AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ruturaj Gaikwad: ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ಆಟಗಾರನಿಗೆ ನೀಡಿ ಹೃದಯ ಗೆದ್ದ ರುತುರಾಜ್

Ruturaj Gaikwad: ವಿಶ್ವ ದಾಖಲೆಯ ಇನಿಂಗ್ಸ್​ಗೆ ಲಭಿಸಿದ ಪ್ರಶಸ್ತಿಯನ್ನು ಸಹ ಆಟಗಾರನಿಗೆ ನೀಡುವ ಮೂಲಕ ರುತುರಾಜ್ ಗಾಯಕ್ವಾಡ್ ಎಲ್ಲರ ಮನ ಗೆದ್ದಿದ್ದಾರೆ.

TV9 Web
| Edited By: |

Updated on: Nov 29, 2022 | 12:23 AM

Share
ವಿಜಯ್ ಹಜಾರೆ ಟೂರ್ನಿಯಲ್ಲಿ ಸೋಮವಾರ ನಡೆದ  ಉತ್ತರ ಪ್ರದೇಶ ವಿರುದ್ದದ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ದ್ವಿಶತಕ (220) ಸಿಡಿಸಿ ಮಿಂಚಿದ್ದರು. ಅದರಲ್ಲೂ ಒಂದೇ ಓವರ್​ನಲ್ಲಿ 7 ಸಿಕ್ಸ್ ಬಾರಿಸುವ ಮೂಲಕ ಹೊಸ ವಿಶ್ವ ದಾಖಲೆ ಬರೆದಿದ್ದರು.

ವಿಜಯ್ ಹಜಾರೆ ಟೂರ್ನಿಯಲ್ಲಿ ಸೋಮವಾರ ನಡೆದ ಉತ್ತರ ಪ್ರದೇಶ ವಿರುದ್ದದ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ದ್ವಿಶತಕ (220) ಸಿಡಿಸಿ ಮಿಂಚಿದ್ದರು. ಅದರಲ್ಲೂ ಒಂದೇ ಓವರ್​ನಲ್ಲಿ 7 ಸಿಕ್ಸ್ ಬಾರಿಸುವ ಮೂಲಕ ಹೊಸ ವಿಶ್ವ ದಾಖಲೆ ಬರೆದಿದ್ದರು.

1 / 6
ಈ ಭರ್ಜರಿ ಇನಿಂಗ್ಸ್​ ಪರಿಣಾಮ ಮಹಾರಾಷ್ಟ್ರ ತಂಡವು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 330 ರನ್​ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಉತ್ತರ ಪ್ರದೇಶ ಪರ ಆರ್ಯನ್ ಜುಯೆಲ್ (159) ಭರ್ಜರಿ ಶತಕ ಸಿಡಿಸಿದ್ದರು. ಇದಾಗ್ಯೂ 58 ರನ್​ಗಳಿಂದ ಸೋಲೋಪ್ಪಿಕೊಂಡಿತು.

ಈ ಭರ್ಜರಿ ಇನಿಂಗ್ಸ್​ ಪರಿಣಾಮ ಮಹಾರಾಷ್ಟ್ರ ತಂಡವು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 330 ರನ್​ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಉತ್ತರ ಪ್ರದೇಶ ಪರ ಆರ್ಯನ್ ಜುಯೆಲ್ (159) ಭರ್ಜರಿ ಶತಕ ಸಿಡಿಸಿದ್ದರು. ಇದಾಗ್ಯೂ 58 ರನ್​ಗಳಿಂದ ಸೋಲೋಪ್ಪಿಕೊಂಡಿತು.

2 / 6
ಈ ಅಮೋಘ ಗೆಲುವಿನ ಬಳಿಕ ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಆದರೆ ಅದ್ಭುತ ಇನಿಂಗ್ಸ್​ಗೆ ಲಭಿಸಿದ ಈ ಪ್ರಶಸ್ತಿಯನ್ನು ರುತುರಾಜ್ ಸಹ ಆಟಗಾರನೊಂದಿಗೆ ಹಂಚಿಕೊಳ್ಳುವ ಮೂಲಕ ಎಲ್ಲರ ಹೃದಯ ಗೆದ್ದರು.

ಈ ಅಮೋಘ ಗೆಲುವಿನ ಬಳಿಕ ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಆದರೆ ಅದ್ಭುತ ಇನಿಂಗ್ಸ್​ಗೆ ಲಭಿಸಿದ ಈ ಪ್ರಶಸ್ತಿಯನ್ನು ರುತುರಾಜ್ ಸಹ ಆಟಗಾರನೊಂದಿಗೆ ಹಂಚಿಕೊಳ್ಳುವ ಮೂಲಕ ಎಲ್ಲರ ಹೃದಯ ಗೆದ್ದರು.

3 / 6
ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಸ್ವೀಕರಿಸಿದ ಬಳಿಕ ಅದನ್ನು ತಂಡದ ಯುವ ವೇಗದ ಬೌಲರ್ ರಾಜವರ್ಧನ್ ಹಂಗ್ರೇಕರ್ ಅವರಿಗೆ ಹಸ್ತಾಂತರಿಸಿದರು. ಈ ಪಂದ್ಯದಲ್ಲಿ ರಾಜವರ್ಧನ್ 10 ಓವರ್​ಗಳಲ್ಲಿ 53 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದ್ದರು. ಹೀಗಾಗಿ ಗೆಲುವಿನ ಶ್ರೇಯಸ್ಸನ್ನು ಹಾಗೂ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ರುತುರಾಜ್ ರಾಜವರ್ಧನ್ ಹಂಗ್ರೇಕರ್​ ಜೊತೆ ಹಂಚಿಕೊಂಡರು.

ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಸ್ವೀಕರಿಸಿದ ಬಳಿಕ ಅದನ್ನು ತಂಡದ ಯುವ ವೇಗದ ಬೌಲರ್ ರಾಜವರ್ಧನ್ ಹಂಗ್ರೇಕರ್ ಅವರಿಗೆ ಹಸ್ತಾಂತರಿಸಿದರು. ಈ ಪಂದ್ಯದಲ್ಲಿ ರಾಜವರ್ಧನ್ 10 ಓವರ್​ಗಳಲ್ಲಿ 53 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದ್ದರು. ಹೀಗಾಗಿ ಗೆಲುವಿನ ಶ್ರೇಯಸ್ಸನ್ನು ಹಾಗೂ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ರುತುರಾಜ್ ರಾಜವರ್ಧನ್ ಹಂಗ್ರೇಕರ್​ ಜೊತೆ ಹಂಚಿಕೊಂಡರು.

4 / 6
ಇದೀಗ ವಿಶ್ವ ದಾಖಲೆಯ ಇನಿಂಗ್ಸ್​ಗೆ ಲಭಿಸಿದ ಪ್ರಶಸ್ತಿಯನ್ನು ಸಹ ಆಟಗಾರನೊಂದಿಗೆ ಹಂಚಿಕೊಳ್ಳುವ ಮೂಲಕ ರುತುರಾಜ್ ಗಾಯಕ್ವಾಡ್ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅದರಲ್ಲೂ ನಾಯಕನಾದವನು ಸಹ ಆಟಗಾರನ ಪ್ರದರ್ಶನವನ್ನು ಹೇಗೆ ಪ್ರೋತ್ಸಾಹಿಸಬೇಕೆಂಬುದನ್ನು ರುತುರಾಜ್ ತೋರಿಸಿಕೊಟ್ಟಿದ್ದಾರೆ ಎಂದು ಅಭಿಮಾನಿಗಳು ಬಹುಪರಾಕ್ ಅಂದಿದ್ದಾರೆ.

ಇದೀಗ ವಿಶ್ವ ದಾಖಲೆಯ ಇನಿಂಗ್ಸ್​ಗೆ ಲಭಿಸಿದ ಪ್ರಶಸ್ತಿಯನ್ನು ಸಹ ಆಟಗಾರನೊಂದಿಗೆ ಹಂಚಿಕೊಳ್ಳುವ ಮೂಲಕ ರುತುರಾಜ್ ಗಾಯಕ್ವಾಡ್ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅದರಲ್ಲೂ ನಾಯಕನಾದವನು ಸಹ ಆಟಗಾರನ ಪ್ರದರ್ಶನವನ್ನು ಹೇಗೆ ಪ್ರೋತ್ಸಾಹಿಸಬೇಕೆಂಬುದನ್ನು ರುತುರಾಜ್ ತೋರಿಸಿಕೊಟ್ಟಿದ್ದಾರೆ ಎಂದು ಅಭಿಮಾನಿಗಳು ಬಹುಪರಾಕ್ ಅಂದಿದ್ದಾರೆ.

5 / 6
ರುತುರಾಜ್ ಗಾಯಕ್ವಾಡ್-ರಾಜವರ್ಧನ್ ಹಂಗ್ರೇಕರ್

ರುತುರಾಜ್ ಗಾಯಕ್ವಾಡ್-ರಾಜವರ್ಧನ್ ಹಂಗ್ರೇಕರ್

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ