AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ‘ನಮೋ’ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ ಕ್ರಿಕೆಟ್ ದೇವರು; ಫೋಟೋ ನೋಡಿ

Sachin Tendulkar: ಸೆಪ್ಟೆಂಬರ್ 23 ರಂದು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ಮಾಡಿದರು. ಈ ವೇಳೆ ಟೀಂ ಇಂಡಿಯಾದ ಲೆಜೆಂಡರಿ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರು 'ನಮೋ' ಎಂದು ಬರೆದಿರುವ ಭಾರತದ ಜೆರ್ಸಿಯನ್ನು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಿ ನೀಡಿದರು.

ಪೃಥ್ವಿಶಂಕರ
|

Updated on: Sep 24, 2023 | 8:40 AM

ಸೆಪ್ಟೆಂಬರ್ 23 ರಂದು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ಮಾಡಿದರು.

ಸೆಪ್ಟೆಂಬರ್ 23 ರಂದು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ಮಾಡಿದರು.

1 / 8
ವಾರಣಾಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾರತದ ಕ್ರಿಕೆಟ್ ದಿಗ್ಗಜರಾದ ಸುನಿಲ್ ಗವಾಸ್ಕರ್, ಸಚಿನ್ ತೆಂಡೂಲ್ಕರ್, ಕಪಿಲ್ ದೇವ್, ರವಿಶಾಸ್ತ್ರಿ, ದಿಲೀಪ್ ಬೆಂಗಸರ್ಕರ್, ರೋಜರ್ ಬಿನ್ನಿ, ಮದನ್ ಲಾಲ್, ಗುಂಡಪ್ಪ ವಿಶ್ವನಾಥ್ ಮತ್ತು ಗೋಪಾಲ್ ಶರ್ಮಾ ಉಪಸ್ಥಿತರಿದ್ದರು.

ವಾರಣಾಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾರತದ ಕ್ರಿಕೆಟ್ ದಿಗ್ಗಜರಾದ ಸುನಿಲ್ ಗವಾಸ್ಕರ್, ಸಚಿನ್ ತೆಂಡೂಲ್ಕರ್, ಕಪಿಲ್ ದೇವ್, ರವಿಶಾಸ್ತ್ರಿ, ದಿಲೀಪ್ ಬೆಂಗಸರ್ಕರ್, ರೋಜರ್ ಬಿನ್ನಿ, ಮದನ್ ಲಾಲ್, ಗುಂಡಪ್ಪ ವಿಶ್ವನಾಥ್ ಮತ್ತು ಗೋಪಾಲ್ ಶರ್ಮಾ ಉಪಸ್ಥಿತರಿದ್ದರು.

2 / 8
ಈ ವೇಳೆ ಟೀಂ ಇಂಡಿಯಾದ ಲೆಜೆಂಡರಿ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರು 'ನಮೋ' ಎಂದು ಬರೆದಿರುವ ಭಾರತದ ಜೆರ್ಸಿಯನ್ನು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಿ ನೀಡಿದರು.

ಈ ವೇಳೆ ಟೀಂ ಇಂಡಿಯಾದ ಲೆಜೆಂಡರಿ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರು 'ನಮೋ' ಎಂದು ಬರೆದಿರುವ ಭಾರತದ ಜೆರ್ಸಿಯನ್ನು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಿ ನೀಡಿದರು.

3 / 8
ಸಚಿನ್ ಹೊರತುಪಡಿಸಿ, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಭಾರತದ ಪ್ರಧಾನಿಗೆ ಸ್ಮರಣಿಕೆಯಾಗಿ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದರು.

ಸಚಿನ್ ಹೊರತುಪಡಿಸಿ, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಭಾರತದ ಪ್ರಧಾನಿಗೆ ಸ್ಮರಣಿಕೆಯಾಗಿ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದರು.

4 / 8
 ಈ ಕ್ರೀಡಾಂಗಣದ ವಾಸ್ತುಶಿಲ್ಪವು ಭಗವಾನ್ ಶಿವನಿಂದ ಪ್ರೇರಿತವಾಗಿದ್ದು, ಇದು ಅರ್ಧಚಂದ್ರಾಕಾರದ ಛಾವಣಿಯ ಹೊದಿಕೆ ಮತ್ತು ತ್ರಿಶೂಲದ ಆಕಾರದ ಫ್ಲಡ್-ಲೈಟ್ಗಳನ್ನು ಹೊಂದಿದೆ. ಅಲ್ಲದೆ ಸ್ನಾನ ಘಟ್ಟಗಳ ಮೆಟ್ಟಿಲುಗಳ ಮಾದರಿಯಲ್ಲಿ ಪ್ರೇಕ್ಷಕರ ಗ್ಯಾಲರಿಯು ನಿರ್ಮಾಣ ಮಾಡಲಾಗುತ್ತಿದೆ. ಇಲ್ಲಿ ಸುಮಾರು 30 ಸಾವಿರ ಅಭಿಮಾನಿಗಳು ಏಕಕಾಲದಲ್ಲಿ ಪಂದ್ಯವನ್ನು ವೀಕ್ಷಿಸಬಹುದಾಗಿದ್ದು, ಈ ಕ್ರೀಡಾಂಗಣದ ನಿರ್ಮಾಣ ಕೆಲಸ ಡಿಸೆಂಬರ್ 2025 ರೊಳಗೆ ಪೂರ್ಣಗೊಳ್ಳುವ ಸಾಧ್ಯತೆಗಳಿವೆ.

ಈ ಕ್ರೀಡಾಂಗಣದ ವಾಸ್ತುಶಿಲ್ಪವು ಭಗವಾನ್ ಶಿವನಿಂದ ಪ್ರೇರಿತವಾಗಿದ್ದು, ಇದು ಅರ್ಧಚಂದ್ರಾಕಾರದ ಛಾವಣಿಯ ಹೊದಿಕೆ ಮತ್ತು ತ್ರಿಶೂಲದ ಆಕಾರದ ಫ್ಲಡ್-ಲೈಟ್ಗಳನ್ನು ಹೊಂದಿದೆ. ಅಲ್ಲದೆ ಸ್ನಾನ ಘಟ್ಟಗಳ ಮೆಟ್ಟಿಲುಗಳ ಮಾದರಿಯಲ್ಲಿ ಪ್ರೇಕ್ಷಕರ ಗ್ಯಾಲರಿಯು ನಿರ್ಮಾಣ ಮಾಡಲಾಗುತ್ತಿದೆ. ಇಲ್ಲಿ ಸುಮಾರು 30 ಸಾವಿರ ಅಭಿಮಾನಿಗಳು ಏಕಕಾಲದಲ್ಲಿ ಪಂದ್ಯವನ್ನು ವೀಕ್ಷಿಸಬಹುದಾಗಿದ್ದು, ಈ ಕ್ರೀಡಾಂಗಣದ ನಿರ್ಮಾಣ ಕೆಲಸ ಡಿಸೆಂಬರ್ 2025 ರೊಳಗೆ ಪೂರ್ಣಗೊಳ್ಳುವ ಸಾಧ್ಯತೆಗಳಿವೆ.

5 / 8
ವಾರಣಾಸಿ ಕ್ರೀಡಾಂಗಣದ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಮೋದಿ, ‘ಮಣಿಪುರದಲ್ಲಿ ರಾಷ್ಟ್ರೀಯ ಕ್ರೀಡಾ ವಿಶ್ವವಿದ್ಯಾಲಯವನ್ನು ತೆರೆಯಲಾಗಿದೆ. ಉತ್ತರ ಪ್ರದೇಶದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಕೋಟ್ಯಂತರ ರೂ. ಅನುದಾನ ನೀಡಲಾಗಿದೆ. ಗೋರಖ್‌ಪುರದಲ್ಲಿ ಕ್ರೀಡಾ ಕಾಲೇಜು, ಮೀರತ್‌ನಲ್ಲಿರುವ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯ. ಹಾಗೂ ದೇಶಾದ್ಯಂತ ಅನೇಕ ಕ್ರೀಡಾ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ ಎಂದರು.

ವಾರಣಾಸಿ ಕ್ರೀಡಾಂಗಣದ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಮೋದಿ, ‘ಮಣಿಪುರದಲ್ಲಿ ರಾಷ್ಟ್ರೀಯ ಕ್ರೀಡಾ ವಿಶ್ವವಿದ್ಯಾಲಯವನ್ನು ತೆರೆಯಲಾಗಿದೆ. ಉತ್ತರ ಪ್ರದೇಶದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಕೋಟ್ಯಂತರ ರೂ. ಅನುದಾನ ನೀಡಲಾಗಿದೆ. ಗೋರಖ್‌ಪುರದಲ್ಲಿ ಕ್ರೀಡಾ ಕಾಲೇಜು, ಮೀರತ್‌ನಲ್ಲಿರುವ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯ. ಹಾಗೂ ದೇಶಾದ್ಯಂತ ಅನೇಕ ಕ್ರೀಡಾ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ ಎಂದರು.

6 / 8
ಮುಂದುವರೆದು ಮಾತನಾಡಿದ ಮೋದಿ, ‘ಅಭಿವೃದ್ಧಿಗೆ ಕ್ರೀಡಾ ಸೌಲಭ್ಯಗಳ ಬೃಹತ್ ವಿಸ್ತರಣೆ ಅಗತ್ಯ. ನಮ್ಮಲ್ಲಿ ಅನೇಕರು ವಿಶ್ವದ ಅನೇಕ ನಗರಗಳನ್ನು ತಿಳಿದಿದ್ದಾರೆ. ಏಕೆಂದರೆ ಅವುಗಳು ವಿವಿಧ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳನ್ನು ಆಯೋಜಿಸಿವೆ. ಅಂತಹ ಕ್ರೀಡಾ ಕೇಂದ್ರವನ್ನು ಭಾರತದಲ್ಲೂ ನಿರ್ಮಿಸುತ್ತೇವೆ. ಇದರಿಂದ ಇಲ್ಲಿಯೂ ಅಂತಾರಾಷ್ಟ್ರೀಯ ಮಟ್ಟದ ವಿವಿಧ ಆಟಗಳನ್ನು ಆಯೋಜಿಸಬಹುದು. ಇಂದು ಅಡಿಗಲ್ಲು ಹಾಕಿದ ಈ ಕ್ರೀಡಾಂಗಣ ನಮ್ಮ ಆಟದ ಬದ್ಧತೆಗೆ ಸಾಕ್ಷಿಯಾಗಿದೆ’ ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಮೋದಿ, ‘ಅಭಿವೃದ್ಧಿಗೆ ಕ್ರೀಡಾ ಸೌಲಭ್ಯಗಳ ಬೃಹತ್ ವಿಸ್ತರಣೆ ಅಗತ್ಯ. ನಮ್ಮಲ್ಲಿ ಅನೇಕರು ವಿಶ್ವದ ಅನೇಕ ನಗರಗಳನ್ನು ತಿಳಿದಿದ್ದಾರೆ. ಏಕೆಂದರೆ ಅವುಗಳು ವಿವಿಧ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳನ್ನು ಆಯೋಜಿಸಿವೆ. ಅಂತಹ ಕ್ರೀಡಾ ಕೇಂದ್ರವನ್ನು ಭಾರತದಲ್ಲೂ ನಿರ್ಮಿಸುತ್ತೇವೆ. ಇದರಿಂದ ಇಲ್ಲಿಯೂ ಅಂತಾರಾಷ್ಟ್ರೀಯ ಮಟ್ಟದ ವಿವಿಧ ಆಟಗಳನ್ನು ಆಯೋಜಿಸಬಹುದು. ಇಂದು ಅಡಿಗಲ್ಲು ಹಾಕಿದ ಈ ಕ್ರೀಡಾಂಗಣ ನಮ್ಮ ಆಟದ ಬದ್ಧತೆಗೆ ಸಾಕ್ಷಿಯಾಗಿದೆ’ ಎಂದು ಹೇಳಿದರು.

7 / 8
ವಾರಣಾಸಿಯಲ್ಲಿ ನಿರ್ಮಾಣವಾಗಲಿರುವ ಮಹದೇವನ ನಗರಿ ಕ್ರೀಡಾಂಗಣದ ಕುರಿತು ಮಾತನಾಡಿದ ಮೋದಿ, ‘ವಾರಣಾಸಿ ಸ್ಟೇಡಿಯಂ ಕೇವಲ ಇಟ್ಟಿಗೆ ಮತ್ತು ಕಲ್ಲಿನಿಂದ ಮಾಡಿದ ಕ್ರೀಡಾಂಗಣವಾಗುವುದಿಲ್ಲ. ಬದಲಿಗೆ, ಈ ಕ್ರೀಡಾಂಗಣ ಭವಿಷ್ಯದ ಭಾರತದ ಸಂಕೇತವಾಗಲಿದೆ. ಈ ಕ್ರೀಡಾಂಗಣವನ್ನು ಶಿವನಿಗೆ ಅರ್ಪಿಸಲಾಗುವುದು. ಇದರ ವಿನ್ಯಾಸವನ್ನು ಸಹ ಮಹಾದೇವನಿಗೆ ಅರ್ಪಿಸಲಾಗಿದೆ. ಈ ಕ್ರೀಡಾಂಗಣದಲ್ಲಿ ಹಲವು ಕ್ರಿಕೆಟ್ ಪಂದ್ಯಗಳು ನಡೆಯಲಿವೆ. ಇದರಿಂದ ವಾರಣಾಸಿಯಲ್ಲಿ ಕ್ರಿಕೆಟ್ ಆಡಬಯಸುವ ಯುವಕರು ಲಾಭ ಪಡೆಯಲಿದ್ದಾರೆ. ನಾನು ನನ್ನನ್ನು ಅದೃಷ್ಟಶಾಲಿ ಎಂದು ಪರಿಗಣಿಸುತ್ತೇನೆ. ಏಕೆಂದರೆ, ನನ್ನ ಕಾಶಿ ಯಾವಾಗಲೂ ನನ್ನನ್ನು ಆಶೀರ್ವದಿಸುತ್ತದೆ. ನನ್ನ ಪಕ್ಕದಲ್ಲಿ ನಿಂತಿದೆ. ಕಾಶಿಯಲ್ಲಿ ಈ ರೀತಿ ಅಭಿವೃದ್ಧಿಯ ಹೊಸ ಅಧ್ಯಾಯ ಬರೆಯುತ್ತೇವೆ. ಈ ವಾರಣಾಸಿ ಕ್ರಿಕೆಟ್ ಸ್ಟೇಡಿಯಂಗೆ ಅಡಿಗಲ್ಲು ಹಾಕಿದ ಕಾಶಿಯ ಜನತೆಗೆ ಅಭಿನಂದನೆಗಳು.' ಎಂದರು.

ವಾರಣಾಸಿಯಲ್ಲಿ ನಿರ್ಮಾಣವಾಗಲಿರುವ ಮಹದೇವನ ನಗರಿ ಕ್ರೀಡಾಂಗಣದ ಕುರಿತು ಮಾತನಾಡಿದ ಮೋದಿ, ‘ವಾರಣಾಸಿ ಸ್ಟೇಡಿಯಂ ಕೇವಲ ಇಟ್ಟಿಗೆ ಮತ್ತು ಕಲ್ಲಿನಿಂದ ಮಾಡಿದ ಕ್ರೀಡಾಂಗಣವಾಗುವುದಿಲ್ಲ. ಬದಲಿಗೆ, ಈ ಕ್ರೀಡಾಂಗಣ ಭವಿಷ್ಯದ ಭಾರತದ ಸಂಕೇತವಾಗಲಿದೆ. ಈ ಕ್ರೀಡಾಂಗಣವನ್ನು ಶಿವನಿಗೆ ಅರ್ಪಿಸಲಾಗುವುದು. ಇದರ ವಿನ್ಯಾಸವನ್ನು ಸಹ ಮಹಾದೇವನಿಗೆ ಅರ್ಪಿಸಲಾಗಿದೆ. ಈ ಕ್ರೀಡಾಂಗಣದಲ್ಲಿ ಹಲವು ಕ್ರಿಕೆಟ್ ಪಂದ್ಯಗಳು ನಡೆಯಲಿವೆ. ಇದರಿಂದ ವಾರಣಾಸಿಯಲ್ಲಿ ಕ್ರಿಕೆಟ್ ಆಡಬಯಸುವ ಯುವಕರು ಲಾಭ ಪಡೆಯಲಿದ್ದಾರೆ. ನಾನು ನನ್ನನ್ನು ಅದೃಷ್ಟಶಾಲಿ ಎಂದು ಪರಿಗಣಿಸುತ್ತೇನೆ. ಏಕೆಂದರೆ, ನನ್ನ ಕಾಶಿ ಯಾವಾಗಲೂ ನನ್ನನ್ನು ಆಶೀರ್ವದಿಸುತ್ತದೆ. ನನ್ನ ಪಕ್ಕದಲ್ಲಿ ನಿಂತಿದೆ. ಕಾಶಿಯಲ್ಲಿ ಈ ರೀತಿ ಅಭಿವೃದ್ಧಿಯ ಹೊಸ ಅಧ್ಯಾಯ ಬರೆಯುತ್ತೇವೆ. ಈ ವಾರಣಾಸಿ ಕ್ರಿಕೆಟ್ ಸ್ಟೇಡಿಯಂಗೆ ಅಡಿಗಲ್ಲು ಹಾಕಿದ ಕಾಶಿಯ ಜನತೆಗೆ ಅಭಿನಂದನೆಗಳು.' ಎಂದರು.

8 / 8
Follow us
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್