AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾ ಪರ ಇಬ್ಬರು ಯುವ ದಾಂಡಿಗರು ಕಣಕ್ಕಿಳಿಯುವುದು ಬಹುತೇಕ ಖಚಿತ..!

India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯವು ಜುಲೈ 12 ರಿಂದ 16 ರವರೆಗೆ ನಡೆಯಲಿದೆ. ಹಾಗೆಯೇ ಜುಲೈ 20 ರಿಂದ 24 ರವರೆಗೆ ಎರಡನೇ ಟೆಸ್ಟ್ ಪಂದ್ಯ ಜರುಗಲಿದೆ.

TV9 Web
| Edited By: |

Updated on: Jun 20, 2023 | 10:30 PM

Share
West Indies vs India: ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಯು ಜುಲೈ 12 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ (Team India) 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ. ವಿಶೇಷ ಎಂದರೆ ಈ ಸರಣಿಯಲ್ಲಿ ಇಂಡಿಯಾ ಕೆಲ ಪ್ರಯೋಗ ನಡೆಸಲಿದೆ ಎಂದು ವರದಿಯಾಗಿದೆ.

West Indies vs India: ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಯು ಜುಲೈ 12 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ (Team India) 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ. ವಿಶೇಷ ಎಂದರೆ ಈ ಸರಣಿಯಲ್ಲಿ ಇಂಡಿಯಾ ಕೆಲ ಪ್ರಯೋಗ ನಡೆಸಲಿದೆ ಎಂದು ವರದಿಯಾಗಿದೆ.

1 / 7
ಅಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಸೋಲಿನಿಂದ ಮುಖಭಂಗಕ್ಕೆ ಒಳಗಾಗಿರುವ ಬಿಸಿಸಿಐ ಇದೀಗ ತಂಡದಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಕೆಲ ಯುವ ಆಟಗಾರರಿಗೆ ಅವಕಾಶ ನೀಡಲು ಬಯಸಿದೆ.

ಅಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಸೋಲಿನಿಂದ ಮುಖಭಂಗಕ್ಕೆ ಒಳಗಾಗಿರುವ ಬಿಸಿಸಿಐ ಇದೀಗ ತಂಡದಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಕೆಲ ಯುವ ಆಟಗಾರರಿಗೆ ಅವಕಾಶ ನೀಡಲು ಬಯಸಿದೆ.

2 / 7
ಅದರಲ್ಲೂ ಟೆಸ್ಟ್ ತಂಡದಲ್ಲಿ ಯುವ ಆಟಗಾರರಿಗೆ ಅವಕಾಶ ನೀಡಿ ಪ್ರಯೋಗ ಮಾಡಲು ನಿರ್ಧರಿಸಿದೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ಧದ 2 ಟೆಸ್ಟ್ ಪಂದ್ಯಗಳಲ್ಲಿ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಹಾಗೂ ಬಲಗೈ ದಾಂಡಿಗ ರುತುರಾಜ್ ಗಾಯಕ್ವಾಡ್ ರನ್ನು ಕಣಕ್ಕಿಳಿಸಲಿದೆ ಎಂದು ವರದಿಯಾಗಿದೆ.

ಅದರಲ್ಲೂ ಟೆಸ್ಟ್ ತಂಡದಲ್ಲಿ ಯುವ ಆಟಗಾರರಿಗೆ ಅವಕಾಶ ನೀಡಿ ಪ್ರಯೋಗ ಮಾಡಲು ನಿರ್ಧರಿಸಿದೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ಧದ 2 ಟೆಸ್ಟ್ ಪಂದ್ಯಗಳಲ್ಲಿ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಹಾಗೂ ಬಲಗೈ ದಾಂಡಿಗ ರುತುರಾಜ್ ಗಾಯಕ್ವಾಡ್ ರನ್ನು ಕಣಕ್ಕಿಳಿಸಲಿದೆ ಎಂದು ವರದಿಯಾಗಿದೆ.

3 / 7
ದೇಶೀಯ ಅಂಗಳದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ 26 ಇನಿಂಗ್ಸ್​ಗಳಿಂದ ಒಟ್ಟು 1845 ಪೇರಿಸಿದ್ದಾರೆ. ಹೀಗಾಗಿಯೇ ಅವರನ್ನು ವಿಶ್ವ ಟೆಸ್ಟ್ ಚಾಂಪಿಯನ್​ ಫೈನಲ್ ಪಂದ್ಯಕ್ಕೆ ಮೀಸಲು ಆಟಗಾರನಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಪಾದರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

ದೇಶೀಯ ಅಂಗಳದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ 26 ಇನಿಂಗ್ಸ್​ಗಳಿಂದ ಒಟ್ಟು 1845 ಪೇರಿಸಿದ್ದಾರೆ. ಹೀಗಾಗಿಯೇ ಅವರನ್ನು ವಿಶ್ವ ಟೆಸ್ಟ್ ಚಾಂಪಿಯನ್​ ಫೈನಲ್ ಪಂದ್ಯಕ್ಕೆ ಮೀಸಲು ಆಟಗಾರನಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಪಾದರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

4 / 7
ಮತ್ತೊಂದೆಡೆ ವಿರಾಟ್ ಕೊಹ್ಲಿ ಅಥವಾ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಇವರ ಸ್ಥಾನದಲ್ಲಿ ರುತುರಾಜ್ ಗಾಯಕ್ವಾಡ್​ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ ವಿರಾಟ್ ಕೊಹ್ಲಿ ಅಥವಾ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಇವರ ಸ್ಥಾನದಲ್ಲಿ ರುತುರಾಜ್ ಗಾಯಕ್ವಾಡ್​ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

5 / 7
ರುತುರಾಜ್ ಗಾಯಕ್ವಾಡ್ ಕೂಡ ರಣಜಿ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದು, 47 ಇನಿಂಗ್ಸ್​ಗಳಲ್ಲಿ 1941 ರನ್ ಪೇರಿಸಿದ್ದಾರೆ. ಹಾಗೆಯೇ ಲೀಸ್ಟ್ ಎ ಕ್ರಿಕೆಟ್​ನಲ್ಲಿ ಆಡಿದ 71 ಇನಿಂಗ್ಸ್​ಗಳಿಂದ 4034 ರನ್ ಕಲೆಹಾಕಿದ್ದಾರೆ.

ರುತುರಾಜ್ ಗಾಯಕ್ವಾಡ್ ಕೂಡ ರಣಜಿ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದು, 47 ಇನಿಂಗ್ಸ್​ಗಳಲ್ಲಿ 1941 ರನ್ ಪೇರಿಸಿದ್ದಾರೆ. ಹಾಗೆಯೇ ಲೀಸ್ಟ್ ಎ ಕ್ರಿಕೆಟ್​ನಲ್ಲಿ ಆಡಿದ 71 ಇನಿಂಗ್ಸ್​ಗಳಿಂದ 4034 ರನ್ ಕಲೆಹಾಕಿದ್ದಾರೆ.

6 / 7
ಹೀಗಾಗಿ ಡೊಮಿನಿಕಾದಲ್ಲಿ ಜುಲೈ 12 ರಿಂದ 16 ರವರೆಗೆ ಮೊದಲ ಟೆಸ್ಟ್ ಹಾಗೂ ಜುಲೈ 20 ರಿಂದ 24 ರವರೆಗೆ ಜರುಗಲಿರುವ ಎರಡನೇ ಟೆಸ್ಟ್ ಪಂದ್ಯಗಳಲ್ಲಿ ರುತುರಾಜ್ ಗಾಯಕ್ವಾಡ್ ಹಾಗೂ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಹೀಗಾಗಿ ಡೊಮಿನಿಕಾದಲ್ಲಿ ಜುಲೈ 12 ರಿಂದ 16 ರವರೆಗೆ ಮೊದಲ ಟೆಸ್ಟ್ ಹಾಗೂ ಜುಲೈ 20 ರಿಂದ 24 ರವರೆಗೆ ಜರುಗಲಿರುವ ಎರಡನೇ ಟೆಸ್ಟ್ ಪಂದ್ಯಗಳಲ್ಲಿ ರುತುರಾಜ್ ಗಾಯಕ್ವಾಡ್ ಹಾಗೂ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

7 / 7
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ