AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಧೋನಿ ದಾಖಲೆ ಉಡೀಸ್: ರೋಹಿತ್ ಶರ್ಮಾ ಈಗ ನಂಬರ್ 1 ಕ್ಯಾಪ್ಟನ್

Rohit Sharma Records: ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕರುಗಳ ಪಟ್ಟಿಯಲ್ಲೂ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 42 ಗೆಲುವುಗಳೊಂದಿಗೆ ಇಯಾನ್ ಮೋರ್ಗನ್ (ಇಂಗ್ಲೆಂಡ್), ಬಾಬರ್ ಆಝಂ (ಪಾಕಿಸ್ತಾನ್) ಹಾಗೂ ಅಸ್ಗರ್ ಅಫ್ಘಾನ್ (ಅಫ್ಘಾನಿಸ್ತಾನ್) ಮೊದಲ ಸ್ಥಾನಗಳಲ್ಲಿದ್ದಾರೆ.

TV9 Web
| Edited By: |

Updated on: Jan 18, 2024 | 10:21 AM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3ನೇ ಟಿ20 ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 212 ರನ್​ಗಳಿಸಿದರೆ, ಈ ಮೊತ್ತವನ್ನು ಸರಿಗಟ್ಟುವ ಮೂಲಕ ಅಫ್ಘಾನಿಸ್ತಾನ್ ಪಂದ್ಯವನ್ನು ಟೈ ಮಾಡಿಕೊಂಡಿತು.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3ನೇ ಟಿ20 ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 212 ರನ್​ಗಳಿಸಿದರೆ, ಈ ಮೊತ್ತವನ್ನು ಸರಿಗಟ್ಟುವ ಮೂಲಕ ಅಫ್ಘಾನಿಸ್ತಾನ್ ಪಂದ್ಯವನ್ನು ಟೈ ಮಾಡಿಕೊಂಡಿತು.

1 / 7
ಇನ್ನು ಮೊದಲ ಸೂಪರ್​ನಲ್ಲಿ ಅಫ್ಘಾನಿಸ್ತಾನ್ ನೀಡಿದ 16 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕಲೆಹಾಕಿದ್ದು 16 ರನ್​ಗಳು. ಈ ಟೈನೊಂದಿಗೆ ಪಂದ್ಯವು 2ನೇ ಸೂಪರ್​ ಓವರ್​ನತ್ತ ಸಾಗಿತು. ದ್ವಿತೀಯ ಸೂಪರ್ ಓವರ್​ನಲ್ಲಿ ಭಾರತ ತಂಡವು 11 ರನ್ ಕಲೆಹಾಕಿದರೆ, ಅಫ್ಘಾನಿಸ್ತಾನ್ 1 ರನ್​ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು 10 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಇನ್ನು ಮೊದಲ ಸೂಪರ್​ನಲ್ಲಿ ಅಫ್ಘಾನಿಸ್ತಾನ್ ನೀಡಿದ 16 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕಲೆಹಾಕಿದ್ದು 16 ರನ್​ಗಳು. ಈ ಟೈನೊಂದಿಗೆ ಪಂದ್ಯವು 2ನೇ ಸೂಪರ್​ ಓವರ್​ನತ್ತ ಸಾಗಿತು. ದ್ವಿತೀಯ ಸೂಪರ್ ಓವರ್​ನಲ್ಲಿ ಭಾರತ ತಂಡವು 11 ರನ್ ಕಲೆಹಾಕಿದರೆ, ಅಫ್ಘಾನಿಸ್ತಾನ್ 1 ರನ್​ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು 10 ರನ್​ಗಳಿಂದ ಸೋಲೊಪ್ಪಿಕೊಂಡಿತು.

2 / 7
ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಭಾರತ ತಂಡದ ಯಶಸ್ವಿ ನಾಯಕರೆನಿಸಿಕೊಂಡಿದ್ದ ಮಹೇಂದ್ರ ಸಿಂಗ್ ಧೋನಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಭಾರತ ತಂಡದ ಯಶಸ್ವಿ ನಾಯಕರೆನಿಸಿಕೊಂಡಿದ್ದ ಮಹೇಂದ್ರ ಸಿಂಗ್ ಧೋನಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

3 / 7
ಅಂದರೆ ಧೋನಿ ನಾಯಕತ್ವದಲ್ಲಿ ಭಾರತ ತಂಡವು ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯಗಳನ್ನು ಗೆದ್ದುಕೊಂಡಿತ್ತು. ಟಿ20 ಕ್ರಿಕೆಟ್​ನಲ್ಲಿ 72 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಧೋನಿ ಒಟ್ಟು 41 ಗೆಲುವು ತಂದುಕೊಟ್ಟಿದ್ದರು.

ಅಂದರೆ ಧೋನಿ ನಾಯಕತ್ವದಲ್ಲಿ ಭಾರತ ತಂಡವು ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯಗಳನ್ನು ಗೆದ್ದುಕೊಂಡಿತ್ತು. ಟಿ20 ಕ್ರಿಕೆಟ್​ನಲ್ಲಿ 72 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಧೋನಿ ಒಟ್ಟು 41 ಗೆಲುವು ತಂದುಕೊಟ್ಟಿದ್ದರು.

4 / 7
ಇದೀಗ 54 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ ಒಟ್ಟು 42 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡಕ್ಕೆ ಅತ್ಯಧಿಕ ಗೆಲುವು ತಂದುಕೊಟ್ಟ ನಾಯಕ ಎನಿಸಿಕೊಂಡಿದ್ದಾರೆ.

ಇದೀಗ 54 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ ಒಟ್ಟು 42 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡಕ್ಕೆ ಅತ್ಯಧಿಕ ಗೆಲುವು ತಂದುಕೊಟ್ಟ ನಾಯಕ ಎನಿಸಿಕೊಂಡಿದ್ದಾರೆ.

5 / 7
ಹಾಗೆಯೇ ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕರುಗಳ ಪಟ್ಟಿಯಲ್ಲೂ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 42 ಗೆಲುವುಗಳೊಂದಿಗೆ ಇಯಾನ್ ಮೋರ್ಗನ್ (ಇಂಗ್ಲೆಂಡ್), ಬಾಬರ್ ಆಝಂ (ಪಾಕಿಸ್ತಾನ್) ಹಾಗೂ ಅಸ್ಗರ್ ಅಫ್ಘಾನ್ (ಅಫ್ಘಾನಿಸ್ತಾನ್) ಮೊದಲ ಸ್ಥಾನಗಳಲ್ಲಿದ್ದಾರೆ.

ಹಾಗೆಯೇ ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕರುಗಳ ಪಟ್ಟಿಯಲ್ಲೂ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 42 ಗೆಲುವುಗಳೊಂದಿಗೆ ಇಯಾನ್ ಮೋರ್ಗನ್ (ಇಂಗ್ಲೆಂಡ್), ಬಾಬರ್ ಆಝಂ (ಪಾಕಿಸ್ತಾನ್) ಹಾಗೂ ಅಸ್ಗರ್ ಅಫ್ಘಾನ್ (ಅಫ್ಘಾನಿಸ್ತಾನ್) ಮೊದಲ ಸ್ಥಾನಗಳಲ್ಲಿದ್ದಾರೆ.

6 / 7
ಇದೀಗ 42 ಜಯದೊಂದಿಗೆ ರೋಹಿತ್ ಶರ್ಮಾ ಈ ದಾಖಲೆಯನ್ನು ಸರಿಗಟ್ಟಿ ಅಗ್ರಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡಕ್ಕೆ ಒಂದು ಗೆಲುವು ತಂದುಕೊಟ್ಟರೆ ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕ ಎಂಬ ವಿಶ್ವ ದಾಖಲೆ ರೋಹಿತ್ ಶರ್ಮಾ ಪಾಲಾಗಲಿದೆ.

ಇದೀಗ 42 ಜಯದೊಂದಿಗೆ ರೋಹಿತ್ ಶರ್ಮಾ ಈ ದಾಖಲೆಯನ್ನು ಸರಿಗಟ್ಟಿ ಅಗ್ರಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡಕ್ಕೆ ಒಂದು ಗೆಲುವು ತಂದುಕೊಟ್ಟರೆ ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕ ಎಂಬ ವಿಶ್ವ ದಾಖಲೆ ರೋಹಿತ್ ಶರ್ಮಾ ಪಾಲಾಗಲಿದೆ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ