AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ಬೌಂಡರಿ, 11 ಸಿಕ್ಸರ್‌; 74 ಎಸೆತಗಳಲ್ಲಿ ಅಜೇಯ 148 ರನ್ ಚಚ್ಚಿದ ರುತುರಾಜ್ ಗಾಯಕ್ವಾಡ್

Vijay Hazare Trophy: ವಿಜಯ್ ಹಜಾರೆ ಟ್ರೋಫಿಯಲ್ಲಿ ರುತುರಾಜ್ ಗಾಯಕ್ವಾಡ್ ಸ್ಫೋಟಕ ಶತಕ ಬಾರಿಸಿದ್ದಾರೆ. ಮಹಾರಾಷ್ಟ್ರ ತಂಡದ ನಾಯಕರಾಗಿರುವ ರುತುರಾಜ್ ಕೇವಲ 74 ಎಸೆತಗಳಲ್ಲಿ ಅಜೇಯ 148 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಈ ಅದ್ಭುತ ಇನ್ನಿಂಗ್ಸ್‌ನಲ್ಲಿ 16 ಬೌಂಡರಿ ಮತ್ತು 11 ಸಿಕ್ಸರ್‌ಗಳು ಸೇರಿದ್ದವು.

ಪೃಥ್ವಿಶಂಕರ
|

Updated on: Dec 23, 2024 | 4:36 PM

Share
ಅಗಾದ ಪ್ರತಿಭೆ ಇದ್ದರೂ ಟೀಂ ಇಂಡಿಯಾದಲ್ಲಿ ಖಾಯಂ ಸ್ಥಾನ ಪಡೆಯುವಲ್ಲಿ ಎಡವುತ್ತಿರುವ ಟೀಂ ಇಂಡಿಯಾದ ಯುವ ಕ್ರಿಕೆಟಿಗ ರುತುರಾಜ್ ಗಾಯಕ್ವಾಡ್ ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಮತ್ತೊಮ್ಮೆ ಟೀಂ ಇಂಡಿಯಾದ ಕದ ತಟ್ಟಿದ್ದಾರೆ.

ಅಗಾದ ಪ್ರತಿಭೆ ಇದ್ದರೂ ಟೀಂ ಇಂಡಿಯಾದಲ್ಲಿ ಖಾಯಂ ಸ್ಥಾನ ಪಡೆಯುವಲ್ಲಿ ಎಡವುತ್ತಿರುವ ಟೀಂ ಇಂಡಿಯಾದ ಯುವ ಕ್ರಿಕೆಟಿಗ ರುತುರಾಜ್ ಗಾಯಕ್ವಾಡ್ ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಮತ್ತೊಮ್ಮೆ ಟೀಂ ಇಂಡಿಯಾದ ಕದ ತಟ್ಟಿದ್ದಾರೆ.

1 / 6
ವಿಜಯ್ ಹಜಾರೆ ಟ್ರೋಫಿಯಲ್ಲಿ ಇಂದು ನಡೆದ ಪಂದ್ಯದಲ್ಲಿ ಮಹಾರಾಷ್ಟ್ರ ಮತ್ತು ಸರ್ವಿಸಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮಹಾರಾಷ್ಟ್ರ ತಂಡದ ನಾಯಕನಾಗಿರುವ ರುತುರಾಜ್ ಗಾಯಕ್ವಾಡ್ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದು ತಂಡವನ್ನು ಏಕಪಕ್ಷೀಯವಾಗಿ ಗೆಲುವಿನತ್ತ ಮುನ್ನಡೆಸಿದರು.

ವಿಜಯ್ ಹಜಾರೆ ಟ್ರೋಫಿಯಲ್ಲಿ ಇಂದು ನಡೆದ ಪಂದ್ಯದಲ್ಲಿ ಮಹಾರಾಷ್ಟ್ರ ಮತ್ತು ಸರ್ವಿಸಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮಹಾರಾಷ್ಟ್ರ ತಂಡದ ನಾಯಕನಾಗಿರುವ ರುತುರಾಜ್ ಗಾಯಕ್ವಾಡ್ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದು ತಂಡವನ್ನು ಏಕಪಕ್ಷೀಯವಾಗಿ ಗೆಲುವಿನತ್ತ ಮುನ್ನಡೆಸಿದರು.

2 / 6
ಉಭಯ ತಂಡಗಳ ನಡುವೆ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ರುತುರಾಜ್ ಗಾಯಕ್ವಾಡ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ಸರ್ವಿಸಸ್ ತಂಡ ಕೇವಲ 48 ಓವರ್‌ಗಳ 204 ರನ್ ಗಳಿಸಿ ಆಲೌಟ್ ಆಯಿತು.

ಉಭಯ ತಂಡಗಳ ನಡುವೆ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ರುತುರಾಜ್ ಗಾಯಕ್ವಾಡ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ಸರ್ವಿಸಸ್ ತಂಡ ಕೇವಲ 48 ಓವರ್‌ಗಳ 204 ರನ್ ಗಳಿಸಿ ಆಲೌಟ್ ಆಯಿತು.

3 / 6
ಸರ್ವಿಸಸ್ ತಂಡದ ನಾಯಕ ಮೋಹಿತ್ ಅಹ್ಲಾವತ್ ಗರಿಷ್ಠ 61 ರನ್ ಗಳಿಸಿದರು. ಇವರನ್ನು ಬಿಟ್ಟರೆ ಬೇರಾವ ಬ್ಯಾಟ್ಸ್‌ಮನ್‌ಗೂ 30 ರನ್‌ಗಳ ಗಡಿ ಮುಟ್ಟಲು ಸಾಧ್ಯವಾಗಲಿಲ್ಲ. ಮತ್ತೊಂದೆಡೆ, ಮಹಾರಾಷ್ಟ್ರ ತಂಡದ ಪರ ಪ್ರದೀಪ್ ದಾಧೆ ಮತ್ತು ಸತ್ಯಜಿತ್ ಬಚಾವ್ ತಲಾ 3 ವಿಕೆಟ್ ಪಡೆದರು.

ಸರ್ವಿಸಸ್ ತಂಡದ ನಾಯಕ ಮೋಹಿತ್ ಅಹ್ಲಾವತ್ ಗರಿಷ್ಠ 61 ರನ್ ಗಳಿಸಿದರು. ಇವರನ್ನು ಬಿಟ್ಟರೆ ಬೇರಾವ ಬ್ಯಾಟ್ಸ್‌ಮನ್‌ಗೂ 30 ರನ್‌ಗಳ ಗಡಿ ಮುಟ್ಟಲು ಸಾಧ್ಯವಾಗಲಿಲ್ಲ. ಮತ್ತೊಂದೆಡೆ, ಮಹಾರಾಷ್ಟ್ರ ತಂಡದ ಪರ ಪ್ರದೀಪ್ ದಾಧೆ ಮತ್ತು ಸತ್ಯಜಿತ್ ಬಚಾವ್ ತಲಾ 3 ವಿಕೆಟ್ ಪಡೆದರು.

4 / 6
ಗೆಲ್ಲಲು 205 ರನ್‌ಗಳ ಗುರಿ ಪಡೆದಿದ್ದ ಮಹಾರಾಷ್ಟ್ರ ತಂಡಕ್ಕೆ ರುತುರಾಜ್ ಗಾಯಕ್ವಾಡ್ ಅತ್ಯಂತ ವೇಗವಾಗಿ ರನ್ ಗಳಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಈ ಇನ್ನಿಂಗ್ಸ್‌ನಲ್ಲಿ ಅವರು 74 ಎಸೆತಗಳಲ್ಲಿ ಅಜೇಯ 148 ರನ್ ಗಳಿಸಿದರು. ಗಾಯಕ್ವಾಡ್ ಅವರ ಇನ್ನಿಂಗ್ಸ್‌ನಲ್ಲಿ 16 ಬೌಂಡರಿ ಮತ್ತು 11 ಸಿಕ್ಸರ್‌ಗಳು ಸೇರಿದ್ದವು. ರುತುರಾಜ್ ಅವರ ಈ ಸಿಡಿಲಬ್ಬರದ ಬ್ಯಾಟಿಂಗ್​ನಿಂದಾಗಿ ಮಹಾರಾಷ್ಟ್ರ ತಂಡ ಕೇವಲ 20.2 ಓವರ್‌ಗಳಲ್ಲಿಯೇ ಜಯದ ನಗೆಬೀರಿತು.

ಗೆಲ್ಲಲು 205 ರನ್‌ಗಳ ಗುರಿ ಪಡೆದಿದ್ದ ಮಹಾರಾಷ್ಟ್ರ ತಂಡಕ್ಕೆ ರುತುರಾಜ್ ಗಾಯಕ್ವಾಡ್ ಅತ್ಯಂತ ವೇಗವಾಗಿ ರನ್ ಗಳಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಈ ಇನ್ನಿಂಗ್ಸ್‌ನಲ್ಲಿ ಅವರು 74 ಎಸೆತಗಳಲ್ಲಿ ಅಜೇಯ 148 ರನ್ ಗಳಿಸಿದರು. ಗಾಯಕ್ವಾಡ್ ಅವರ ಇನ್ನಿಂಗ್ಸ್‌ನಲ್ಲಿ 16 ಬೌಂಡರಿ ಮತ್ತು 11 ಸಿಕ್ಸರ್‌ಗಳು ಸೇರಿದ್ದವು. ರುತುರಾಜ್ ಅವರ ಈ ಸಿಡಿಲಬ್ಬರದ ಬ್ಯಾಟಿಂಗ್​ನಿಂದಾಗಿ ಮಹಾರಾಷ್ಟ್ರ ತಂಡ ಕೇವಲ 20.2 ಓವರ್‌ಗಳಲ್ಲಿಯೇ ಜಯದ ನಗೆಬೀರಿತು.

5 / 6
ಮಹಾರಾಷ್ಟ್ರ ತಂಡ ಈ ಟೂರ್ನಿಯಲ್ಲಿ ಉತ್ತಮ ಆರಂಭ ಪಡೆದುಕೊಂಡಿದೆ. ತನ್ನ ಆರಂಭಿಕ ಎರಡೂ ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸರ್ವಿಸಸ್​ಗೂ ಮೊದಲು, ಮಹಾರಾಷ್ಟ್ರವು ರಾಜಸ್ಥಾನವನ್ನು ಎದುರಿಸಿತು. ಆ ಪಂದ್ಯದಲ್ಲೂ ಮಹಾರಾಷ್ಟ್ರ ತಂಡ 3 ವಿಕೆಟ್‌ಗಳ ಜಯ ಸಾಧಿಸಿತ್ತು. ಆದರೆ, ರಾಜಸ್ಥಾನ ವಿರುದ್ಧ ರನ್ ಗಳಿಸುವಲ್ಲಿ ಎಡವಿದ್ದ ರುತುರಾಜ್ ಗಾಯಕ್ವಾಡ್ 5 ಎಸೆತಗಳಲ್ಲಿ 1 ರನ್ ಗಳಿಸಿ ಔಟಾಗಿದ್ದರು. ಆದರೆ ಈ ಬಾರಿ ಏಕಾಂಗಿಯಾಗಿ ನಿಂತು ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ.

ಮಹಾರಾಷ್ಟ್ರ ತಂಡ ಈ ಟೂರ್ನಿಯಲ್ಲಿ ಉತ್ತಮ ಆರಂಭ ಪಡೆದುಕೊಂಡಿದೆ. ತನ್ನ ಆರಂಭಿಕ ಎರಡೂ ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸರ್ವಿಸಸ್​ಗೂ ಮೊದಲು, ಮಹಾರಾಷ್ಟ್ರವು ರಾಜಸ್ಥಾನವನ್ನು ಎದುರಿಸಿತು. ಆ ಪಂದ್ಯದಲ್ಲೂ ಮಹಾರಾಷ್ಟ್ರ ತಂಡ 3 ವಿಕೆಟ್‌ಗಳ ಜಯ ಸಾಧಿಸಿತ್ತು. ಆದರೆ, ರಾಜಸ್ಥಾನ ವಿರುದ್ಧ ರನ್ ಗಳಿಸುವಲ್ಲಿ ಎಡವಿದ್ದ ರುತುರಾಜ್ ಗಾಯಕ್ವಾಡ್ 5 ಎಸೆತಗಳಲ್ಲಿ 1 ರನ್ ಗಳಿಸಿ ಔಟಾಗಿದ್ದರು. ಆದರೆ ಈ ಬಾರಿ ಏಕಾಂಗಿಯಾಗಿ ನಿಂತು ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ