AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 2193 ದಿನಗಳ ನಂತರ ರೋಹಿತ್ ಟೆಸ್ಟ್ ವೃತ್ತಿಜೀವನದಲ್ಲಿ ವಿಚಿತ್ರ ಕಾಕತಾಳೀಯ

IND vs AUS: ಅಡಿಲೇಡ್‌ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ 2193 ದಿನಗಳ ನಂತರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಇದೇ ಅಡಿಲೇಡ್‌ನಲ್ಲಿ 2018ರಲ್ಲಿ ಕೊನೆಯ ಬಾರಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದರು. ಇದೀಗ ಅದೇ ಅಡಿಲೇಡ್​ನಲ್ಲಿ ರೋಹಿತ್ 6ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದಾರೆ.

ಪೃಥ್ವಿಶಂಕರ
|

Updated on: Dec 06, 2024 | 12:47 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಅಡಿಲೇಡ್‌ನಲ್ಲಿ ನಡೆಯುತ್ತಿದೆ. ಇದು ಡೇ ನೈಟ್ ಟೆಸ್ಟ್ ಆಗಿದ್ದು, ಪಿಂಕ್ ಚೆಂಡಿನೊಂದಿಗೆ ಆಡಲಾಗುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬರೋಬ್ಬರು 2193 ದಿನಗಳ ನಂತರ ಟೆಸ್ಟ್‌ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಅಡಿಲೇಡ್‌ನಲ್ಲಿ ನಡೆಯುತ್ತಿದೆ. ಇದು ಡೇ ನೈಟ್ ಟೆಸ್ಟ್ ಆಗಿದ್ದು, ಪಿಂಕ್ ಚೆಂಡಿನೊಂದಿಗೆ ಆಡಲಾಗುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬರೋಬ್ಬರು 2193 ದಿನಗಳ ನಂತರ ಟೆಸ್ಟ್‌ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದಾರೆ.

1 / 6
ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಸಂಬಂಧಿಸಿದಂತೆ ರೋಹಿತ್‌ ಅವರ ಟೆಸ್ಟ್ ವೃತ್ತಿಜೀವನದಲ್ಲಿ ವಿಚಿತ್ರ ಕಾಕತಾಳೀಯವೂ ಸಂಭವಿಸಿದೆ. ವಾಸ್ತವವಾಗಿ ರೋಹಿತ್ ಶರ್ಮಾ ಟೆಸ್ಟ್​ನಲ್ಲಿ ಕೊನೆಯ ಬಾರಿಗೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದು ಕೂಡ ಇದೇ ಅಡಿಲೇಡ್ ಟೆಸ್ಟ್‌ನಲ್ಲಿ. ಹಿಟ್‌ಮ್ಯಾನ್ 2018 ರಲ್ಲಿ ಟೆಸ್ಟ್‌ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕೊನೆಯ ಬಾರಿಗೆ ಬ್ಯಾಟ್ ಮಾಡಿದ್ದರು.

ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಸಂಬಂಧಿಸಿದಂತೆ ರೋಹಿತ್‌ ಅವರ ಟೆಸ್ಟ್ ವೃತ್ತಿಜೀವನದಲ್ಲಿ ವಿಚಿತ್ರ ಕಾಕತಾಳೀಯವೂ ಸಂಭವಿಸಿದೆ. ವಾಸ್ತವವಾಗಿ ರೋಹಿತ್ ಶರ್ಮಾ ಟೆಸ್ಟ್​ನಲ್ಲಿ ಕೊನೆಯ ಬಾರಿಗೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದು ಕೂಡ ಇದೇ ಅಡಿಲೇಡ್ ಟೆಸ್ಟ್‌ನಲ್ಲಿ. ಹಿಟ್‌ಮ್ಯಾನ್ 2018 ರಲ್ಲಿ ಟೆಸ್ಟ್‌ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕೊನೆಯ ಬಾರಿಗೆ ಬ್ಯಾಟ್ ಮಾಡಿದ್ದರು.

2 / 6
ಆಗ ಭಾರತ ತಂಡ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿತ್ತು. ಸರಣಿಯ ಮೊದಲ ಪಂದ್ಯ ಅಡಿಲೇಡ್‌ನಲ್ಲಿ ನಡೆದಿತ್ತು. ಆ ಪಂದ್ಯದಲ್ಲೂ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡಿದ್ದರೆ, ವಿರಾಟ್ ಕೊಹ್ಲಿ ತಂಡದ ನಾಯಕರಾಗಿದ್ದರು. ಆ ಪಂದ್ಯದಲ್ಲಿ ಕೆಎಲ್ ರಾಹುಲ್ ಮತ್ತು ಮುರಳಿ ವಿಜಯ್ ಓಪನಿಂಗ್ ಮಾಡಿದ್ದರು.

ಆಗ ಭಾರತ ತಂಡ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿತ್ತು. ಸರಣಿಯ ಮೊದಲ ಪಂದ್ಯ ಅಡಿಲೇಡ್‌ನಲ್ಲಿ ನಡೆದಿತ್ತು. ಆ ಪಂದ್ಯದಲ್ಲೂ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡಿದ್ದರೆ, ವಿರಾಟ್ ಕೊಹ್ಲಿ ತಂಡದ ನಾಯಕರಾಗಿದ್ದರು. ಆ ಪಂದ್ಯದಲ್ಲಿ ಕೆಎಲ್ ರಾಹುಲ್ ಮತ್ತು ಮುರಳಿ ವಿಜಯ್ ಓಪನಿಂಗ್ ಮಾಡಿದ್ದರು.

3 / 6
ಹೀಗಾಗಿ ರೋಹಿತ್ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಿದ್ದರು. ಆ ಟೆಸ್ಟ್ ಕೂಡ ಡಿಸೆಂಬರ್ 6 ರಿಂದ ನಡೆದಿತ್ತು. ಅಂದರೆ 2193 ದಿನಗಳ ನಂತರ ಇದೀಗ ರೋಹಿತ್ ಮತ್ತೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದಾರೆ.

ಹೀಗಾಗಿ ರೋಹಿತ್ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಿದ್ದರು. ಆ ಟೆಸ್ಟ್ ಕೂಡ ಡಿಸೆಂಬರ್ 6 ರಿಂದ ನಡೆದಿತ್ತು. ಅಂದರೆ 2193 ದಿನಗಳ ನಂತರ ಇದೀಗ ರೋಹಿತ್ ಮತ್ತೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದಾರೆ.

4 / 6
ಆ ಟೆಸ್ಟ್‌ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ರೋಹಿತ್ ಮೊದಲ ಇನ್ನಿಂಗ್ಸ್‌ನಲ್ಲಿ 37 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಒಂದು ರನ್ ಗಳಿಸಿದ್ದರು. ಇದೀಗ ಈ ಟೆಸ್ಟ್​ನಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ರೋಹಿತ್ ಕೇವಲ 3 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಆ ಟೆಸ್ಟ್‌ನಲ್ಲಿ ಟೀಂ ಇಂಡಿಯಾ 31 ರನ್‌ಗಳಿಂದ ಸೋತಿತ್ತು.

ಆ ಟೆಸ್ಟ್‌ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ರೋಹಿತ್ ಮೊದಲ ಇನ್ನಿಂಗ್ಸ್‌ನಲ್ಲಿ 37 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಒಂದು ರನ್ ಗಳಿಸಿದ್ದರು. ಇದೀಗ ಈ ಟೆಸ್ಟ್​ನಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ರೋಹಿತ್ ಕೇವಲ 3 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಆ ಟೆಸ್ಟ್‌ನಲ್ಲಿ ಟೀಂ ಇಂಡಿಯಾ 31 ರನ್‌ಗಳಿಂದ ಸೋತಿತ್ತು.

5 / 6
ಇನ್ನು ಈ ಪಂದ್ಯದಲ್ಲಿ ರೋಹಿತ್ ಬದಲಿಗೆ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಓಪನಿಂಗ್ ಮಾಡಿದರು. ಆದರೆ, ಪಂದ್ಯದ ಮೊದಲ ಎಸೆತದಲ್ಲೇ ಟೀಂ ಇಂಡಿಯಾ ಹಿನ್ನಡೆ ಅನುಭವಿಸಿತು. ಮಿಚೆಲ್ ಸ್ಟಾರ್ಕ್ ಯಶಸ್ವಿಗೆ ಪೆವಿಲಿಯನ್ ಹಾದಿ ತೋರಿಸಿದರು. ಮೊದಲ ದಿನ ಭೋಜನ ವಿರಾಮದ ವೇಳೆಗೆ ಭಾರತ ನಾಲ್ಕು ವಿಕೆಟ್ ಕಳೆದುಕೊಂಡು 82 ರನ್ ಗಳಿಸಿದೆ. ಸದ್ಯ ರಿಷಭ್ ಪಂತ್ 4 ರನ್ ಹಾಗೂ ನಾಯಕ ರೋಹಿತ್ ಶರ್ಮಾ 1 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.

ಇನ್ನು ಈ ಪಂದ್ಯದಲ್ಲಿ ರೋಹಿತ್ ಬದಲಿಗೆ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಓಪನಿಂಗ್ ಮಾಡಿದರು. ಆದರೆ, ಪಂದ್ಯದ ಮೊದಲ ಎಸೆತದಲ್ಲೇ ಟೀಂ ಇಂಡಿಯಾ ಹಿನ್ನಡೆ ಅನುಭವಿಸಿತು. ಮಿಚೆಲ್ ಸ್ಟಾರ್ಕ್ ಯಶಸ್ವಿಗೆ ಪೆವಿಲಿಯನ್ ಹಾದಿ ತೋರಿಸಿದರು. ಮೊದಲ ದಿನ ಭೋಜನ ವಿರಾಮದ ವೇಳೆಗೆ ಭಾರತ ನಾಲ್ಕು ವಿಕೆಟ್ ಕಳೆದುಕೊಂಡು 82 ರನ್ ಗಳಿಸಿದೆ. ಸದ್ಯ ರಿಷಭ್ ಪಂತ್ 4 ರನ್ ಹಾಗೂ ನಾಯಕ ರೋಹಿತ್ ಶರ್ಮಾ 1 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.

6 / 6
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್