AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jofra Archer RCB: ಆರ್​ಸಿಬಿ ಬೌಲಿಂಗ್​ಗೆ ಬಂತು ಆನೆ ಬಲ: ಟಾಮ್ ಕರನ್ ಬದಲಿಗೆ ಸ್ಪೋಟಕ ವೇಗಿ ಎಂಟ್ರಿ?

IPL 2024: ಆರ್​ಸಿಬಿ ತಂಡದ ಇಂಗ್ಲಿಷ್ ಆಲ್ ರೌಂಡರ್ ಟಾಮ್ ಕರನ್ ಗಾಯಗೊಂಡಿದ್ದಾರೆ. ಇದೀಗ ಐಪಿಎಲ್​ಗೆ ಇವರ ಲಭ್ಯತೆ ಬಗ್ಗೆ ಗೊಂದಲವಿದೆ. ಹೀಗಿರುವಾಗ ಆರ್​ಸಿಬಿ ತಂಡ ಇಂಗ್ಲೆಂಡ್ ಘಾತಕ ವೇಗಿ ಜೋಫ್ರಾ ಆರ್ಚರ್‌ಗೆ ಸಹಿ ಹಾಕಲು ಮುಂದಾಗಿದೆ ಎಂದು ಹೇಳಲಾಗಿದೆ.

Vinay Bhat
|

Updated on: Mar 15, 2024 | 10:58 AM

Share
ಐಪಿಎಲ್ 2024ರ ಹೊಸ ಸೀಸನ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಆದರೆ, ಈ ಬಾರಿ ಕೆಲ ಸ್ಟಾರ್ ಆಟಗಾರರು ಇಂಜುರಿ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಆಡಲು ಸಾಧ್ಯವಾಗುತ್ತಿಲ್ಲ. ಇವರ ಜಾಗಕ್ಕೆ ಬದಲಿ ಆಟಗಾರರು ಪ್ರವೇಶಿಸುತ್ತಿದ್ದಾರೆ. ಈ ಸಮಸ್ಯೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕೂಡ ಉದ್ಭವಿಸಿದೆ.

ಐಪಿಎಲ್ 2024ರ ಹೊಸ ಸೀಸನ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಆದರೆ, ಈ ಬಾರಿ ಕೆಲ ಸ್ಟಾರ್ ಆಟಗಾರರು ಇಂಜುರಿ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಆಡಲು ಸಾಧ್ಯವಾಗುತ್ತಿಲ್ಲ. ಇವರ ಜಾಗಕ್ಕೆ ಬದಲಿ ಆಟಗಾರರು ಪ್ರವೇಶಿಸುತ್ತಿದ್ದಾರೆ. ಈ ಸಮಸ್ಯೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕೂಡ ಉದ್ಭವಿಸಿದೆ.

1 / 6
ಆರ್​ಸಿಬಿ ತಂಡದ ಇಂಗ್ಲಿಷ್ ಆಲ್ ರೌಂಡರ್ ಟಾಮ್ ಕರನ್ ಗಾಯಗೊಂಡಿದ್ದಾರೆ. ಜನವರಿಯಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್‌ನಲ್ಲಿ ಟಾಮ್ ಇಂಜುರಿಗೆ ತುತ್ತಾಗಿದ್ದರು. ಇದೀಗ ಐಪಿಎಲ್​ಗೆ ಇವರ ಲಭ್ಯತೆ ಬಗ್ಗೆ ಗೊಂದಲವಿದೆ. ಹೀಗಿರುವಾಗ ಆರ್​ಸಿಬಿ ಮತ್ತೊಬ್ಬ ಮಾರಕ ವೇಗಿಯನ್ನು ಕರೆತರಲು ಮುಂದಾಗಿದೆ ಎಂದು ಹೇಳಲಾಗಿದೆ.

ಆರ್​ಸಿಬಿ ತಂಡದ ಇಂಗ್ಲಿಷ್ ಆಲ್ ರೌಂಡರ್ ಟಾಮ್ ಕರನ್ ಗಾಯಗೊಂಡಿದ್ದಾರೆ. ಜನವರಿಯಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್‌ನಲ್ಲಿ ಟಾಮ್ ಇಂಜುರಿಗೆ ತುತ್ತಾಗಿದ್ದರು. ಇದೀಗ ಐಪಿಎಲ್​ಗೆ ಇವರ ಲಭ್ಯತೆ ಬಗ್ಗೆ ಗೊಂದಲವಿದೆ. ಹೀಗಿರುವಾಗ ಆರ್​ಸಿಬಿ ಮತ್ತೊಬ್ಬ ಮಾರಕ ವೇಗಿಯನ್ನು ಕರೆತರಲು ಮುಂದಾಗಿದೆ ಎಂದು ಹೇಳಲಾಗಿದೆ.

2 / 6
ಫಾಫ್ ಡುಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡ ಇಂಗ್ಲೆಂಡ್ ಘಾತಕ ವೇಗಿ ಜೋಫ್ರಾ ಆರ್ಚರ್‌ಗೆ ಸಹಿ ಹಾಕಲು ಮುಂದಾಗಿದೆ ಎಂದು ಹೇಳಲಾಗಿದೆ. ಜೋಫ್ರಾ ಆರ್ಚರ್ ಕಳೆದ 3 ವರ್ಷಗಳಿಂದ ಐಪಿಎಲ್ ಆಡಿಲ್ಲ. ಸತತವಾಗಿ ಗಾಯಗಳಿಂದ ಬಳಲುತ್ತಿದ್ದಾರೆ. ಆದರೀಗ ಆರ್ಚರ್ ಭಾರತದಲ್ಲಿದ್ದಾರೆ. ಅದುಕೂಡ ಬೆಂಗಳೂರಿನಲ್ಲಿ.

ಫಾಫ್ ಡುಪ್ಲೆಸಿಸ್ ನಾಯಕತ್ವದ ಆರ್‌ಸಿಬಿ ತಂಡ ಇಂಗ್ಲೆಂಡ್ ಘಾತಕ ವೇಗಿ ಜೋಫ್ರಾ ಆರ್ಚರ್‌ಗೆ ಸಹಿ ಹಾಕಲು ಮುಂದಾಗಿದೆ ಎಂದು ಹೇಳಲಾಗಿದೆ. ಜೋಫ್ರಾ ಆರ್ಚರ್ ಕಳೆದ 3 ವರ್ಷಗಳಿಂದ ಐಪಿಎಲ್ ಆಡಿಲ್ಲ. ಸತತವಾಗಿ ಗಾಯಗಳಿಂದ ಬಳಲುತ್ತಿದ್ದಾರೆ. ಆದರೀಗ ಆರ್ಚರ್ ಭಾರತದಲ್ಲಿದ್ದಾರೆ. ಅದುಕೂಡ ಬೆಂಗಳೂರಿನಲ್ಲಿ.

3 / 6
ಆರ್ಚರ್ ಪ್ರಸ್ತುತ ತನ್ನ ಕೌಂಟಿ ಕ್ಲಬ್ ಸಸೆಕ್ಸ್‌ನೊಂದಿಗೆ ಭಾರತ ಪ್ರವಾಸ ಮಾಡುತ್ತಿದ್ದಾರೆ. ಸಸೆಕ್ಸ್ ತಂಡ ಪ್ರಥಮ ದರ್ಜೆ ಪಂದ್ಯಗಳನ್ನು ಆಡಲಿದೆ. ಸದ್ಯ ತಂಡ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಡೆಸುತ್ತಿದೆ. ಹೀಗಿರುವಾಗ ಈ ಋತುವಿನಲ್ಲಿ ಆಡಲು ಆರ್ಚರ್ ಅವರನ್ನು ಆರ್​ಸಿಬಿ ಸಂಪರ್ಕಿಸಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಹರಿದಾಡಿದೆ.

ಆರ್ಚರ್ ಪ್ರಸ್ತುತ ತನ್ನ ಕೌಂಟಿ ಕ್ಲಬ್ ಸಸೆಕ್ಸ್‌ನೊಂದಿಗೆ ಭಾರತ ಪ್ರವಾಸ ಮಾಡುತ್ತಿದ್ದಾರೆ. ಸಸೆಕ್ಸ್ ತಂಡ ಪ್ರಥಮ ದರ್ಜೆ ಪಂದ್ಯಗಳನ್ನು ಆಡಲಿದೆ. ಸದ್ಯ ತಂಡ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಡೆಸುತ್ತಿದೆ. ಹೀಗಿರುವಾಗ ಈ ಋತುವಿನಲ್ಲಿ ಆಡಲು ಆರ್ಚರ್ ಅವರನ್ನು ಆರ್​ಸಿಬಿ ಸಂಪರ್ಕಿಸಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಹರಿದಾಡಿದೆ.

4 / 6
ಆರ್ಚರ್ ಸಸೆಕ್ಸ್ ತಂಡದೊಂದಿಗೆ ಭಾರತಕ್ಕೆ ಬಂದಿದ್ದು ಟಿ20 ವಿಶ್ವಕಪ್‌ಗೆ ತಯಾರಿ ನಡೆಸುವುದಕ್ಕಾಗಿ. ಜೂನ್‌ನಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಅದಕ್ಕೂ ಮುನ್ನ ಆರ್ಚರ್ ಸಂಪೂರ್ಣ ಫಿಟ್ ಆಗಬೇಕು ಎಂದು ಇಂಗ್ಲೆಂಡ್ ನಿರೀಕ್ಷಿಸುತ್ತದೆ. ಇದಕ್ಕೆ ಐಪಿಎಲ್ ಕೂಡ ವೇದಿಕೆ ಆಗುವ ಸಾಧ್ಯತೆ ಇದೆ. ಆದರೆ, ಈ ಸುದ್ದಿ ಎಷ್ಟರ ಮಟ್ಟಿಗೆ ಸತ್ಯ ಎಂಬುದು ಇನ್ನಷ್ಟೆ ತಿಳಿದುಬರಬೇಕಿದೆ.

ಆರ್ಚರ್ ಸಸೆಕ್ಸ್ ತಂಡದೊಂದಿಗೆ ಭಾರತಕ್ಕೆ ಬಂದಿದ್ದು ಟಿ20 ವಿಶ್ವಕಪ್‌ಗೆ ತಯಾರಿ ನಡೆಸುವುದಕ್ಕಾಗಿ. ಜೂನ್‌ನಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಅದಕ್ಕೂ ಮುನ್ನ ಆರ್ಚರ್ ಸಂಪೂರ್ಣ ಫಿಟ್ ಆಗಬೇಕು ಎಂದು ಇಂಗ್ಲೆಂಡ್ ನಿರೀಕ್ಷಿಸುತ್ತದೆ. ಇದಕ್ಕೆ ಐಪಿಎಲ್ ಕೂಡ ವೇದಿಕೆ ಆಗುವ ಸಾಧ್ಯತೆ ಇದೆ. ಆದರೆ, ಈ ಸುದ್ದಿ ಎಷ್ಟರ ಮಟ್ಟಿಗೆ ಸತ್ಯ ಎಂಬುದು ಇನ್ನಷ್ಟೆ ತಿಳಿದುಬರಬೇಕಿದೆ.

5 / 6
ಐಪಿಎಲ್ 2024ಕ್ಕೆ ಆರ್​ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಜಯ್‌ಕುಮಾರ್ ವೈಶಾಕ್, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಅಲ್ಝಾರಿ ಜೋಸೆಫ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ಸ್ವಪ್ನಿಲ್ ಸಿಂಗ್, ಟಾಮ್ ಕರನ್, ಸೌರವ್ ಚೌಹಾಣ್, ಯಶ್ ದಯಾಳ್, ಲಾಕಿ ಫರ್ಗುಸನ್.

ಐಪಿಎಲ್ 2024ಕ್ಕೆ ಆರ್​ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಜಯ್‌ಕುಮಾರ್ ವೈಶಾಕ್, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಅಲ್ಝಾರಿ ಜೋಸೆಫ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ಸ್ವಪ್ನಿಲ್ ಸಿಂಗ್, ಟಾಮ್ ಕರನ್, ಸೌರವ್ ಚೌಹಾಣ್, ಯಶ್ ದಯಾಳ್, ಲಾಕಿ ಫರ್ಗುಸನ್.

6 / 6
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು