AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kieron Pollard: ಕೀರನ್ ಪೊಲಾರ್ಡ್​ನ ರಿಲೀಸ್ ಮಾಡಿದ MI ಕೇಪ್​ ಟೌನ್

Kieron Pollard: ಕೀರನ್ ಪೊಲಾರ್ಡ್ 2022 ರಲ್ಲಿ ಐಪಿಎಲ್​ಗೆ ವಿದಾಯ ಹೇಳಿದ್ದರು. ಇದಾಗ್ಯೂ ಅವರು ಸೌತ್ ಆಫ್ರಿಕಾ ಟಿ20 ಲೀಗ್, ಇಂಟರ್​ನ್ಯಾಷನಲ್ ಲೀಗ್ ಟಿ20 ಹಾಗೂ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮುಂದುವರೆದಿದ್ದರು. ಆದರೀಗ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಎಂಐ ಕೇಪ್​ ಟೌನ್ ತಂಡದಿಂದ ಕೀರನ್ ಪೊಲಾರ್ಡ್​ಗೆ ಗೇಟ್ ಪಾಸ್ ನೀಡಲಾಗಿದೆ.

ಝಾಹಿರ್ ಯೂಸುಫ್
|

Updated on: Aug 17, 2024 | 10:15 AM

Share
ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ತಂಡಗಳ ಖಾಯಂ ಸದಸ್ಯರಾಗಿದ್ದ ಕೀರನ್ ಪೊಲಾರ್ಡ್ ಅವರನ್ನು MI ಕೇಪ್ ಟೌನ್​ ತಂಡದಿಂದ ಕೈ ಬಿಟ್ಟಿದ್ದಾರೆ. ಸೌತ್ ಆಫ್ರಿಕಾ ಟಿ20 ಲೀಗ್ ಸೀಸನ್-3 ಹರಾಜಿಗೂ ಮುನ್ನ ಎಂಐ ಕೇಪ್​ ಟೌನ್ ಒಟ್ಟು 14 ಆಟಗಾರರನ್ನು ಉಳಿಸಿಕೊಂಡಿದ್ದು, ಈ ಪಟ್ಟಿಯಲ್ಲಿ ಪೊಲಾರ್ಡ್ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ.

ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ತಂಡಗಳ ಖಾಯಂ ಸದಸ್ಯರಾಗಿದ್ದ ಕೀರನ್ ಪೊಲಾರ್ಡ್ ಅವರನ್ನು MI ಕೇಪ್ ಟೌನ್​ ತಂಡದಿಂದ ಕೈ ಬಿಟ್ಟಿದ್ದಾರೆ. ಸೌತ್ ಆಫ್ರಿಕಾ ಟಿ20 ಲೀಗ್ ಸೀಸನ್-3 ಹರಾಜಿಗೂ ಮುನ್ನ ಎಂಐ ಕೇಪ್​ ಟೌನ್ ಒಟ್ಟು 14 ಆಟಗಾರರನ್ನು ಉಳಿಸಿಕೊಂಡಿದ್ದು, ಈ ಪಟ್ಟಿಯಲ್ಲಿ ಪೊಲಾರ್ಡ್ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ.

1 / 5
ಕಳೆದ ಸೀಸನ್​ನಲ್ಲಿ ಎಂಐ ಕೇಪ್​ ಟೌನ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೀರನ್ ಪೊಲಾರ್ಡ್ ಅವರನ್ನು ಉಳಿಸಿಕೊಳ್ಳಲು ಈ ಬಾರಿ ಎಂಐ ಕೇಪ್​ ಟೌನ್ ನಿರಾಸಕ್ತಿ ತೋರಿದೆ. ಹೀಗಾಗಿ ಸೌತ್ ಆಫ್ರಿಕಾ ಟಿ20 ಲೀಗ್​ನ ಈ ಬಾರಿಯ ಹರಾಜಿನಲ್ಲಿ 37 ವರ್ಷದ ಪೊಲಾರ್ಡ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಕಳೆದ ಸೀಸನ್​ನಲ್ಲಿ ಎಂಐ ಕೇಪ್​ ಟೌನ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೀರನ್ ಪೊಲಾರ್ಡ್ ಅವರನ್ನು ಉಳಿಸಿಕೊಳ್ಳಲು ಈ ಬಾರಿ ಎಂಐ ಕೇಪ್​ ಟೌನ್ ನಿರಾಸಕ್ತಿ ತೋರಿದೆ. ಹೀಗಾಗಿ ಸೌತ್ ಆಫ್ರಿಕಾ ಟಿ20 ಲೀಗ್​ನ ಈ ಬಾರಿಯ ಹರಾಜಿನಲ್ಲಿ 37 ವರ್ಷದ ಪೊಲಾರ್ಡ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

2 / 5
ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಯುಎಇ ನಲ್ಲಿ ನಡೆಯಲಿರುವ ಇಂಟರ್ನ್ಯಾಷನಲ್ ಲೀಗ್​ನಲ್ಲಿ ಕೀರನ್ ಪೊಲಾರ್ಡ್ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ​ MI ಎಮಿರೇಟ್ಸ್‌ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಮುಂದಿನ ILT20 ಸೀಸನ್​ಗಾಗಿ ಎಂಐ ಎಮಿರೇಟ್ಸ್‌ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿ ಕೀರನ್ ಪೊಲಾರ್ಡ್ ಹೆಸರು ಕೂಡ ಇದೆ. ಇದಾಗ್ಯೂ ಸೌತ್ ಆಫ್ರಿಕಾ ಟಿ20 ಲೀಗ್​ನಿಂದ ಅವರನ್ನು ಕೈ ಬಿಟ್ಟಿದ್ದೇಕೆ ಎಂಬುದೇ ಈಗ ಕುತೂಹಲ.

ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಯುಎಇ ನಲ್ಲಿ ನಡೆಯಲಿರುವ ಇಂಟರ್ನ್ಯಾಷನಲ್ ಲೀಗ್​ನಲ್ಲಿ ಕೀರನ್ ಪೊಲಾರ್ಡ್ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ​ MI ಎಮಿರೇಟ್ಸ್‌ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಮುಂದಿನ ILT20 ಸೀಸನ್​ಗಾಗಿ ಎಂಐ ಎಮಿರೇಟ್ಸ್‌ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯಲ್ಲಿ ಕೀರನ್ ಪೊಲಾರ್ಡ್ ಹೆಸರು ಕೂಡ ಇದೆ. ಇದಾಗ್ಯೂ ಸೌತ್ ಆಫ್ರಿಕಾ ಟಿ20 ಲೀಗ್​ನಿಂದ ಅವರನ್ನು ಕೈ ಬಿಟ್ಟಿದ್ದೇಕೆ ಎಂಬುದೇ ಈಗ ಕುತೂಹಲ.

3 / 5
ಇನ್ನು ಕೀರನ್ ಪೊಲಾರ್ಡ್ ಅವರನ್ನು ಕೈ ಬಿಟ್ಟಿರುವ ಎಂಐ ಕೇಪ್ ಟೌನ್ ತಂಡವು ಆ ಸ್ಥಾನದಲ್ಲಿ ಇಂಗ್ಲೆಂಡ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಇದೇ ಮೊದಲ ಬಾರಿಗೆ ಸ್ಟೋಕ್ಸ್​ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಮುಂದಿನ ಸೀಸನ್​ಗಾಗಿ ಟ್ರೆಂಟ್ ಬೌಲ್ಟ್ ಕೂಡ ಎಂಐ ಕೇಪ್ ಟೌನ್​ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಇನ್ನು ಕೀರನ್ ಪೊಲಾರ್ಡ್ ಅವರನ್ನು ಕೈ ಬಿಟ್ಟಿರುವ ಎಂಐ ಕೇಪ್ ಟೌನ್ ತಂಡವು ಆ ಸ್ಥಾನದಲ್ಲಿ ಇಂಗ್ಲೆಂಡ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಇದೇ ಮೊದಲ ಬಾರಿಗೆ ಸ್ಟೋಕ್ಸ್​ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಮುಂದಿನ ಸೀಸನ್​ಗಾಗಿ ಟ್ರೆಂಟ್ ಬೌಲ್ಟ್ ಕೂಡ ಎಂಐ ಕೇಪ್ ಟೌನ್​ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

4 / 5
ಎಂಐ ಕೇಪ್​ ಟೌನ್ ತಂಡದ ರಿಟೈನ್ ಆಟಗಾರರು: ಬೆನ್ ಸ್ಟೋಕ್ಸ್, ರಶೀದ್ ಖಾನ್, ಟ್ರೆಂಟ್ ಬೌಲ್ಟ್, ಅಝ್ಮತುಲ್ಲಾ ಒಮರ್​ಝೈ, ನುವಾನ್ ತುಷಾರ, ಕ್ರಿಸ್ ಬೆಂಜಮಿನ್, ಕಗಿಸೊ ರಬಾಡ, ಡೆವಾಲ್ಡ್ ಬ್ರೆವಿಸ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ರಿಯಾನ್ ರಿಕೆಲ್ಟನ್, ಜಾರ್ಜ್ ಲಿಂಡೆ, ಡೆಲಾನೊ ಪೊಟ್ಗೀಟರ್, ಥಾಮಸ್ ಕಬರ್ ಮತ್ತು ಕಾನರ್ ಎಸ್ಟರ್‌ಹುಯಿಜೆನ್.

ಎಂಐ ಕೇಪ್​ ಟೌನ್ ತಂಡದ ರಿಟೈನ್ ಆಟಗಾರರು: ಬೆನ್ ಸ್ಟೋಕ್ಸ್, ರಶೀದ್ ಖಾನ್, ಟ್ರೆಂಟ್ ಬೌಲ್ಟ್, ಅಝ್ಮತುಲ್ಲಾ ಒಮರ್​ಝೈ, ನುವಾನ್ ತುಷಾರ, ಕ್ರಿಸ್ ಬೆಂಜಮಿನ್, ಕಗಿಸೊ ರಬಾಡ, ಡೆವಾಲ್ಡ್ ಬ್ರೆವಿಸ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ರಿಯಾನ್ ರಿಕೆಲ್ಟನ್, ಜಾರ್ಜ್ ಲಿಂಡೆ, ಡೆಲಾನೊ ಪೊಟ್ಗೀಟರ್, ಥಾಮಸ್ ಕಬರ್ ಮತ್ತು ಕಾನರ್ ಎಸ್ಟರ್‌ಹುಯಿಜೆನ್.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ