AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ನೇಪಾಳ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸ: ಫೋಟೋ ನೋಡಿ

India vs Nepal, Asia Cup 2023: ನೇಪಾಳ ವಿರುದ್ಧದ ಪಂದ್ಯಕ್ಕೆ ಭಾರತ ಭರ್ಜರಿ ಆಗಿ ಅಭ್ಯಾಸ ಮಾಡುತ್ತಿದೆ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್ ಮೈದಾನದಲ್ಲಿ ಬೆವರು ಹರಿಸುತ್ತಿದ್ದಾರೆ. ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು.

Vinay Bhat
|

Updated on: Sep 04, 2023 | 10:38 AM

ಏಷ್ಯಾಕಪ್ 2023ರ ಟೂರ್ನಿಯಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಐದನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವ ಭಾರತ ರೋಹಿತ್ ಪೌಡೆಲ್ ನೇತೃತ್ವದ ನೇಪಾಳ ತಂಡವನ್ನು ಎದುರಿಸಲಿದೆ. ವಿಶೇಷ ಎಂದರೆ ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಏಷ್ಯಾಕಪ್ 2023ರ ಟೂರ್ನಿಯಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಐದನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವ ಭಾರತ ರೋಹಿತ್ ಪೌಡೆಲ್ ನೇತೃತ್ವದ ನೇಪಾಳ ತಂಡವನ್ನು ಎದುರಿಸಲಿದೆ. ವಿಶೇಷ ಎಂದರೆ ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

1 / 8
ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ ಇಂಡೋ-ನೇಪಾಳ್ ಮುಖಾಮುಖಿ ಆಗುತ್ತಿರುವುದು ಇದೇ ಮೊದಲ ಬಾರಿ. ಪಾಕ್ ವಿರುದ್ಧದ ಪಂದ್ಯ ರದ್ದಾದ ಪರಿಣಾಮ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲೇ ಬೇಕಿದೆ. ಅತ್ತ ನೇಪಾಳ ಕೂಡ ಪಾಕ್ ವಿರುದ್ಧ ಸೋತಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದ ತಂಡ ಸೂಪರ್-4 ಹಂತಕ್ಕೆ ತೇರ್ಗಡೆಯಾದರೆ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ.

ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ ಇಂಡೋ-ನೇಪಾಳ್ ಮುಖಾಮುಖಿ ಆಗುತ್ತಿರುವುದು ಇದೇ ಮೊದಲ ಬಾರಿ. ಪಾಕ್ ವಿರುದ್ಧದ ಪಂದ್ಯ ರದ್ದಾದ ಪರಿಣಾಮ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲೇ ಬೇಕಿದೆ. ಅತ್ತ ನೇಪಾಳ ಕೂಡ ಪಾಕ್ ವಿರುದ್ಧ ಸೋತಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದ ತಂಡ ಸೂಪರ್-4 ಹಂತಕ್ಕೆ ತೇರ್ಗಡೆಯಾದರೆ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ.

2 / 8
ಇದೀಗ ನೇಪಾಳ ವಿರುದ್ಧದ ಪಂದ್ಯಕ್ಕೆ ಭಾರತ ಭರ್ಜರಿ ಆಗಿ ಅಭ್ಯಾಸ ಮಾಡುತ್ತಿದೆ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್ ಮೈದಾನದಲ್ಲಿ ಬೆವರು ಹರಿಸುತ್ತಿದ್ದಾರೆ. ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು.

ಇದೀಗ ನೇಪಾಳ ವಿರುದ್ಧದ ಪಂದ್ಯಕ್ಕೆ ಭಾರತ ಭರ್ಜರಿ ಆಗಿ ಅಭ್ಯಾಸ ಮಾಡುತ್ತಿದೆ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್ ಮೈದಾನದಲ್ಲಿ ಬೆವರು ಹರಿಸುತ್ತಿದ್ದಾರೆ. ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು.

3 / 8
ಭಾರತ ತಂಡಕ್ಕೆ ಅಗ್ರಕ್ರಮಾಂಕದ್ದೇ ಚಿಂತೆ. ರೋಹಿತ್ ಹಾಗೂ ಗಿಲ್ ಉತ್ತಮ ಆರಂಭ ಒದಗಿಸುತ್ತಿಲ್ಲ. ಕೊಹ್ಲಿ ಮತ್ತೆ ಫಾರ್ಮ್ ಕಳೆದುಕೊಂಡಂತೆ ಕಾಣಿಸುತ್ತಿದೆ. ನಾಲ್ಕನೇ ಕ್ರಮಾಂಕಕ್ಕೆ ಬಂದ ಅಯ್ಯರ್ ಮೋಡಿ ಮಾಡುವಲ್ಲಿ ವಿಫಲರಾಗಿದ್ದಾರೆ. ಹೀಗೆ ಟೀಮ್ ಇಂಡಿಯಾ ಬ್ಯಾಟಿಂಗ್​ನಲ್ಲಿ ಸಾಕಷ್ಟು ತೊಂದರೆಗಳಿವೆ. ಇವುಗಳನ್ನೆಲ್ಲ ಸರಿಪಡಿಸಿ ಇಂದು ಕಣಕ್ಕಿಳಿಯಬೇಕಿದೆ.

ಭಾರತ ತಂಡಕ್ಕೆ ಅಗ್ರಕ್ರಮಾಂಕದ್ದೇ ಚಿಂತೆ. ರೋಹಿತ್ ಹಾಗೂ ಗಿಲ್ ಉತ್ತಮ ಆರಂಭ ಒದಗಿಸುತ್ತಿಲ್ಲ. ಕೊಹ್ಲಿ ಮತ್ತೆ ಫಾರ್ಮ್ ಕಳೆದುಕೊಂಡಂತೆ ಕಾಣಿಸುತ್ತಿದೆ. ನಾಲ್ಕನೇ ಕ್ರಮಾಂಕಕ್ಕೆ ಬಂದ ಅಯ್ಯರ್ ಮೋಡಿ ಮಾಡುವಲ್ಲಿ ವಿಫಲರಾಗಿದ್ದಾರೆ. ಹೀಗೆ ಟೀಮ್ ಇಂಡಿಯಾ ಬ್ಯಾಟಿಂಗ್​ನಲ್ಲಿ ಸಾಕಷ್ಟು ತೊಂದರೆಗಳಿವೆ. ಇವುಗಳನ್ನೆಲ್ಲ ಸರಿಪಡಿಸಿ ಇಂದು ಕಣಕ್ಕಿಳಿಯಬೇಕಿದೆ.

4 / 8
ಇದರ ನಡುವೆ ನೇಪಾಳ ವಿರುದ್ಧದ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಅವರು ಕಣಕ್ಕಿಳಿಯುವುದಿಲ್ಲ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಾರಣ ಬುಮ್ರಾ ದಿಢೀರ್ ಆಗಿ ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಇವರ ಬದಲು ಮೊಹಮ್ಮದ್ ಶಮಿ ಆಡುವುದು ಬಹುತೇಕ ಖಚಿತವಾಗಿದೆ. ಶಾರ್ದೂಲ್ ಥಾಕೂರ್ ಅವರನ್ನು ಕೈಬಿಟ್ಟು ಪ್ರಸಿದ್ಧ್ ಕೃಷ್ಣ ಆಡುವ ಸಂಭವವಿದೆ.

ಇದರ ನಡುವೆ ನೇಪಾಳ ವಿರುದ್ಧದ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಅವರು ಕಣಕ್ಕಿಳಿಯುವುದಿಲ್ಲ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಾರಣ ಬುಮ್ರಾ ದಿಢೀರ್ ಆಗಿ ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಇವರ ಬದಲು ಮೊಹಮ್ಮದ್ ಶಮಿ ಆಡುವುದು ಬಹುತೇಕ ಖಚಿತವಾಗಿದೆ. ಶಾರ್ದೂಲ್ ಥಾಕೂರ್ ಅವರನ್ನು ಕೈಬಿಟ್ಟು ಪ್ರಸಿದ್ಧ್ ಕೃಷ್ಣ ಆಡುವ ಸಂಭವವಿದೆ.

5 / 8
ಪಲ್ಲಕೆಲೆ ನಿಧಾನಗತಿಯ ಪಿಚ್ ಆಗಿರುವುದರಿಂದ ಬ್ಯಾಟ್ಸ್​ಮನ್​ಗಳು ರನ್ ಕದಿಯಲು ಪರದಾಡುವುದು ಖಚಿತ. ಇದು ಕಳೆದ ಪಂದ್ಯದಲ್ಲಿ ಕೂಡ ಕಂಡುಬಂತು. ಇಲ್ಲಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡುವುದು ಉತ್ತಮ. ಈ ಮೈದಾನದಲ್ಲಿ ರನ್ ಚೇಸ್​ನ ದಾಖಲೆಯು ಅತ್ಯುತ್ತಮವಾಗಿದೆ.

ಪಲ್ಲಕೆಲೆ ನಿಧಾನಗತಿಯ ಪಿಚ್ ಆಗಿರುವುದರಿಂದ ಬ್ಯಾಟ್ಸ್​ಮನ್​ಗಳು ರನ್ ಕದಿಯಲು ಪರದಾಡುವುದು ಖಚಿತ. ಇದು ಕಳೆದ ಪಂದ್ಯದಲ್ಲಿ ಕೂಡ ಕಂಡುಬಂತು. ಇಲ್ಲಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡುವುದು ಉತ್ತಮ. ಈ ಮೈದಾನದಲ್ಲಿ ರನ್ ಚೇಸ್​ನ ದಾಖಲೆಯು ಅತ್ಯುತ್ತಮವಾಗಿದೆ.

6 / 8
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

7 / 8
ನೇಪಾಳ ತಂಡ: ರೋಹಿತ್ ಪೌಡೆಲ್ (ನಾಯಕ), ಆಸಿಫ್ ಶೇಖ್, ಕುಶಾಲ್ ಭುರ್ಟೆಲ್, ಲಲಿತ್ ರಾಜಬಂಶಿ, ಭೀಮ್ ಸರ್ಕಿ, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಸಂದೀಪ್ ಲಮಿಚಾನೆ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್, ಆರಿಫ್ ಶೇಖ್, ಪ್ರತಿಸ್ ಜಿಸಿ, ಕಿಶೋರ್ ಮಹತೋ, ಅರ್ಜುನ್, ಸಂದೀಪ್ ಜೋರಾ, ಸೌದ್ ಮತ್ತು ಶ್ಯಾಮ್ ಧಾಕಲ್.

ನೇಪಾಳ ತಂಡ: ರೋಹಿತ್ ಪೌಡೆಲ್ (ನಾಯಕ), ಆಸಿಫ್ ಶೇಖ್, ಕುಶಾಲ್ ಭುರ್ಟೆಲ್, ಲಲಿತ್ ರಾಜಬಂಶಿ, ಭೀಮ್ ಸರ್ಕಿ, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಸಂದೀಪ್ ಲಮಿಚಾನೆ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್, ಆರಿಫ್ ಶೇಖ್, ಪ್ರತಿಸ್ ಜಿಸಿ, ಕಿಶೋರ್ ಮಹತೋ, ಅರ್ಜುನ್, ಸಂದೀಪ್ ಜೋರಾ, ಸೌದ್ ಮತ್ತು ಶ್ಯಾಮ್ ಧಾಕಲ್.

8 / 8
Follow us
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ