AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಆಫ್ರಿಕಾದಲ್ಲಿ ಅತ್ಯಂತ ಕಳಪೆ ಬ್ಯಾಟಿಂಗ್ ದಾಖಲೆ ಹೊಂದಿರುವ ರೋಹಿತ್ ಶರ್ಮಾ

India vs South Africa: ತಂಡದಲ್ಲಿ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಇದ್ದಾರೆ. ಇಬ್ಬರು ಅತ್ಯುತ್ತಮ ಓಪನಿಂಗ್ ಜೋಡಿಯಾಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಹಿಟ್​ಮ್ಯಾನ್ ಅನುಪಸ್ಥಿತಿಯನ್ನು ಈ ಇಬ್ಬರು ಕ್ರಿಕೆಟಿಗರು ಸರಿದೂಗಿಸುವ ವಿಶ್ವಾಸವಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Dec 13, 2021 | 10:07 PM

Share
ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಸರಣಿಯಿಂದ ಗಾಯದ ಕಾರಣ ಹೊರಗುಳಿದಿದ್ದಾರೆ. ಮಂಡಿರಜ್ಜುಗೆ ಗಾಯ ಮಾಡಿಕೊಂಡಿರುವ ಹಿಟ್​ಮ್ಯಾನ್ ಮೂರು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಆದರೆ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯು ಟೀಮ್ ಇಂಡಿಯಾ ಮೇಲೆ ದೊಡ್ಡ ಪರಿಣಾಮ ಬೀರುವುದಿಲ್ಲ. ಏಕೆಂದರೆ ಹರಿಣರ ನಾಡಲ್ಲಿ ಹಿಟ್​ಮ್ಯಾನ್ ಅತ್ಯಂತ ಕಳಪೆ ದಾಖಲೆ ಹೊಂದಿದ್ದಾರೆ.

ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಸರಣಿಯಿಂದ ಗಾಯದ ಕಾರಣ ಹೊರಗುಳಿದಿದ್ದಾರೆ. ಮಂಡಿರಜ್ಜುಗೆ ಗಾಯ ಮಾಡಿಕೊಂಡಿರುವ ಹಿಟ್​ಮ್ಯಾನ್ ಮೂರು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಆದರೆ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯು ಟೀಮ್ ಇಂಡಿಯಾ ಮೇಲೆ ದೊಡ್ಡ ಪರಿಣಾಮ ಬೀರುವುದಿಲ್ಲ. ಏಕೆಂದರೆ ಹರಿಣರ ನಾಡಲ್ಲಿ ಹಿಟ್​ಮ್ಯಾನ್ ಅತ್ಯಂತ ಕಳಪೆ ದಾಖಲೆ ಹೊಂದಿದ್ದಾರೆ.

1 / 5
ಭಾರತ ತಂಡವು ಕೊನೆಯ ಬಾರಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದು 2018 ರಲ್ಲಿ. ಈ ವೇಳೆ ಟೀಮ್ ಇಂಡಿಯಾ ಮೂರು ಟೆಸ್ಟ್ ಪಂದ್ಯಗಳನ್ನು ಆಡಿತ್ತು. ಈ ವೇಳೆ 2 ಪಂದ್ಯಗಳಲ್ಲಿ ಹಿಟ್​ಮ್ಯಾನ್ ಬ್ಯಾಟ್ ಬೀಸಿದ್ದರು. ಆದರೆ ಮೊದಲ ಟೆಸ್ಟ್​ನ ಎರಡೂ ಇನಿಂಗ್ಸ್​ ಸೇರಿ ಒಟ್ಟು ಕಲೆಹಾಕಿದ್ದು ಕೇವಲ 21 ರನ್ ಮಾತ್ರ.

ಭಾರತ ತಂಡವು ಕೊನೆಯ ಬಾರಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದು 2018 ರಲ್ಲಿ. ಈ ವೇಳೆ ಟೀಮ್ ಇಂಡಿಯಾ ಮೂರು ಟೆಸ್ಟ್ ಪಂದ್ಯಗಳನ್ನು ಆಡಿತ್ತು. ಈ ವೇಳೆ 2 ಪಂದ್ಯಗಳಲ್ಲಿ ಹಿಟ್​ಮ್ಯಾನ್ ಬ್ಯಾಟ್ ಬೀಸಿದ್ದರು. ಆದರೆ ಮೊದಲ ಟೆಸ್ಟ್​ನ ಎರಡೂ ಇನಿಂಗ್ಸ್​ ಸೇರಿ ಒಟ್ಟು ಕಲೆಹಾಕಿದ್ದು ಕೇವಲ 21 ರನ್ ಮಾತ್ರ.

2 / 5
 ಅದೇ ರೀತಿ ಎರಡನೇ ಪಂದ್ಯದಲ್ಲೂ ರೋಹಿತ್ ಶರ್ಮಾ ಕಣಕ್ಕಿಳಿದಿದ್ದರು. ಈ ವೇಳೆ ಮೊದಲ ಇನಿಂಗ್ಸ್​ನಲ್ಲಿ 10 ರನ್ ಬಾರಿಸಿದ್ದ ಹಿಟ್​ಮ್ಯಾನ್ 2ನೇ ಇನಿಂಗ್ಸ್​ 47 ರನ್​ ಕಲೆಹಾಕಿದ್ದರು. ಕಳಪೆ ಬ್ಯಾಟಿಂಗ್ ಕಾರಣ ಮೂರನೇ ಪಂದ್ಯದಿಂದ ರೋಹಿತ್ ಶರ್ಮಾ ಅವರನ್ನು ಕೈಬಿಡಲಾಗಿತ್ತು.

ಅದೇ ರೀತಿ ಎರಡನೇ ಪಂದ್ಯದಲ್ಲೂ ರೋಹಿತ್ ಶರ್ಮಾ ಕಣಕ್ಕಿಳಿದಿದ್ದರು. ಈ ವೇಳೆ ಮೊದಲ ಇನಿಂಗ್ಸ್​ನಲ್ಲಿ 10 ರನ್ ಬಾರಿಸಿದ್ದ ಹಿಟ್​ಮ್ಯಾನ್ 2ನೇ ಇನಿಂಗ್ಸ್​ 47 ರನ್​ ಕಲೆಹಾಕಿದ್ದರು. ಕಳಪೆ ಬ್ಯಾಟಿಂಗ್ ಕಾರಣ ಮೂರನೇ ಪಂದ್ಯದಿಂದ ರೋಹಿತ್ ಶರ್ಮಾ ಅವರನ್ನು ಕೈಬಿಡಲಾಗಿತ್ತು.

3 / 5
ಇನ್ನು ರೋಹಿತ್ ಶರ್ಮಾ ಇದುವರೆಗೆ ದಕ್ಷಿಣ ಆಫ್ರಿಕಾ ವಿರುದ್ದ 4 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಇದರಲ್ಲಿ 8 ಇನಿಂಗ್ಸ್ ಆಡಿರುವ ಹಿಟ್​​ಮ್ಯಾನ್ ಒಟ್ಟು ಕಲೆಹಾಕಿರುವುದು ಕೇವಲ 123 ರನ್​ ಮಾತ್ರ. ಅಂದರೆ ದಕ್ಷಿಣ ಆಫ್ರಿಕಾ ವಿರುದ್ದ ರೋಹಿತ್ ಶರ್ಮಾ ಅವರ ಇನಿಂಗ್ಸ್​ ಸರಾಸರಿ 15.38 ರನ್ ಮಾತ್ರ. ಈ ಅಂಕಿ ಅಂಶಗಳನ್ನು ಗಮನಿಸಿದರೆ ದಕ್ಷಿಣ ಆಫ್ರಿಕಾ ಸರಣಿಯಿಂದ ರೋಹಿತ್ ಶರ್ಮಾ ಹೊರಗುಳಿದರೂ ಟೀಮ್ ಇಂಡಿಯಾ ಬ್ಯಾಟಿಂಗ್ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಯಿಲ್ಲ.

ಇನ್ನು ರೋಹಿತ್ ಶರ್ಮಾ ಇದುವರೆಗೆ ದಕ್ಷಿಣ ಆಫ್ರಿಕಾ ವಿರುದ್ದ 4 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಇದರಲ್ಲಿ 8 ಇನಿಂಗ್ಸ್ ಆಡಿರುವ ಹಿಟ್​​ಮ್ಯಾನ್ ಒಟ್ಟು ಕಲೆಹಾಕಿರುವುದು ಕೇವಲ 123 ರನ್​ ಮಾತ್ರ. ಅಂದರೆ ದಕ್ಷಿಣ ಆಫ್ರಿಕಾ ವಿರುದ್ದ ರೋಹಿತ್ ಶರ್ಮಾ ಅವರ ಇನಿಂಗ್ಸ್​ ಸರಾಸರಿ 15.38 ರನ್ ಮಾತ್ರ. ಈ ಅಂಕಿ ಅಂಶಗಳನ್ನು ಗಮನಿಸಿದರೆ ದಕ್ಷಿಣ ಆಫ್ರಿಕಾ ಸರಣಿಯಿಂದ ರೋಹಿತ್ ಶರ್ಮಾ ಹೊರಗುಳಿದರೂ ಟೀಮ್ ಇಂಡಿಯಾ ಬ್ಯಾಟಿಂಗ್ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಯಿಲ್ಲ.

4 / 5
ಮತ್ತೊಂದೆಡೆ ತಂಡದಲ್ಲಿ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಇದ್ದಾರೆ. ಇಬ್ಬರು ಅತ್ಯುತ್ತಮ ಓಪನಿಂಗ್ ಜೋಡಿಯಾಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಹಿಟ್​ಮ್ಯಾನ್ ಅನುಪಸ್ಥಿತಿಯನ್ನು ಈ ಇಬ್ಬರು ಕ್ರಿಕೆಟಿಗರು ಸರಿದೂಗಿಸುವ ವಿಶ್ವಾಸವಿದೆ. ಅದರಂತೆ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಲಿದೆಯಾ ಕಾದು ನೋಡಬೇಕಿದೆ.

ಮತ್ತೊಂದೆಡೆ ತಂಡದಲ್ಲಿ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಇದ್ದಾರೆ. ಇಬ್ಬರು ಅತ್ಯುತ್ತಮ ಓಪನಿಂಗ್ ಜೋಡಿಯಾಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಹಿಟ್​ಮ್ಯಾನ್ ಅನುಪಸ್ಥಿತಿಯನ್ನು ಈ ಇಬ್ಬರು ಕ್ರಿಕೆಟಿಗರು ಸರಿದೂಗಿಸುವ ವಿಶ್ವಾಸವಿದೆ. ಅದರಂತೆ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಲಿದೆಯಾ ಕಾದು ನೋಡಬೇಕಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ