AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kieron Pollard: ಕೀರನ್ ಪೊಲಾರ್ಡ್​ನ ರಿಲೀಸ್ ಮಾಡಿದ MI ಕೇಪ್​ ಟೌನ್

Kieron Pollard: ಕೀರನ್ ಪೊಲಾರ್ಡ್ 2022 ರಲ್ಲಿ ಐಪಿಎಲ್​ಗೆ ವಿದಾಯ ಹೇಳಿದ್ದರು. ಇದಾಗ್ಯೂ ಅವರು ಸೌತ್ ಆಫ್ರಿಕಾ ಟಿ20 ಲೀಗ್, ಇಂಟರ್​ನ್ಯಾಷನಲ್ ಲೀಗ್ ಟಿ20 ಹಾಗೂ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮುಂದುವರೆದಿದ್ದರು. ಆದರೀಗ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಎಂಐ ಕೇಪ್​ ಟೌನ್ ತಂಡದಿಂದ ಕೀರನ್ ಪೊಲಾರ್ಡ್​ಗೆ ಗೇಟ್ ಪಾಸ್ ನೀಡಲಾಗಿದೆ.

ಝಾಹಿರ್ ಯೂಸುಫ್
|

Updated on: Aug 17, 2024 | 10:15 AM

Share
ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ತಂಡಗಳ ಖಾಯಂ ಸದಸ್ಯರಾಗಿದ್ದ ಕೀರನ್ ಪೊಲಾರ್ಡ್ ಅವರನ್ನು MI ಕೇಪ್ ಟೌನ್​ ತಂಡದಿಂದ ಕೈ ಬಿಟ್ಟಿದ್ದಾರೆ. ಸೌತ್ ಆಫ್ರಿಕಾ ಟಿ20 ಲೀಗ್ ಸೀಸನ್-3 ಹರಾಜಿಗೂ ಮುನ್ನ ಎಂಐ ಕೇಪ್​ ಟೌನ್ ಒಟ್ಟು 14 ಆಟಗಾರರನ್ನು ಉಳಿಸಿಕೊಂಡಿದ್ದು, ಈ ಪಟ್ಟಿಯಲ್ಲಿ ಪೊಲಾರ್ಡ್ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ.

ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ತಂಡಗಳ ಖಾಯಂ ಸದಸ್ಯರಾಗಿದ್ದ ಕೀರನ್ ಪೊಲಾರ್ಡ್ ಅವರನ್ನು MI ಕೇಪ್ ಟೌನ್​ ತಂಡದಿಂದ ಕೈ ಬಿಟ್ಟಿದ್ದಾರೆ. ಸೌತ್ ಆಫ್ರಿಕಾ ಟಿ20 ಲೀಗ್ ಸೀಸನ್-3 ಹರಾಜಿಗೂ ಮುನ್ನ ಎಂಐ ಕೇಪ್​ ಟೌನ್ ಒಟ್ಟು 14 ಆಟಗಾರರನ್ನು ಉಳಿಸಿಕೊಂಡಿದ್ದು, ಈ ಪಟ್ಟಿಯಲ್ಲಿ ಪೊಲಾರ್ಡ್ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ.

1 / 5
ಕಳೆದ ಸೀಸನ್​ನಲ್ಲಿ ಎಂಐ ಕೇಪ್​ ಟೌನ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೀರನ್ ಪೊಲಾರ್ಡ್ ಅವರನ್ನು ಉಳಿಸಿಕೊಳ್ಳಲು ಈ ಬಾರಿ ಎಂಐ ಕೇಪ್​ ಟೌನ್ ನಿರಾಸಕ್ತಿ ತೋರಿದೆ. ಹೀಗಾಗಿ ಸೌತ್ ಆಫ್ರಿಕಾ ಟಿ20 ಲೀಗ್​ನ ಈ ಬಾರಿಯ ಹರಾಜಿನಲ್ಲಿ 37 ವರ್ಷದ ಪೊಲಾರ್ಡ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಕಳೆದ ಸೀಸನ್​ನಲ್ಲಿ ಎಂಐ ಕೇಪ್​ ಟೌನ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೀರನ್ ಪೊಲಾರ್ಡ್ ಅವರನ್ನು ಉಳಿಸಿಕೊಳ್ಳಲು ಈ ಬಾರಿ ಎಂಐ ಕೇಪ್​ ಟೌನ್ ನಿರಾಸಕ್ತಿ ತೋರಿದೆ. ಹೀಗಾಗಿ ಸೌತ್ ಆಫ್ರಿಕಾ ಟಿ20 ಲೀಗ್​ನ ಈ ಬಾರಿಯ ಹರಾಜಿನಲ್ಲಿ 37 ವರ್ಷದ ಪೊಲಾರ್ಡ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

2 / 5
ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಯುಎಇ ನಲ್ಲಿ ನಡೆಯಲಿರುವ ಇಂಟರ್ನ್ಯಾಷನಲ್ ಲೀಗ್​ನಲ್ಲಿ ಕೀರನ್ ಪೊಲಾರ್ಡ್ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ​ MI ಎಮಿರೇಟ್ಸ್‌ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಮುಂದಿನ ILT20 ಸೀಸನ್​ಗಾಗಿ ಎಂಐ ಎಮಿರೇಟ್ಸ್‌ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿ ಕೀರನ್ ಪೊಲಾರ್ಡ್ ಹೆಸರು ಕೂಡ ಇದೆ. ಇದಾಗ್ಯೂ ಸೌತ್ ಆಫ್ರಿಕಾ ಟಿ20 ಲೀಗ್​ನಿಂದ ಅವರನ್ನು ಕೈ ಬಿಟ್ಟಿದ್ದೇಕೆ ಎಂಬುದೇ ಈಗ ಕುತೂಹಲ.

ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಯುಎಇ ನಲ್ಲಿ ನಡೆಯಲಿರುವ ಇಂಟರ್ನ್ಯಾಷನಲ್ ಲೀಗ್​ನಲ್ಲಿ ಕೀರನ್ ಪೊಲಾರ್ಡ್ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ​ MI ಎಮಿರೇಟ್ಸ್‌ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಮುಂದಿನ ILT20 ಸೀಸನ್​ಗಾಗಿ ಎಂಐ ಎಮಿರೇಟ್ಸ್‌ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿ ಕೀರನ್ ಪೊಲಾರ್ಡ್ ಹೆಸರು ಕೂಡ ಇದೆ. ಇದಾಗ್ಯೂ ಸೌತ್ ಆಫ್ರಿಕಾ ಟಿ20 ಲೀಗ್​ನಿಂದ ಅವರನ್ನು ಕೈ ಬಿಟ್ಟಿದ್ದೇಕೆ ಎಂಬುದೇ ಈಗ ಕುತೂಹಲ.

3 / 5
ಇನ್ನು ಕೀರನ್ ಪೊಲಾರ್ಡ್ ಅವರನ್ನು ಕೈ ಬಿಟ್ಟಿರುವ ಎಂಐ ಕೇಪ್ ಟೌನ್ ತಂಡವು ಆ ಸ್ಥಾನದಲ್ಲಿ ಇಂಗ್ಲೆಂಡ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಇದೇ ಮೊದಲ ಬಾರಿಗೆ ಸ್ಟೋಕ್ಸ್​ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಮುಂದಿನ ಸೀಸನ್​ಗಾಗಿ ಟ್ರೆಂಟ್ ಬೌಲ್ಟ್ ಕೂಡ ಎಂಐ ಕೇಪ್ ಟೌನ್​ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಇನ್ನು ಕೀರನ್ ಪೊಲಾರ್ಡ್ ಅವರನ್ನು ಕೈ ಬಿಟ್ಟಿರುವ ಎಂಐ ಕೇಪ್ ಟೌನ್ ತಂಡವು ಆ ಸ್ಥಾನದಲ್ಲಿ ಇಂಗ್ಲೆಂಡ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಇದೇ ಮೊದಲ ಬಾರಿಗೆ ಸ್ಟೋಕ್ಸ್​ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಮುಂದಿನ ಸೀಸನ್​ಗಾಗಿ ಟ್ರೆಂಟ್ ಬೌಲ್ಟ್ ಕೂಡ ಎಂಐ ಕೇಪ್ ಟೌನ್​ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

4 / 5
ಎಂಐ ಕೇಪ್​ ಟೌನ್ ತಂಡದ ರಿಟೈನ್ ಆಟಗಾರರು: ಬೆನ್ ಸ್ಟೋಕ್ಸ್, ರಶೀದ್ ಖಾನ್, ಟ್ರೆಂಟ್ ಬೌಲ್ಟ್, ಅಝ್ಮತುಲ್ಲಾ ಒಮರ್​ಝೈ, ನುವಾನ್ ತುಷಾರ, ಕ್ರಿಸ್ ಬೆಂಜಮಿನ್, ಕಗಿಸೊ ರಬಾಡ, ಡೆವಾಲ್ಡ್ ಬ್ರೆವಿಸ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ರಿಯಾನ್ ರಿಕೆಲ್ಟನ್, ಜಾರ್ಜ್ ಲಿಂಡೆ, ಡೆಲಾನೊ ಪೊಟ್ಗೀಟರ್, ಥಾಮಸ್ ಕಬರ್ ಮತ್ತು ಕಾನರ್ ಎಸ್ಟರ್‌ಹುಯಿಜೆನ್.

ಎಂಐ ಕೇಪ್​ ಟೌನ್ ತಂಡದ ರಿಟೈನ್ ಆಟಗಾರರು: ಬೆನ್ ಸ್ಟೋಕ್ಸ್, ರಶೀದ್ ಖಾನ್, ಟ್ರೆಂಟ್ ಬೌಲ್ಟ್, ಅಝ್ಮತುಲ್ಲಾ ಒಮರ್​ಝೈ, ನುವಾನ್ ತುಷಾರ, ಕ್ರಿಸ್ ಬೆಂಜಮಿನ್, ಕಗಿಸೊ ರಬಾಡ, ಡೆವಾಲ್ಡ್ ಬ್ರೆವಿಸ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ರಿಯಾನ್ ರಿಕೆಲ್ಟನ್, ಜಾರ್ಜ್ ಲಿಂಡೆ, ಡೆಲಾನೊ ಪೊಟ್ಗೀಟರ್, ಥಾಮಸ್ ಕಬರ್ ಮತ್ತು ಕಾನರ್ ಎಸ್ಟರ್‌ಹುಯಿಜೆನ್.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ