AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duleep Trophy: ಮೊದಲ ದಿನವೇ 184 ರನ್ ಚಚ್ಚಿದ ರುತುರಾಜ್ ಗಾಯಕ್ವಾಡ್

Duleep Trophy Semifinal: ಪಶ್ಚಿಮ ವಲಯ ಮತ್ತು ಕೇಂದ್ರ ವಲಯ ತಂಡಗಳ ನಡುವಿನ ದುಲೀಪ್ ಟ್ರೋಫಿಯ ಎರಡನೇ ಸೆಮಿಫೈನಲ್ ಪಂದ್ಯದ ಮೊದಲ ದಿನದಾಟದಲ್ಲಿ ರುತುರಾಜ್ ಗಾಯಕ್ವಾಡ್ ಅವರು ಅದ್ಭುತವಾದ 184 ರನ್‌ಗಳ ಇನ್ನಿಂಗ್ಸ್‌ ಆಡಿದ್ದಾರೆ. ತಂಡದ ಇತರ ಬ್ಯಾಟ್ಸ್‌ಮನ್‌ಗಳು ನಿರಾಶಾದಾಯಕ ಪ್ರದರ್ಶನ ನೀಡಿದರೂ, ರುತುರಾಜ್ ಏಕಾಂಗಿಯಾಗಿ ಹೋರಾಡಿ ತಂಡವನ್ನು 363/6 ರನ್‌ಗಳಿಗೆ ಕೊಂಡೊಯ್ದಿದ್ದಾರೆ. ತನುಶ್ ಕೋಟ್ಯಾನ್ ಅವರು 65 ರನ್ ಗಳಿಸಿ ಅಜೇಯರಾಗಿದ್ದಾರೆ.

ಪೃಥ್ವಿಶಂಕರ
|

Updated on: Sep 04, 2025 | 5:25 PM

Share
ದುಲೀಪ್ ಟ್ರೋಫಿಯ ಎರಡನೇ ಸೆಮಿಫೈನಲ್‌ ಪಂದ್ಯ ಪಶ್ಚಿಮ ವಲಯ ಹಾಗೂ ಕೇಂದ್ರ ವಲಯ ತಂಡಗಳ ನಡುವೆ ಇಂದಿನಿಂದ ಆರಂಭವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಪಶ್ಚಿಮ ವಲಯ ತಂಡದ ಪರ ರುತುರಾಜ್ ಗಾಯಕ್ವಾಡ್ ಸ್ಮರಣೀಯ ಇನ್ನಿಂಗ್ಸ್ ಆಡಿದ್ದಾರೆ. ತಂಡದ ಪ್ರಮುಖ ಬ್ಯಾಟ್ಸ್‌ಮನ್​ಗಳು ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾದಾಗ ಏಕಾಂಗಿಯಾಗಿ ಹೋರಾಡಿದ ರುತುರಾಜ್ ಶತಕದ ಇನ್ನಿಂಗ್ಸ್ ಆಡಿದರು.

ದುಲೀಪ್ ಟ್ರೋಫಿಯ ಎರಡನೇ ಸೆಮಿಫೈನಲ್‌ ಪಂದ್ಯ ಪಶ್ಚಿಮ ವಲಯ ಹಾಗೂ ಕೇಂದ್ರ ವಲಯ ತಂಡಗಳ ನಡುವೆ ಇಂದಿನಿಂದ ಆರಂಭವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಪಶ್ಚಿಮ ವಲಯ ತಂಡದ ಪರ ರುತುರಾಜ್ ಗಾಯಕ್ವಾಡ್ ಸ್ಮರಣೀಯ ಇನ್ನಿಂಗ್ಸ್ ಆಡಿದ್ದಾರೆ. ತಂಡದ ಪ್ರಮುಖ ಬ್ಯಾಟ್ಸ್‌ಮನ್​ಗಳು ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾದಾಗ ಏಕಾಂಗಿಯಾಗಿ ಹೋರಾಡಿದ ರುತುರಾಜ್ ಶತಕದ ಇನ್ನಿಂಗ್ಸ್ ಆಡಿದರು.

1 / 5
ತಂಡದ ಪರ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ರುತುರಾಜ್ ಮೊದಲು 13 ಬೌಂಡರಿಗಳ ಸಹಾಯದಿಂದ ಶತಕ ಪೂರೈಸಿದರು.  70 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ರುತುರಾಜ್ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದ 8 ನೇ ಶತಕ ಗಳಿಸುವಲ್ಲಿ ಯಶಸ್ವಿಯಾದರು. ಈ ಸಮಯದಲ್ಲಿ ಶ್ರೇಯಸ್ ಅಯ್ಯರ್ ಕೂಡ ಗೈಕ್ವಾಡ್ ಜೊತೆ ಉತ್ತಮ ಜೊತೆಯಾಟ ಕಟ್ಟಿದರು.

ತಂಡದ ಪರ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ರುತುರಾಜ್ ಮೊದಲು 13 ಬೌಂಡರಿಗಳ ಸಹಾಯದಿಂದ ಶತಕ ಪೂರೈಸಿದರು. 70 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ರುತುರಾಜ್ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದ 8 ನೇ ಶತಕ ಗಳಿಸುವಲ್ಲಿ ಯಶಸ್ವಿಯಾದರು. ಈ ಸಮಯದಲ್ಲಿ ಶ್ರೇಯಸ್ ಅಯ್ಯರ್ ಕೂಡ ಗೈಕ್ವಾಡ್ ಜೊತೆ ಉತ್ತಮ ಜೊತೆಯಾಟ ಕಟ್ಟಿದರು.

2 / 5
ಇದು ಮಾತ್ರವಲ್ಲದೆ ರುತುರಾಜ್ ಹಾಗೂ ಆರ್ಯ ದೇಸಾಯಿ 80 ರನ್​ಗಳ ಜೊತೆಯಾಟವನ್ನು ಕಟ್ಟಿದರು. ಇನ್ನು ಕೆಳಕ್ರಮಾಂಕದಲ್ಲಿ ತನುಶ್ ಕೋಟ್ಯಾನ್ ಅವರಿಂದ ಉತ್ತಮ ಬೆಂಬಲ ಪಡೆದ ರುತುರಾಜ್ 150 ರನ್​ಗಳನ್ನು ಸಹ ಪೂರೈಸಿದರು. ಇದರೊಂದಿಗೆ ದ್ವಿಶತಕದತ್ತ ಸಾಗುತ್ತಿದ್ದ ರುತುರಾಜ್ 206 ಎಸೆತಗಳಲ್ಲಿ 15 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 184 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಇದು ಮಾತ್ರವಲ್ಲದೆ ರುತುರಾಜ್ ಹಾಗೂ ಆರ್ಯ ದೇಸಾಯಿ 80 ರನ್​ಗಳ ಜೊತೆಯಾಟವನ್ನು ಕಟ್ಟಿದರು. ಇನ್ನು ಕೆಳಕ್ರಮಾಂಕದಲ್ಲಿ ತನುಶ್ ಕೋಟ್ಯಾನ್ ಅವರಿಂದ ಉತ್ತಮ ಬೆಂಬಲ ಪಡೆದ ರುತುರಾಜ್ 150 ರನ್​ಗಳನ್ನು ಸಹ ಪೂರೈಸಿದರು. ಇದರೊಂದಿಗೆ ದ್ವಿಶತಕದತ್ತ ಸಾಗುತ್ತಿದ್ದ ರುತುರಾಜ್ 206 ಎಸೆತಗಳಲ್ಲಿ 15 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 184 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

3 / 5
ಇನ್ನು ರುತುರಾಜ್ ಹೊರತುಪಡಿಸಿ ತಂಡದ ಪರ ತನುಶ್ ಕೋಟ್ಯಾನ್ ಮಾತ್ರ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. ಇವರಿಬ್ಬರನ್ನು ಬಿಟ್ಟರೆ, ಆರಂಭಿಕನಾಗಿ ಕಣಕ್ಕಿಳಿದಿದ್ದ ಅನುಭವಿ ಯಶಸ್ವಿ ಜೈಸ್ವಾಲ್ ಕೇವಲ 4 ರನ್​ಗಳಿಗೆ ಸುಸ್ತಾದರು. ಅವರಂತೆ ಶ್ರೇಯಸ್ ಅಯ್ಯರ್ ಕೂಡ ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿ ಕೇವಲ 25 ರನ್​ಗಳಿಗೆ ವಿಕೆಟ್ ಒಪ್ಪಿಸಿದರು.

ಇನ್ನು ರುತುರಾಜ್ ಹೊರತುಪಡಿಸಿ ತಂಡದ ಪರ ತನುಶ್ ಕೋಟ್ಯಾನ್ ಮಾತ್ರ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. ಇವರಿಬ್ಬರನ್ನು ಬಿಟ್ಟರೆ, ಆರಂಭಿಕನಾಗಿ ಕಣಕ್ಕಿಳಿದಿದ್ದ ಅನುಭವಿ ಯಶಸ್ವಿ ಜೈಸ್ವಾಲ್ ಕೇವಲ 4 ರನ್​ಗಳಿಗೆ ಸುಸ್ತಾದರು. ಅವರಂತೆ ಶ್ರೇಯಸ್ ಅಯ್ಯರ್ ಕೂಡ ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿ ಕೇವಲ 25 ರನ್​ಗಳಿಗೆ ವಿಕೆಟ್ ಒಪ್ಪಿಸಿದರು.

4 / 5
ದಿನದಾಟದಂತ್ಯಕ್ಕೆ ತನುಶ್ ಅಜೇಯ 65ರನ್ ಬಾರಿಸಿ ನಾಳೆಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರೆ, ನಾಯಕ ಶಾರ್ದೂಲ್ ಠಾಕೂರ್ 24 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದಾರೆ. ಮೊದಲ ದಿನದಾಟದಂತ್ಯಕ್ಕೆ ಪಶ್ಚಿಮ ವಲಯ ತಂಡ 6 ವಿಕೆಟ್ ಕಳೆದುಕೊಂಡು 363 ರನ್ ಕಲೆಹಾಕಿದೆ.

ದಿನದಾಟದಂತ್ಯಕ್ಕೆ ತನುಶ್ ಅಜೇಯ 65ರನ್ ಬಾರಿಸಿ ನಾಳೆಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದರೆ, ನಾಯಕ ಶಾರ್ದೂಲ್ ಠಾಕೂರ್ 24 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದಾರೆ. ಮೊದಲ ದಿನದಾಟದಂತ್ಯಕ್ಕೆ ಪಶ್ಚಿಮ ವಲಯ ತಂಡ 6 ವಿಕೆಟ್ ಕಳೆದುಕೊಂಡು 363 ರನ್ ಕಲೆಹಾಕಿದೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ