- Kannada News Photo gallery Cricket photos Rohit Sharma lead Team India prcaticing for Asia Cup 2022 Match Against Sri Lanka
IND vs SL: ಶ್ರೀಲಂಕಾ ವಿರುದ್ಧದ ಪಂದ್ಯಕ್ಕೆ ಭಾರತ ಭರ್ಜರಿ ಅಭ್ಯಾಸ: ಫೋಟೋ ನೋಡಿ
ಏಷ್ಯಾಕಪ್ನ (Asia Cup 2022) ಸೂಪರ್ 4 ಹಂತದಲ್ಲಿಂದು ಮೂರನೇ ಪಂದ್ಯ ಆಯೋಜಿಸಲಾಗಿದ್ದು ಭಾರತ ಹಾಗೂ ಶ್ರೀಲಂಕಾ (India vs Sri Lanka) ತಂಡಗಳು ಮುಖಾಮುಖಿ ಆಗುತ್ತಿದೆ.
Updated on: Sep 06, 2022 | 11:36 AM

ಏಷ್ಯಾಕಪ್ನ (Asia Cup 2022) ಸೂಪರ್ 4 ಹಂತದಲ್ಲಿಂದು ಮೂರನೇ ಪಂದ್ಯ ಆಯೋಜಿಸಲಾಗಿದ್ದು ಭಾರತ ಹಾಗೂ ಶ್ರೀಲಂಕಾ (India vs Sri Lanka) ತಂಡಗಳು ಮುಖಾಮುಖಿ ಆಗುತ್ತಿದೆ. ಕಳೆದ ಮ್ಯಾಚ್ನಲ್ಲಿ ಪಾಕಿಸ್ತಾನ ವಿರುದ್ಧ ಸೋತಿರುವ ಟೀಮ್ ಇಂಡಿಯಾಕ್ಕೆ (Team India) ಇದು ಮಾಡು ಇಲ್ಲವೇ ಮಡಿ ಪಂದ್ಯ

ಭಾರತ ಫೈನಲ್ ತಲುಪಬೇಕಾದರೆ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಿದೆ. ಹೀಗಾಗಿ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.

ಈ ಬಾರಿಯ ಏಷ್ಯಾಕಪ್ನಲ್ಲಿ ಭಾರತ ಸ್ಫೋಟಕ ಆರಂಭ ಪಡೆದುಕೊಂಡಿದ್ದರೂ ಅದನ್ನು ದೊಡ್ಡ ಮೊತ್ತವಾಗಿ ಕನ್ವರ್ಟ್ ಮಾಡಲು ವಿಫಲವಾಗುತ್ತಿದೆ. ರೋಹಿತ್–ರಾಹುಲ್ ಓಪನರ್ಗಳ ಮೇಲೆ ಇಂದುಕೂಡ ಒತ್ತಡವಿದೆ.

ಸೂರ್ಯಕುಮಾರ್ ಯಾದವ್ ಅವರಿಂದ ಸ್ಥಿರ ಪ್ರದರ್ಶನ ಕಂಡುಬರುತ್ತಿಲ್ಲ. ರಿಷಭ್ ಪಂತ್ ಪಾಕ್ ವಿರುದ್ಧ ಕಳಪೆ ಆಟವಾಡಿ ಟ್ರೋಲ್ ಕೂಡ ಆಗಿದ್ದರು. ಹೀಗಾಗಿ ಇವರ ಸ್ಥಾನಕ್ಕೆ ದಿನೇಶ್ ಕಾರ್ತಿಕ್ ಬಂದರೆ ಅಚ್ಚರಿ ಪಡಬೇಕಿಲ್ಲ

ಪಾಕ್ ಎದುರಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್ಗಳು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದರು. ಆಲ್ರೌಂಡರ್ ಜಡೇಜಾ ಇಲ್ಲದಿರುವುದು ತಂಡಕ್ಕೆ ಹೆಚ್ಚಿನ ಸಂಕಷ್ಟ ತಂದೊಡ್ಡಿದೆ.

ಚಹಲ್ ಕೈಚಳಕ ನಡೆಯುತ್ತಿಲ್ಲ. ಹೀಗಾಗಿ, ಭುವನೇಶ್ವರ್ ಕುಮಾರ್, ಅರ್ಷ್ದೀಪ್ ಹಾಗೂ ಬಿಷ್ಣೋಯ್ ಮೇಲೆ ಹೆಚ್ಚಿನ ಒತ್ತಡವಿದೆ. ಚಹಲ್ ಬದಲು ಅಶ್ವಿನ್ ಪ್ಲೇಯಿಂಗ್ XI ನಲ್ಲಿ

ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದ ಪಿಚ್ ಸಮಯೋಜಿತವಾಗಿದೆ. ಹೊಸ ಚೆಂಡಿನಲ್ಲಿ ವೇಗಿಗಳು ಲಾಭ ಪಡೆದುಕೊಳ್ಳಬಹುದಾಗಿದೆ. ಆದರೆ, ಈ ಪಿಚ್ನಲ್ಲಿ ವಿಕೆಟ್ಗಳನ್ನು ಉಳಿಸಿಕೊಳ್ಳುವುದು ಬಹುಮುಖ್ಯ ಸಂಗತಿಯಾಗಿದೆ.

ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಸಂಜೆ 7:30ಕ್ಕೆ ಶುರುವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ಮತ್ತು ಹಾಟ್ ಸ್ಟಾರ್ನಲ್ಲಿ ನೇರ ಪ್ರಸಾರವಾಗಲಿದೆ.



















