AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs RR: W,W,W, W.. ಸಿಎಸ್​ಕೆ ಪೆವಿಲಿಯನ್ ಪರೇಡ್ ಶುರು

IPL 2026, CSK Powerplay Collapse vs RR: ಐಪಿಎಲ್ 2026ರ ರಾಜಸ್ಥಾನ್ ರಾಯಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದಲ್ಲಿ CSK ಬ್ಯಾಟಿಂಗ್ ಕುಸಿತ ಕಂಡಿದೆ. ಪವರ್‌ಪ್ಲೇನಲ್ಲಿಯೇ ರುತುರಾಜ್ ಗಾಯಕ್ವಾಡ್ ಮತ್ತು ಸಂಜು ಸ್ಯಾಮ್ಸನ್ ಸೇರಿದಂತೆ 4 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 41 ರನ್ ಗಳಿಸಿದೆ. ಈ ಅನಿರೀಕ್ಷಿತ ಆರಂಭ ತಂಡವನ್ನು ತೀವ್ರ ಒತ್ತಡಕ್ಕೆ ಸಿಲುಕಿಸಿದೆ, ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ಪೃಥ್ವಿಶಂಕರ
|

Updated on: Mar 30, 2026 | 8:31 PM

Share
ಐಪಿಎಲ್ 2026 ರ ಮೂರನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಲೀಗ್​ನ ಮೊದಲೆರಡು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ತಂಡಗಳು ಪವರ್‌ಪ್ಲೇನಲ್ಲಿ ರನ್​ ಮಳೆಯನ್ನೇ ಹರಿಸಿದ್ದವು. ಹೀಗಾಗಿ ಈ ಪಂದ್ಯದಲ್ಲೂ ಅದೇ ನಿರೀಕ್ಷೆಯನ್ನು ಇಡಲಾಗಿತ್ತು. ಆದರೆ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಸಿಎಸ್​ಕೆ ಪವರ್‌ಪ್ಲೇನಲ್ಲಿಯೇ ಪವರ್ ಕಳೆದುಕೊಂಡಿದೆ.

ಐಪಿಎಲ್ 2026 ರ ಮೂರನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಲೀಗ್​ನ ಮೊದಲೆರಡು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ತಂಡಗಳು ಪವರ್‌ಪ್ಲೇನಲ್ಲಿ ರನ್​ ಮಳೆಯನ್ನೇ ಹರಿಸಿದ್ದವು. ಹೀಗಾಗಿ ಈ ಪಂದ್ಯದಲ್ಲೂ ಅದೇ ನಿರೀಕ್ಷೆಯನ್ನು ಇಡಲಾಗಿತ್ತು. ಆದರೆ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಸಿಎಸ್​ಕೆ ಪವರ್‌ಪ್ಲೇನಲ್ಲಿಯೇ ಪವರ್ ಕಳೆದುಕೊಂಡಿದೆ.

1 / 6
ಗುವಾಹಟಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಸಿಎಸ್​ಕೆ ಪವರ್‌ಪ್ಲೇನಲ್ಲಿಯೇ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 41 ರನ್ ಕಲೆಹಾಕಿದೆ. ಇದು ತಂಡವನ್ನು ಆರಂಭದಲ್ಲೇ ಒತ್ತಡಕ್ಕೆ ಸಿಲುಕಿಸಿದೆ.

ಗುವಾಹಟಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಸಿಎಸ್​ಕೆ ಪವರ್‌ಪ್ಲೇನಲ್ಲಿಯೇ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 41 ರನ್ ಕಲೆಹಾಕಿದೆ. ಇದು ತಂಡವನ್ನು ಆರಂಭದಲ್ಲೇ ಒತ್ತಡಕ್ಕೆ ಸಿಲುಕಿಸಿದೆ.

2 / 6
ಇಂದಿನ ಪಂದ್ಯದಲ್ಲಿ ಸಿಎಸ್​ಕೆ ಪರ ಆರಂಭಿಕರಾಗಿ ಬಂದಿದ್ದ ನಾಯಕ ರುತುರಾಜ್ ಗಾಯಕ್ವಾಡ್ ಹಾಗೂ ಸಂಜು ಸ್ಯಾಮ್ಸನ್ ಅವರಿಂದ ಉತ್ತಮ ಆರಂಭದ ನಿರೀಕ್ಷೆ ಇಡಲಾಗಿತ್ತು. ಇಬ್ಬರು ಅಪಾರ ಅನುಭವ ಹೊಂದಿದ್ದರಿಂದ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಡುತ್ತಾರೆ ಎಂದ ಅಭಿಮಾನಿಗಳು ಕಾದು ಕುಳಿತಿದ್ದರು. ಆದರೆ ಇವರಿಬ್ಬರು 10 ರನ್​ಗಳ ಗಡಿ ದಾಟಲಾಗದೆ ಒಂದಂಕಿಗೆ ಸುಸ್ತಾದರು.

ಇಂದಿನ ಪಂದ್ಯದಲ್ಲಿ ಸಿಎಸ್​ಕೆ ಪರ ಆರಂಭಿಕರಾಗಿ ಬಂದಿದ್ದ ನಾಯಕ ರುತುರಾಜ್ ಗಾಯಕ್ವಾಡ್ ಹಾಗೂ ಸಂಜು ಸ್ಯಾಮ್ಸನ್ ಅವರಿಂದ ಉತ್ತಮ ಆರಂಭದ ನಿರೀಕ್ಷೆ ಇಡಲಾಗಿತ್ತು. ಇಬ್ಬರು ಅಪಾರ ಅನುಭವ ಹೊಂದಿದ್ದರಿಂದ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಡುತ್ತಾರೆ ಎಂದ ಅಭಿಮಾನಿಗಳು ಕಾದು ಕುಳಿತಿದ್ದರು. ಆದರೆ ಇವರಿಬ್ಬರು 10 ರನ್​ಗಳ ಗಡಿ ದಾಟಲಾಗದೆ ಒಂದಂಕಿಗೆ ಸುಸ್ತಾದರು.

3 / 6
ಮೊದಲ ವಿಕೆಟ್ ರೂಪದಲ್ಲಿ ಸಂಜು ಸ್ಯಾಮ್ಸನ್ ಪೆವಿಲಿಯನ್​ತ್ತ ಹೆಜ್ಜೆ ಹಾಕಿದರು. ನಾಂದ್ರೆ ಬರ್ಗರ್ ಬೌಲ್ ಮಾಡಿದ ಇನ್ನಿಂಗ್ಸ್​ನ 2ನೇ ಓವರ್​ನ ಕೊನೆಯ ಎಸೆತದಲ್ಲಿ ಸಂಜು ಕ್ಲೀನ್ ಬೌಲ್ಡ್ ಆದರು. ಸಂಜು ತಮ್ಮ ಇನ್ನಿಂಗ್ಸ್​ನಲ್ಲಿ 7 ಎಸೆತಗಳನ್ನು ಎದುರಿಸಿ 6 ರನ್​ಗಳಿಗೆ ಔಟಾದರು. ಸಂಜು ಅವರ ಈ ಇನ್ನಿಂಗ್ಸ್​ನಲ್ಲಿ ಕೇವಲ ಒಂದು ಬೌಂಡರಿ ಸೇರಿತ್ತು.

ಮೊದಲ ವಿಕೆಟ್ ರೂಪದಲ್ಲಿ ಸಂಜು ಸ್ಯಾಮ್ಸನ್ ಪೆವಿಲಿಯನ್​ತ್ತ ಹೆಜ್ಜೆ ಹಾಕಿದರು. ನಾಂದ್ರೆ ಬರ್ಗರ್ ಬೌಲ್ ಮಾಡಿದ ಇನ್ನಿಂಗ್ಸ್​ನ 2ನೇ ಓವರ್​ನ ಕೊನೆಯ ಎಸೆತದಲ್ಲಿ ಸಂಜು ಕ್ಲೀನ್ ಬೌಲ್ಡ್ ಆದರು. ಸಂಜು ತಮ್ಮ ಇನ್ನಿಂಗ್ಸ್​ನಲ್ಲಿ 7 ಎಸೆತಗಳನ್ನು ಎದುರಿಸಿ 6 ರನ್​ಗಳಿಗೆ ಔಟಾದರು. ಸಂಜು ಅವರ ಈ ಇನ್ನಿಂಗ್ಸ್​ನಲ್ಲಿ ಕೇವಲ ಒಂದು ಬೌಂಡರಿ ಸೇರಿತ್ತು.

4 / 6
ಇನ್ನು ಎಂದಿನಂತೆ ನಿಧಾನಗತಿಯ ಆರಂಭ ಮಾಡಿದ ರುತುರಾಜ್ ಗಾಯಕ್ವಾಡ್, ಸಂಜು ವಿಕೆಟ್ ಪತನದ ನಂತರ ಇನ್ನಿಂಗ್ಸ್ ನಿಭಾಯಿಸುವ ಜವಾಬ್ದಾರಿ ಹೊಂದಿದ್ದರು. ಆದರೆ ರುತುರಾಜ್ ಕೂಡ ಸಂಜು ಔಟಾದ ಮುಂದಿನ ಓವರ್​ನಲ್ಲೇ ಅಂದರೆ ಮೂರನೇ ಓವರ್​ನ ಕೊನೆಯ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು. ರುತುರಾಜ್ ತಮ್ಮ ಇನ್ನಿಂಗ್ಸ್​ನಲ್ಲಿ 11 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಸಹಿತ 6 ರನ್ ಬಾರಿಸಿ ಔಟಾದರು.

ಇನ್ನು ಎಂದಿನಂತೆ ನಿಧಾನಗತಿಯ ಆರಂಭ ಮಾಡಿದ ರುತುರಾಜ್ ಗಾಯಕ್ವಾಡ್, ಸಂಜು ವಿಕೆಟ್ ಪತನದ ನಂತರ ಇನ್ನಿಂಗ್ಸ್ ನಿಭಾಯಿಸುವ ಜವಾಬ್ದಾರಿ ಹೊಂದಿದ್ದರು. ಆದರೆ ರುತುರಾಜ್ ಕೂಡ ಸಂಜು ಔಟಾದ ಮುಂದಿನ ಓವರ್​ನಲ್ಲೇ ಅಂದರೆ ಮೂರನೇ ಓವರ್​ನ ಕೊನೆಯ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು. ರುತುರಾಜ್ ತಮ್ಮ ಇನ್ನಿಂಗ್ಸ್​ನಲ್ಲಿ 11 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಸಹಿತ 6 ರನ್ ಬಾರಿಸಿ ಔಟಾದರು.

5 / 6
ರುತುರಾಜ್ ವಿಕೆಟ್ ಪತನದ ಬಳಿಕ ಯುವ ಬ್ಯಾಟರ್ ಆಯುಷ್ ಮ್ಹಾತ್ರೆ ವಿಕೆಟ್ ಕೂ ಪತನವಾಯಿತು. ಆರಂಭಿಕರಿಬ್ಬರು ಖಾತೆ ತೆರೆಯುವಲ್ಲಿ ಯಶಸ್ವಿಯಾದರೆ, ಆಯುಷ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಅವರು ಮೊದಲ ಎಸೆತದಲ್ಲೇ ಕೀಪರ್​ ಕೈಗೆ ಕ್ಯಾಚಿತ್ತು ಔಟಾದರು. ಮತ್ತೊಬ್ಬ ಬ್ಯಾಟ್ಸ್‌ಮನ್ ಮ್ಯಾಟ್ ಶಾರ್ಟ್ ಕೂಡ 2 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು.

ರುತುರಾಜ್ ವಿಕೆಟ್ ಪತನದ ಬಳಿಕ ಯುವ ಬ್ಯಾಟರ್ ಆಯುಷ್ ಮ್ಹಾತ್ರೆ ವಿಕೆಟ್ ಕೂ ಪತನವಾಯಿತು. ಆರಂಭಿಕರಿಬ್ಬರು ಖಾತೆ ತೆರೆಯುವಲ್ಲಿ ಯಶಸ್ವಿಯಾದರೆ, ಆಯುಷ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಅವರು ಮೊದಲ ಎಸೆತದಲ್ಲೇ ಕೀಪರ್​ ಕೈಗೆ ಕ್ಯಾಚಿತ್ತು ಔಟಾದರು. ಮತ್ತೊಬ್ಬ ಬ್ಯಾಟ್ಸ್‌ಮನ್ ಮ್ಯಾಟ್ ಶಾರ್ಟ್ ಕೂಡ 2 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು.

6 / 6
Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ