AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಧೋನಿ ದಾಖಲೆ ಉಡೀಸ್: ರೋಹಿತ್ ಶರ್ಮಾ ಈಗ ನಂಬರ್ 1 ಕ್ಯಾಪ್ಟನ್

Rohit Sharma Records: ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕರುಗಳ ಪಟ್ಟಿಯಲ್ಲೂ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 42 ಗೆಲುವುಗಳೊಂದಿಗೆ ಇಯಾನ್ ಮೋರ್ಗನ್ (ಇಂಗ್ಲೆಂಡ್), ಬಾಬರ್ ಆಝಂ (ಪಾಕಿಸ್ತಾನ್) ಹಾಗೂ ಅಸ್ಗರ್ ಅಫ್ಘಾನ್ (ಅಫ್ಘಾನಿಸ್ತಾನ್) ಮೊದಲ ಸ್ಥಾನಗಳಲ್ಲಿದ್ದಾರೆ.

TV9 Web
| Edited By: |

Updated on: Jan 18, 2024 | 10:21 AM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3ನೇ ಟಿ20 ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 212 ರನ್​ಗಳಿಸಿದರೆ, ಈ ಮೊತ್ತವನ್ನು ಸರಿಗಟ್ಟುವ ಮೂಲಕ ಅಫ್ಘಾನಿಸ್ತಾನ್ ಪಂದ್ಯವನ್ನು ಟೈ ಮಾಡಿಕೊಂಡಿತು.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3ನೇ ಟಿ20 ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 212 ರನ್​ಗಳಿಸಿದರೆ, ಈ ಮೊತ್ತವನ್ನು ಸರಿಗಟ್ಟುವ ಮೂಲಕ ಅಫ್ಘಾನಿಸ್ತಾನ್ ಪಂದ್ಯವನ್ನು ಟೈ ಮಾಡಿಕೊಂಡಿತು.

1 / 7
ಇನ್ನು ಮೊದಲ ಸೂಪರ್​ನಲ್ಲಿ ಅಫ್ಘಾನಿಸ್ತಾನ್ ನೀಡಿದ 16 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕಲೆಹಾಕಿದ್ದು 16 ರನ್​ಗಳು. ಈ ಟೈನೊಂದಿಗೆ ಪಂದ್ಯವು 2ನೇ ಸೂಪರ್​ ಓವರ್​ನತ್ತ ಸಾಗಿತು. ದ್ವಿತೀಯ ಸೂಪರ್ ಓವರ್​ನಲ್ಲಿ ಭಾರತ ತಂಡವು 11 ರನ್ ಕಲೆಹಾಕಿದರೆ, ಅಫ್ಘಾನಿಸ್ತಾನ್ 1 ರನ್​ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು 10 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಇನ್ನು ಮೊದಲ ಸೂಪರ್​ನಲ್ಲಿ ಅಫ್ಘಾನಿಸ್ತಾನ್ ನೀಡಿದ 16 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕಲೆಹಾಕಿದ್ದು 16 ರನ್​ಗಳು. ಈ ಟೈನೊಂದಿಗೆ ಪಂದ್ಯವು 2ನೇ ಸೂಪರ್​ ಓವರ್​ನತ್ತ ಸಾಗಿತು. ದ್ವಿತೀಯ ಸೂಪರ್ ಓವರ್​ನಲ್ಲಿ ಭಾರತ ತಂಡವು 11 ರನ್ ಕಲೆಹಾಕಿದರೆ, ಅಫ್ಘಾನಿಸ್ತಾನ್ 1 ರನ್​ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು 10 ರನ್​ಗಳಿಂದ ಸೋಲೊಪ್ಪಿಕೊಂಡಿತು.

2 / 7
ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಭಾರತ ತಂಡದ ಯಶಸ್ವಿ ನಾಯಕರೆನಿಸಿಕೊಂಡಿದ್ದ ಮಹೇಂದ್ರ ಸಿಂಗ್ ಧೋನಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಭಾರತ ತಂಡದ ಯಶಸ್ವಿ ನಾಯಕರೆನಿಸಿಕೊಂಡಿದ್ದ ಮಹೇಂದ್ರ ಸಿಂಗ್ ಧೋನಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

3 / 7
ಅಂದರೆ ಧೋನಿ ನಾಯಕತ್ವದಲ್ಲಿ ಭಾರತ ತಂಡವು ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯಗಳನ್ನು ಗೆದ್ದುಕೊಂಡಿತ್ತು. ಟಿ20 ಕ್ರಿಕೆಟ್​ನಲ್ಲಿ 72 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಧೋನಿ ಒಟ್ಟು 41 ಗೆಲುವು ತಂದುಕೊಟ್ಟಿದ್ದರು.

ಅಂದರೆ ಧೋನಿ ನಾಯಕತ್ವದಲ್ಲಿ ಭಾರತ ತಂಡವು ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯಗಳನ್ನು ಗೆದ್ದುಕೊಂಡಿತ್ತು. ಟಿ20 ಕ್ರಿಕೆಟ್​ನಲ್ಲಿ 72 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ಧೋನಿ ಒಟ್ಟು 41 ಗೆಲುವು ತಂದುಕೊಟ್ಟಿದ್ದರು.

4 / 7
ಇದೀಗ 54 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ ಒಟ್ಟು 42 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡಕ್ಕೆ ಅತ್ಯಧಿಕ ಗೆಲುವು ತಂದುಕೊಟ್ಟ ನಾಯಕ ಎನಿಸಿಕೊಂಡಿದ್ದಾರೆ.

ಇದೀಗ 54 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ ರೋಹಿತ್ ಶರ್ಮಾ ಒಟ್ಟು 42 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡಕ್ಕೆ ಅತ್ಯಧಿಕ ಗೆಲುವು ತಂದುಕೊಟ್ಟ ನಾಯಕ ಎನಿಸಿಕೊಂಡಿದ್ದಾರೆ.

5 / 7
ಹಾಗೆಯೇ ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕರುಗಳ ಪಟ್ಟಿಯಲ್ಲೂ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 42 ಗೆಲುವುಗಳೊಂದಿಗೆ ಇಯಾನ್ ಮೋರ್ಗನ್ (ಇಂಗ್ಲೆಂಡ್), ಬಾಬರ್ ಆಝಂ (ಪಾಕಿಸ್ತಾನ್) ಹಾಗೂ ಅಸ್ಗರ್ ಅಫ್ಘಾನ್ (ಅಫ್ಘಾನಿಸ್ತಾನ್) ಮೊದಲ ಸ್ಥಾನಗಳಲ್ಲಿದ್ದಾರೆ.

ಹಾಗೆಯೇ ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕರುಗಳ ಪಟ್ಟಿಯಲ್ಲೂ ರೋಹಿತ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ 42 ಗೆಲುವುಗಳೊಂದಿಗೆ ಇಯಾನ್ ಮೋರ್ಗನ್ (ಇಂಗ್ಲೆಂಡ್), ಬಾಬರ್ ಆಝಂ (ಪಾಕಿಸ್ತಾನ್) ಹಾಗೂ ಅಸ್ಗರ್ ಅಫ್ಘಾನ್ (ಅಫ್ಘಾನಿಸ್ತಾನ್) ಮೊದಲ ಸ್ಥಾನಗಳಲ್ಲಿದ್ದಾರೆ.

6 / 7
ಇದೀಗ 42 ಜಯದೊಂದಿಗೆ ರೋಹಿತ್ ಶರ್ಮಾ ಈ ದಾಖಲೆಯನ್ನು ಸರಿಗಟ್ಟಿ ಅಗ್ರಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡಕ್ಕೆ ಒಂದು ಗೆಲುವು ತಂದುಕೊಟ್ಟರೆ ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕ ಎಂಬ ವಿಶ್ವ ದಾಖಲೆ ರೋಹಿತ್ ಶರ್ಮಾ ಪಾಲಾಗಲಿದೆ.

ಇದೀಗ 42 ಜಯದೊಂದಿಗೆ ರೋಹಿತ್ ಶರ್ಮಾ ಈ ದಾಖಲೆಯನ್ನು ಸರಿಗಟ್ಟಿ ಅಗ್ರಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡಕ್ಕೆ ಒಂದು ಗೆಲುವು ತಂದುಕೊಟ್ಟರೆ ಟಿ20 ಕ್ರಿಕೆಟ್​ನ ಅತ್ಯಂತ ಯಶಸ್ವಿ ನಾಯಕ ಎಂಬ ವಿಶ್ವ ದಾಖಲೆ ರೋಹಿತ್ ಶರ್ಮಾ ಪಾಲಾಗಲಿದೆ.

7 / 7
Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?