AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ರೋಹಿತ್ ಶರ್ಮಾ ಅಭಿಮಾನಿಗಳಿಗೆ ಶಾಕ್ ನೀಡಿದ ಹಿಟ್​ಮ್ಯಾನ್ ಬಾಲ್ಯದ ಕೋಚ್

Rohit Sharma: ಏಕದಿನ ಮಾದರಿಯಲ್ಲಿ ಇನ್ನು ಸ್ವಲ್ಪ ವರ್ಷ ಆಡುವ ಸಲುವಾಗಿ ರೋಹಿತ್ ಶರ್ಮಾ ಟೆಸ್ಟ್​ಗೆ ವಿದಾಯ ಹೇಳಿದರೂ ಹೇಳಬಹುದು. ಆದರೆ, ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡಲಿದ್ದಾರೆ ಎಂದು ಭರವಸೆ ನೀಡುತ್ತೇನೆ ಎಂದು ರೋಹಿತ್ ಅವರ ಬಾಲ್ಯದ ಕೋಚ್ ದಿನೇಶ್ ಲಾಡ್ ಹೇಳಿದ್ದಾರೆ.

ಪೃಥ್ವಿಶಂಕರ
|

Updated on: Oct 07, 2024 | 9:37 PM

Share
ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಕಳೆದ ಜೂನ್‌ನಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮತ್ತು. ಈ ಐತಿಹಾಸಿಕ ಗೆಲುವಿನ ನಂತರ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಇದೀಗ ರೋಹಿತ್ ಅವರ ನಿವೃತ್ತಿಯ ಬಗ್ಗೆ ಹೊಸ ಊಹಪೋಹಗಳು ಹುಟ್ಟಿಕೊಂಡಿವೆ.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಕಳೆದ ಜೂನ್‌ನಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮತ್ತು. ಈ ಐತಿಹಾಸಿಕ ಗೆಲುವಿನ ನಂತರ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಇದೀಗ ರೋಹಿತ್ ಅವರ ನಿವೃತ್ತಿಯ ಬಗ್ಗೆ ಹೊಸ ಊಹಪೋಹಗಳು ಹುಟ್ಟಿಕೊಂಡಿವೆ.

1 / 6
ವಾಸ ಮುಂದಿನ ವರ್ಷ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ನಡೆಯಲಿದೆ. ಈ ಬಾರಿಯೂ ಫೈನಲ್‌ಗೆ ಟೀಂ ಇಂಡಿಯಾ ದೊಡ್ಡ ಸ್ಪರ್ಧಿಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ರೋಹಿತ್ ಶರ್ಮಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ನಂತರ ಏಕದಿನ ಮತ್ತು ಟೆಸ್ಟ್‌ನಿಂದ ನಿವೃತ್ತಿ ಹೊಂದಬಹುದು ಎಂದು ವದಂತಿ ಎದ್ದಿದೆ.

ವಾಸ ಮುಂದಿನ ವರ್ಷ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ನಡೆಯಲಿದೆ. ಈ ಬಾರಿಯೂ ಫೈನಲ್‌ಗೆ ಟೀಂ ಇಂಡಿಯಾ ದೊಡ್ಡ ಸ್ಪರ್ಧಿಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ರೋಹಿತ್ ಶರ್ಮಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ನಂತರ ಏಕದಿನ ಮತ್ತು ಟೆಸ್ಟ್‌ನಿಂದ ನಿವೃತ್ತಿ ಹೊಂದಬಹುದು ಎಂದು ವದಂತಿ ಎದ್ದಿದೆ.

2 / 6
ಆದರೆ ಈ ವದಂತಿಗಳಿಗೆಲ್ಲ ರೋಹಿತ್ ಶರ್ಮಾ ಅವರ ಬಾಲ್ಯದ ಕೋಚ್ ದಿನೇಶ್ ಲಾಡ್ ದೊಡ್ಡ ಹೇಳಿಕೆ ನೀಡಿದ್ದಾರೆ. ದಿನೇಶ್ ಅವರ ಪ್ರಕಾರ, ‘ರೋಹಿತ್ ಶರ್ಮಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಂತರ ನಿವೃತ್ತಿ ಘೋಷಿಸುವ ಸಾಧ್ಯತೆಗಳಿಲ್ಲ. ಆದರೆ ಅದನ್ನು ತಳ್ಳಿಹಾಕುವಂತಿಲ್ಲ. ಏಕೆಂದರೆ ರೋಹಿತ್ ಅವರು ವಯಸ್ಸಿನ ಕಾರಣ ನೀಡಿ ಟೆಸ್ಟ್​ನಿಂದ ದೂರ ಸರಿಯಬಹುದು.

ಆದರೆ ಈ ವದಂತಿಗಳಿಗೆಲ್ಲ ರೋಹಿತ್ ಶರ್ಮಾ ಅವರ ಬಾಲ್ಯದ ಕೋಚ್ ದಿನೇಶ್ ಲಾಡ್ ದೊಡ್ಡ ಹೇಳಿಕೆ ನೀಡಿದ್ದಾರೆ. ದಿನೇಶ್ ಅವರ ಪ್ರಕಾರ, ‘ರೋಹಿತ್ ಶರ್ಮಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಂತರ ನಿವೃತ್ತಿ ಘೋಷಿಸುವ ಸಾಧ್ಯತೆಗಳಿಲ್ಲ. ಆದರೆ ಅದನ್ನು ತಳ್ಳಿಹಾಕುವಂತಿಲ್ಲ. ಏಕೆಂದರೆ ರೋಹಿತ್ ಅವರು ವಯಸ್ಸಿನ ಕಾರಣ ನೀಡಿ ಟೆಸ್ಟ್​ನಿಂದ ದೂರ ಸರಿಯಬಹುದು.

3 / 6
ಅಲ್ಲದೆ ಏಕದಿನ ಮಾದರಿಯಲ್ಲಿ ಇನ್ನು ಸ್ವಲ್ಪ ವರ್ಷ ಆಡುವ ಸಲುವಾಗಿ ರೋಹಿತ್ ಶರ್ಮಾ ಟೆಸ್ಟ್​ಗೆ ವಿದಾಯ ಹೇಳಿದರೂ ಹೇಳಬಹುದು. ಆದರೆ, ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡಲಿದ್ದಾರೆ ಎಂದು ಭರವಸೆ ನೀಡುತ್ತೇನೆ ಎಂದು ಅವರ ಬಾಲ್ಯದ ಕೋಚ್ ಹೇಳಿದ್ದಾರೆ.

ಅಲ್ಲದೆ ಏಕದಿನ ಮಾದರಿಯಲ್ಲಿ ಇನ್ನು ಸ್ವಲ್ಪ ವರ್ಷ ಆಡುವ ಸಲುವಾಗಿ ರೋಹಿತ್ ಶರ್ಮಾ ಟೆಸ್ಟ್​ಗೆ ವಿದಾಯ ಹೇಳಿದರೂ ಹೇಳಬಹುದು. ಆದರೆ, ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡಲಿದ್ದಾರೆ ಎಂದು ಭರವಸೆ ನೀಡುತ್ತೇನೆ ಎಂದು ಅವರ ಬಾಲ್ಯದ ಕೋಚ್ ಹೇಳಿದ್ದಾರೆ.

4 / 6
ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿತ್ತು. ಟೂರ್ನಿಯಲ್ಲಿ ಟೀಂ ಇಂಡಿಯಾ ಸತತ 10 ಪಂದ್ಯಗಳನ್ನು ಗೆದ್ದುಕೊಂಡಿತ್ತು. ಆದರೆ ಪ್ರಶಸ್ತಿ ಪಂದ್ಯದಲ್ಲಿ ಸೋಲಿನ ಶಾಕ್ ಎದುರಿಸಿತ್ತು. ಆದರೆ, ನಾಯಕ ರೋಹಿತ್ ಶರ್ಮಾ ಆಡಿದ 11 ಪಂದ್ಯಗಳಲ್ಲಿ 54.27 ಸರಾಸರಿಯಲ್ಲಿ 597 ರನ್ ಗಳಿಸಿದ್ದರು.

ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿತ್ತು. ಟೂರ್ನಿಯಲ್ಲಿ ಟೀಂ ಇಂಡಿಯಾ ಸತತ 10 ಪಂದ್ಯಗಳನ್ನು ಗೆದ್ದುಕೊಂಡಿತ್ತು. ಆದರೆ ಪ್ರಶಸ್ತಿ ಪಂದ್ಯದಲ್ಲಿ ಸೋಲಿನ ಶಾಕ್ ಎದುರಿಸಿತ್ತು. ಆದರೆ, ನಾಯಕ ರೋಹಿತ್ ಶರ್ಮಾ ಆಡಿದ 11 ಪಂದ್ಯಗಳಲ್ಲಿ 54.27 ಸರಾಸರಿಯಲ್ಲಿ 597 ರನ್ ಗಳಿಸಿದ್ದರು.

5 / 6
ಇದೀಗ ಏಕದಿನ ವಿಶ್ವಕಪ್‌ನ ಮುಂದಿನ ಆವೃತ್ತಿಯು 3 ವರ್ಷಗಳ ನಂತರ ಅಂದರೆ 2027 ರಲ್ಲಿ ನಡೆಯಲಿದೆ. ಇದರ ಪ್ರಕಾರ ಮುಂದಿನ ವಿಶ್ವಕಪ್ ವೇಳೆಗೆ ರೋಹಿತ್​ಗೆ 39 ವರ್ಷ ತುಂಬಲಿದೆ. ಪಂದ್ಯಾವಳಿ ಸೆಪ್ಟೆಂಬರ್ ಮತ್ತು ನವೆಂಬರ್ ನಡುವೆ ನಡೆದರೆ, ಆಗ ರೋಹಿತ್​ಗೆ 40 ವರ್ಷ ಆಗಿರಲಿದೆ. ಇಂತಹ ಪರಿಸ್ಥಿತಿಯಲ್ಲಿ ರೋಹಿತ್ 2027ರ ವಿಶ್ವಕಪ್ ಆಡಬೇಕೆಂದರೆ ಫಿಟ್ನೆಸ್ ಮೇಲೆ ಸಾಕಷ್ಟು ಶ್ರಮಪಡಬೇಕಾಗುತ್ತದೆ.

ಇದೀಗ ಏಕದಿನ ವಿಶ್ವಕಪ್‌ನ ಮುಂದಿನ ಆವೃತ್ತಿಯು 3 ವರ್ಷಗಳ ನಂತರ ಅಂದರೆ 2027 ರಲ್ಲಿ ನಡೆಯಲಿದೆ. ಇದರ ಪ್ರಕಾರ ಮುಂದಿನ ವಿಶ್ವಕಪ್ ವೇಳೆಗೆ ರೋಹಿತ್​ಗೆ 39 ವರ್ಷ ತುಂಬಲಿದೆ. ಪಂದ್ಯಾವಳಿ ಸೆಪ್ಟೆಂಬರ್ ಮತ್ತು ನವೆಂಬರ್ ನಡುವೆ ನಡೆದರೆ, ಆಗ ರೋಹಿತ್​ಗೆ 40 ವರ್ಷ ಆಗಿರಲಿದೆ. ಇಂತಹ ಪರಿಸ್ಥಿತಿಯಲ್ಲಿ ರೋಹಿತ್ 2027ರ ವಿಶ್ವಕಪ್ ಆಡಬೇಕೆಂದರೆ ಫಿಟ್ನೆಸ್ ಮೇಲೆ ಸಾಕಷ್ಟು ಶ್ರಮಪಡಬೇಕಾಗುತ್ತದೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ