AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB Pitch Report: ಆರ್​ಸಿಬಿ ಸೋತರೆ ಪ್ಲೇ ಆಫ್ ಕನಸು ಭಗ್ನ: ಸವಾಯಿ ಮಾನ್​ಸಿಂಗ್ ಪಿಚ್ ಯಾರಿಗೆ ಹೆಚ್ಚು ಸಹಕಾರಿ?

Sawai Mansingh Stadium Pitch Report: ಎಲ್ಲರ ಚಿತ್ತ ನೆಟ್ಟಿರುವ ರಾಜಸ್ಥಾನ್ ರಾಯಲ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯ ಮಧ್ಯಾಹ್ನ 3.30ಕ್ಕೆ ಶುರುವಾಗಲಿದೆ. ಸವಾಯಿ ಮಾನ್​ಸಿಂಗ್ ಸ್ಟೇಡಿಯಂ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವು ನೀಡುತ್ತದೆ.

Vinay Bhat
|

Updated on: May 14, 2023 | 8:29 AM

Share
ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ಸವಾಲೊಡ್ಡುತ್ತಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಕದನ ಏರ್ಪಡಿಸಲಾಗಿದ್ದು, ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ಸವಾಲೊಡ್ಡುತ್ತಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಕದನ ಏರ್ಪಡಿಸಲಾಗಿದ್ದು, ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

1 / 7
ಪಾಯಿಂಟ್ ಟೇಬಲ್​ನಲ್ಲಿ ಆರ್​ಸಿಬಿ ಏಳನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್​ರೇಟ್ ಹೊಂದಿದೆ. ಇತ್ತ ರಾಜಸ್ಥಾನ್ ಐದನೇ ಸ್ಥಾನದಲ್ಲಿದೆ. ಆಡಿದ 12 ಪಂದ್ಯಗಳಲ್ಲಿ ಆರು ಗೆಲುವು, ಆರು ಸೋಲುಂಡು +0.633ರನ್​ರೇಟ್​ನೊಂದಿಗೆ 12 ಅಂಕ ಸಂಪಾದಿಸಿದೆ.

ಪಾಯಿಂಟ್ ಟೇಬಲ್​ನಲ್ಲಿ ಆರ್​ಸಿಬಿ ಏಳನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್​ರೇಟ್ ಹೊಂದಿದೆ. ಇತ್ತ ರಾಜಸ್ಥಾನ್ ಐದನೇ ಸ್ಥಾನದಲ್ಲಿದೆ. ಆಡಿದ 12 ಪಂದ್ಯಗಳಲ್ಲಿ ಆರು ಗೆಲುವು, ಆರು ಸೋಲುಂಡು +0.633ರನ್​ರೇಟ್​ನೊಂದಿಗೆ 12 ಅಂಕ ಸಂಪಾದಿಸಿದೆ.

2 / 7
ಪ್ಲೇ ಆಫ್​ಗೇರುವ ದೃಷ್ಟಿಯಿಂದ ರಾಜಸ್ಥಾನ್-ಆರ್​ಸಿಬಿ ಉಭಯ ತಂಡಗಳಿಗೆ ಈ ಪಂದ್ಯ ಗೆಲ್ಲಲೇಬೇಕು. ಒಂದು ವೇಳೆ ಆರ್​ಸಿಬಿ ಸೋತರೆ ರಾಜಸ್ಥಾನ್ ರಾಯಲ್ಸ್​ಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ. ಆರ್​ಆರ್ ಸೋತರೆ ಬಹುತೇಕ ಟೂರ್ನಿಯಿಂದ ಹೊರಬಿದ್ದಂತೆ. ಇನ್ನು ಆರ್​ಸಿಬಿ ಸೋತರೂ ಟೂರ್ನಿಯಿಂದ ಹೊರಬಿದ್ದಂತೆ.

ಪ್ಲೇ ಆಫ್​ಗೇರುವ ದೃಷ್ಟಿಯಿಂದ ರಾಜಸ್ಥಾನ್-ಆರ್​ಸಿಬಿ ಉಭಯ ತಂಡಗಳಿಗೆ ಈ ಪಂದ್ಯ ಗೆಲ್ಲಲೇಬೇಕು. ಒಂದು ವೇಳೆ ಆರ್​ಸಿಬಿ ಸೋತರೆ ರಾಜಸ್ಥಾನ್ ರಾಯಲ್ಸ್​ಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ. ಆರ್​ಆರ್ ಸೋತರೆ ಬಹುತೇಕ ಟೂರ್ನಿಯಿಂದ ಹೊರಬಿದ್ದಂತೆ. ಇನ್ನು ಆರ್​ಸಿಬಿ ಸೋತರೂ ಟೂರ್ನಿಯಿಂದ ಹೊರಬಿದ್ದಂತೆ.

3 / 7
ಎಲ್ಲರ ಚಿತ್ತ ನೆಟ್ಟಿರುವ ಈ ಪಂದ್ಯ ಮಧ್ಯಾಹ್ನ 3.30ಕ್ಕೆ ಶುರುವಾಗಲಿದೆ. ಸವಾಯಿ ಮಾನ್​ಸಿಂಗ್ ಸ್ಟೇಡಿಯಂ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವು ನೀಡುತ್ತದೆ. ಪಂದ್ಯ ಆರಂಭವಾದ ಕೆಲವು ಓವರ್‌ಗಳಲ್ಲಿ ವೇಗದ ಬೌಲರ್‌ಗಳು ಪ್ರಾಬಲ್ಯ ಸಾಧಿಸಿದರೆ ನಂತರ ಸ್ಪಿನ್ನರ್​ಗಳ ಆಟ ನಡೆಯಲಿದೆ.

ಎಲ್ಲರ ಚಿತ್ತ ನೆಟ್ಟಿರುವ ಈ ಪಂದ್ಯ ಮಧ್ಯಾಹ್ನ 3.30ಕ್ಕೆ ಶುರುವಾಗಲಿದೆ. ಸವಾಯಿ ಮಾನ್​ಸಿಂಗ್ ಸ್ಟೇಡಿಯಂ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವು ನೀಡುತ್ತದೆ. ಪಂದ್ಯ ಆರಂಭವಾದ ಕೆಲವು ಓವರ್‌ಗಳಲ್ಲಿ ವೇಗದ ಬೌಲರ್‌ಗಳು ಪ್ರಾಬಲ್ಯ ಸಾಧಿಸಿದರೆ ನಂತರ ಸ್ಪಿನ್ನರ್​ಗಳ ಆಟ ನಡೆಯಲಿದೆ.

4 / 7
ಈ ಮೈದಾನದಲ್ಲಿ ಅತಿ ದೊಡ್ಡ ಬೌಂಡರಿ ಇರುವುದರಿಂದ ದೊಡ್ಡ ಮೊತ್ತ ಕಲೆಹಾಕುವುದು ಕಷ್ಟ. ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಪರದಾಡುವುದು ಖಚತ. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಂಭವವಿದೆ.

ಈ ಮೈದಾನದಲ್ಲಿ ಅತಿ ದೊಡ್ಡ ಬೌಂಡರಿ ಇರುವುದರಿಂದ ದೊಡ್ಡ ಮೊತ್ತ ಕಲೆಹಾಕುವುದು ಕಷ್ಟ. ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಪರದಾಡುವುದು ಖಚತ. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಂಭವವಿದೆ.

5 / 7
ಸವಾಯಿ ಮಾನ್​ಸಿಂಗ್ ಮೈದಾನದಲ್ಲಿ ಇದುವರೆಗೂ 50 ಐಪಿಎಲ್ ಪಂದ್ಯಗಳು ನಡೆದಿದ್ದು 17 ಬಾರಿ ಮೊದಲು ಬ್ಯಾಟ್‌ ಮಾಡಿದ್ದ ತಂಡಗಳು ಜಯ ಗಳಿಸಿದ್ದರೆ, 33 ಬಾರಿ ಟಾರ್ಗೆಟ್ ಬೆನ್ನಟ್ಟಿದ ತಂಡಗಳು ಗೆಲುವು ಪಡೆದುಕೊಂಡಿದೆ.

ಸವಾಯಿ ಮಾನ್​ಸಿಂಗ್ ಮೈದಾನದಲ್ಲಿ ಇದುವರೆಗೂ 50 ಐಪಿಎಲ್ ಪಂದ್ಯಗಳು ನಡೆದಿದ್ದು 17 ಬಾರಿ ಮೊದಲು ಬ್ಯಾಟ್‌ ಮಾಡಿದ್ದ ತಂಡಗಳು ಜಯ ಗಳಿಸಿದ್ದರೆ, 33 ಬಾರಿ ಟಾರ್ಗೆಟ್ ಬೆನ್ನಟ್ಟಿದ ತಂಡಗಳು ಗೆಲುವು ಪಡೆದುಕೊಂಡಿದೆ.

6 / 7
ಉಭಯ ತಂಡಗಳ ಮುಖಾಮುಖಿ ನೋಡುವುದಾದರೆ ಒಟ್ಟು 29 ಪಂದ್ಯಗಳು ನಡೆದಿವೆ. ಇದರಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವು 12 ಪಂದ್ಯ ಗೆದ್ದಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 14 ಮ್ಯಾಚ್​ನಲ್ಲಿ ಗೆಲುವು ಸಾಧಿಸಿ ಪಾರುಪತ್ಯ ಮೆರೆದಿದೆ.

ಉಭಯ ತಂಡಗಳ ಮುಖಾಮುಖಿ ನೋಡುವುದಾದರೆ ಒಟ್ಟು 29 ಪಂದ್ಯಗಳು ನಡೆದಿವೆ. ಇದರಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವು 12 ಪಂದ್ಯ ಗೆದ್ದಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 14 ಮ್ಯಾಚ್​ನಲ್ಲಿ ಗೆಲುವು ಸಾಧಿಸಿ ಪಾರುಪತ್ಯ ಮೆರೆದಿದೆ.

7 / 7
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ