AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravindra Jadeja: ಮೊದಲ ಟೆಸ್ಟ್​ನಲ್ಲಿ ಬೌಲಿಂಗ್​ಗಾಗಿ ಅಶ್ವಿನ್-ಜಡೇಜಾ ಮಧ್ಯೆ ಜಗಳ: ರೋಹಿತ್ ಶರ್ಮಾ ಏನಂದ್ರು ನೋಡಿ

India vs Australia 1st Test: ಭಾರತ ಪರ ಅತಿ ಹೆಚ್ಚು ಓವರ್ ಬೌಲಿಂಗ್ ಮಾಡಿದ್ದೇ ಇವರಿಬ್ಬರು. ಪಂದ್ಯದ ಮಧ್ಯೆ ಅಶ್ವಿನ್-ಜಡೇಜಾ ಬೌಲಿಂಗ್​ಗಾಗಿ ಪೈಪೋಟಿ ನಡೆಸಿದ್ದ ಘಟನೆ ಕೂಡ ನಡೆಯಿತಂತೆ. ಈ ಬಗ್ಗೆ ಪಂದ್ಯ ಮುಗಿದ ಬಳಿಕ ನಾಯಕ ರೋಹಿತ್ ಶರ್ಮಾ ಮಾಹಿತಿ ನೀಡಿದ್ದಾರೆ.

TV9 Web
| Updated By: Vinay Bhat|

Updated on: Feb 12, 2023 | 10:37 AM

Share
ಭಾರೀ ಕುತೂಹಲ ಕೆರಳಿಸಿದ್ದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯ ಮುಕ್ತಾಯಗೊಂಡಿದ್ದು ಟೀಮ್ ಇಂಡಿಯಾ ಇನ್ನಿಂಗ್ಸ್ ಹಾಗೂ 132 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಸ್ಪಿನ್ನರ್​ಗಳ ನೆಚ್ಚಿನ ಪಿಚ್ ಆದ ನಾಗ್ಪುರದಲ್ಲಿ ಉಭಯ ತಂಡಗಳ ಬ್ಯಾಟರ್​ಗಳು ರನ್ ಗಳಿಸಲು ಪರದಾಡಿದರು. ಕಾಂಗರೂ ಪಡೆಯಂತು ರವಿಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ದಾಳಿಗೆ ನಲುಗಿ ಹೋಯಿತು.

ಭಾರೀ ಕುತೂಹಲ ಕೆರಳಿಸಿದ್ದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯ ಮುಕ್ತಾಯಗೊಂಡಿದ್ದು ಟೀಮ್ ಇಂಡಿಯಾ ಇನ್ನಿಂಗ್ಸ್ ಹಾಗೂ 132 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಸ್ಪಿನ್ನರ್​ಗಳ ನೆಚ್ಚಿನ ಪಿಚ್ ಆದ ನಾಗ್ಪುರದಲ್ಲಿ ಉಭಯ ತಂಡಗಳ ಬ್ಯಾಟರ್​ಗಳು ರನ್ ಗಳಿಸಲು ಪರದಾಡಿದರು. ಕಾಂಗರೂ ಪಡೆಯಂತು ರವಿಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ದಾಳಿಗೆ ನಲುಗಿ ಹೋಯಿತು.

1 / 8
ಮೊದಲ ಇನ್ನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 177 ರನ್​ಗೆ ಆಲೌಟ್ ಆಯಿತು. ಇಲ್ಲಿ ಜಡೇಜಾ ಜಡೇಜಾ 5 ವಿಕೆಟ್ ಪಡೆದರೆ ಅಶ್ವಿನ್ 2 ವಿಕೆಟ್ ಕಿತ್ತರು. ಎರಡನೇ ಇನ್ನಿಂಗ್ಸ್​ನಲ್ಲಿ ಆಸೀಸ್ 91 ರನ್​ಗೆ ಸರ್ವಪತನ ಕಂಡಿತು. ಅಶ್ವಿನ್ 5 ಹಾಗೂ ಜಡೇಜಾ 2 ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 177 ರನ್​ಗೆ ಆಲೌಟ್ ಆಯಿತು. ಇಲ್ಲಿ ಜಡೇಜಾ ಜಡೇಜಾ 5 ವಿಕೆಟ್ ಪಡೆದರೆ ಅಶ್ವಿನ್ 2 ವಿಕೆಟ್ ಕಿತ್ತರು. ಎರಡನೇ ಇನ್ನಿಂಗ್ಸ್​ನಲ್ಲಿ ಆಸೀಸ್ 91 ರನ್​ಗೆ ಸರ್ವಪತನ ಕಂಡಿತು. ಅಶ್ವಿನ್ 5 ಹಾಗೂ ಜಡೇಜಾ 2 ವಿಕೆಟ್ ಪಡೆದರು.

2 / 8
ಭಾರತ ಪರ ಅತಿ ಹೆಚ್ಚು ಓವರ್ ಬೌಲಿಂಗ್ ಮಾಡಿದ್ದೇ ಇವರಿಬ್ಬರು. ಪಂದ್ಯದ ಮಧ್ಯೆ ಅಶ್ವಿನ್-ಜಡೇಜಾ ಬೌಲಿಂಗ್​ಗಾಗಿ ಪೈಪೋಟಿ ನಡೆಸಿದ್ದ ಘಟನೆ ಕೂಡ ನಡೆಯಿತಂತೆ. ಈ ಬಗ್ಗೆ ಪಂದ್ಯ ಮುಗಿದ ಬಳಿಕ ನಾಯಕ ರೋಹಿತ್ ಶರ್ಮಾ ಮಾಹಿತಿ ನೀಡಿದ್ದಾರೆ.

ಭಾರತ ಪರ ಅತಿ ಹೆಚ್ಚು ಓವರ್ ಬೌಲಿಂಗ್ ಮಾಡಿದ್ದೇ ಇವರಿಬ್ಬರು. ಪಂದ್ಯದ ಮಧ್ಯೆ ಅಶ್ವಿನ್-ಜಡೇಜಾ ಬೌಲಿಂಗ್​ಗಾಗಿ ಪೈಪೋಟಿ ನಡೆಸಿದ್ದ ಘಟನೆ ಕೂಡ ನಡೆಯಿತಂತೆ. ಈ ಬಗ್ಗೆ ಪಂದ್ಯ ಮುಗಿದ ಬಳಿಕ ನಾಯಕ ರೋಹಿತ್ ಶರ್ಮಾ ಮಾಹಿತಿ ನೀಡಿದ್ದಾರೆ.

3 / 8
ಪಂದ್ಯದ ಬಳಿಕ ವೀಕ್ಷಕ ವಿವರಣೆಕಾರರಾದ ಇರ್ಫಾನ್ ಪಠಾಣ್ ಬಳಿ ಸಂದರ್ಶನ ನೀಡಿದ ರೋಹಿತ್, ಭಾರತ ಮೊದಲ ಟೆಸ್ಟ್ ಗೆಲ್ಲಲು ಪ್ರಮುಖ ಕಾರಣರಾದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಬೌಲಿಂಗ್ ಮಾಡಲು ಜಗಳ ನಡೆಸುತ್ತಿದ್ದರು ಎಂದು ಹೇಳಿದ್ದಾರೆ. ಈ ವಿಚಾರ ನಡೆದಿರುವುದು ತಮಾಷೆಯಾಗಿ ಎಂದೂ ಹೇಳಿದ್ದಾರೆ.

ಪಂದ್ಯದ ಬಳಿಕ ವೀಕ್ಷಕ ವಿವರಣೆಕಾರರಾದ ಇರ್ಫಾನ್ ಪಠಾಣ್ ಬಳಿ ಸಂದರ್ಶನ ನೀಡಿದ ರೋಹಿತ್, ಭಾರತ ಮೊದಲ ಟೆಸ್ಟ್ ಗೆಲ್ಲಲು ಪ್ರಮುಖ ಕಾರಣರಾದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಬೌಲಿಂಗ್ ಮಾಡಲು ಜಗಳ ನಡೆಸುತ್ತಿದ್ದರು ಎಂದು ಹೇಳಿದ್ದಾರೆ. ಈ ವಿಚಾರ ನಡೆದಿರುವುದು ತಮಾಷೆಯಾಗಿ ಎಂದೂ ಹೇಳಿದ್ದಾರೆ.

4 / 8
ಈ ಪಂದ್ಯದಲ್ಲಿ ಜಡೇಜಾ ಮತ್ತು ಅಶ್ವಿನ್ ಒಂದೊಂದು ದಾಖಲೆಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಜಡೇಜಾ ಟೆಸ್ಟ್ ಕ್ರಿಕೆಟ್​ನಲ್ಲಿ 249 ವಿಕೆಟ್ ಗಳಿಸಿದ್ದರು. ಅವರು ಒಂದು ವಿಕೆಟ್ ಪಡೆದರೆ 250 ವಿಕೆಟ್ ದಾಖಲೆ ಮಾಡುತ್ತಿದ್ದರು. ಈ ದಾಖಲೆ ನಿರ್ಮಿಸಲು ನನಗೆ ಬೌಲಿಂಗ್ ಕೊಡಿ ಎಂದು ಜಡೇಜಾ ನನ್ನ ಬಳಿ ಬಂದು ಕೇಳುತ್ತಿದ್ದರು - ರೋಹಿತ್ ಶರ್ಮಾ.

ಈ ಪಂದ್ಯದಲ್ಲಿ ಜಡೇಜಾ ಮತ್ತು ಅಶ್ವಿನ್ ಒಂದೊಂದು ದಾಖಲೆಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಜಡೇಜಾ ಟೆಸ್ಟ್ ಕ್ರಿಕೆಟ್​ನಲ್ಲಿ 249 ವಿಕೆಟ್ ಗಳಿಸಿದ್ದರು. ಅವರು ಒಂದು ವಿಕೆಟ್ ಪಡೆದರೆ 250 ವಿಕೆಟ್ ದಾಖಲೆ ಮಾಡುತ್ತಿದ್ದರು. ಈ ದಾಖಲೆ ನಿರ್ಮಿಸಲು ನನಗೆ ಬೌಲಿಂಗ್ ಕೊಡಿ ಎಂದು ಜಡೇಜಾ ನನ್ನ ಬಳಿ ಬಂದು ಕೇಳುತ್ತಿದ್ದರು - ರೋಹಿತ್ ಶರ್ಮಾ.

5 / 8
ಅತ್ತ ಆರ್. ಅಶ್ವಿನ್ ಈ ಇನಿಂಗ್ಸ್​ನಲ್ಲಿ 4 ವಿಕೆಟ್ ಕಿತ್ತಿದ್ದರು. ಅವರಿಗೆ ಮತ್ತೊಂದು 5 ವಿಕೆಟ್​ಗಳ ಗೊಂಚಲು ಪಡೆದ ದಾಖಲೆ ಮಾಡುವ ಹಂಬಲವಿತ್ತು. ಹೀಗಾಗಿ ಅಶ್ವಿನ್ ಕೂಡ ನನಗೆ ಬೌಲಿಂಗ್ ಕೊಡಬೇಕು ಎಂದು ಹೇಳುತ್ತಿದ್ದರು. ಇಬ್ಬರೂ ನನಗೆ ಬಾಲ್ ನೀಡಿ ಎಂದು ಪೈಪೋಟಿ ನಡೆಸುತ್ತಿದ್ದರು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಅತ್ತ ಆರ್. ಅಶ್ವಿನ್ ಈ ಇನಿಂಗ್ಸ್​ನಲ್ಲಿ 4 ವಿಕೆಟ್ ಕಿತ್ತಿದ್ದರು. ಅವರಿಗೆ ಮತ್ತೊಂದು 5 ವಿಕೆಟ್​ಗಳ ಗೊಂಚಲು ಪಡೆದ ದಾಖಲೆ ಮಾಡುವ ಹಂಬಲವಿತ್ತು. ಹೀಗಾಗಿ ಅಶ್ವಿನ್ ಕೂಡ ನನಗೆ ಬೌಲಿಂಗ್ ಕೊಡಬೇಕು ಎಂದು ಹೇಳುತ್ತಿದ್ದರು. ಇಬ್ಬರೂ ನನಗೆ ಬಾಲ್ ನೀಡಿ ಎಂದು ಪೈಪೋಟಿ ನಡೆಸುತ್ತಿದ್ದರು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

6 / 8
ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡದ ವಿರುದ್ಧ ಟೆಸ್ಟ್ ಸರಣಿ ಆಡುವಾಗ ಮೊದಲ ಪಂದ್ಯದ ಗೆಲುವು ಅತ್ಯಂತ ಮಹತ್ವದ್ದಾಗಿರುತ್ತದೆ. ತಂಡದ ಜಯದಲ್ಲಿ ನಾನು ಸಿಡಿಸಿದ ಶತಕ ಸಹಕಾರಿಯಾಗಿರುವುದು ನನಗೆ ಸಂತಸ ತಂದಿದೆ ಎಂಬುದು ರೋಹಿತ್ ಮಾತು.

ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡದ ವಿರುದ್ಧ ಟೆಸ್ಟ್ ಸರಣಿ ಆಡುವಾಗ ಮೊದಲ ಪಂದ್ಯದ ಗೆಲುವು ಅತ್ಯಂತ ಮಹತ್ವದ್ದಾಗಿರುತ್ತದೆ. ತಂಡದ ಜಯದಲ್ಲಿ ನಾನು ಸಿಡಿಸಿದ ಶತಕ ಸಹಕಾರಿಯಾಗಿರುವುದು ನನಗೆ ಸಂತಸ ತಂದಿದೆ ಎಂಬುದು ರೋಹಿತ್ ಮಾತು.

7 / 8
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಫೆಬ್ರವರಿ 17 ರಿಂದ ಫೆಬ್ರವರಿ 21 ರವರೆಗೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯವು ಬೆಳಗ್ಗೆ 09:30 ಕ್ಕೆ ಆರಂಭವಾಗಲಿದೆ. ಒಂಬತ್ತು ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಫೆಬ್ರವರಿ 17 ರಿಂದ ಫೆಬ್ರವರಿ 21 ರವರೆಗೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯವು ಬೆಳಗ್ಗೆ 09:30 ಕ್ಕೆ ಆರಂಭವಾಗಲಿದೆ. ಒಂಬತ್ತು ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

8 / 8
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್