Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ರೋಹಿತ್ ಶರ್ಮಾ ರಿಎಂಟ್ರಿ: ಹಾರ್ದಿಕ್ ಪಾಂಡ್ಯ ಕನಸು ಭಗ್ನ..!

T20 World Cup 2024: ಮುಂಬರುವ ಟಿ20 ವಿಶ್ವಕಪ್​ನಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಟಿ20 ವರ್ಲ್ಡ್​ಕಪ್ ಹಿನ್ನಲೆಯಲ್ಲೇ ಈ ಇಬ್ಬರು ಆಟಗಾರರನ್ನು ಟಿ20 ತಂಡಕ್ಕೆ ಮತ್ತೆ ಆಯ್ಕೆ ಮಾಡಲಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 08, 2024 | 6:27 AM

ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾದ ತಂಡದಲ್ಲಿ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಂಡಿದ್ದಾರೆ. ಅಂದರೆ ಬರೋಬ್ಬರಿ 14 ತಿಂಗಳುಗಳ ಬಳಿಕ ಇಬ್ಬರು ದಿಗ್ಗಜರು ಮತ್ತೆ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾದ ತಂಡದಲ್ಲಿ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಂಡಿದ್ದಾರೆ. ಅಂದರೆ ಬರೋಬ್ಬರಿ 14 ತಿಂಗಳುಗಳ ಬಳಿಕ ಇಬ್ಬರು ದಿಗ್ಗಜರು ಮತ್ತೆ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

1 / 6
ಇದರೊಂದಿಗೆ ಮುಂಬರುವ ಟಿ20 ವಿಶ್ವಕಪ್​ನಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಟಿ20 ವರ್ಲ್ಡ್​ಕಪ್ ಹಿನ್ನಲೆಯಲ್ಲೇ ಈ ಇಬ್ಬರು ಆಟಗಾರರನ್ನು ಟಿ20 ತಂಡಕ್ಕೆ ಮತ್ತೆ ಆಯ್ಕೆ ಮಾಡಲಾಗಿದೆ. ಹೀಗಾಗಿ ರೋಹಿತ್ ಶರ್ಮಾ ಸಾರಥ್ಯದಲ್ಲೇ ಟಿ20 ವಿಶ್ವಕಪ್​ನಲ್ಲೂ ಭಾರತ ತಂಡ ಕಣಕ್ಕಿಳಿಯಲಿದೆ.

ಇದರೊಂದಿಗೆ ಮುಂಬರುವ ಟಿ20 ವಿಶ್ವಕಪ್​ನಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಟಿ20 ವರ್ಲ್ಡ್​ಕಪ್ ಹಿನ್ನಲೆಯಲ್ಲೇ ಈ ಇಬ್ಬರು ಆಟಗಾರರನ್ನು ಟಿ20 ತಂಡಕ್ಕೆ ಮತ್ತೆ ಆಯ್ಕೆ ಮಾಡಲಾಗಿದೆ. ಹೀಗಾಗಿ ರೋಹಿತ್ ಶರ್ಮಾ ಸಾರಥ್ಯದಲ್ಲೇ ಟಿ20 ವಿಶ್ವಕಪ್​ನಲ್ಲೂ ಭಾರತ ತಂಡ ಕಣಕ್ಕಿಳಿಯಲಿದೆ.

2 / 6
ಅತ್ತ ಕಳೆದ ಒಂದು ವರ್ಷದಿಂದ ಟಿ20 ತಂಡದ ನಾಯಕನಾಗಿ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ ಸೈಡ್​ಲೈನ್​ಗೆ ಸರಿಯಲಿದ್ದಾರೆ. ಅಂದರೆ ಪಾಂಡ್ಯ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸುವ ಇರಾದೆಯಲ್ಲಿದ್ದರು.

ಅತ್ತ ಕಳೆದ ಒಂದು ವರ್ಷದಿಂದ ಟಿ20 ತಂಡದ ನಾಯಕನಾಗಿ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ ಸೈಡ್​ಲೈನ್​ಗೆ ಸರಿಯಲಿದ್ದಾರೆ. ಅಂದರೆ ಪಾಂಡ್ಯ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸುವ ಇರಾದೆಯಲ್ಲಿದ್ದರು.

3 / 6
ಆದರೀಗ ರೋಹಿತ್ ಶರ್ಮಾ ಅವರ ರಿಎಂಟ್ರಿಯೊಂದಿಗೆ ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸುವ ಹಾರ್ದಿಕ್ ಪಾಂಡ್ಯ ಅವರ ಕನಸು ಭಗ್ನಗೊಂಡಿದೆ. ಅಷ್ಟೇ ಅಲ್ಲದೆ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ಸಂಪೂರ್ಣ ಫಿಟ್​ನೆಸ್ ಸಾಬೀತುಪಡಿಸಬೇಕಾದ ಅನಿವಾರ್ಯತೆ ಹಾರ್ದಿಕ್ ಪಾಂಡ್ಯ ಮುಂದಿದೆ.

ಆದರೀಗ ರೋಹಿತ್ ಶರ್ಮಾ ಅವರ ರಿಎಂಟ್ರಿಯೊಂದಿಗೆ ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸುವ ಹಾರ್ದಿಕ್ ಪಾಂಡ್ಯ ಅವರ ಕನಸು ಭಗ್ನಗೊಂಡಿದೆ. ಅಷ್ಟೇ ಅಲ್ಲದೆ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ಸಂಪೂರ್ಣ ಫಿಟ್​ನೆಸ್ ಸಾಬೀತುಪಡಿಸಬೇಕಾದ ಅನಿವಾರ್ಯತೆ ಹಾರ್ದಿಕ್ ಪಾಂಡ್ಯ ಮುಂದಿದೆ.

4 / 6
ಒಟ್ಟಿನಲ್ಲಿ ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗೂ ಮುನ್ನ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಕಂಬ್ಯಾಕ್ ಟೀಮ್ ಇಂಡಿಯಾ ಪಾಲಿಗೆ ಶುಭ ಸೂಚನೆ ಎನ್ನಬಹುದು. ಈ ಶುಭ ಸೂಚನೆಯೊಂದಿಗೆ ಈ ಬಾರಿ ಭಾರತ ತಂಡ ವರ್ಲ್ಡ್​ಕಪ್ ಮುಡಿಗೇರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗೂ ಮುನ್ನ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಕಂಬ್ಯಾಕ್ ಟೀಮ್ ಇಂಡಿಯಾ ಪಾಲಿಗೆ ಶುಭ ಸೂಚನೆ ಎನ್ನಬಹುದು. ಈ ಶುಭ ಸೂಚನೆಯೊಂದಿಗೆ ಈ ಬಾರಿ ಭಾರತ ತಂಡ ವರ್ಲ್ಡ್​ಕಪ್ ಮುಡಿಗೇರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

5 / 6
ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಕೇಶ್ ಕುಮಾರ್.

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಕೇಶ್ ಕುಮಾರ್.

6 / 6
Follow us
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?