ್ದಾಗಿದ್ದರೆ, ಇನ್ನೊಂದು ಪಂದ್ಯದಲ್ಲಿ ಆಸ್ಟ್ರೇಲಿಯಾ ಎಂಟು ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿದೆ.

7 / 8
ಭಾರತ-ಆಫ್ರಿಕಾ ಕದನ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಟಾಸ್ 6.30ಕ್ಕೆ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು. ಚಂದಾದಾರಿಕೆಯೊಂದಿಗೆ Hotstar ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ನೋಡಬಹುದು.

ಭಾರತ-ಆಫ್ರಿಕಾ ಕದನ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಟಾಸ್ 6.30ಕ್ಕೆ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು. ಚಂದಾದಾರಿಕೆಯೊಂದಿಗೆ Hotstar ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ನೋಡಬಹುದು.

8 / 8

Published On - 11:07 am, Sun, 2 October 22