AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್​ನಲ್ಲಿ ಈತ ಟೀಂ ಇಂಡಿಯಾವನ್ನು ಮುನ್ನಡೆಸಬೇಕು ಎಂದ ‘ದಾದಾ’

T20 World Cup 2024: ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂಬರುವ ಟಿ20 ವಿಶ್ವಕಪ್​ನಲ್ಲೂ ಆಡುವುದು ಭಾಗಶಃ ಖಚಿತವಾಗಿದೆ. ಈ ನಡುವೆ ಈ ಚುಟುಕು ವಿಶ್ವಕಪ್​ನಲ್ಲಿ ತಂಡದ ನಾಯಕತ್ವ ಯಾರು ನಿರ್ವಹಿಸಬೇಕು ಎಂಬ ಪ್ರಶ್ನೆಗೆ ಬಿಸಿಸಿಐನ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಮುಕ್ತವಾಗಿ ಉತ್ತರಿಸಿದ್ದಾರೆ.

ಪೃಥ್ವಿಶಂಕರ
|

Updated on: Jan 08, 2024 | 7:10 PM

Share
ಆಫ್ರಿಕಾ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿರುವ ಟೀಂ ಇಂಡಿಯಾ ಈಗ ಅಫ್ಘಾನಿಸ್ತಾನದ ವಿರುದ್ಧ 3 ಪಂದ್ಯಗಳ ಟಿ20 ಸರಣಿಯನ್ನು ಆಡಲು ತಯಾರಿ ನಡೆಸಿದೆ. ಈ ಸರಣಿಗಾಗಿ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ರೋಹಿತ್ ನಾಯಕತ್ವದಲ್ಲಿ ಬಲಿಷ್ಠ ತಂಡವನ್ನೇ ಬಿಸಿಸಿಐ ಆಯ್ಕೆ ಮಾಡಿದೆ.

ಆಫ್ರಿಕಾ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿರುವ ಟೀಂ ಇಂಡಿಯಾ ಈಗ ಅಫ್ಘಾನಿಸ್ತಾನದ ವಿರುದ್ಧ 3 ಪಂದ್ಯಗಳ ಟಿ20 ಸರಣಿಯನ್ನು ಆಡಲು ತಯಾರಿ ನಡೆಸಿದೆ. ಈ ಸರಣಿಗಾಗಿ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ರೋಹಿತ್ ನಾಯಕತ್ವದಲ್ಲಿ ಬಲಿಷ್ಠ ತಂಡವನ್ನೇ ಬಿಸಿಸಿಐ ಆಯ್ಕೆ ಮಾಡಿದೆ.

1 / 7
ಈ ಸರಣಿಗೆ ರೋಹಿತ್ ಶರ್ಮಾ ಜೊತೆಗೆ ವಿರಾಟ್ ಕೊಹ್ಲಿ ಕೂಡ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಈ ಇಬ್ಬರು ಆಟಗಾರರು ಮುಂಬರುವ ಟಿ20 ವಿಶ್ವಕಪ್​ನಲ್ಲೂ ಆಡುವುದು ಭಾಗಶಃ ಖಚಿತವಾಗಿದೆ. ಈ ನಡುವೆ ಈ ಚುಟುಕು ವಿಶ್ವಕಪ್​ನಲ್ಲಿ ತಂಡದ ನಾಯಕತ್ವ ಯಾರು ನಿರ್ವಹಿಸಬೇಕು ಎಂಬ ಪ್ರಶ್ನೆಗೆ ಬಿಸಿಸಿಐನ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಮುಕ್ತವಾಗಿ ಉತ್ತರಿಸಿದ್ದಾರೆ.

ಈ ಸರಣಿಗೆ ರೋಹಿತ್ ಶರ್ಮಾ ಜೊತೆಗೆ ವಿರಾಟ್ ಕೊಹ್ಲಿ ಕೂಡ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಈ ಇಬ್ಬರು ಆಟಗಾರರು ಮುಂಬರುವ ಟಿ20 ವಿಶ್ವಕಪ್​ನಲ್ಲೂ ಆಡುವುದು ಭಾಗಶಃ ಖಚಿತವಾಗಿದೆ. ಈ ನಡುವೆ ಈ ಚುಟುಕು ವಿಶ್ವಕಪ್​ನಲ್ಲಿ ತಂಡದ ನಾಯಕತ್ವ ಯಾರು ನಿರ್ವಹಿಸಬೇಕು ಎಂಬ ಪ್ರಶ್ನೆಗೆ ಬಿಸಿಸಿಐನ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಮುಕ್ತವಾಗಿ ಉತ್ತರಿಸಿದ್ದಾರೆ.

2 / 7
ಜೂನ್​ನಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಬೇಕು ಎಂದಿರುವ ಗಂಗೂಲಿ, ವಿರಾಟ್ ಕೊಹ್ಲಿ ಕೂಡ ತಂಡದಲ್ಲಿ ಇರಬೇಕು ಎಂದಿದ್ದಾರೆ. ವಿರಾಟ್ ಒಬ್ಬ ಶ್ರೇಷ್ಠ ಆಟಗಾರ. ಅವರು 14 ತಿಂಗಳ ನಂತರ ಟಿ20 ತಂಡದಲ್ಲಿ ಸ್ಥಾನ ಪಡೆದಿರುವುದು ಅವರ ಪ್ರದರ್ಶನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ.

ಜೂನ್​ನಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಬೇಕು ಎಂದಿರುವ ಗಂಗೂಲಿ, ವಿರಾಟ್ ಕೊಹ್ಲಿ ಕೂಡ ತಂಡದಲ್ಲಿ ಇರಬೇಕು ಎಂದಿದ್ದಾರೆ. ವಿರಾಟ್ ಒಬ್ಬ ಶ್ರೇಷ್ಠ ಆಟಗಾರ. ಅವರು 14 ತಿಂಗಳ ನಂತರ ಟಿ20 ತಂಡದಲ್ಲಿ ಸ್ಥಾನ ಪಡೆದಿರುವುದು ಅವರ ಪ್ರದರ್ಶನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ.

3 / 7
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಕಳೆದ ದಶಕದಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕದಲ್ಲಿ ಪ್ರಮುಖ ಕೊಂಡಿಗಳಾಗಿದ್ದಾರೆ. ಈ ಇಬ್ಬರೂ ಆಟಗಾರರು ಭಾರತ ತಂಡವನ್ನು ಅನೇಕ ಪಂದ್ಯಗಳಲ್ಲಿ ಗೆಲುವಿನ ದಡ ಸೇರಿಸಿದ್ದಾರೆ. ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4008 ರನ್ ಕಲೆಹಾಕಿರುವ ವಿರಾಟ್, ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ.

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಕಳೆದ ದಶಕದಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕದಲ್ಲಿ ಪ್ರಮುಖ ಕೊಂಡಿಗಳಾಗಿದ್ದಾರೆ. ಈ ಇಬ್ಬರೂ ಆಟಗಾರರು ಭಾರತ ತಂಡವನ್ನು ಅನೇಕ ಪಂದ್ಯಗಳಲ್ಲಿ ಗೆಲುವಿನ ದಡ ಸೇರಿಸಿದ್ದಾರೆ. ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 4008 ರನ್ ಕಲೆಹಾಕಿರುವ ವಿರಾಟ್, ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ.

4 / 7
ಕೊಹ್ಲಿ ಜೊತೆಗೆ ಈ ಚುಟುಕು ಮಾದರಿಯಲ್ಲಿ ರೋಹಿತ್ ಶರ್ಮಾ ಅವರ ಪ್ರದರ್ಶನವೂ ಗಮನಾರ್ಹವಾಗಿದ್ದು, ಈ ಮಾದರಿಯಲ್ಲಿ ಹಿಟ್​ಮ್ಯಾನ್ 3853 ರನ್ ಬಾರಿಸುವುದರೊಂದಿಗೆ ಅಧಿಕ ರನ್ ಬಾರಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಅಲ್ಲದೆ ಅಂತರಾಷ್ಟ್ರೀಯ ಟಿ20ಯಲ್ಲಿ ನಾಲ್ಕು ಶತಕಗಳನ್ನು ಸಿಡಿಸಿದ್ದಾರೆ.

ಕೊಹ್ಲಿ ಜೊತೆಗೆ ಈ ಚುಟುಕು ಮಾದರಿಯಲ್ಲಿ ರೋಹಿತ್ ಶರ್ಮಾ ಅವರ ಪ್ರದರ್ಶನವೂ ಗಮನಾರ್ಹವಾಗಿದ್ದು, ಈ ಮಾದರಿಯಲ್ಲಿ ಹಿಟ್​ಮ್ಯಾನ್ 3853 ರನ್ ಬಾರಿಸುವುದರೊಂದಿಗೆ ಅಧಿಕ ರನ್ ಬಾರಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಅಲ್ಲದೆ ಅಂತರಾಷ್ಟ್ರೀಯ ಟಿ20ಯಲ್ಲಿ ನಾಲ್ಕು ಶತಕಗಳನ್ನು ಸಿಡಿಸಿದ್ದಾರೆ.

5 / 7
ಈ ಇಬ್ಬರೊಂದಿಗೆ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್​ರನ್ನು ಹೊಗಳಿರುವ ದಾದಾ, ‘ಈ ಯುವ ಆರಂಭಿಕ ಬ್ಯಾಟ್ಸ್‌ಮನ್ ಭವಿಷ್ಯದಲ್ಲಿ ಸಾಕಷ್ಟು ಅವಕಾಶಗಳನ್ನು ಪಡೆಯಲ್ಲಿದ್ದಾರೆ. 22 ವರ್ಷ ವಯಸ್ಸಿನ ಬ್ಯಾಟ್ಸ್‌ಮನ್ ಸೆಂಚುರಿಯನ್ ಮತ್ತು ಕೇಪ್ ಟೌನ್ ಟೆಸ್ಟ್‌ಗಳ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಕೇವಲ 50 ರನ್ ಗಳಿಸಲು ಸಾಧ್ಯವಾಯಿತು. ಆದರೆ ಎರಡನೇ ಟೆಸ್ಟ್‌ನಲ್ಲಿ ಉತ್ತಮವಾಗಿ ಆಡಿದರು.

ಈ ಇಬ್ಬರೊಂದಿಗೆ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್​ರನ್ನು ಹೊಗಳಿರುವ ದಾದಾ, ‘ಈ ಯುವ ಆರಂಭಿಕ ಬ್ಯಾಟ್ಸ್‌ಮನ್ ಭವಿಷ್ಯದಲ್ಲಿ ಸಾಕಷ್ಟು ಅವಕಾಶಗಳನ್ನು ಪಡೆಯಲ್ಲಿದ್ದಾರೆ. 22 ವರ್ಷ ವಯಸ್ಸಿನ ಬ್ಯಾಟ್ಸ್‌ಮನ್ ಸೆಂಚುರಿಯನ್ ಮತ್ತು ಕೇಪ್ ಟೌನ್ ಟೆಸ್ಟ್‌ಗಳ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಕೇವಲ 50 ರನ್ ಗಳಿಸಲು ಸಾಧ್ಯವಾಯಿತು. ಆದರೆ ಎರಡನೇ ಟೆಸ್ಟ್‌ನಲ್ಲಿ ಉತ್ತಮವಾಗಿ ಆಡಿದರು.

6 / 7
ಇದು ಅವರ ವೃತ್ತಿಜೀವನದ ಆರಂಭವಾಗಿದೆ. ಅವರಿಗೆ ಸಾಕಷ್ಟು ಅವಕಾಶಗಳು ಸಿಗಲಿವೆ. ಒಂದು ಪಂದ್ಯದಲ್ಲಿ ಸೋತರೆ ತಂಡದ ಬಗ್ಗೆ ಜನರು ತುಂಬಾ ಮಾತನಾಡುತ್ತಾರೆ. ಆದರೆ ಭಾರತವು ಬಲಿಷ್ಠ ತಂಡವಾಗಿದೆ. ಆದರೆ ಅವರು ಹೇಗೆ ಆಡಿದರು ಎಂಬುದನ್ನು ನೋಡಿ. ಟೆಸ್ಟ್ ಮತ್ತು ಟಿ20 ಅಂತರಾಷ್ಟ್ರೀಯ ಸರಣಿಗಳೆರಡನ್ನೂ ಡ್ರಾ ಮಾಡಿಕೊಂಡರೆ ಏಕದಿನ ಸರಣಿಯನ್ನು ಗೆದ್ದಿದ್ದಾರೆ ಎಂದು ಗಂಗೂಲಿ ತಂಡದ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.

ಇದು ಅವರ ವೃತ್ತಿಜೀವನದ ಆರಂಭವಾಗಿದೆ. ಅವರಿಗೆ ಸಾಕಷ್ಟು ಅವಕಾಶಗಳು ಸಿಗಲಿವೆ. ಒಂದು ಪಂದ್ಯದಲ್ಲಿ ಸೋತರೆ ತಂಡದ ಬಗ್ಗೆ ಜನರು ತುಂಬಾ ಮಾತನಾಡುತ್ತಾರೆ. ಆದರೆ ಭಾರತವು ಬಲಿಷ್ಠ ತಂಡವಾಗಿದೆ. ಆದರೆ ಅವರು ಹೇಗೆ ಆಡಿದರು ಎಂಬುದನ್ನು ನೋಡಿ. ಟೆಸ್ಟ್ ಮತ್ತು ಟಿ20 ಅಂತರಾಷ್ಟ್ರೀಯ ಸರಣಿಗಳೆರಡನ್ನೂ ಡ್ರಾ ಮಾಡಿಕೊಂಡರೆ ಏಕದಿನ ಸರಣಿಯನ್ನು ಗೆದ್ದಿದ್ದಾರೆ ಎಂದು ಗಂಗೂಲಿ ತಂಡದ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.

7 / 7
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ