AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಮುಂಬೈ ರಣಜಿ ತಂಡಕ್ಕೆ ರೋಹಿತ್ ಶರ್ಮಾ ಎಂಟ್ರಿ; ಆದರೆ ನಾಯಕನಾಗಿ ಅಲ್ಲ..!

Rohit Sharma Ranji Trophy: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಜಮ್ಮು ಮತ್ತು ಕಾಶ್ಮೀರ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಮುಂಬೈ ತಂಡದ ಪರ ಆಡಲಿದ್ದಾರೆ. ಕಳಪೆ ಫಾರ್ಮ್‌ನಿಂದಾಗಿ 10 ವರ್ಷಗಳ ನಂತರ ಅವರು ರಣಜಿಗೆ ಮರಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಮುನ್ನ ಈ ಪಂದ್ಯ ಅವರಿಗೆ ಉತ್ತಮ ಅಭ್ಯಾಸವಾಗಲಿದೆ. ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ರೋಹಿತ್ ಶರ್ಮಾ ಆಡಲಿದ್ದಾರೆ. ಈ ಪಂದ್ಯ ಜನವರಿ 23 ರಿಂದ ಆರಂಭವಾಗಲಿದೆ.

ಪೃಥ್ವಿಶಂಕರ
|

Updated on: Jan 20, 2025 | 6:11 PM

Share
ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲಿದ್ದಾರೆ. ಇದಕ್ಕೂ ಮುನ್ನ ರಣಜಿ ಟ್ರೋಫಿಯಲ್ಲೂ ಪಾಲ್ಗೊಳ್ಳಲಿದ್ದಾರೆ. ವಾಸ್ತವವಾಗಿ, ರೋಹಿತ್ ತಮ್ಮ ಕಳಪೆ ಫಾರ್ಮ್ ಅನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಸುಮಾರು 10 ವರ್ಷಗಳ ನಂತರ ಅವರು ರಣಜಿ ಟ್ರೋಫಿಯಲ್ಲಿ ಆಡಲಿದ್ದಾರೆ.

ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲಿದ್ದಾರೆ. ಇದಕ್ಕೂ ಮುನ್ನ ರಣಜಿ ಟ್ರೋಫಿಯಲ್ಲೂ ಪಾಲ್ಗೊಳ್ಳಲಿದ್ದಾರೆ. ವಾಸ್ತವವಾಗಿ, ರೋಹಿತ್ ತಮ್ಮ ಕಳಪೆ ಫಾರ್ಮ್ ಅನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಸುಮಾರು 10 ವರ್ಷಗಳ ನಂತರ ಅವರು ರಣಜಿ ಟ್ರೋಫಿಯಲ್ಲಿ ಆಡಲಿದ್ದಾರೆ.

1 / 7
 ಮುಂಬೈ ಕ್ರಿಕೆಟ್ ಅಸೋಸಿಯೇಷನ್ ​​ರಣಜಿ ಟ್ರೋಫಿಯ ಮುಂದಿನ ಪಂದ್ಯಕ್ಕಾಗಿ ತನ್ನ ತಂಡವನ್ನು ಪ್ರಕಟಿಸಿದೆ. ಅದರಲ್ಲಿ ರೋಹಿತ್ ಶರ್ಮಾ ಹೆಸರನ್ನು ಸೇರಿಸಲಾಗಿದೆ. ಆದಾಗ್ಯೂ, ಅವರು ನಾಯಕನಾಗಿ ಅಲ್ಲದೆ ಸಾಮಾನ್ಯ ಆಟಗಾರನಾಗಿ ಆಡಲಿದ್ದಾರೆ. ರೋಹಿತ್ ಅಲ್ಲದೆ ಟೀಂ ಇಂಡಿಯಾದ ಹಲವು ಸ್ಟಾರ್ ಆಟಗಾರರು ಕೂಡ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಮುಂಬೈ ಕ್ರಿಕೆಟ್ ಅಸೋಸಿಯೇಷನ್ ​​ರಣಜಿ ಟ್ರೋಫಿಯ ಮುಂದಿನ ಪಂದ್ಯಕ್ಕಾಗಿ ತನ್ನ ತಂಡವನ್ನು ಪ್ರಕಟಿಸಿದೆ. ಅದರಲ್ಲಿ ರೋಹಿತ್ ಶರ್ಮಾ ಹೆಸರನ್ನು ಸೇರಿಸಲಾಗಿದೆ. ಆದಾಗ್ಯೂ, ಅವರು ನಾಯಕನಾಗಿ ಅಲ್ಲದೆ ಸಾಮಾನ್ಯ ಆಟಗಾರನಾಗಿ ಆಡಲಿದ್ದಾರೆ. ರೋಹಿತ್ ಅಲ್ಲದೆ ಟೀಂ ಇಂಡಿಯಾದ ಹಲವು ಸ್ಟಾರ್ ಆಟಗಾರರು ಕೂಡ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

2 / 7
ಜಮ್ಮು ಮತ್ತು ಕಾಶ್ಮೀರ ವಿರುದ್ಧದ ರಣಜಿ ಟ್ರೋಫಿ ಪಂದ್ಯಕ್ಕಾಗಿ ಮುಂಬೈ ತಂಡದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸೇರ್ಪಡೆಗೊಂಡಿದ್ದಾರೆ. ಈ ಪಂದ್ಯ ಜನವರಿ 23 ರಿಂದ ಎಂಸಿಎ-ಬಿಕೆಸಿ ಮೈದಾನದಲ್ಲಿ ಆರಂಭವಾಗಲಿದೆ. ಈ ತಂಡದಲ್ಲಿ ಒಟ್ಟು 17 ಆಟಗಾರರು ಆಯ್ಕೆಯಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ವಿರುದ್ಧದ ರಣಜಿ ಟ್ರೋಫಿ ಪಂದ್ಯಕ್ಕಾಗಿ ಮುಂಬೈ ತಂಡದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸೇರ್ಪಡೆಗೊಂಡಿದ್ದಾರೆ. ಈ ಪಂದ್ಯ ಜನವರಿ 23 ರಿಂದ ಎಂಸಿಎ-ಬಿಕೆಸಿ ಮೈದಾನದಲ್ಲಿ ಆರಂಭವಾಗಲಿದೆ. ಈ ತಂಡದಲ್ಲಿ ಒಟ್ಟು 17 ಆಟಗಾರರು ಆಯ್ಕೆಯಾಗಿದ್ದಾರೆ.

3 / 7
ವಾಸ್ತವವಾಗಿ ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾವನ್ನು ಘೋಷಿಸುವಾಗ ಸ್ವತಃ ರೋಹಿತ್ ಶರ್ಮಾ ಅವರೇ ರಣಜಿಯಲ್ಲಿ ಆಡುವುದಾಗಿ ಖಚಿತಪಡಿಸಿದ್ದರು. ಅದರಂತೆ ದೇಶೀ ಅಂಗಳಕ್ಕೆ ಕಾಲಿಟ್ಟಿರುವ ರೋಹಿತ್, ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಆಡಲಿದ್ದಾರೆ. ಅಂದರೆ ರಣಜಿ ಟ್ರೋಫಿಯಲ್ಲಿ ರಹಾನೆ ನಾಯಕತ್ವದಲ್ಲಿ ರೋಹಿತ್ ಆಡಲಿದ್ದಾರೆ.

ವಾಸ್ತವವಾಗಿ ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾವನ್ನು ಘೋಷಿಸುವಾಗ ಸ್ವತಃ ರೋಹಿತ್ ಶರ್ಮಾ ಅವರೇ ರಣಜಿಯಲ್ಲಿ ಆಡುವುದಾಗಿ ಖಚಿತಪಡಿಸಿದ್ದರು. ಅದರಂತೆ ದೇಶೀ ಅಂಗಳಕ್ಕೆ ಕಾಲಿಟ್ಟಿರುವ ರೋಹಿತ್, ಅಜಿಂಕ್ಯ ರಹಾನೆ ನಾಯಕತ್ವದಲ್ಲಿ ಆಡಲಿದ್ದಾರೆ. ಅಂದರೆ ರಣಜಿ ಟ್ರೋಫಿಯಲ್ಲಿ ರಹಾನೆ ನಾಯಕತ್ವದಲ್ಲಿ ರೋಹಿತ್ ಆಡಲಿದ್ದಾರೆ.

4 / 7
ರೋಹಿತ್ ಶರ್ಮಾ ಕಳೆದ ಕೆಲವು ದಿನಗಳಿಂದ ಟೆಸ್ಟ್ ಮಾದರಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ತವರು ಟೆಸ್ಟ್ ಸರಣಿಯ ನಂತರ, ಆಸ್ಟ್ರೇಲಿಯಾ ಪ್ರವಾಸದ ಸಮಯದಲ್ಲಿಯೂ ಅವರ ಬ್ಯಾಟ್ ಸಂಪೂರ್ಣವಾಗಿ ಶಾಂತವಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಟೆಸ್ಟ್ ತಂಡದಲ್ಲಿ ಅವರ ಸ್ಥಾನದ ಬಗ್ಗೆ ಪ್ರಶ್ನೆಗಳು ಎದ್ದಿವೆ.

ರೋಹಿತ್ ಶರ್ಮಾ ಕಳೆದ ಕೆಲವು ದಿನಗಳಿಂದ ಟೆಸ್ಟ್ ಮಾದರಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ತವರು ಟೆಸ್ಟ್ ಸರಣಿಯ ನಂತರ, ಆಸ್ಟ್ರೇಲಿಯಾ ಪ್ರವಾಸದ ಸಮಯದಲ್ಲಿಯೂ ಅವರ ಬ್ಯಾಟ್ ಸಂಪೂರ್ಣವಾಗಿ ಶಾಂತವಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಟೆಸ್ಟ್ ತಂಡದಲ್ಲಿ ಅವರ ಸ್ಥಾನದ ಬಗ್ಗೆ ಪ್ರಶ್ನೆಗಳು ಎದ್ದಿವೆ.

5 / 7
ಆದರೆ ರೋಹಿತ್ ಟೆಸ್ಟ್‌ನಲ್ಲಿ ಆಡುವುದನ್ನು ಮುಂದುವರಿಸಲು ಬಯಸಿದ್ದಾರೆ, ಅದಕ್ಕಾಗಿ ಅವರು ಶ್ರಮಿಸುತ್ತಿದ್ದಾರೆ. ಇತ್ತೀಚೆಗೆ ಅವರು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ರಣಜಿ ಟ್ರೋಫಿ ಅಭ್ಯಾಸ ಶಿಬಿರದಲ್ಲಿ ಭಾಗವಹಿಸಿದ್ದರು. ರೋಹಿತ್ ಅವರ ಕೊನೆಯ ರಣಜಿ ಪಂದ್ಯದ ಬಗ್ಗೆ ಮಾತನಾಡುವುದಾದರೆ, ಅವರು 2015 ರಲ್ಲಿ ಉತ್ತರ ಪ್ರದೇಶ ವಿರುದ್ಧ ಮುಂಬೈ ಪರ ಆಡಿದ್ದರು. ಅಂದಿನಿಂದ ಅವರು ಯಾವುದೇ ದೇಶೀಯ ಪಂದ್ಯವನ್ನು ಆಡಿಲ್ಲ.

ಆದರೆ ರೋಹಿತ್ ಟೆಸ್ಟ್‌ನಲ್ಲಿ ಆಡುವುದನ್ನು ಮುಂದುವರಿಸಲು ಬಯಸಿದ್ದಾರೆ, ಅದಕ್ಕಾಗಿ ಅವರು ಶ್ರಮಿಸುತ್ತಿದ್ದಾರೆ. ಇತ್ತೀಚೆಗೆ ಅವರು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ರಣಜಿ ಟ್ರೋಫಿ ಅಭ್ಯಾಸ ಶಿಬಿರದಲ್ಲಿ ಭಾಗವಹಿಸಿದ್ದರು. ರೋಹಿತ್ ಅವರ ಕೊನೆಯ ರಣಜಿ ಪಂದ್ಯದ ಬಗ್ಗೆ ಮಾತನಾಡುವುದಾದರೆ, ಅವರು 2015 ರಲ್ಲಿ ಉತ್ತರ ಪ್ರದೇಶ ವಿರುದ್ಧ ಮುಂಬೈ ಪರ ಆಡಿದ್ದರು. ಅಂದಿನಿಂದ ಅವರು ಯಾವುದೇ ದೇಶೀಯ ಪಂದ್ಯವನ್ನು ಆಡಿಲ್ಲ.

6 / 7
ಮುಂಬೈ ತಂಡ: ಅಜಿಂಕ್ಯ ರಹಾನೆ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಆಯುಷ್ ಮ್ಹಾತ್ರೆ, ಶ್ರೇಯಸ್ ಅಯ್ಯರ್, ಸಿದ್ಧೇಶ್ ಲಾಡ್, ಶಿವಂ ದುಬೆ, ಹಾರ್ದಿಕ್ ತಮೋರ್ (ವಿಕೆಟ್ ಕೀಪರ್), ಆಕಾಶ್ ಆನಂದ್ (ವಿಕೆಟ್ ಕೀಪರ್), ತನುಷ್ ಕೋಟ್ಯಾನ್, ಶಮ್ಸ್ ಮುಲಾನಿ, ಹಿಮಾಂಶುಕ್ ಸಿಂಗ್, ಸಿಲ್ವೆಸ್ಟರ್ ಡಿಸೋಜಾ, ರಾಯ್ಸ್ಟನ್ ಡಯಾಸ್, ಕಾರ್ಶ್ ಕೊಠಾರಿ.

ಮುಂಬೈ ತಂಡ: ಅಜಿಂಕ್ಯ ರಹಾನೆ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಆಯುಷ್ ಮ್ಹಾತ್ರೆ, ಶ್ರೇಯಸ್ ಅಯ್ಯರ್, ಸಿದ್ಧೇಶ್ ಲಾಡ್, ಶಿವಂ ದುಬೆ, ಹಾರ್ದಿಕ್ ತಮೋರ್ (ವಿಕೆಟ್ ಕೀಪರ್), ಆಕಾಶ್ ಆನಂದ್ (ವಿಕೆಟ್ ಕೀಪರ್), ತನುಷ್ ಕೋಟ್ಯಾನ್, ಶಮ್ಸ್ ಮುಲಾನಿ, ಹಿಮಾಂಶುಕ್ ಸಿಂಗ್, ಸಿಲ್ವೆಸ್ಟರ್ ಡಿಸೋಜಾ, ರಾಯ್ಸ್ಟನ್ ಡಯಾಸ್, ಕಾರ್ಶ್ ಕೊಠಾರಿ.

7 / 7
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ