AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs RR: W,W,W, W.. ಸಿಎಸ್​ಕೆ ಪೆವಿಲಿಯನ್ ಪರೇಡ್ ಶುರು

IPL 2026, CSK Powerplay Collapse vs RR: ಐಪಿಎಲ್ 2026ರ ರಾಜಸ್ಥಾನ್ ರಾಯಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದಲ್ಲಿ CSK ಬ್ಯಾಟಿಂಗ್ ಕುಸಿತ ಕಂಡಿದೆ. ಪವರ್‌ಪ್ಲೇನಲ್ಲಿಯೇ ರುತುರಾಜ್ ಗಾಯಕ್ವಾಡ್ ಮತ್ತು ಸಂಜು ಸ್ಯಾಮ್ಸನ್ ಸೇರಿದಂತೆ 4 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 41 ರನ್ ಗಳಿಸಿದೆ. ಈ ಅನಿರೀಕ್ಷಿತ ಆರಂಭ ತಂಡವನ್ನು ತೀವ್ರ ಒತ್ತಡಕ್ಕೆ ಸಿಲುಕಿಸಿದೆ, ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ಪೃಥ್ವಿಶಂಕರ
|

Updated on: Mar 30, 2026 | 8:31 PM

Share
ಐಪಿಎಲ್ 2026 ರ ಮೂರನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಲೀಗ್​ನ ಮೊದಲೆರಡು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ತಂಡಗಳು ಪವರ್‌ಪ್ಲೇನಲ್ಲಿ ರನ್​ ಮಳೆಯನ್ನೇ ಹರಿಸಿದ್ದವು. ಹೀಗಾಗಿ ಈ ಪಂದ್ಯದಲ್ಲೂ ಅದೇ ನಿರೀಕ್ಷೆಯನ್ನು ಇಡಲಾಗಿತ್ತು. ಆದರೆ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಸಿಎಸ್​ಕೆ ಪವರ್‌ಪ್ಲೇನಲ್ಲಿಯೇ ಪವರ್ ಕಳೆದುಕೊಂಡಿದೆ.

ಐಪಿಎಲ್ 2026 ರ ಮೂರನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಲೀಗ್​ನ ಮೊದಲೆರಡು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ತಂಡಗಳು ಪವರ್‌ಪ್ಲೇನಲ್ಲಿ ರನ್​ ಮಳೆಯನ್ನೇ ಹರಿಸಿದ್ದವು. ಹೀಗಾಗಿ ಈ ಪಂದ್ಯದಲ್ಲೂ ಅದೇ ನಿರೀಕ್ಷೆಯನ್ನು ಇಡಲಾಗಿತ್ತು. ಆದರೆ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಸಿಎಸ್​ಕೆ ಪವರ್‌ಪ್ಲೇನಲ್ಲಿಯೇ ಪವರ್ ಕಳೆದುಕೊಂಡಿದೆ.

1 / 6
ಗುವಾಹಟಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಸಿಎಸ್​ಕೆ ಪವರ್‌ಪ್ಲೇನಲ್ಲಿಯೇ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 41 ರನ್ ಕಲೆಹಾಕಿದೆ. ಇದು ತಂಡವನ್ನು ಆರಂಭದಲ್ಲೇ ಒತ್ತಡಕ್ಕೆ ಸಿಲುಕಿಸಿದೆ.

ಗುವಾಹಟಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಸಿಎಸ್​ಕೆ ಪವರ್‌ಪ್ಲೇನಲ್ಲಿಯೇ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 41 ರನ್ ಕಲೆಹಾಕಿದೆ. ಇದು ತಂಡವನ್ನು ಆರಂಭದಲ್ಲೇ ಒತ್ತಡಕ್ಕೆ ಸಿಲುಕಿಸಿದೆ.

2 / 6
ಇಂದಿನ ಪಂದ್ಯದಲ್ಲಿ ಸಿಎಸ್​ಕೆ ಪರ ಆರಂಭಿಕರಾಗಿ ಬಂದಿದ್ದ ನಾಯಕ ರುತುರಾಜ್ ಗಾಯಕ್ವಾಡ್ ಹಾಗೂ ಸಂಜು ಸ್ಯಾಮ್ಸನ್ ಅವರಿಂದ ಉತ್ತಮ ಆರಂಭದ ನಿರೀಕ್ಷೆ ಇಡಲಾಗಿತ್ತು. ಇಬ್ಬರು ಅಪಾರ ಅನುಭವ ಹೊಂದಿದ್ದರಿಂದ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಡುತ್ತಾರೆ ಎಂದ ಅಭಿಮಾನಿಗಳು ಕಾದು ಕುಳಿತಿದ್ದರು. ಆದರೆ ಇವರಿಬ್ಬರು 10 ರನ್​ಗಳ ಗಡಿ ದಾಟಲಾಗದೆ ಒಂದಂಕಿಗೆ ಸುಸ್ತಾದರು.

ಇಂದಿನ ಪಂದ್ಯದಲ್ಲಿ ಸಿಎಸ್​ಕೆ ಪರ ಆರಂಭಿಕರಾಗಿ ಬಂದಿದ್ದ ನಾಯಕ ರುತುರಾಜ್ ಗಾಯಕ್ವಾಡ್ ಹಾಗೂ ಸಂಜು ಸ್ಯಾಮ್ಸನ್ ಅವರಿಂದ ಉತ್ತಮ ಆರಂಭದ ನಿರೀಕ್ಷೆ ಇಡಲಾಗಿತ್ತು. ಇಬ್ಬರು ಅಪಾರ ಅನುಭವ ಹೊಂದಿದ್ದರಿಂದ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಡುತ್ತಾರೆ ಎಂದ ಅಭಿಮಾನಿಗಳು ಕಾದು ಕುಳಿತಿದ್ದರು. ಆದರೆ ಇವರಿಬ್ಬರು 10 ರನ್​ಗಳ ಗಡಿ ದಾಟಲಾಗದೆ ಒಂದಂಕಿಗೆ ಸುಸ್ತಾದರು.

3 / 6
ಮೊದಲ ವಿಕೆಟ್ ರೂಪದಲ್ಲಿ ಸಂಜು ಸ್ಯಾಮ್ಸನ್ ಪೆವಿಲಿಯನ್​ತ್ತ ಹೆಜ್ಜೆ ಹಾಕಿದರು. ನಾಂದ್ರೆ ಬರ್ಗರ್ ಬೌಲ್ ಮಾಡಿದ ಇನ್ನಿಂಗ್ಸ್​ನ 2ನೇ ಓವರ್​ನ ಕೊನೆಯ ಎಸೆತದಲ್ಲಿ ಸಂಜು ಕ್ಲೀನ್ ಬೌಲ್ಡ್ ಆದರು. ಸಂಜು ತಮ್ಮ ಇನ್ನಿಂಗ್ಸ್​ನಲ್ಲಿ 7 ಎಸೆತಗಳನ್ನು ಎದುರಿಸಿ 6 ರನ್​ಗಳಿಗೆ ಔಟಾದರು. ಸಂಜು ಅವರ ಈ ಇನ್ನಿಂಗ್ಸ್​ನಲ್ಲಿ ಕೇವಲ ಒಂದು ಬೌಂಡರಿ ಸೇರಿತ್ತು.

ಮೊದಲ ವಿಕೆಟ್ ರೂಪದಲ್ಲಿ ಸಂಜು ಸ್ಯಾಮ್ಸನ್ ಪೆವಿಲಿಯನ್​ತ್ತ ಹೆಜ್ಜೆ ಹಾಕಿದರು. ನಾಂದ್ರೆ ಬರ್ಗರ್ ಬೌಲ್ ಮಾಡಿದ ಇನ್ನಿಂಗ್ಸ್​ನ 2ನೇ ಓವರ್​ನ ಕೊನೆಯ ಎಸೆತದಲ್ಲಿ ಸಂಜು ಕ್ಲೀನ್ ಬೌಲ್ಡ್ ಆದರು. ಸಂಜು ತಮ್ಮ ಇನ್ನಿಂಗ್ಸ್​ನಲ್ಲಿ 7 ಎಸೆತಗಳನ್ನು ಎದುರಿಸಿ 6 ರನ್​ಗಳಿಗೆ ಔಟಾದರು. ಸಂಜು ಅವರ ಈ ಇನ್ನಿಂಗ್ಸ್​ನಲ್ಲಿ ಕೇವಲ ಒಂದು ಬೌಂಡರಿ ಸೇರಿತ್ತು.

4 / 6
ಇನ್ನು ಎಂದಿನಂತೆ ನಿಧಾನಗತಿಯ ಆರಂಭ ಮಾಡಿದ ರುತುರಾಜ್ ಗಾಯಕ್ವಾಡ್, ಸಂಜು ವಿಕೆಟ್ ಪತನದ ನಂತರ ಇನ್ನಿಂಗ್ಸ್ ನಿಭಾಯಿಸುವ ಜವಾಬ್ದಾರಿ ಹೊಂದಿದ್ದರು. ಆದರೆ ರುತುರಾಜ್ ಕೂಡ ಸಂಜು ಔಟಾದ ಮುಂದಿನ ಓವರ್​ನಲ್ಲೇ ಅಂದರೆ ಮೂರನೇ ಓವರ್​ನ ಕೊನೆಯ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು. ರುತುರಾಜ್ ತಮ್ಮ ಇನ್ನಿಂಗ್ಸ್​ನಲ್ಲಿ 11 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಸಹಿತ 6 ರನ್ ಬಾರಿಸಿ ಔಟಾದರು.

ಇನ್ನು ಎಂದಿನಂತೆ ನಿಧಾನಗತಿಯ ಆರಂಭ ಮಾಡಿದ ರುತುರಾಜ್ ಗಾಯಕ್ವಾಡ್, ಸಂಜು ವಿಕೆಟ್ ಪತನದ ನಂತರ ಇನ್ನಿಂಗ್ಸ್ ನಿಭಾಯಿಸುವ ಜವಾಬ್ದಾರಿ ಹೊಂದಿದ್ದರು. ಆದರೆ ರುತುರಾಜ್ ಕೂಡ ಸಂಜು ಔಟಾದ ಮುಂದಿನ ಓವರ್​ನಲ್ಲೇ ಅಂದರೆ ಮೂರನೇ ಓವರ್​ನ ಕೊನೆಯ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು. ರುತುರಾಜ್ ತಮ್ಮ ಇನ್ನಿಂಗ್ಸ್​ನಲ್ಲಿ 11 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಸಹಿತ 6 ರನ್ ಬಾರಿಸಿ ಔಟಾದರು.

5 / 6
ರುತುರಾಜ್ ವಿಕೆಟ್ ಪತನದ ಬಳಿಕ ಯುವ ಬ್ಯಾಟರ್ ಆಯುಷ್ ಮ್ಹಾತ್ರೆ ವಿಕೆಟ್ ಕೂ ಪತನವಾಯಿತು. ಆರಂಭಿಕರಿಬ್ಬರು ಖಾತೆ ತೆರೆಯುವಲ್ಲಿ ಯಶಸ್ವಿಯಾದರೆ, ಆಯುಷ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಅವರು ಮೊದಲ ಎಸೆತದಲ್ಲೇ ಕೀಪರ್​ ಕೈಗೆ ಕ್ಯಾಚಿತ್ತು ಔಟಾದರು. ಮತ್ತೊಬ್ಬ ಬ್ಯಾಟ್ಸ್‌ಮನ್ ಮ್ಯಾಟ್ ಶಾರ್ಟ್ ಕೂಡ 2 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು.

ರುತುರಾಜ್ ವಿಕೆಟ್ ಪತನದ ಬಳಿಕ ಯುವ ಬ್ಯಾಟರ್ ಆಯುಷ್ ಮ್ಹಾತ್ರೆ ವಿಕೆಟ್ ಕೂ ಪತನವಾಯಿತು. ಆರಂಭಿಕರಿಬ್ಬರು ಖಾತೆ ತೆರೆಯುವಲ್ಲಿ ಯಶಸ್ವಿಯಾದರೆ, ಆಯುಷ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಅವರು ಮೊದಲ ಎಸೆತದಲ್ಲೇ ಕೀಪರ್​ ಕೈಗೆ ಕ್ಯಾಚಿತ್ತು ಔಟಾದರು. ಮತ್ತೊಬ್ಬ ಬ್ಯಾಟ್ಸ್‌ಮನ್ ಮ್ಯಾಟ್ ಶಾರ್ಟ್ ಕೂಡ 2 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು.

6 / 6
Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!