AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶೀ ಟೂರ್ನಿಯಲ್ಲೂ ಫೇಲ್; ರಣಜಿಯಿಂದ ಹಿಂದೆ ಸರಿದ ರೋಹಿತ್ ಶರ್ಮಾ

Rohit Sharma Quits Ranji Trophy: ಕಳಪೆ ಫಾರ್ಮ್‌ನಿಂದ ಬಳಲುತ್ತಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ರಣಜಿ ಟ್ರೋಫಿಯಲ್ಲಿ ತಮ್ಮ ಲಯ ಕಂಡುಕೊಳ್ಳಲು ಪ್ರಯತ್ನಿಸಿದ್ದರು. ಆದರೆ ನಿರೀಕ್ಷಿತ ಫಲಿತಾಂಶ ಸಿಗದ ಕಾರಣ, ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿಗೆ ತಯಾರಿ ನಡೆಸಲು ಅವರು ರಣಜಿ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ. ಯಶಸ್ವಿ ಜೈಸ್ವಾಲ್ ಕೂಡ ಇದೇ ಕಾರಣಕ್ಕಾಗಿ ಹಿಂದೆ ಸರಿಯುತ್ತಿದ್ದಾರೆ.

ಪೃಥ್ವಿಶಂಕರ
|

Updated on: Jan 26, 2025 | 4:53 PM

Share
ಕಳೆದ ಒಂದು ವರ್ಷದಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಟೆಸ್ಟ್ ಕ್ರಿಕೆಟ್​ನಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವ ಸಲುವಾಗಿ ದೇಶೀ ಟೂರ್ನಿ ರಣಜಿಯಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದರು. ಆದರೆ ದೇಶೀ ಟೂರ್ನಿಯಲ್ಲೂ ರೋಹಿತ್​ಗೆ ತಮ್ಮ ಹಳೆಯ ಫಾರ್ಮ್​ ಅನ್ನು ಮರಳಿ ಪಡೆಯಲು ಸಾಧ್ಯವಾಗಲಿಲ್ಲ.

ಕಳೆದ ಒಂದು ವರ್ಷದಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಟೆಸ್ಟ್ ಕ್ರಿಕೆಟ್​ನಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವ ಸಲುವಾಗಿ ದೇಶೀ ಟೂರ್ನಿ ರಣಜಿಯಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದರು. ಆದರೆ ದೇಶೀ ಟೂರ್ನಿಯಲ್ಲೂ ರೋಹಿತ್​ಗೆ ತಮ್ಮ ಹಳೆಯ ಫಾರ್ಮ್​ ಅನ್ನು ಮರಳಿ ಪಡೆಯಲು ಸಾಧ್ಯವಾಗಲಿಲ್ಲ.

1 / 5
ಬಿಸಿಸಿಐ ಆದೇಶದ ಬಳಿಕ 10 ವರ್ಷಗಳ ನಂತರ ದೇಶೀ ಅಂಗಳಕ್ಕೆ ಕಾಲಿಟ್ಟಿದ್ದ ರೋಹಿತ್ ಶರ್ಮಾ, ಮುಂಬೈ ತಂಡವನ್ನು ಪ್ರತಿನಿಧಿಸಿದ್ದರು. ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ರೋಹಿತ್ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 3 ರನ್​ಗಳಿಗೆ ಸುಸ್ತಾಗಿದ್ದರೆ, ಎರಡನೇ ಇನ್ನಿಂಗ್ಸ್​ನಲ್ಲಿ 28 ರನ್ ಬಾರಿಸಿದ್ದರು.

ಬಿಸಿಸಿಐ ಆದೇಶದ ಬಳಿಕ 10 ವರ್ಷಗಳ ನಂತರ ದೇಶೀ ಅಂಗಳಕ್ಕೆ ಕಾಲಿಟ್ಟಿದ್ದ ರೋಹಿತ್ ಶರ್ಮಾ, ಮುಂಬೈ ತಂಡವನ್ನು ಪ್ರತಿನಿಧಿಸಿದ್ದರು. ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ರೋಹಿತ್ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 3 ರನ್​ಗಳಿಗೆ ಸುಸ್ತಾಗಿದ್ದರೆ, ಎರಡನೇ ಇನ್ನಿಂಗ್ಸ್​ನಲ್ಲಿ 28 ರನ್ ಬಾರಿಸಿದ್ದರು.

2 / 5
ಟೆಸ್ಟ್ ಮಾದರಿಯಲ್ಲಿ ಮತ್ತೊಮ್ಮೆ ಲಯ ಕಂಡುಕೊಳ್ಳುವುದಾಕ್ಕಿಯೇ ಅಖಾಡಕ್ಕಿಳಿದಿದ್ದ ರೋಹಿತ್ ಆಡಿದ ಎರಡೂ ಇನ್ನಿಂಗ್ಸ್​ಗಳಲ್ಲಿ ವೈಫಲ್ಯ ಅನುಭವಿಸಿದ್ದರು. ಹೀಗಾಗಿ ಮುಂದಿನ ಪಂದ್ಯದಲ್ಲಾದರೂ ರೋಹಿತ್ ಫಾರ್ಮ್​ಗೆ ಮರಳಲ್ಲಿ ಎಂದು ಆಶಿಸುತ್ತಿದ್ದರು. ಆದರೀಗ ವರದಿಯಾಗಿರುವಂತೆ ರಣಜಿ ಟೂರ್ನಿಯಿಂದ ಹಿಂದೆ ಸರಿಯಲು ರೋಹಿತ್ ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಟೆಸ್ಟ್ ಮಾದರಿಯಲ್ಲಿ ಮತ್ತೊಮ್ಮೆ ಲಯ ಕಂಡುಕೊಳ್ಳುವುದಾಕ್ಕಿಯೇ ಅಖಾಡಕ್ಕಿಳಿದಿದ್ದ ರೋಹಿತ್ ಆಡಿದ ಎರಡೂ ಇನ್ನಿಂಗ್ಸ್​ಗಳಲ್ಲಿ ವೈಫಲ್ಯ ಅನುಭವಿಸಿದ್ದರು. ಹೀಗಾಗಿ ಮುಂದಿನ ಪಂದ್ಯದಲ್ಲಾದರೂ ರೋಹಿತ್ ಫಾರ್ಮ್​ಗೆ ಮರಳಲ್ಲಿ ಎಂದು ಆಶಿಸುತ್ತಿದ್ದರು. ಆದರೀಗ ವರದಿಯಾಗಿರುವಂತೆ ರಣಜಿ ಟೂರ್ನಿಯಿಂದ ಹಿಂದೆ ಸರಿಯಲು ರೋಹಿತ್ ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

3 / 5
ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪ್ರಕಾರ, ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮತ್ತು ನಂತರ ಚಾಂಪಿಯನ್ಸ್ ಟ್ರೋಫಿಗೆ ತಯಾರಿ ನಡೆಸುತ್ತಿರುವ ಕಾರಣ ರೋಹಿತ್ ರಣಜಿ ಟ್ರೋಫಿಯಲ್ಲಿ ಇನ್ನು ಮುಂದೆ ಆಡದಿರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮುಂಬೈ ತಂಡದ ಮ್ಯಾನೇಜ್‌ಮೆಂಟ್‌ಗೂ ತಿಳಿಸಿದ್ದಾರೆ. ರೋಹಿತ್ ಜೊತೆಗೆ ಯಶಸ್ವಿ ಜೈಸ್ವಾಲ್ ಕೂಡ ಇಂಗ್ಲೆಂಡ್ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿಗಾಗಿ ತಯಾರಿ ನಡೆಸುವ ಸಲುವಾಗಿ ರಣಜಿಯಿಂದ ಹಿಂದೆ ಸರಿಯಲಿದ್ದಾರೆ ಎಂದು ವರದಿ ಮಾಡಿದೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪ್ರಕಾರ, ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮತ್ತು ನಂತರ ಚಾಂಪಿಯನ್ಸ್ ಟ್ರೋಫಿಗೆ ತಯಾರಿ ನಡೆಸುತ್ತಿರುವ ಕಾರಣ ರೋಹಿತ್ ರಣಜಿ ಟ್ರೋಫಿಯಲ್ಲಿ ಇನ್ನು ಮುಂದೆ ಆಡದಿರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮುಂಬೈ ತಂಡದ ಮ್ಯಾನೇಜ್‌ಮೆಂಟ್‌ಗೂ ತಿಳಿಸಿದ್ದಾರೆ. ರೋಹಿತ್ ಜೊತೆಗೆ ಯಶಸ್ವಿ ಜೈಸ್ವಾಲ್ ಕೂಡ ಇಂಗ್ಲೆಂಡ್ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿಗಾಗಿ ತಯಾರಿ ನಡೆಸುವ ಸಲುವಾಗಿ ರಣಜಿಯಿಂದ ಹಿಂದೆ ಸರಿಯಲಿದ್ದಾರೆ ಎಂದು ವರದಿ ಮಾಡಿದೆ.

4 / 5
ಮುಂಬೈ ತಂಡವು ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಶಿವಂ ದುಬೆ ಮತ್ತು ಶಾರ್ದೂಲ್ ಠಾಕೂರ್ ಅವರಂತಹ ಸ್ಟಾರ್ ಆಟಗಾರರನ್ನು ಒಳಗೊಂಡಿತ್ತು. ಆದರೆ ಈ ಪಂದ್ಯದಲ್ಲಿ ಸೋಲನ್ನು ಎದುರಿಸಬೇಕಾಯಿತು. ಈ ಪಂದ್ಯವನ್ನು ಜಮ್ಮು ಮತ್ತು ಕಾಶ್ಮೀರ ತಂಡ 5 ವಿಕೆಟ್‌ಗಳಿಂದ ಗೆದ್ದುಕೊಂಡಿತು.

ಮುಂಬೈ ತಂಡವು ಜಮ್ಮು ಮತ್ತು ಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಶಿವಂ ದುಬೆ ಮತ್ತು ಶಾರ್ದೂಲ್ ಠಾಕೂರ್ ಅವರಂತಹ ಸ್ಟಾರ್ ಆಟಗಾರರನ್ನು ಒಳಗೊಂಡಿತ್ತು. ಆದರೆ ಈ ಪಂದ್ಯದಲ್ಲಿ ಸೋಲನ್ನು ಎದುರಿಸಬೇಕಾಯಿತು. ಈ ಪಂದ್ಯವನ್ನು ಜಮ್ಮು ಮತ್ತು ಕಾಶ್ಮೀರ ತಂಡ 5 ವಿಕೆಟ್‌ಗಳಿಂದ ಗೆದ್ದುಕೊಂಡಿತು.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ