AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಟೀಂ ಇಂಡಿಯಾಕ್ಕೆ ಸಿಹಿ ಸುದ್ದಿ; ಟೆಸ್ಟ್ ಸರಣಿಗೆ ಸ್ಟಾರ್ ಪ್ಲೇಯರ್ ಎಂಟ್ರಿ

India vs Sri Lanka Test: ಭಾರತ-ಶ್ರೀಲಂಕಾ ಟೆಸ್ಟ್ ಸರಣಿಗೆ ಮುನ್ನ ಸಾಯಿ ಸುದರ್ಶನ್ ಗಾಯದಿಂದ ಚೇತರಿಸಿಕೊಂಡು ಫಿಟ್ ಆಗಿದ್ದಾರೆ. ಆರಂಭದಲ್ಲಿ ಟೀಂ ಇಂಡಿಯಾ ಜೊತೆ ಪ್ರಯಾಣಿಸದ ಅವರು, ಈಗ ಬೆಂಗಳೂರಿನಲ್ಲಿ ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಆಗಸ್ಟ್ 8 ರೊಳಗೆ ಶ್ರೀಲಂಕಾದಲ್ಲಿ ಟೀಂ ಇಂಡಿಯಾವನ್ನು ಸೇರಲಿದ್ದಾರೆ. ಉತ್ತಮ ಫಾರ್ಮ್‌ನಲ್ಲಿರುವ ಸಾಯಿ ಸುದರ್ಶನ್ ಹಿಂದೆ ಶ್ರೀಲಂಕಾದಲ್ಲಿ ಭಾರತ ಎ ಪರ ಶತಕಗಳನ್ನು ಗಳಿಸಿದ್ದರು. ಅವರ ಫಿಟ್ನೆಸ್ ಟೀಂ ಇಂಡಿಯಾಗೆ ದೊಡ್ಡ ಬಲ ನೀಡಲಿದೆ.

ಪೃಥ್ವಿಶಂಕರ
|

Updated on: Aug 05, 2026 | 7:14 PM

Share
ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಇದೇ ಆಗಸ್ಟ್ 15 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಟೀಂ ಇಂಡಿಯಾ ಈಗಾಗಲೇ ಶ್ರೀಲಂಕಾ ತಲುಪಿದೆ. ಶುಭ್​ಮನ್ ಗಿಲ್ ನಾಯಕತ್ವದ ಟೀಂ ಇಂಡಿಯಾ ಮೊದಲಿಗೆ ಅಭ್ಯಾಸ ಪಂದ್ಯವನ್ನು ಆಡಲಿದೆ. ಆ ಬಳಿಕ ಟೆಸ್ಟ್ ಸರಣಿ ಆರಂಭವಾಗಲಿದೆ(PC-PTI).

ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಇದೇ ಆಗಸ್ಟ್ 15 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಟೀಂ ಇಂಡಿಯಾ ಈಗಾಗಲೇ ಶ್ರೀಲಂಕಾ ತಲುಪಿದೆ. ಶುಭ್​ಮನ್ ಗಿಲ್ ನಾಯಕತ್ವದ ಟೀಂ ಇಂಡಿಯಾ ಮೊದಲಿಗೆ ಅಭ್ಯಾಸ ಪಂದ್ಯವನ್ನು ಆಡಲಿದೆ. ಆ ಬಳಿಕ ಟೆಸ್ಟ್ ಸರಣಿ ಆರಂಭವಾಗಲಿದೆ(PC-PTI).

1 / 5
ಈ ಟೆಸ್ಟ್ ಸರಣಿಗಾಗಿ ತಂಡದ ಜೊತೆಗೆ ಯುವ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್ ಶ್ರೀಲಂಕಾಕ್ಕೆ ಪ್ರಯಾಣಿಸಿರಲಿಲ್ಲ. ಹೀಗಾಗಿ ಅವರು ಈ ಸರಣಿಯನ್ನು ಆಡುವುದು ಅನುಮಾನ ಎನ್ನಲಾಗುತ್ತಿತ್ತು. ಇದಕ್ಕೆ ಕಾರಣ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದ ಸಾಯಿ ಸುದರ್ಶನ್ ಎನ್​ಸಿಎಯಿಂದ ಫಿಟ್ನೆಸ್ ಕ್ಲಿಯರೆನ್ಸ್ ಪಡೆದುಕೊಂಡಿರಲಿಲ್ಲ(PC-PTI).

ಈ ಟೆಸ್ಟ್ ಸರಣಿಗಾಗಿ ತಂಡದ ಜೊತೆಗೆ ಯುವ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್ ಶ್ರೀಲಂಕಾಕ್ಕೆ ಪ್ರಯಾಣಿಸಿರಲಿಲ್ಲ. ಹೀಗಾಗಿ ಅವರು ಈ ಸರಣಿಯನ್ನು ಆಡುವುದು ಅನುಮಾನ ಎನ್ನಲಾಗುತ್ತಿತ್ತು. ಇದಕ್ಕೆ ಕಾರಣ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದ ಸಾಯಿ ಸುದರ್ಶನ್ ಎನ್​ಸಿಎಯಿಂದ ಫಿಟ್ನೆಸ್ ಕ್ಲಿಯರೆನ್ಸ್ ಪಡೆದುಕೊಂಡಿರಲಿಲ್ಲ(PC-PTI).

2 / 5
ಆದರೀಗ ಸಿಕ್ಕಿರುವ ಮಾಹಿತಿ ಪ್ರಕಾರ, ಸಾಯಿ ಸುದರ್ಶನ್ ಸಂಪೂರ್ಣವಾಗಿ ಫಿಟ್ ಆಗಿದ್ದು ಬ್ಯಾಟಿಂಗ್ ಪ್ರಾರಂಭಿಸಿದ್ದಾರೆ. ವರದಿಗಳ ಪ್ರಕಾರ ಅವರು ಶೀಘ್ರದಲ್ಲೇ ಶ್ರೀಲಂಕಾದಲ್ಲಿರುವ ಟೀಂ ಇಂಡಿಯಾವನ್ನು ಸೇರಲಿದ್ದಾರೆ. ಸಾಯಿ ಸುದರ್ಶನ್ ಪ್ರಸ್ತುತ ಬೆಂಗಳೂರಿನಲ್ಲಿದ್ದು, ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ತಮ್ಮ ಫಿಟ್‌ನೆಸ್‌ಗಾಗಿ ಕೆಲಸ ಮಾಡುತ್ತಿದ್ದಾರೆ(PC-PTI).

ಆದರೀಗ ಸಿಕ್ಕಿರುವ ಮಾಹಿತಿ ಪ್ರಕಾರ, ಸಾಯಿ ಸುದರ್ಶನ್ ಸಂಪೂರ್ಣವಾಗಿ ಫಿಟ್ ಆಗಿದ್ದು ಬ್ಯಾಟಿಂಗ್ ಪ್ರಾರಂಭಿಸಿದ್ದಾರೆ. ವರದಿಗಳ ಪ್ರಕಾರ ಅವರು ಶೀಘ್ರದಲ್ಲೇ ಶ್ರೀಲಂಕಾದಲ್ಲಿರುವ ಟೀಂ ಇಂಡಿಯಾವನ್ನು ಸೇರಲಿದ್ದಾರೆ. ಸಾಯಿ ಸುದರ್ಶನ್ ಪ್ರಸ್ತುತ ಬೆಂಗಳೂರಿನಲ್ಲಿದ್ದು, ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ತಮ್ಮ ಫಿಟ್‌ನೆಸ್‌ಗಾಗಿ ಕೆಲಸ ಮಾಡುತ್ತಿದ್ದಾರೆ(PC-PTI).

3 / 5
ಸಾಯಿ ಸುದರ್ಶನ್ ಆಗಸ್ಟ್ 8 ರೊಳಗೆ ಶ್ರೀಲಂಕಾಕ್ಕೆ ತೆರಳುವ ಸಾಧ್ಯತೆಯಿದೆ. ಸಿಕ್ಕಿರುವ ಮಾಹಿತಿ ಪ್ರಕಾರ, ಸುದರ್ಶನ್ ಆಗಸ್ಟ್ 7 ರಿಂದ ಪ್ರಾರಂಭವಾಗಲಿರುವ ಅಭ್ಯಾಸ ಪಂದ್ಯಗಳಲ್ಲಿ ಆಡುವುದಿಲ್ಲ. ಆದಾಗ್ಯೂ ಅವರು ಅಭ್ಯಾಸ ಪಂದ್ಯದ ನಡುವೆ ತಂಡವನ್ನು ಕೂಡಿಕೊಳ್ಳಲಿದ್ದಾರೆ(PC-PTI).

ಸಾಯಿ ಸುದರ್ಶನ್ ಆಗಸ್ಟ್ 8 ರೊಳಗೆ ಶ್ರೀಲಂಕಾಕ್ಕೆ ತೆರಳುವ ಸಾಧ್ಯತೆಯಿದೆ. ಸಿಕ್ಕಿರುವ ಮಾಹಿತಿ ಪ್ರಕಾರ, ಸುದರ್ಶನ್ ಆಗಸ್ಟ್ 7 ರಿಂದ ಪ್ರಾರಂಭವಾಗಲಿರುವ ಅಭ್ಯಾಸ ಪಂದ್ಯಗಳಲ್ಲಿ ಆಡುವುದಿಲ್ಲ. ಆದಾಗ್ಯೂ ಅವರು ಅಭ್ಯಾಸ ಪಂದ್ಯದ ನಡುವೆ ತಂಡವನ್ನು ಕೂಡಿಕೊಳ್ಳಲಿದ್ದಾರೆ(PC-PTI).

4 / 5
ಸಾಯಿ ಸುದರ್ಶನ್ ಫಿಟ್ ಆಗಿರುವುದು ಟೀಂ ಇಂಡಿಯಾಕ್ಕೆ ಒಳ್ಳೆಯ ಸುದ್ದಿ. ಏಕೆಂದರೆ ಅವರು ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಮುಖ್ಯವಾಗಿ, ಇತ್ತೀಚೆಗೆ ಶ್ರೀಲಂಕಾದ ಪರಿಸ್ಥಿತಿಗಳಲ್ಲಿ ಸಾಕಷ್ಟು ರನ್ ಗಳಿಸಿದ್ದಾರೆ. ಈ ಹಿಂದೆ ಭಾರತ ಎ ಪರ ಶ್ರೀಲಕಾ ಪ್ರವಾಸ ಮಾಡಿದ್ದ ಸಾಯಿ ಸುದರ್ಶನ್ ಗಾಲೆಯಲ್ಲಿ ಎರಡೂ ಪಂದ್ಯಗಳನ್ನು ಆಡಿದರು. ಆ ಎರಡೂ ಪಂದ್ಯಗಳಲ್ಲಿ ಶತಕಗಳನ್ನು ಬಾರಿಸಿದ್ದರು. ಸುದರ್ಶನ್ ಎರಡು ಪಂದ್ಯಗಳಲ್ಲಿ ಅಜೇಯ 332 ರನ್ ಕಲೆಹಾಕಿದ್ದರು(PC-PTI).

ಸಾಯಿ ಸುದರ್ಶನ್ ಫಿಟ್ ಆಗಿರುವುದು ಟೀಂ ಇಂಡಿಯಾಕ್ಕೆ ಒಳ್ಳೆಯ ಸುದ್ದಿ. ಏಕೆಂದರೆ ಅವರು ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಮುಖ್ಯವಾಗಿ, ಇತ್ತೀಚೆಗೆ ಶ್ರೀಲಂಕಾದ ಪರಿಸ್ಥಿತಿಗಳಲ್ಲಿ ಸಾಕಷ್ಟು ರನ್ ಗಳಿಸಿದ್ದಾರೆ. ಈ ಹಿಂದೆ ಭಾರತ ಎ ಪರ ಶ್ರೀಲಕಾ ಪ್ರವಾಸ ಮಾಡಿದ್ದ ಸಾಯಿ ಸುದರ್ಶನ್ ಗಾಲೆಯಲ್ಲಿ ಎರಡೂ ಪಂದ್ಯಗಳನ್ನು ಆಡಿದರು. ಆ ಎರಡೂ ಪಂದ್ಯಗಳಲ್ಲಿ ಶತಕಗಳನ್ನು ಬಾರಿಸಿದ್ದರು. ಸುದರ್ಶನ್ ಎರಡು ಪಂದ್ಯಗಳಲ್ಲಿ ಅಜೇಯ 332 ರನ್ ಕಲೆಹಾಕಿದ್ದರು(PC-PTI).

5 / 5
Follow Us
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ನಾಗೇಂದ್ರಗೆ ಮಂತ್ರಿ ಸ್ಥಾನ ಹೈಕಮಾಂಡ್ ತೀರ್ಮಾನ
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ಸಚಿವರ ಪ್ರಮಾಣವಚನಕ್ಕೆ ಸಿದ್ದು ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ರಾಜೀನಾಮೆ ನೀಡುವ ಮಟ್ಟಕ್ಕೆ ಹೋಗಿದ್ದ ಶಾಸಕ ಶ್ರೀನಿವಾಸ್ ದಿಢೀರ್ ಯುಟರ್ನ್
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆಗಳಿಗಾಗಿ ಹೆಚ್ಚಿದ ಪೈಪೋಟಿ