AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rovman Powell: 10 ಸಿಕ್ಸ್​, 4 ಫೋರ್: ಪೊವೆಲ್​ಗೆ ಪವರ್​ಫುಲ್ ಶತಕ ಜಸ್ಟ್​ ಮಿಸ್

ILT20: 20ನೇ ಓವರ್​ನ ಅಂತಿಮ ಎಸೆತದಲ್ಲಿ ಭರ್ಜರಿ ಸಿಕ್ಸ್ ಬಾರಿಸಲು ಯತ್ನಿಸಿದ ಪೊವೆಲ್ ಕ್ಯಾಚ್ ಔಟಾದರು. ಇದರೊಂದಿಗೆ ಕೇವಲ 3 ರನ್​ಗಳಿಂದ ಶತಕ ವಂಚಿತರಾದರು.

TV9 Web
| Edited By: |

Updated on: Jan 22, 2023 | 10:31 PM

Share
ದುಬೈ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ILT20 ಲೀಗ್​ನಲ್ಲಿ ವೆಸ್ಟ್ ಇಂಡೀಸ್ ದಾಂಡಿಗ ರೋವ್​ಮನ್ ಪೊವೆಲ್ ಸಿಕ್ಸ್​ಗಳ ಸುರಿಮಳೆಗೈದಿದ್ದಾರೆ. ಈ ಲೀಗ್​ನ 13ನೇ ಪಂದ್ಯದಲ್ಲಿ ದುಬೈ ಕ್ಯಾಪಿಟಲ್ಸ್ ಹಾಗೂ ಎಂಐ ಎಮಿರೇಟ್ಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಎಮಿರೇಟ್ಸ್​ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು.

ದುಬೈ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ILT20 ಲೀಗ್​ನಲ್ಲಿ ವೆಸ್ಟ್ ಇಂಡೀಸ್ ದಾಂಡಿಗ ರೋವ್​ಮನ್ ಪೊವೆಲ್ ಸಿಕ್ಸ್​ಗಳ ಸುರಿಮಳೆಗೈದಿದ್ದಾರೆ. ಈ ಲೀಗ್​ನ 13ನೇ ಪಂದ್ಯದಲ್ಲಿ ದುಬೈ ಕ್ಯಾಪಿಟಲ್ಸ್ ಹಾಗೂ ಎಂಐ ಎಮಿರೇಟ್ಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಎಮಿರೇಟ್ಸ್​ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ದುಬೈ ಕ್ಯಾಪಿಟಲ್ಸ್ ಪರ ರಾಬಿನ್ ಉತ್ತಪ್ಪ ಹಾಗೂ ಜೋ ರೂಟ್ ಇನಿಂಗ್ಸ್ ಆರಂಭಿಸಿದರು. ಆದರೆ ಕೇವಲ 26 ರನ್​ಗಳಿಸಿ ಉತ್ತಪ್ಪ ಹೊರನಡೆದರು. ಈ ವೇಳೆ ಕಣಕ್ಕಿಳಿದ ರೋವ್​ಮನ್ ಪೊವೆಲ್ ಬಿರುಸಿನ ಬ್ಯಾಟಿಂಗ್​ ಮೂಲಕ ಗಮನ ಸೆಳೆದರು.

ಅದರಂತೆ ದುಬೈ ಕ್ಯಾಪಿಟಲ್ಸ್ ಪರ ರಾಬಿನ್ ಉತ್ತಪ್ಪ ಹಾಗೂ ಜೋ ರೂಟ್ ಇನಿಂಗ್ಸ್ ಆರಂಭಿಸಿದರು. ಆದರೆ ಕೇವಲ 26 ರನ್​ಗಳಿಸಿ ಉತ್ತಪ್ಪ ಹೊರನಡೆದರು. ಈ ವೇಳೆ ಕಣಕ್ಕಿಳಿದ ರೋವ್​ಮನ್ ಪೊವೆಲ್ ಬಿರುಸಿನ ಬ್ಯಾಟಿಂಗ್​ ಮೂಲಕ ಗಮನ ಸೆಳೆದರು.

2 / 5
ಆಕ್ರಮಣಕಾರಿ ಹೊಡೆತಗಳೊಂದಿಗೆ ಅಬ್ಬರಿಸಿದ ಪೊವೆಲ್ ಎಮಿರೇಟ್ಸ್​ ಬೌಲರ್​ಗಳನ್ನು ಹಿಗ್ಗಾಮುಗ್ಗಾ ದಂಡಿಸಿದರು. ಪರಿಣಾಮ 12ನೇ ಓವರ್​ನಲ್ಲಿ ತಂಡದ ಮೊತ್ತವು 100ರ ಗಡಿದಾಟಿತು. ಇದರ ನಡುವೆ 34 ಎಸೆತಗಳಲ್ಲಿ ರೂಟ್ ಅರ್ಧಶತಕ ಪೂರೈಸಿದರು. ಮತ್ತೊಂದೆಡೆ ಸಿಡಿಲಬ್ಬರ ಮುಂದುವರೆಸಿದ ಪೊವೆಲ್ ಕೇವಲ 22 ಎಸೆತಗಳಲ್ಲಿ ಹಾಫ್​ ಸೆಂಚುರಿ ಸಿಡಿಸಿದರು.

ಆಕ್ರಮಣಕಾರಿ ಹೊಡೆತಗಳೊಂದಿಗೆ ಅಬ್ಬರಿಸಿದ ಪೊವೆಲ್ ಎಮಿರೇಟ್ಸ್​ ಬೌಲರ್​ಗಳನ್ನು ಹಿಗ್ಗಾಮುಗ್ಗಾ ದಂಡಿಸಿದರು. ಪರಿಣಾಮ 12ನೇ ಓವರ್​ನಲ್ಲಿ ತಂಡದ ಮೊತ್ತವು 100ರ ಗಡಿದಾಟಿತು. ಇದರ ನಡುವೆ 34 ಎಸೆತಗಳಲ್ಲಿ ರೂಟ್ ಅರ್ಧಶತಕ ಪೂರೈಸಿದರು. ಮತ್ತೊಂದೆಡೆ ಸಿಡಿಲಬ್ಬರ ಮುಂದುವರೆಸಿದ ಪೊವೆಲ್ ಕೇವಲ 22 ಎಸೆತಗಳಲ್ಲಿ ಹಾಫ್​ ಸೆಂಚುರಿ ಸಿಡಿಸಿದರು.

3 / 5
ಅರ್ಧಶತಕದ ಬಳಿಕ ಪೊವೆಲ್ ಸಿಕ್ಸ್​ಗಳ ಸುರಿಮಳೆಗೈದರು. ಪರಿಣಾಮ 16 ಓವರ್​ ಮುಕ್ತಾಯದ ವೇಳೆಗೆ ತಂಡದ ಮೊತ್ತ 170ರ ಗಡಿದಾಟಿತು. ಅಂದರೆ ಪೊವೆಲ್​ ಪವರ್​ನೊಂದಿಗೆ ಕೇವಲ ಐದು ಓವರ್​ಗಳಲ್ಲಿ ದುಬೈ ಕ್ಯಾಪಿಟಲ್ಸ್ ತಂಡವು 70 ರನ್​ ಕಲೆಹಾಕಿತ್ತು.

ಅರ್ಧಶತಕದ ಬಳಿಕ ಪೊವೆಲ್ ಸಿಕ್ಸ್​ಗಳ ಸುರಿಮಳೆಗೈದರು. ಪರಿಣಾಮ 16 ಓವರ್​ ಮುಕ್ತಾಯದ ವೇಳೆಗೆ ತಂಡದ ಮೊತ್ತ 170ರ ಗಡಿದಾಟಿತು. ಅಂದರೆ ಪೊವೆಲ್​ ಪವರ್​ನೊಂದಿಗೆ ಕೇವಲ ಐದು ಓವರ್​ಗಳಲ್ಲಿ ದುಬೈ ಕ್ಯಾಪಿಟಲ್ಸ್ ತಂಡವು 70 ರನ್​ ಕಲೆಹಾಕಿತ್ತು.

4 / 5
20ನೇ ಓವರ್​ನ ಅಂತಿಮ ಎಸೆತದಲ್ಲಿ ಭರ್ಜರಿ ಸಿಕ್ಸ್ ಬಾರಿಸಲು ಯತ್ನಿಸಿದ ಪೊವೆಲ್ ಕ್ಯಾಚ್ ಔಟಾದರು. ಇದರೊಂದಿಗೆ ಕೇವಲ 3 ರನ್​ಗಳಿಂದ ಶತಕ ವಂಚಿತರಾದರು. ಇದಾಗ್ಯೂ 41 ಎಸೆತಗಳಲ್ಲಿ 10 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ನೊಂದಿಗೆ ರೋವ್​ಮನ್ 97 ರನ್ ಬಾರಿಸಿ ದುಬೈ ಕ್ಯಾಪಿಟಲ್ಸ್ ತಂಡದ ಮೊತ್ತವನ್ನು 3 ವಿಕೆಟ್ ನಷ್ಟಕ್ಕೆ 222 ಕ್ಕೆ ತಂದು ನಿಲ್ಲಿಸಿದರು.

20ನೇ ಓವರ್​ನ ಅಂತಿಮ ಎಸೆತದಲ್ಲಿ ಭರ್ಜರಿ ಸಿಕ್ಸ್ ಬಾರಿಸಲು ಯತ್ನಿಸಿದ ಪೊವೆಲ್ ಕ್ಯಾಚ್ ಔಟಾದರು. ಇದರೊಂದಿಗೆ ಕೇವಲ 3 ರನ್​ಗಳಿಂದ ಶತಕ ವಂಚಿತರಾದರು. ಇದಾಗ್ಯೂ 41 ಎಸೆತಗಳಲ್ಲಿ 10 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ನೊಂದಿಗೆ ರೋವ್​ಮನ್ 97 ರನ್ ಬಾರಿಸಿ ದುಬೈ ಕ್ಯಾಪಿಟಲ್ಸ್ ತಂಡದ ಮೊತ್ತವನ್ನು 3 ವಿಕೆಟ್ ನಷ್ಟಕ್ಕೆ 222 ಕ್ಕೆ ತಂದು ನಿಲ್ಲಿಸಿದರು.

5 / 5
ಎಸ್​ಯುವಿಯಲ್ಲಿ ರಾಶಿಗಟ್ಟಲೆ ಶಾಲಾ ಮಕ್ಕಳನ್ನು ತುಂಬಿದ ವಿಡಿಯೋ ವೈರಲ್
ಎಸ್​ಯುವಿಯಲ್ಲಿ ರಾಶಿಗಟ್ಟಲೆ ಶಾಲಾ ಮಕ್ಕಳನ್ನು ತುಂಬಿದ ವಿಡಿಯೋ ವೈರಲ್
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ